Homeಕರ್ನಾಟಕಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ ‘ಎದ್ದೇಳು ಕರ್ನಾಟಕ’ ನಿಯೋಗ; ಮನವಿ ಸಲ್ಲಿಕೆ

ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ ‘ಎದ್ದೇಳು ಕರ್ನಾಟಕ’ ನಿಯೋಗ; ಮನವಿ ಸಲ್ಲಿಕೆ

ಚುನಾವಣೆ ಸಂದರ್ಭದಲ್ಲಿ ‘ಎದ್ದೇಳು ಕರ್ನಾಟಕ’ ಅಭಿಯಾನ ಮಾಡಿರುವ ಕೆಲಸಗಳಿಗೆ ಸಿಎಂ ಸಂತಸ ವ್ಯಕ್ತಪಡಿಸಿದರು

- Advertisement -
- Advertisement -

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ನಾಗರಿಕರ ಜಾಗೃತಿಗಾಗಿ ರೂಪುತಾಳಿ ಪರಿಣಾಮಕಾರಿ ಅಭಿಯಾನ ನಡೆಸಿದ ‘ಎದ್ದೇಳು ಕರ್ನಾಟಕ’ ತಂಡವು ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾಗಿ ಚರ್ಚೆ ನಡೆಸಿತು.

ಎದ್ದೇಳು ಕರ್ನಾಟಕದ ಕಾರ್ಯಕಾರಿ ಸಮಿತಿಯ ಪ್ರತಿನಿಧಿಗಳು ಮತ್ತು ವಿವಿಧ ಸಮುದಾಯಗಳ ಸಂಘಟನೆಗಳ ಮುಂದಾಳುಗಳ ನಿಯೋಗವು ಜೂನ್ 8ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಿ ಹಲವು ಸಂಗತಿಗಳನ್ನು ಚರ್ಚಿಸಿತು. ಹೋರಾಟಗಾರ್ತಿ ಮಲ್ಲಿಗೆ ಸಿರಿಮನೆಯವರು ತಂಡದ ಸದಸ್ಯರನ್ನು ಮುಖ್ಯಮಂತ್ರಿಯವರಿಗೆ ಪರಿಚಯಿಸಿದರು.

ಕೋಮುವಾದಿ‌ ಬಿಜೆಪಿಯ ವಿರುದ್ಧ ಎದ್ದೇಳು ಕರ್ನಾಟಕವನ್ನೂ ಒಳಗೊಂಡಂತೆ ಶ್ರಮಿಸಿದ ಜನಪರ ಚಳವಳಿಗಳು, ಕೆಲವು ಜನಪರ ಮಾಧ್ಯಮಗಳು ಮತ್ತು ಪ್ರಜ್ಞಾವಂತರ ಪಾತ್ರದ ಬಗ್ಗೆ ಹೋರಾಟಗಾರ ಕೆ. ಎಲ್. ಅಶೋಕ್ ಪೀಠಿಕೆಯ ಮಾತುಗಳನ್ನಾಡಿದರು. ಶೋಷಿತರು, ದಲಿತ ದಮನಿತರು, ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು ಮತ್ತು ಮಹಿಳೆಯರೇ ಮುಂತಾದ ಎಲ್ಲರ ಎದೆಯ ಮೇಲಿದ್ದ ಭಾರವನ್ನು ಇಳಿಸಿದಂತೆ ಅಸ್ತಿತ್ವಕ್ಕೆ ಬಂದಿರುವ ಈ ಸರ್ಕಾರದ ನೇತೃತ್ವ ವಹಿಸಿರುವ‌ ಮುಖ್ಯಮಂತ್ರಿಯವರನ್ನು ಎದ್ದೇಳು ಕರ್ನಾಟಕದ ಕಾರ್ಯಕಾರಿ ಮಂಡಳಿ ಪರವಾಗಿ ಅಭಿನಂದಿಸಿದರು.

“ಸರ್ಕಾರವು 5 ಗ್ಯಾರಂಟಿಗಳನ್ನು ಈಡೇರಿಸುವುದರ ಜೊತೆಗೆ, ಬಿಜೆಪಿಯ ದುರಾಡಳಿತದಿಂದಾಗಿ ಜಾರಿಗೆ ಬಂದಂತಹ ತಪ್ಪುಗಳನ್ನು ಸರಿಪಡಿಸಬೇಕಾದ ಗುರುತರ ಹೊಣೆಯನ್ನೂ ನಿರ್ವಹಿಸಬೇಕಿದೆ” ಎಂದು ಕರ್ನಾಟಕ ಜನಶಕ್ತಿಯ ನೂರ್ ಶ್ರೀಧರ್‌ ಹೇಳಿದರು. ಜೊತೆಗೆ ಹಲವಾರು ಅಂಶಗಳನ್ನು ಸಿದ್ದರಾಮಯ್ಯನವರ ಮುಂದಿಟ್ಟರು.

“ಭೂಮಿ ಮತ್ತು ವಸತಿ ವಂಚಿತರಿಗೆ ಆಗಿರುವ ಅನ್ಯಾಯ ಸರಿಪಡಿಸುವುದು, ರೈತವಿರೋಧಿ ಕೃಷಿಕಾಯ್ದೆಗಳನ್ನು ಹಿಂಪಡೆಯುವುದು ಮತ್ತು ನ್ಯಾಯಬದ್ಧ ಬೆಲೆ ಖಾತ್ರಿಯ ಪ್ರಕ್ರಿಯೆ ಪ್ರಾರಂಭಿಸುವುದು, ಪಠ್ಯಕ್ರಮ- ಶಿಕ್ಷಣದ ಕೇಸರೀಕರಣ, ಸರ್ಕಾರಿ ಶಾಲೆಗಳ ದುರಾವಸ್ಥೆ ಹಾಗೂ ಕನ್ನಡ ಭಾಷೆ ಮತ್ತು ಸಂಸ್ಕೃತಿಗೆ ಸಂಬಂಧಿಸಿ ಮಾಡಲಾದ ತಪ್ಪು ನಿರ್ಧಾರಗಳನ್ನು ಸರಿಪಡಿಸುವುದು, ಮೀಸಲಾತಿ ಗೋಜಲನ್ನು ಸರಿಪಡಿಸಲು ಸಮಗ್ರ ಯೋಜನೆ ರೂಪಿಸುವುದು, ಸಮುದಾಯಗಳನ್ನು ಒಡೆಯದಂತೆ ಎಚ್ಚರಿಕೆ ವಹಿಸುತ್ತಲೇ ಒಳಮೀಸಲಾತಿ ವಿವಾದಕ್ಕೆ ಪರಿಹಾರ ಒದಗಿಸುವುದು, ಕನ್ನಡದ‌ ಜನಮಾನಸದಲ್ಲಿ ಆರೆಸ್ಸೆಸ್‌ ಬಿತ್ತಿರುವ ವಿಷವನ್ನು ಇಲ್ಲವಾಗಿಸುವಂತಹ ಸಹಬಾಳ್ವೆ ಪರವಾದ ಹೆಜ್ಜೆಗಳನ್ನು ಸರ್ಕಾರವೇ ಮುಂದಾಳತ್ವ ತೆಗೆದುಕೊಂಡು ಮುಂದಿಡುವುದು, ಹಾಗೆಯೇ ಯುವಜನರಿಗೆ ಉದ್ಯೋಗ ಸೃಷ್ಟಿ- ಉದ್ಯೋಗ ಭದ್ರತೆಯ ವಿಷಯದಲ್ಲಿ ಪರಿಣತರೊಂದಿಗೆ ಚರ್ಚಿಸಿ ದಿಟ್ಟ ಕ್ರಮಗಳಿಗೆ ಮುಂದಾಗುವುದು, 12 ಗಂಟೆ ಕೆಲಸದ ಅವಧಿಯ ಕಾಯ್ದೆಯನ್ನು ರದ್ದುಗೊಳಿಸುವುದು”- ಈ ಅಂಶಗಳನ್ನು ಸಿಎಂ ಅವರಲ್ಲಿ ಪ್ರಸ್ತಾಪಿಸಿದರು.

ಈ ವಿಷಯಗಳು ಬೊಕ್ಕಸಕ್ಕೆ ಹೆಚ್ಚುವರಿ ಹೊರೆಮಾಡದಂತೆ ಜನಸಮುದಾಯಗಳ ಮತ್ತು ಚಳವಳಿಗಳ ಸಹಭಾಗಿತ್ವದಲ್ಲಿ ನಡೆಯುವಂಥವಾದ್ದರಿಂದ ಕೂಡಲೇ ನಿರ್ಧಾರಗಳನ್ನು ತೆಗೆದುಕೊಳ್ಳಬಹುದಾದ್ದರಿಂದ, ಈ ಬಗ್ಗೆ ಚಿಂತಿಸಬೇಕೆಂದು ಮನವಿ ಮಾಡಲಾಯಿತು.

ಪರಿಸರ ಹೋರಾಟಗಾರ್ತಿ ಹಾಗೂ ಎದ್ದೇಳು ಕರ್ನಾಟಕದ ಚಾಲನಾ ಸದಸ್ಯರಲ್ಲೊಬ್ಬರಾದ ತಾರಾ‌ರಾವ್ ಅವರು ಮಾತನಾಡಿ, “ಆಡಳಿತದಲ್ಲಿ ಉತ್ತರದಾಯಿತ್ವ ಹಾಗೂ ಜನಪರತೆಗಾಗಿ ಸಮುದಾಯಗಳು, ತಜ್ಞರೊಂದಿಗೆ ತಳಮಟ್ಟದ ತನಕ ನಿರಂತರ ಸಮನ್ವಯ ಇರುವಂತೆ ಸರ್ಕಾರ ನೋಡಿಕೊಳ್ಳುವ ಮೂಲಕ, ಬಿಜೆಪಿಯ ವಿರುದ್ಧ ಇಡೀ ಭಾರತಕ್ಕೆ ಕರ್ನಾಟಕ ಹೊಸದೊಂದು ಮಾದರಿ ಆಡಳಿತ ನೀಡಬಹುದು” ಎಂದು ವಿವರಿಸಿದರು.

ಮುಸ್ಲಿಂ ಸಮುದಾಯದ ನಾಯಕರಾದ ಮಹಮ್ಮದ್ ಯೂಸುಫ್ ಕನ್ನಿಯವರು 2024ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಕಾರ್ಯನಿರ್ವಹಿಸಲು ಎದ್ದೇಳು ಕರ್ನಾಟಕ ರೂಪಿಸಿಕೊಂಡಿರುವ ಯೋಜನೆಯನ್ನು ಮುಂದಿಟ್ಟರು.

ಇದನ್ನೂ ಓದಿರಿ: ‘ಎದ್ದೇಳು ಕರ್ನಾಟಕ’ ಅನುಭವ ಕಥನ (ಭಾಗ-2): ಅಭಿಯಾನ ಕೈಗೊಂಡ ಕಾರ್ಯಗಳು

ಜಾಗತಿಕ ಲಿಂಗಾಯತ ಮಹಾಸಭಾದ ಜಿ.ಬಿ.ಪಾಟೀಲರ್‌ ಮಾತನಾಡಿ, “ವಾಟ್ಸಾಪ್ ಮೂಲಕ ವಿಷಬೀಜ ಬಿತ್ತುತ್ತಿರುವ ಸಂಘಪರಿವಾರದ ತಂತ್ರಕ್ಕೆ ಪ್ರತಿತಂತ್ರ ರೂಪಿಸುವ ಸಲುವಾಗಿ ನಿರ್ದಿಷ್ಟ ಯೋಜನೆ ರೂಪಿಸಬೇಕು” ಎಂದು ತಿಳಿಸಿದರು.

ಮುಖ್ಯಮಂತ್ರಿಗಳನ್ನು ಭೇಟಿಮಾಡಿದ ತಂಡದ ನೇತೃತ್ವವನ್ನು ಚಾಲನಾ ಸಮಿತಿಯ ಸದಸ್ಯರಲ್ಲೊಬ್ಬರೂ ಹಿರಿಯರೂ ಆದ ವಿಜಯಮ್ಮ ವಹಿಸಿದ್ದರು. ನಿಯೋಗದ ಭಾಗವಾಗಿ ದಲಿತ ಚಳುವಳಿಯ ಹಿರಿಯ ನಾಯಕರಾದ‌ ಎನ್. ವೆಂಕಟೇಶ್, ರೈತಮುಖಂಡರಾದ ವೀರಸಂಗಯ್ಯ, ಕ್ರೈಸ್ತ ಸಮುದಾಯದ ಪ್ರತಿನಿಧಿಯಾಗಿ ಫಾ. ಅರುಣ್ ಲೂಯಿಸ್, ಹಿಂದುಳಿದ ವರ್ಗಗಳ ಸಂಘಟನೆಗಳ ನಾಯಕರಾದ ರಾಮಚಂದ್ರಪ್ಪ, ಎಣ್ಣೆಗೆರೆ ವೆಂಕಟರಾಮಯ್ಯ, ಸ್ವರಾಜ್ ಅಭಿಯಾನದ ವಿಜಯ್ ಕುಮಾರ್ ಸೀತಪ್ಪ, ಜಮಾತ್ ಎ ಇಸ್ಲಾಮಿ ಹಿಂದ್‌ನ ನಾಯಕರಾದ ಅಕ್ಬರ್ ಅಲಿ ಉಡುಪಿ, ಮೌಲಾನಾ ಹಾಮಿದ್ ಉಮರಿ, ವಿಚಾರವಾದಿ ಸಂಘದ ಅರಳುಕುಪ್ಪೆ ನಾಗೇಶ್, ಎದ್ದೇಳು ಕರ್ನಾಟಕದ ವರದರಾಜ ನಿಯೋಗದಲ್ಲಿದ್ದರು.

ಮುಖ್ಯಮಂತ್ರಿಗಳಿಗೆ ಜನತೆಯ ನಿರೀಕ್ಷೆಗಳ ಪತ್ರ ಸಲ್ಲಿಸಲಾಯಿತು. ಎದ್ದೇಳು ಕರ್ನಾಟಕದ ನಿಯೋಗಕ್ಕೆ ಮುಕ್ತ ಕಂಠದಿಂದ ಧನ್ಯವಾದ ಹೇಳಿದ ಮುಖ್ಯಮಂತ್ರಿಗಳು “ಕೋಮುವಾದಿಗಳನ್ನು ಸೋಲಿಸುವ ಗುರಿಯೊಂದಿಗೆ ನೀವೆಲ್ಲಾ ನಿಸ್ವಾರ್ಥವಾಗಿ ಕೆಲಸ ಮಾಡಿದ್ದರಿಂದಲೇ ನಮ್ಮ ಪಕ್ಷ 136 ಸೀಟುಗಳನ್ನು ಪಡೆಯಲು ಸಾಧ್ಯವಾಯಿತು. ನಾವು ಕೆಲವು ತಪ್ಪುಗಳನ್ನು ಮಾಡಿರದಿದ್ದರೆ 150 ಸೀಟುಗಳನ್ನು ಪಡೆಯಬಹುದಿತ್ತು. ನೀವು ಮುಂದಿಟ್ಟಿರುವ ಸಲಹೆಗಳು ಸರಿಯಾಗಿವೆ. ಎಷ್ಟೇ ಕಷ್ಟವಾದರೂ ಕೊಟ್ಟ ಮಾತು ಉಳಿಸಿಕೊಳ್ಳುತ್ತೇವೆ. 5 ಗ್ಯಾರಂಟಿಗಳನ್ನು ಕಾರ್ಯರೂಪಕ್ಕೆ ತರುತ್ತೇವೆ. ಕೃಷಿ ಕಾಯ್ದೆಗಳನ್ನು ಕೂಡಲೇ ಹಿಂಪಡಿಯುತ್ತೇವೆ. ಭೂಮಿ ವಸತಿ, ಶಿಕ್ಷಣ ಮುಂತಾದ ನಿಮ್ಮ ಸಲಹೆಗಳನ್ನೆಲ್ಲಾ ಕೂಲಂಕಷವಾಗಿ ಗಮನಿಸಿ ಕಾರ್ಯಪ್ರವೃತ್ತರಾಗುತ್ತೇವೆ. ನೀವೆಲ್ಲರೂ ನಮ್ಮ ಮೇಲೆ ಇಟ್ಟಿರುವ ನಿರೀಕ್ಷೆಗಳಿಗೆ ನಿರಾಸೆಯಾಗದಂತೆ ನಡೆದುಕೊಳ್ಳುತ್ತೇವೆ” ಎಂದು ಭರವಸೆಕೊಟ್ಟರು. ನಿರ್ದಿಷ್ಟವಾದ ಕೆಲವು ಸಂಗತಿಗಳನ್ನು ಚರ್ಚಿಸಲು ಮತ್ತೆ ಸಭೆ ಗೊತ್ತುಪಡಿಸುವುದಾಗಿ ತಿಳಿಸಿದರು. ಒಟ್ಟಿನಲ್ಲಿ ಇದು ಬಹಳ ಫಲಪ್ರದ ಮತ್ತು ಅರ್ಥಪೂರ್ಣ ಸಭೆಯಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...