Homeಕರ್ನಾಟಕಹಂಪಿಯಲ್ಲಿ ಪ್ರವಾಹ: ಪ್ರವಾಸಿಗರು, ಹೋಟೆಲ್ ಮಾಲೀಕರು ಮಾಡಿದ್ದು ತಪ್ಪಲ್ಲವೇ? ಇದಕ್ಕೆ ಶಿಕ್ಷೆಯಿಲ್ಲವೇ?

ಹಂಪಿಯಲ್ಲಿ ಪ್ರವಾಹ: ಪ್ರವಾಸಿಗರು, ಹೋಟೆಲ್ ಮಾಲೀಕರು ಮಾಡಿದ್ದು ತಪ್ಪಲ್ಲವೇ? ಇದಕ್ಕೆ ಶಿಕ್ಷೆಯಿಲ್ಲವೇ?

- Advertisement -
- Advertisement -

ಅತ್ತ ಸಹ್ಯಾದ್ರಿ ಪರ್ವತ ಶ್ರೇಣಿ ಮತ್ತು ಮಲೆನಾಡಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದಂತೆ ಇತ್ತ ದೂರದ ಕೊಪ್ಪಳ ಜಿಲ್ಲೆಯಲ್ಲಿರುವ ತುಂಗಭದ್ರಾ ಜಲಾಶಯ ತುಂಬುವುದು ಎಲ್ಲರಿಗೂ ಖಾತ್ರಿಯಾಗಿ ಹೋಯಿತು. ಮಳೆ ಸುರಿಯುವ ಮೊದಲು ಜಲಾಶಯದಲ್ಲಿ ಬರೀ 32 ಟಿಎಂಸಿ ಅಡಿ ನೀರಿತ್ತು. ಒಂದೇ ವಾರದಲ್ಲಿ 100 ಟಿಎಂಸಿ ಅಡಿಗೆ ಬಂತು ನಿಂತಿತು. ಆದರೆ, ಮಲೆನಾಡಿನಲ್ಲಿ ಮಳೆ ಮಾತ್ರ ನಿಂತಿರಲಿಲ್ಲ. ಸುಮಾರು 2 ಲಕ್ಷ ಕ್ಯೂಸೆಕ್ ನೀರು ಜಲಾಶಯಕ್ಕೆ ಹರಿದು ಬರುತ್ತಲೇ ಇತ್ತು. ಜಲಾಶಯದ ಗೇಟುಗಳನ್ನು ತೆರೆದು ನದಿಗೆ ನೀರು ಬಿಡುವುದು ಅನಿವಾರ್ಯವಾಯಿತು.

ಈ ಎಲ್ಲಾ ಬೆಳವಣಿಗೆಗಳನ್ನು ಗಮನಿಸುತ್ತಿದ್ದ ಕೊಪ್ಪಳದ ಯುವ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಜಲಾಶಯದಿಂದ ಎರಡೂವರೆ-ಮೂರು ಲಕ್ಷ ಕ್ಯೂಸೆಕ್ ನೀರನ್ನು ಬಿಟ್ಟರೆ ಜಗತ್ಪ್ರಸಿದ್ಧ ವಿಶ್ವಪಾರಂಪರಿಕ ತಾಣವಾದ ಹಂಪಿಯ ಕೆಲ ಸ್ಮಾರಕಗಳು ಜಲಾವೃತವಾಗುತ್ತವೆ ಹಾಗೂ ಹಂಪಿಯ ಪಕ್ಕದಲ್ಲಿರುವ ವಿರುಪಾಪುರ ನಡುಗಡ್ಡೆಯಲ್ಲಿನ ಜನ ತೊಂದರೆಗೆ ಸಿಲುಕಿಕೊಳ್ಳುತ್ತಾರೆ ಎಂಬುದನ್ನು ಮೊದಲೇ ಊಹಿಸಿದ್ದರು. ಅದಕ್ಕಾಗಿಯೇ ಅವರು ಅತ್ತ ಜಲಾಶಯದ ನೀರಿನ ಮಟ್ಟ ಏರುತ್ತಿದ್ದಂತೆ ವಿರುಪಾಪುರ ನಡುಗಡ್ಡೆಯಿಂದ ಜನರನ್ನು ತೆರವುಗೊಳಿಸುವ ಸಿದ್ಧತೆ ಮಾಡಿಕೊಂಡರು. ಮೊದಲು ತನ್ನ ಅಧಿಕಾರಿಗಳನ್ನು ಕಳಿಸಿ ಪ್ರವಾಸಿಗರು ನಡುಗಡ್ಡೆಗೆ ಬರುವುದನ್ನು ತಡೆಯಲು ಪ್ರಯತ್ನಿಸಿದರು. ಡಂಗೂರ ಹೊಡೆಸಿ ನಡುಗಡ್ಡೆಯಲ್ಲಿರುವ ಜನ ಸುರಕ್ಷಿತ ಸ್ಥಳಗಳಿಗೆ ತೆರಳಬೇಕು ಎಂದು ಸಾರಿಸಿದರು. ಕೊನೆಗೆ ತಾವೇ ಖುದ್ದಾಗಿ ನಡುಗಡ್ಡೆಗೆ ಹೋಗಿ ಎಲ್ಲಾ ಹೊಟೇಲ್ ಮತ್ತು ರೆಸಾರ್ಟ್ ಗಳನ್ನು ಮುಚ್ಚಬೇಕು ಎಂದು ಅವುಗಳ ಮಾಲಿಕರಿಗೆ ನಿರ್ದೇಶನ ಕೊಟ್ಟು ಬಂದರು. ಅಷ್ಟೇ ಅಲ್ಲದೇ, ಈ ನಿಟ್ಟಿನಲ್ಲಿ ಒಂದು ಅಧಿಕೃತ ಆದೇಶವನ್ನೂ ಹೊರಡಿಸಿದರು.

ಇಷ್ಟೆಲ್ಲಾ ಮಾಡಿದ ನಂತರವೂ ಆಗಿದ್ದೇನು ಗೊತ್ತೆ?

ವಿಶ್ವಪ್ರಸಿದ್ಧ ಹಂಪಿಗೆ ದೇಶವಿದೇಶಗಳಿಂದ ಹಲವು ಪ್ರವಾಸಿಗರು ಬರುತ್ತಾರೆ. ಬಂದವರಲ್ಲಿ ಬಹುತೇಕರು ಮೋಜು-ಮಸ್ತಿಗೆ ಹೆಸರುವಾಸಿಯಾದ ಈ ವಿರುಪಾಪುರ ಗಡ್ಡಿಗೆ ಬಂದೇ ಬರುತ್ತಾರೆ. ದೇಶಿ-ವಿದೇಶಿ ಪ್ರವಾಸಿಗರನ್ನು ಹಲವು ರೀತಿಯಲ್ಲಿ ತೃಪ್ತಿಪಡಿಸುವುದಕ್ಕಾಗಿಯೇ ಅಲ್ಲಿ ಅನೇಕ ಐಷಾರಾಮಿ ಹೊಟೇಲುಗಳು, ರೆಸಾರ್ಟುಗಳು ತಲೆಯೆತ್ತಿವೆ. ದುಡ್ಡು ಮಾಡುವ ಖಯಾಲಿಗೆ ಬಿದ್ದಿರುವ ಹೊಟೇಲ್ ಮಾಲಿಕರು ಜಿಲ್ಲಾಧಿಕಾರಿ ನೀಡಿದ ಮನವಿ, ನಿರ್ದೇಶನ, ಎಚ್ಚರಿಕೆ ಮತ್ತು ಆದೇಶವನ್ನೂ ಗಾಳಿಗೆ ತೂರಿ ತಮ್ಮ ಹೊಟೇಲ್ ಮತ್ತು ರೆಸಾರ್ಟುಗಳನ್ನು ಬಂದ್ ಮಾಡಲಿಲ್ಲ.

ಅದೂ ಸಾಲದೆಂಬಂತೆ, “ನದಿಯಲ್ಲಿ ನೀರು ಹೆಚ್ಚಾದರೆ, ನಾವೇ ನಿಮ್ಮನ್ನು ಖಾಸಗಿ ದೋಣಿಗಳಲ್ಲಿ ಆಚೆಗೆ ಬಿಟ್ಟುಬರುತ್ತೇವೆ. ನೀವೇನು ಹೆದರಬೇಡಿ. ಬೇಕಿದ್ದರೆ ನಿಮ್ಮ ಕಾರುಗಳನ್ನು ನದಿಯಿಂದ ದೂರ ನಿಲ್ಲಿಸಿ ಬನ್ನಿ” ಎಂದು ಪ್ರವಾಸಿಗರನ್ನು ಹುರಿದುಂಬಿಸಿ, ಅವರಿಗೆ ಆಶ್ವಾಸನೆಗಳನ್ನು ಕೊಟ್ಟು ತಮ್ಮಲ್ಲೇ ಉಳಿಸಿಕೊಂಡರು. ಎರಡನೇ ಶನಿವಾರ, ಭಾನುವಾರ ಮತ್ತು ಸೋಮವಾಗ (ಈದ್) ರಜಾ ದಿನಗಳಾಗಿದ್ದರಿಂದ ಪ್ರವಾಸಿಗರ ಸಂಖ್ಯೆಯೂ ಹೆಚ್ಚಿತ್ತು; ಅಂತೆಯೇ ಹೊಟೇಲ್ ಮಾಲಿಕರಿಗೆ ಲಾಭವೂ ಕೂಡ.

ಆಮೇಲೆ ಏನಾಯಿತು? ಜಿಲ್ಲಾಧಿಕಾರಿ ಸುನೀಲ್ ಕುಮಾರ್ ನಿರೀಕ್ಷಿಸಿದಂತೆಯೇ ಮಲೆನಾಡಿನಲ್ಲಿ ಮಳೆ ಬಿಡಲಿಲ್ಲ. ತುಂಗಭದ್ರಾ ಜಲಾಶಯಕ್ಕೆ ಬೃಹತ್ ಪ್ರಮಾಣದ ಒಳಹರಿವು ಬರುವುದು ನಿಲ್ಲಲಿಲ್ಲ. ಜಲಾಶಯದಿಂದ ನೀರು ಹೊರಹರಿಸುವುದೂ ಅನಿವಾರ್ಯವಾಯಿತು. ಯಾವಾಗ ಜಲಾಶಯದಿಂದ ಹೊರಹರಿವು ಎರಡೂವರೆ ಲಕ್ಷ ಕ್ಯೂಸೆಕ್ ದಾಟಿತೋ ಅತ್ತ ಹಂಪಿ ಸ್ಮಾರಕಗಳೂ ಜಲಾವೃತವಾದವು, ಇತ್ತ ನಡುಗಡ್ಡೆಯಲ್ಲೂ ಜನ ನೆರವಿಗಾಗಿ ಕೂಗಲಾರಂಭಿಸಿದರು.

ನಡುಗಡ್ಡೆಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ರಾಷ್ಟ್ರೀಯ ವಿಪತ್ತು ಪ್ರತಿಸ್ಪಂದನಾ ಪಡೆ (NDRF), ನಾಗರಿಕ ರಕ್ಷಣಾ ಪಡೆ ಮತ್ತು ಅಗ್ನಿಶಾಮಕ ದಳಗಳನ್ನು ಕರೆಸಲಾಯಿತು. ಮೋಜು-ಮಸ್ತಿಗಾಗಿ ನಡುಗಡ್ಡೆಯಲ್ಲಿ ಉಳಿದಿದ್ದ ಪ್ರವಾಸಿಗರನ್ನು ಹಾಗೂ ಲಾಭಕ್ಕಾಗಿ ಅವರನ್ನು ಉಳಿಸಿಕೊಂಡಿದ್ದ ಹೊಟೆಲ್ ಮಾಲಿಕರು/ನಿರ್ವಾಹಕರನ್ನು ರಕ್ಷಿಸಲು ರಕ್ಷಣಾ ದಳಗಳ ಯೋಧರು ತಮ್ಮ ಪ್ರಾಣಗಳನ್ನು ಪಣಕ್ಕೊಡ್ಡಿ ಮೈಯಿಗೆ ಲೈಫ್ ಜಾಕೇಟ್ ಹಾಕಿಕೊಂಡು ಭೋರ್ಗರೆಯುತ್ತಿದ್ದ ನದಿಗೆ ಇಳಿಯಬೇಕಾಯಿತು. ಎನ್.ಡಿ.ಆರ್.ಎಫ್ ತಂಡ ಆಗಲೇ ರಬ್ಬರ್ ಬೋಟ್ ಬಳಸಿ ಒಂದು ಟ್ರಿಪ್ ಹೋಗಿ ಬಂದು ವಿದೇಶಿ ಪ್ರವಾಸಿಗರನ್ನು ಕರೆತಂದಿತ್ತು. ನಡುಗಡ್ಡೆಯಲ್ಲಿ ಸುಮಾರು ಮುನ್ನೂರು ಜನ ಇದ್ದಿದ್ದರಿಂದ ಒಂದೇ ದೋಣಿಯಲ್ಲಿ ಪ್ರತೀ ಸಾರಿ ನಾಲ್ಕೈದು ಜನರನ್ನು ರಕ್ಷಿಸುತ್ತಾ ಹೋದರೆ ಒಂದು ವಾರ ಬೇಕಾಗುತ್ತದೆ. ಆದ್ದರಿಂದ ಇನ್ನೊಂದು ದೋಣಿ ಧುಮ್ಮಿಕ್ಕಿ ಬರುತ್ತಿದ್ದ ಅಪಾಯಕಾರಿ ನದಿಗೆ ಇಳಿಯಿತು. ಅದರಲ್ಲಿ ಐವರು ರಕ್ಷಣಾ ಸಿಬ್ಬಂದಿಗಳಿದ್ದರು. ಅದು ತನ್ನ ಮೊದಲ ಬಾರಿಗೆ ಪ್ರವಾಸಿಗರನ್ನು ಕರೆತರಲು ನಡುಗಡ್ಡೆಯತ್ತ ಹೋಗುವಾಗಲೇ ನದಿಯ ನಡುವೆ ನಿಂತಿದ್ದ ಮರಕ್ಕೆ ಬಡಿದು ಮಗುಚಿಬಿದ್ದಿತು..! ಜನರ ರಕ್ಷಣೆಗೆ ಹೋಗಿದ್ದ ಐವರೂ ರಭಸವಾಗಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದರು.

ಕೂಡಲೇ ಜಿಲ್ಲಾಧಿಕಾರಿ ಸುನೀಲ್ ಕುಮಾರ್ ವಾಯುಪಡೆ ಮತ್ತು ನೌಕಾಪಡೆಗಳನ್ನು ಸಂಪರ್ಕಿಸಿ ಮೂರು ಹೆಲಿಕ್ಯಾಪ್ಟರ್ ಗಳನ್ನು ತರಿಸಿ ಮೊದಲು ನದಿಯಲ್ಲಿ ಕೊಚ್ಚಿ ಹೋಗಿದ್ದ ರಕ್ಷಣಾ ಸಿಬ್ಬಂದಿಯನ್ನು ರಕ್ಷಿಸುವ ಕೆಲಸ ಪ್ರಾರಂಭಿಸಿದರು. ಅದೃಷ್ಟವಶಾತ್ ಕೆಲವೇ ಗಂಟೆಗಳಲ್ಲಿ ಎಲ್ಲಾ ಐವರನ್ನೂ  ರಕ್ಷಿಸುವಲ್ಲಿ ವಾಯುಪಡೆ ಮತ್ತು ನೌಕಾಪಡೆಯ ಹೆಲಿಕ್ಯಾಪ್ಟರುಗಳು ಯಶಸ್ವಿಯಾದವು.

ಕೊನೆಗೆ ದೋಣಿಯ ಮೂಲಕ ನಡುಗಡ್ಡೆಯಲ್ಲಿ ಸಿಲುಕಿರುವ ಪ್ರವಾಸಿಗರನ್ನು ರಕ್ಷಿಸುವ ಯೋಚನೆಯನ್ನೇ ಬಿಟ್ಟು ಇದೇ ಹೆಲಿಕ್ಯಾಪ್ಟರುಗಳ ಮೂಲಕ ಅವರನ್ನು ಸುರಕ್ಷಿತ ಸ್ಥಳಗಳಿಗೆ ತಲುಪಿಸುವ ಕೆಲಸ ಪ್ರಾರಂಭಿಸಿದರು.

ವಾಯುಪಡೆಯ ಒಂದು ಹೆಲಿಕ್ಯಾಪ್ಟರ್ 20 ಜನರನ್ನು ಹೊತ್ತೊಯ್ಯುವ ಸಾಮರ್ಥ್ಯ ಹೊಂದಿದ್ದರೆ ಇನ್ನೊಂದು ಹೆಲಿಕ್ಯಾಪ್ಟರ್ 10 ಜನರನ್ನು ತುಂಬಿಕೊಂಡು ಹೋಗುವ ಸಾಮರ್ಥ್ಯ ಹೊಂದಿತ್ತು. ಈ ಹೆಲಿಕ್ಯಾಪ್ಟರುಗಳು ಕಂಡಕಂಡಲ್ಲಿ ಇಳಿಯುವುದು ಕಷ್ಟ. ಹಾಗಾಗಿ, ನಡುಗಡ್ಡೆಯಿಂದ ಹೊತ್ತೊಯ್ದ ಜನರನ್ನು ಜಿಂದಾಲ್ ಏರ್ ಸ್ಟ್ರಿಪ್ ನಲ್ಲಿ ಇಳಿಸಿದವು. ಇನ್ನೊಂದು ನೌಕಾಪಡೆಯ ಹೆಲಿಕ್ಯಾಪ್ಟ್ ಕೇವಲ ಏಳೆಂಟು ಜನರನ್ನು ಹೊತ್ತೊಯ್ಯುವ ಸಾಮರ್ಥ್ಯವಿದ್ದು ಅದು ಯಾವುದೇ ಸಪಾಟು ನೆಲದ ಮೇಲೆ ಇಳಿಯಬಲ್ಲದು. ಅದು ಸಮೀಪದ ರಸ್ತೆಗಳಲ್ಲಿಯೇ ಜನರನ್ನು ಇಳಿಸಿತು. ಹೀಗೆ ಸಂಜೆಯ ಹೊತ್ತಿಗೆ ಸುಮಾರು ಇನ್ನೂರೈವತ್ತು ಜನರನ್ನು ವಾಯುಪಡೆ ಮತ್ತು ನೌಕಾಪಡೆಯ ಯೋಧರು ರಕ್ಷಿಸಿದರು. ಇನ್ನೂ ನೂರು ಮಂದಿ ಅಲ್ಲೇ ಉಳಿದಿದ್ದರು. ಇವತ್ತು ಅವರನ್ನು ಕರೆತರುವ ಕಾರ್ಯಾಚರಣೆ ಶುರುವಾಗಿಬಹುದು.

ಇಷ್ಟೆಲ್ಲಾ ಏಕೆ ಬರೆಯಬೇಕಾಯಿತು ಎಂದರೆ, ಜಿಲ್ಲಾಧಿಕಾರಿಯ ಮಾತನ್ನು ಪ್ರವಾಸಿಗರು, ಹೊಟೇಲ್ ಮಾಲಿಕರು ಕೇಳಿದ್ದರೆ ಇಷ್ಟೆಲ್ಲಾ ತೊಂದರೆಯಾಗುವ ಪ್ರಮೇಯವೇ ಬರುತ್ತಿರಲಿಲ್ಲ. ಇಷ್ಟೊಂದು ಸಮಯ, ಹಣ, ಶಕ್ತಿ ಪೋಲಾಗುವ ಸಂಭವವೇ ಇರುತ್ತಿರಲಿಲ್ಲ. ಮೋಜು-ಮಸ್ತಿ ಮಾಡುವವರ ರಕ್ಷಣೆಗಾಗಿ ತಮ್ಮ ಜೀವದ ಹಂಗು ತೊರೆದು ನದಿಗಿಳಿದು ಕೊಚ್ಚಿಹೋದ ಯೋಧರಿಗೆ ಏನಾದರೂ ಹೆಚ್ಚೂಕಮ್ಮಿಯಾಗಿದ್ದರೆ ಅದಕ್ಕೆ ಯಾರು ಹೊಣೆ?

ನಮ್ಮ ಜನಕ್ಕೆ ಯಾವಾಗ ಬುದ್ದಿ ಬರುತ್ತೆ ಅಂತ ಅರ್ಥವಾಗುತ್ತಿಲ್ಲ. 

ಅಂದಹಾಗೆ, ಜಿಲ್ಲಾಧಿಕಾರಿ ಸುನೀಲ್ ಕುಮಾರ್ ಗೂ ಈಗ ಪಿತ್ತ ನೆತ್ತಿಗೇರಿದ ಹಾಗೆ ಕಾಣುತ್ತಿದೆ. ಜಿಲ್ಲಾಧಿಕಾರಿ ಆದೇಶ ಉಲ್ಲಂಘನೆ ಮಾಡಿದ್ದಕ್ಕಾಗಿ ಹೊಟೆಲ್/ ರೆಸಾರ್ಟ್ ಮಾಲಿಕರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವುದಕ್ಕೆ ಅವರು ಮುಂದಾಗಿದ್ದಾರೆ. ಪ್ರಾಕೃತಿಕ ವಿಕೋಪ ನಿರ್ವಹಣೆಯಲ್ಲಿ ತನಗೆ ಸಹಕಾರ ತೋರದ ಈ ಮಾಲಿಕರ ವಿರುದ್ಧ  ವಿಕೋಪ ನಿರ್ವಹಣಾ ಕಾಯ್ದೆಯ ಅಡಿಯಲ್ಲೂ ಕ್ರಮ ಜರುಗಿಸಲು ಮುಂದಾಗಿದ್ದಾರೆ. ಇವರ ಲೈಸನ್ಸುಗಳನ್ನು ರದ್ಧುಪಡಿಸುವ ಸಂಭವವೂ ಇದೆ. ಹಾಗಾದಾಗ ಮಾತ್ರ ಈ ಧನದಾಹಿಗಳು ಒಂದಿಷ್ಟು ಬುದ್ದಿಕಲಿಯುತ್ತಾರೆ ಅನ್ನಿಸುತ್ತದೆ.

ಕೃಪೆ- ಕುಮಾರ್ ಬುರಡಿಕಟ್ಟಿಯವರ ಫೇಸ್ ಬುಕ್ ಗೋಡೆಯಿಂದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...