Homeಮುಖಪುಟಗೃಹಜ್ಯೋತಿ, ಗೃಹ ಲಕ್ಷ್ಮಿ ಯೋಜನೆಗೆ ಚಾಲನೆ ಕುರಿತು ಸಿಎಂ ಸಿದ್ದರಾಮಯ್ಯ ನೀಡಿದ ಸಂಪೂರ್ಣ ಮಾಹಿತಿ ಇಲ್ಲಿದೆ..

ಗೃಹಜ್ಯೋತಿ, ಗೃಹ ಲಕ್ಷ್ಮಿ ಯೋಜನೆಗೆ ಚಾಲನೆ ಕುರಿತು ಸಿಎಂ ಸಿದ್ದರಾಮಯ್ಯ ನೀಡಿದ ಸಂಪೂರ್ಣ ಮಾಹಿತಿ ಇಲ್ಲಿದೆ..

- Advertisement -
- Advertisement -

ರಾಜ್ಯ ಸರ್ಕಾರ ಘೋಷಿಸಿರುವ ಗ್ಯಾರಂಟಿ ಯೋಜನೆಗಳ ಬಗ್ಗೆ ಸಾಕಷ್ಟು ಜನರಿಗೆ ಹಲವು ಗೊಂದಲಗಳು ಹುಟ್ಟಿಕೊಂಡಿದ್ದವು. ಆದರೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕೃತ ಸಿಎಂ ಆಫ್​ ಕರ್ನಾಟಕ ಟ್ವಿಟರ್​ ಖಾತೆಯಲ್ಲಿ ಸರಣಿ ಟ್ವೀಟ್ ಮೂಲಕ ಸಂಪೂರ್ಣ ಮಾಹಿತಿ ಹಂಚಿಕೊಂಡಿದ್ದಾರೆ.

”ರಾಜ್ಯ ಸರ್ಕಾರ ಘೋಷಿಸಿರುವ ಗ್ಯಾರಂಟಿ ಯೋಜನೆಗಳಲ್ಲಿ ಗೃಹಜ್ಯೋತಿ ಯೋಜನೆ ಆಗಸ್ಟ್‌ 1 ರಂದು ಹಾಗೂ ಗೃಹ ಲಕ್ಷ್ಮಿ ಯೋಜನೆಗೆ ಆಗಸ್ಟ್‌ 17- 18 ರಂದು ಚಾಲನೆ ನೀಡಲು ತಯಾರಿ ನಡೆಸಲಾಗುತ್ತಿದೆ” ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾಗಿ ಟ್ವೀಟ್​ನಲ್ಲಿ ಉಲ್ಲೇಖಿಸಲಾಗಿದೆ.

”ಎಲ್ಲ ಗ್ಯಾರಂಟಿ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಅತ್ಯಂತ ಸರಳಗೊಳಿಸಬೇಕು. ಅನಗತ್ಯ ಮಾಹಿತಿ, ದಾಖಲೆಗಳನ್ನು ಕೇಳಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಜೊತೆಗೆ ಅರ್ಜಿಗಳನ್ನು ತಿರಸ್ಕರಿಸಿದಲ್ಲಿ, ಅದು ಸಕಾರಣವಾಗಿರಬೇಕು. ಕುಂಟು ನೆಪ ನೀಡಿ ತಿರಸ್ಕರಿಸುವಂತಿಲ್ಲ ಎಂದು ಎಚ್ಚರಿಕೆಯನ್ನು ನೀಡಿದ್ದೇನೆ” ಎಂದು ಹೇಳಲಾಗಿದೆ.

”ಎಲ್ಲ ಗ್ಯಾರಂಟಿ ಯೋಜನೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಅರ್ಜಿಗಳು ಸಲ್ಲಿಕೆಯಾಗುವ ಕಾರಣ, ಅಪಾರ ಪ್ರಮಾಣದ ದತ್ತಾಂಶ ಸಲ್ಲಿಕೆಗೆ ಅನುಗುಣವಾಗಿ ಸೇವಾ ಸಿಂಧು ಪೋರ್ಟಲ್‌ ನ ಸಾಮರ್ಥ್ಯ ವೃದ್ಧಿಸುವಂತೆ ಇ-ಆಡಳಿತ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದೇನೆ” ಎಂದು ಸಿದ್ದರಾಮಯ್ಯ ಹೇಳಿದ್ದಾಗಿ ಉಲ್ಲೇಖಿಸಲಾಗಿದೆ.

”ಗೃಹ ಜ್ಯೋತಿ ಯೋಜನೆಗೆ ಆಗಸ್ಟ್‌ 1 ರಂದು ಕಲಬುರಗಿಯಲ್ಲಿ ಚಾಲನೆ ನೀಡುವ ಕುರಿತು ಯೋಚಿಸುತ್ತಿದ್ದೇವೆ. ಈ ಯೋಜನೆಯ ಮಾರ್ಗಸೂಚಿಗಳ ಕುರಿತು ಇರುವ ಎಲ್ಲ ಗೊಂದಲಗಳನ್ನು ನಿವಾರಿಸಿ, ನಾಗರಿಕರಿಗೆ ಅರಿವು ಮೂಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: ಹೆಚ್ಚಿನ ಕಂಡಿಷನ್‌ಗಳಿಲ್ಲದೆ ಐದು ಗ್ಯಾರಂಟಿಗಳನ್ನು ಘೋಷಿಸಿದ ಸಿದ್ದರಾಮಯ್ಯ

”ಗೃಹ ಜ್ಯೋತಿ ಯೋಜನೆಗೆ ಸೇವಾ ಸಿಂಧು ಪೋರ್ಟಲ್‌ ಮೂಲಕ ನೋಂದಾಯಿಸಲು ಅವಕಾಶವಿದೆ. ಇದಲ್ಲದೆ, ಎಸ್ಕಾಂಗಳ ಎಲ್ಲ ಕಚೇರಿಗಳಲ್ಲಿ ಹೆಲ್ಪ್‌ ಡೆಸ್ಕ್‌ ಸ್ಥಾಪಿಸಲಾಗುವುದು. ಜೂನ್‌ 15 ರಿಂದ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಲಿದೆ. ಬೆಂಗಳೂರು ಒನ್‌, ಕರ್ನಾಟಕ ಒನ್‌, ಗ್ರಾಮ ಒನ್‌ ಕೇಂದ್ರಗಳ ಮೂಲಕ ಹಾಗೂ ಮನೆಯಲ್ಲಿಯೇ ಕಂಪ್ಯೂಟರ್‌ ಮೂಲಕ ಅಥವಾ ಮೊಬೈಲ್‌ ಆಪ್‌ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು” ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

”ಹೊಸ ಮನೆ, ಹೊಸ ಬಾಡಿಗೆದಾರರಿಗೆ ರಾಜ್ಯದ ವಿದ್ಯುತ್‌ ಬಳಕೆಯ ಸರಾಸರಿ ಆಧಾರದಲ್ಲಿ ಉಚಿತ ವಿದ್ಯುತ್‌ ಸೌಲಭ್ಯ ನೀಡಲಾಗುವುದು. ಒಂದು ವರ್ಷದ ಸರಾಸರಿ ಲಭ್ಯವಾದ ನಂತರ, ಈ ದತ್ತಾಂಶವನ್ನು ಆಧರಿಸಿ, ಉಚಿತ ವಿದ್ಯುತ್‌ ಸೌಲಭ್ಯ ನೀಡಲಾಗುವುದು” ಎಂದು ತಿಳಿಸಲಾಗಿದೆ.

”ಹಳೆ ವಿದ್ಯುತ್‌ ಬಿಲ್‌ ಬಾಕಿ ಪಾವತಿಗೆ ಸೆಪ್ಟೆಂಬರ್‌ 30 ರ ವರೆಗೆ ಅವಕಾಶ ಕಲ್ಪಿಸಲಾಗಿದೆ. ಗೃಹಜ್ಯೋತಿ ಯೋಜನೆಗೆ ಆಧಾರ್‌, ಆರ್. ಆರ್. ಸಂಖ್ಯೆ, ಬಾಡಿಗೆದಾರರು ಕರಾರು ಪತ್ರ ಹಾಗೂ ಅದೇ ವಿಳಾಸದ ಮತದಾರರ ಗುರುತು ಚೀಟಿ ಮಾಹಿತಿ ಸಲ್ಲಿಸಿ, ಸೌಲಭ್ಯ ಪಡೆಯಬಹುದಾಗಿದೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

”ಗೃಹ ಲಕ್ಷ್ಮಿ ಯೋಜನೆಯನ್ನು ಆಗಸ್ಟ್‌ 17 ಅಥವಾ 18 ರಂದು ಬೆಳಗಾವಿಯಲ್ಲಿ ಚಾಲನೆ ನೀಡುವ ಕುರಿತು ಚರ್ಚಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜೂನ್‌ 15 ರಿಂದ ಪ್ರಾರಂಭವಾಗಲಿದೆ. ಈ ಯೋಜನೆಗೆ ಆನ್‌ಲೈನ್‌ ನಲ್ಲಿ ಸೇವಾ ಸಿಂಧು ಪೋರ್ಟಲ್‌ ಮೂಲಕ ಅರ್ಜಿ ಸಲ್ಲಿಸಬಹುದು. ಅಂತೆಯೇ ನಾಡಕಚೇರಿಗಳಲ್ಲಿ ಖುದ್ದಾಗಿ ಅರ್ಜಿ ಸಲ್ಲಿಸಬಹುದು. ಇದಕ್ಕಾಗಿ ಪ್ರತ್ಯೇಕ ಕೌಂಟರುಗಳನ್ನು ಸ್ಥಾಪಿಸಲು ತೀರ್ಮಾನಿಸಲಾಗಿದೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

”ಅರ್ಜಿದಾರರು ರೇಷನ್‌ ಕಾರ್ಡ್‌ ಸಂಖ್ಯೆ, ಯಜಮಾನಿಯ ಹಾಗೂ ಪತಿಯ ಆಧಾರ್‌ ಕಾರ್ಡ್‌ ಸಂಖ್ಯೆ, ಆಧಾರ್‌ ಸಂಯೋಜನೆಯಾಗಿರುವ ಬ್ಯಾಂಕ್‌ ಖಾತೆಯ ವಿವರವನ್ನು ಒದಗಿಸಬೇಕು. ಈ ದಾಖಲೆಗಳ ಪ್ರತಿಗಳನ್ನು ಆಫ್‌ಲೈನ್‌ ಅರ್ಜಿಗಳೊಂದಿಗೂ ಸಲ್ಲಿಸಬಹುದು” ಎಂದು ಸಿಎಂ ಆಫ್​ ಕರ್ನಾಟಕ ಟ್ವೀಟ್ ಮಾಡಿದೆ.

”ಅರ್ಹ ಫಲಾನುಭವಿಗಳಿಗೆ ಡಿಬಿಟಿ ಮೂಲಕ ನೇರವಾಗಿ ಬ್ಯಾಂಕ್‌ ಖಾತೆಗೆ ನೆರವಿನ ಮೊತ್ತ ಜಮೆ ಆಗಲಿದೆ. ಗೃಹಲಕ್ಷ್ಮಿ ಯೋಜನೆಯು ರಾಜ್ಯದ ಶೇ. 85 ಕ್ಕೂ ಹೆಚ್ಚು ಕುಟುಂಬಗಳನ್ನು ತಲುಪಲಿದೆ ಎಂದು ಅಂದಾಜಿಸಲಾಗಿದೆ. ತೆರಿಗೆ ಪಾವತಿದಾರರಲ್ಲದ ಎಪಿಎಲ್‌ ಕಾರ್ಡುದಾರರಿಗೂ ಈ ಸೌಲಭ್ಯ ದೊರೆಯಲಿದೆ” ಎಂದು ಟ್ವೀಟ್ ಮಾಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...