Homeಕರ್ನಾಟಕಈ ವರ್ಷವೇ ಪಠ್ಯ ಪರಿಷ್ಕರಣೆಯಾಗಲಿದೆ: ಸಚಿವ ಮಧು ಬಂಗಾರಪ್ಪ

ಈ ವರ್ಷವೇ ಪಠ್ಯ ಪರಿಷ್ಕರಣೆಯಾಗಲಿದೆ: ಸಚಿವ ಮಧು ಬಂಗಾರಪ್ಪ

- Advertisement -
- Advertisement -

ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದ ಬಳಿಕ, ಪಠ್ಯಪುಸ್ತಕ ಪರಿಷ್ಕರಣೆ ಮಾಡಬೇಕು ಎಂದು ನಾಡಿನ ಪ್ರಜ್ಞಾವಂತರು ಮುಖ್ಯಮಂತ್ರಿಯವರು ಮನವಿ ಮಾಡಿದ್ದರು. ”ಈ ವರ್ಷವೇ ಪಠ್ಯ ಪರಿಷ್ಕರಣೆಯಾಗಲಿದೆ. ಮಕ್ಕಳಿಗೆ ಅವಶ್ಯಕತೆ ಇಲ್ಲದ್ದನ್ನು ತಜ್ಞರು ಪರಿಶೀಲಿಸಿ ತೀರ್ಮಾನಿಸುತ್ತಾರೆ. ಮುಂದಿನ ಸಂಪುಟದಲ್ಲೇ ಚರ್ಚೆ ಮಾಡಲಾಗುತ್ತದೆ” ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಗುರುವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”’ಆರಂಭದಲ್ಲಿ ಸೇತು ಬಂಧ ಇರಲಿದೆ. ಮಕ್ಕಳು ಪಠ್ಯಕ್ಕೆ ಹೋಗಲ್ಲ. ಮತ್ತು ಪಠ್ಯದಲ್ಲಿ ಏನು ಓದಿಸಬೇಕು, ಯಾವುದು ಬೇಡ ಎಂಬುದನ್ನು ನಿರ್ಧರಿಸಲಾಗುತ್ತದೆ” ಎಂದರು ವಿವರಿಸಿದರು.

”ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬದಲಾವಣೆ ಮಾಡಿಯೇ ಮಾಡುತ್ತೇವೆ. ಈ ವರ್ಷ ಮಾಡಲ್ಲ ಮುಂದಿನ ವರ್ಷ ಅಂತೆಲ್ಲ ಕೆಲವು ಮಾಧ್ಯಮಗಳಲ್ಲಿ ಬರುತ್ತಿವೆ. ಮಕ್ಕಳು ತಪ್ಪು ಓದಬಾರದು, ತಪ್ಪು ಪಠ್ಯಗಳನ್ನು ಮುಂದಿನ ವರ್ಷದ ತನಕ ಕಾಯಬೇಕಿಲ್ಲ. ಹೀಗಾಗಿ ತಜ್ಞರೂ ಕೂಡ ಅದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ” ಎಂದರು.

”ಇದು ಬಹಳ ಸೂಕ್ಷ್ಮ ವಿಚಾರ. ಮಕ್ಕಳ ಹಿತದೃಷ್ಟಿಯಿಂದ ಕ್ರಮ ತೆಗೆದುಕೊಳ್ಳುತ್ತೇವೆ. ಮಕ್ಕಳ ಭವಿಷ್ಯಕ್ಕೆ ಒಳ್ಳೆಯ ಅಂಶ ಉಳಿಸಲಾಗುತ್ತದೆ. ಪಠ್ಯಪರಿಷ್ಕರಣೆಯಾಗಬೇಕೆಂದು ಸಾಹಿತಿಗಳು ಸಿಎಂಗೆ ಮನವಿ ಕೊಟ್ಟಿದ್ದಾರೆ. ಮುಖ್ಯಮಂತ್ರಿಯವರು ಕೂಡ ಆಸಕ್ತಿ ತೋರಿಸಿದ್ದಾರೆ. ಪಠ್ಯ ಪುಸ್ತಕ ಪರಿಷ್ಕರಣೆ ಮಾಡುತ್ತೇವೆ” ಎಂದು ಪ್ರಣಾಳಿಕೆಯಲ್ಲಿ ಹೇಳಿದ್ದೆವು ಅದರಂತೆ ಮಾಡುತ್ತೇವೆ” ಎಂದರು.

”ತಜ್ಞರು ಪಕ್ಷಕ್ಕೆ ಸೀಮಿತವಾಗಿರಲ್ಲ. ಅವರು ಕೊಡುವ ಸಲಹೆ ಪರಿಗಣಿಸಲಾಗುತ್ತದೆ. ತಪ್ಪು ತಿಳುವಳಿಕೆ ತಕ್ಷಣ ತಡೆ ಹಿಡಿಯಬೇಕಾಗುತ್ತದೆ. ಅದನ್ನು ನಾವು ಮಾಡುತ್ತೇವೆ. ಯಾವ ಪಠ್ಯ ಬೇಡ ಎಂದು ತಜ್ಞರು ಸೂಚಿಸುತ್ತಾರೋ ಅದನ್ನು ಬೋಧಿಸದಂತೆ ತಿಳಿಸಲು ಅವಕಾಶವಿದೆ” ಎಂದರು.

”ಸಪ್ಲಿಮೆಂಟ್ ಮಾದರಿಯ ಪುಸ್ತಕ ನೀಡುತ್ತೇವೆ. ಯಾವ ಪಾಠ ಮಾಡಬೇಕು, ಯಾವುದು ಮಾಡಬಾರದು ಎಂಬುದನ್ನೂ ತಿಳಿಸುತ್ತೇವೆ” ಎಂದು ಹೇಳಿದರು.

ಇದನ್ನೂ ಓದಿ: ಪಠ್ಯಪುಸ್ತಕ ಪರಿಷ್ಕರಣೆ ವಿಚಾರ: ಮಕ್ಕಳ ಮನಸ್ಸಿಗೆ ವಿಷ ತುಂಬುವ ಪಠ್ಯಕ್ಕೆ ಅವಕಾಶ ನೀಡುವುದಿಲ್ಲ ಎಂದ ಸಿಎಂ ಸಿದ್ದರಾಮಯ್ಯ

ಕೇಸರೀಕರಣಕ್ಕೆ ಬ್ರೇಕ್ ಹಾಕುವ ವಿಚಾರಕ್ಕೆ ಪ್ರತಿಕ್ರಿಯಿಸಿ, ”ಮಕ್ಕಳ ಒಳಿತಿಗೆ ಸರಿಯಾಗಿ ಕ್ರಮ ತೆಗೆದುಕೊಳ್ಳುತ್ತೇವೆ. ಅದು ಇದು ಅಂತ ಏನೂ ಇಲ್ಲ. ತುಂಬಾ ಸೂಕ್ಷ್ಮ ವಿಚಾರಗಳಿವು. ಹಾಗಾಗಿ ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡಬೇಕಿದೆ. ದೊಡ್ಡ ಮಟ್ಟದ ಚರ್ಚೆಗಳ ಅವಶ್ಯಕತೆಯಿದೆ. ಹಾಗಾಗಿ ಮಕ್ಕಳ ಒಳಿತನ್ನ ನೋಡಿಯೇ ಮಾಡಬೇಕು. ಮಕ್ಕಳಿಗೆ ಒಳಿತಾಗುವಂತೆ ನಾವು ಮಾಡ್ತೇವೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.

”ಶಿಕ್ಷಕರ ನೇಮಕದಲ್ಲಿ ಎರಡು ಸಮಸ್ಯೆ ಇದೆ. ಕಾನೂನಿನ ತೊಡಕಿದೆ ಅದನ್ನು ಎಜಿ ಅವರ ಚರ್ಚೆ ಮಾತನಾಡಲಾಗುತ್ತದೆ. ಶಿಕ್ಷಕರ ಕೊರತೆ ಇದೆ. ಅತಿಥಿ ಶಿಕ್ಷಕರೇ ಸಮಸ್ಯೆಗೆ ಪರಿಹಾರವಲ್ಲ. ಹೀಗಾಗಿ ಆದಷ್ಟು ಶೀಘ್ರವಾಗಿ ಪರಿಹರಿಸಲಾಗುತ್ತದೆ” ಎಂದು ತಿಳಿಸಿದರು.

ಪಠ್ಯಪುಸ್ತಕ ಮರು ಪರಿಷ್ಕರಣೆಗೆ ಸಾಹಿತಿ ಕುಂ. ವೀರಭದ್ರಪ್ಪ ಬೆಂಬಲ:

ಪಠ್ಯಪುಸ್ತಕ ಮರು ಪರಿಷ್ಕರಣೆಗೆ ಸಾಹಿತಿ ಕುಂ. ವೀರಭದ್ರಪ್ಪ ಬೆಂಬಲ ಸೂಚಿಸಿದ್ದಾರೆ. ಹಿಂದಿನ ಸರ್ಕಾರ ಪಠ್ಯ ಪುಸ್ತಕದಲ್ಲಿ ಭಾರಿ ಲೋಪ ಎಸಗಿದೆ ಎಂದು ಅವರು ದೂರಿದ್ದಾರೆ.

”ಹಿಂದಿನ ಸರ್ಕಾರ ಪಠ್ಯ ಪುಸ್ತಕದಲ್ಲಿ ಭಾರಿ ಲೋಪ ಎಸಗಿದೆ. ಕೆಲವು ಹುಸಿ ದೇಶ ಭಕ್ತರನ್ನು ಬಿಂಬಿಸುವ ಪ್ರಯತ್ನವನ್ನು ಬಿಜೆಪಿ ಸರ್ಕಾರ ಮಾಡಿತ್ತು. ರೋಹಿತ್ ಚಕ್ರತೀರ್ಥ ಎಂಬ ಅಪಕ್ವ ವ್ಯಕ್ತಿಯನ್ನು ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿ ಅಧ್ಯಕ್ಷನನ್ನಾಗಿ ಮಾಡಿತ್ತು. ಅವರು ಮಾಡಿದ ತಪ್ಪನ್ನು ಸರಿಪಡಿಸಬೇಕು. ಹೊಸ ಪಠ್ಯಪುಸ್ತಕ ಜಾರಿಗೆ ತರಬೇಕು. ಬರಗೂರು ರಾಮಚಂದ್ರಪ್ಪ ಜಾರಿಗೆ ತಂದಿದ್ದ ಪುಸ್ತಕಗಳೇ ಮತ್ತೆ ಬರಬೇಕು” ಎಂದು ಅವರು ಆಗ್ರಹಿಸಿದ್ದಾರೆ.

”ಬಿಜೆಪಿಯವರು ಹೇಳುವುದು ಭಾರತೀಯತೆ ಅಲ್ಲ, ಅವರು ಹೇಳುವುದು ಹಿಂದುತ್ವ. ದೇಶದ ಎಲ್ಲರ ಹಿತಾಸಕ್ತಿ ಕಾಪಾಡುವುದು ಭಾರತೀಯತೆ. ಬಿಜೆಪಿಯವರು ಹೇಳುವ ಭಾರತೀಯತೆ ಒಪ್ಪಲು ಸಾಧ್ಯವಿಲ್ಲ. ಬಿಜೆಪಿಯವರು ಹೇಳುವುದು ಆರ್​​​ಎಸ್​​ಎಸ್ ಪ್ರಣೀತ ಭಾರತೀಯತೆ. ಅಂಬೇಡ್ಕರ್, ಗಾಂಧಿ ಆಶಯದ ಭಾರತೀಯತೆ ಅಲ್ಲ. ಹಳೇಯ ಪಠ್ಯಕ್ರಮವನ್ನು ಸರ್ಕಾರ ಜಾರಿಗೆ ತರಬೇಕು” ಎಂದು ವೀರಭದ್ರಪ್ಪ ಹೇಳಿದರು.

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿ ಮಾಡಿದ್ದ ಪಠ್ಯ ಪರಿಷ್ಕರಣೆಗೆ ಪ್ರತಿಪಕ್ಷಗಳಿಂದ ಭಾರೀ ಆಕ್ಷೇಪ ವ್ಯಕ್ತವಾಗಿತ್ತು. ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರ ರಾಜಕೀಯ ಆಯಾಮ ಪಡೆದುಕೊಂಡು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಪಠ್ಯ ಪುಸ್ತಕ ಪರಿಷ್ಕರಣೆ ಸಂಬಂಧ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...