Homeಮುಖಪುಟಗೃಹಜ್ಯೋತಿ, ಗೃಹ ಲಕ್ಷ್ಮಿ ಯೋಜನೆಗೆ ಚಾಲನೆ ಕುರಿತು ಸಿಎಂ ಸಿದ್ದರಾಮಯ್ಯ ನೀಡಿದ ಸಂಪೂರ್ಣ ಮಾಹಿತಿ ಇಲ್ಲಿದೆ..

ಗೃಹಜ್ಯೋತಿ, ಗೃಹ ಲಕ್ಷ್ಮಿ ಯೋಜನೆಗೆ ಚಾಲನೆ ಕುರಿತು ಸಿಎಂ ಸಿದ್ದರಾಮಯ್ಯ ನೀಡಿದ ಸಂಪೂರ್ಣ ಮಾಹಿತಿ ಇಲ್ಲಿದೆ..

- Advertisement -
- Advertisement -

ರಾಜ್ಯ ಸರ್ಕಾರ ಘೋಷಿಸಿರುವ ಗ್ಯಾರಂಟಿ ಯೋಜನೆಗಳ ಬಗ್ಗೆ ಸಾಕಷ್ಟು ಜನರಿಗೆ ಹಲವು ಗೊಂದಲಗಳು ಹುಟ್ಟಿಕೊಂಡಿದ್ದವು. ಆದರೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕೃತ ಸಿಎಂ ಆಫ್​ ಕರ್ನಾಟಕ ಟ್ವಿಟರ್​ ಖಾತೆಯಲ್ಲಿ ಸರಣಿ ಟ್ವೀಟ್ ಮೂಲಕ ಸಂಪೂರ್ಣ ಮಾಹಿತಿ ಹಂಚಿಕೊಂಡಿದ್ದಾರೆ.

”ರಾಜ್ಯ ಸರ್ಕಾರ ಘೋಷಿಸಿರುವ ಗ್ಯಾರಂಟಿ ಯೋಜನೆಗಳಲ್ಲಿ ಗೃಹಜ್ಯೋತಿ ಯೋಜನೆ ಆಗಸ್ಟ್‌ 1 ರಂದು ಹಾಗೂ ಗೃಹ ಲಕ್ಷ್ಮಿ ಯೋಜನೆಗೆ ಆಗಸ್ಟ್‌ 17- 18 ರಂದು ಚಾಲನೆ ನೀಡಲು ತಯಾರಿ ನಡೆಸಲಾಗುತ್ತಿದೆ” ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾಗಿ ಟ್ವೀಟ್​ನಲ್ಲಿ ಉಲ್ಲೇಖಿಸಲಾಗಿದೆ.

”ಎಲ್ಲ ಗ್ಯಾರಂಟಿ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಅತ್ಯಂತ ಸರಳಗೊಳಿಸಬೇಕು. ಅನಗತ್ಯ ಮಾಹಿತಿ, ದಾಖಲೆಗಳನ್ನು ಕೇಳಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಜೊತೆಗೆ ಅರ್ಜಿಗಳನ್ನು ತಿರಸ್ಕರಿಸಿದಲ್ಲಿ, ಅದು ಸಕಾರಣವಾಗಿರಬೇಕು. ಕುಂಟು ನೆಪ ನೀಡಿ ತಿರಸ್ಕರಿಸುವಂತಿಲ್ಲ ಎಂದು ಎಚ್ಚರಿಕೆಯನ್ನು ನೀಡಿದ್ದೇನೆ” ಎಂದು ಹೇಳಲಾಗಿದೆ.

”ಎಲ್ಲ ಗ್ಯಾರಂಟಿ ಯೋಜನೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಅರ್ಜಿಗಳು ಸಲ್ಲಿಕೆಯಾಗುವ ಕಾರಣ, ಅಪಾರ ಪ್ರಮಾಣದ ದತ್ತಾಂಶ ಸಲ್ಲಿಕೆಗೆ ಅನುಗುಣವಾಗಿ ಸೇವಾ ಸಿಂಧು ಪೋರ್ಟಲ್‌ ನ ಸಾಮರ್ಥ್ಯ ವೃದ್ಧಿಸುವಂತೆ ಇ-ಆಡಳಿತ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದೇನೆ” ಎಂದು ಸಿದ್ದರಾಮಯ್ಯ ಹೇಳಿದ್ದಾಗಿ ಉಲ್ಲೇಖಿಸಲಾಗಿದೆ.

”ಗೃಹ ಜ್ಯೋತಿ ಯೋಜನೆಗೆ ಆಗಸ್ಟ್‌ 1 ರಂದು ಕಲಬುರಗಿಯಲ್ಲಿ ಚಾಲನೆ ನೀಡುವ ಕುರಿತು ಯೋಚಿಸುತ್ತಿದ್ದೇವೆ. ಈ ಯೋಜನೆಯ ಮಾರ್ಗಸೂಚಿಗಳ ಕುರಿತು ಇರುವ ಎಲ್ಲ ಗೊಂದಲಗಳನ್ನು ನಿವಾರಿಸಿ, ನಾಗರಿಕರಿಗೆ ಅರಿವು ಮೂಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: ಹೆಚ್ಚಿನ ಕಂಡಿಷನ್‌ಗಳಿಲ್ಲದೆ ಐದು ಗ್ಯಾರಂಟಿಗಳನ್ನು ಘೋಷಿಸಿದ ಸಿದ್ದರಾಮಯ್ಯ

”ಗೃಹ ಜ್ಯೋತಿ ಯೋಜನೆಗೆ ಸೇವಾ ಸಿಂಧು ಪೋರ್ಟಲ್‌ ಮೂಲಕ ನೋಂದಾಯಿಸಲು ಅವಕಾಶವಿದೆ. ಇದಲ್ಲದೆ, ಎಸ್ಕಾಂಗಳ ಎಲ್ಲ ಕಚೇರಿಗಳಲ್ಲಿ ಹೆಲ್ಪ್‌ ಡೆಸ್ಕ್‌ ಸ್ಥಾಪಿಸಲಾಗುವುದು. ಜೂನ್‌ 15 ರಿಂದ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಲಿದೆ. ಬೆಂಗಳೂರು ಒನ್‌, ಕರ್ನಾಟಕ ಒನ್‌, ಗ್ರಾಮ ಒನ್‌ ಕೇಂದ್ರಗಳ ಮೂಲಕ ಹಾಗೂ ಮನೆಯಲ್ಲಿಯೇ ಕಂಪ್ಯೂಟರ್‌ ಮೂಲಕ ಅಥವಾ ಮೊಬೈಲ್‌ ಆಪ್‌ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು” ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

”ಹೊಸ ಮನೆ, ಹೊಸ ಬಾಡಿಗೆದಾರರಿಗೆ ರಾಜ್ಯದ ವಿದ್ಯುತ್‌ ಬಳಕೆಯ ಸರಾಸರಿ ಆಧಾರದಲ್ಲಿ ಉಚಿತ ವಿದ್ಯುತ್‌ ಸೌಲಭ್ಯ ನೀಡಲಾಗುವುದು. ಒಂದು ವರ್ಷದ ಸರಾಸರಿ ಲಭ್ಯವಾದ ನಂತರ, ಈ ದತ್ತಾಂಶವನ್ನು ಆಧರಿಸಿ, ಉಚಿತ ವಿದ್ಯುತ್‌ ಸೌಲಭ್ಯ ನೀಡಲಾಗುವುದು” ಎಂದು ತಿಳಿಸಲಾಗಿದೆ.

”ಹಳೆ ವಿದ್ಯುತ್‌ ಬಿಲ್‌ ಬಾಕಿ ಪಾವತಿಗೆ ಸೆಪ್ಟೆಂಬರ್‌ 30 ರ ವರೆಗೆ ಅವಕಾಶ ಕಲ್ಪಿಸಲಾಗಿದೆ. ಗೃಹಜ್ಯೋತಿ ಯೋಜನೆಗೆ ಆಧಾರ್‌, ಆರ್. ಆರ್. ಸಂಖ್ಯೆ, ಬಾಡಿಗೆದಾರರು ಕರಾರು ಪತ್ರ ಹಾಗೂ ಅದೇ ವಿಳಾಸದ ಮತದಾರರ ಗುರುತು ಚೀಟಿ ಮಾಹಿತಿ ಸಲ್ಲಿಸಿ, ಸೌಲಭ್ಯ ಪಡೆಯಬಹುದಾಗಿದೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

”ಗೃಹ ಲಕ್ಷ್ಮಿ ಯೋಜನೆಯನ್ನು ಆಗಸ್ಟ್‌ 17 ಅಥವಾ 18 ರಂದು ಬೆಳಗಾವಿಯಲ್ಲಿ ಚಾಲನೆ ನೀಡುವ ಕುರಿತು ಚರ್ಚಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜೂನ್‌ 15 ರಿಂದ ಪ್ರಾರಂಭವಾಗಲಿದೆ. ಈ ಯೋಜನೆಗೆ ಆನ್‌ಲೈನ್‌ ನಲ್ಲಿ ಸೇವಾ ಸಿಂಧು ಪೋರ್ಟಲ್‌ ಮೂಲಕ ಅರ್ಜಿ ಸಲ್ಲಿಸಬಹುದು. ಅಂತೆಯೇ ನಾಡಕಚೇರಿಗಳಲ್ಲಿ ಖುದ್ದಾಗಿ ಅರ್ಜಿ ಸಲ್ಲಿಸಬಹುದು. ಇದಕ್ಕಾಗಿ ಪ್ರತ್ಯೇಕ ಕೌಂಟರುಗಳನ್ನು ಸ್ಥಾಪಿಸಲು ತೀರ್ಮಾನಿಸಲಾಗಿದೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

”ಅರ್ಜಿದಾರರು ರೇಷನ್‌ ಕಾರ್ಡ್‌ ಸಂಖ್ಯೆ, ಯಜಮಾನಿಯ ಹಾಗೂ ಪತಿಯ ಆಧಾರ್‌ ಕಾರ್ಡ್‌ ಸಂಖ್ಯೆ, ಆಧಾರ್‌ ಸಂಯೋಜನೆಯಾಗಿರುವ ಬ್ಯಾಂಕ್‌ ಖಾತೆಯ ವಿವರವನ್ನು ಒದಗಿಸಬೇಕು. ಈ ದಾಖಲೆಗಳ ಪ್ರತಿಗಳನ್ನು ಆಫ್‌ಲೈನ್‌ ಅರ್ಜಿಗಳೊಂದಿಗೂ ಸಲ್ಲಿಸಬಹುದು” ಎಂದು ಸಿಎಂ ಆಫ್​ ಕರ್ನಾಟಕ ಟ್ವೀಟ್ ಮಾಡಿದೆ.

”ಅರ್ಹ ಫಲಾನುಭವಿಗಳಿಗೆ ಡಿಬಿಟಿ ಮೂಲಕ ನೇರವಾಗಿ ಬ್ಯಾಂಕ್‌ ಖಾತೆಗೆ ನೆರವಿನ ಮೊತ್ತ ಜಮೆ ಆಗಲಿದೆ. ಗೃಹಲಕ್ಷ್ಮಿ ಯೋಜನೆಯು ರಾಜ್ಯದ ಶೇ. 85 ಕ್ಕೂ ಹೆಚ್ಚು ಕುಟುಂಬಗಳನ್ನು ತಲುಪಲಿದೆ ಎಂದು ಅಂದಾಜಿಸಲಾಗಿದೆ. ತೆರಿಗೆ ಪಾವತಿದಾರರಲ್ಲದ ಎಪಿಎಲ್‌ ಕಾರ್ಡುದಾರರಿಗೂ ಈ ಸೌಲಭ್ಯ ದೊರೆಯಲಿದೆ” ಎಂದು ಟ್ವೀಟ್ ಮಾಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...