Homeಮುಖಪುಟ‘ಫೋಟೋ ತೆಗೆಸಿಕೊಳ್ಳುವಾಗ ಬ್ರಿಜ್‌ಭೂಷಣ್ ನಿತಂಬ ಸ್ಪರ್ಶಿಸಿದ್ದ’: ಕುಸ್ತಿಪಟುವಿನ ಆರೋಪ ದೃಢೀಕರಿಸಿದ ಅಂತಾರಾಷ್ಟ್ರೀಯ ರೆಫರಿ

‘ಫೋಟೋ ತೆಗೆಸಿಕೊಳ್ಳುವಾಗ ಬ್ರಿಜ್‌ಭೂಷಣ್ ನಿತಂಬ ಸ್ಪರ್ಶಿಸಿದ್ದ’: ಕುಸ್ತಿಪಟುವಿನ ಆರೋಪ ದೃಢೀಕರಿಸಿದ ಅಂತಾರಾಷ್ಟ್ರೀಯ ರೆಫರಿ

- Advertisement -
- Advertisement -

ಭಾರತೀಯ ಕುಸ್ತಿ ಫೆಡರೇಷನ್‌ ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಹೊಸ ಸಂಗತಿಗಳು ಹೊರಬೀಳುತ್ತಿವೆ. ವಯಸ್ಕ ಆರು ಮಂದಿ ಮಹಿಳಾ ಕುಸ್ತಿಪಟುಗಳು ನೀಡಿರುವ ದೂರಿನ ಪೈಕಿ ಒಬ್ಬ ಕುಸ್ತಿಪಟುವಿನ ಆರೋಪಗಳನ್ನು ಅಂತಾರಾಷ್ಟ್ರೀಯ ರೆಫರಿ ದೃಢೀಕರಿಸಿದ್ದಾರೆ.

“ಏಷಿಯನ್ ಚಾಂಪಿಯನ್‌ಶಿಪ್‌ಗಾಗಿ ಅಭ್ಯಾಸವನ್ನು ನಡೆಸಿದ ಬಳಿಕ ಕೊನೆಯಲ್ಲಿ ತಂಡದ ಫೋಟೋ ಸೆಷನ್‌ ಇತ್ತು. ಆ ಸಂದರ್ಭದಲ್ಲಿ ಆತ (ಬ್ರಿಜ್‌ ಭೂಷಣ್) ನನ್ನ ನಿತಂಬದ (ಕುಂಡಿ) ಮೇಲೆ ಕೈ ಇಟ್ಟನು. ನಂತರ ನಾನು ದೂರು ಸರಿಯಲು ಯತ್ನಿಸಿದೆ” ಎಂದು ತಿಳಿಸಿದ್ದಾರೆ. ಈ ಆರೋಪವನ್ನು ಅಂತಾರಾಷ್ಟ್ರೀಯ ಕುಸ್ತಿ ರೆಫರಿ ದೃಢಪಡಿಸಿದ್ದಾರೆ ಎಂದು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

2007ರಿಂದಲೂ ಅಂತಾರಾಷ್ಟ್ರೀಯ ಕುಸ್ತಿ ರೆಫರಿಯಾಗಿರುವ ಜಗಬೀರ್‌ ಸಿಂಗ್‌, ಸಂತ್ರಸ್ತ ಕುಸ್ತಿಪಟು ಮಾಡಿರುವ ಆರೋಪವನ್ನು ದೃಢಪಡಿಸಿದ್ದಾರೆ. ಅಂದು ಈ ರೆಫರಿಯು ದೂರದಾರ ಕುಸ್ತಿಪಟು ಮತ್ತು ಬ್ರಿಜ್ ಭೂಷಣ್‌ ಅವರಿಂದ ಕೆಲವೇ ಅಡಿಗಳ ಅಂತರದಲ್ಲಿ ನಿಂತಿದ್ದರು. ದೆಹಲಿ ಪೊಲೀಸರಿಗೆ ಕುಸ್ತಿಪಟು ಫೋಟೋ ಸಾಕ್ಷಿಯನ್ನು ಒದಗಿಸಿದ್ದಾರೆ.

ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರು ಬುಧವಾರ ನೀಡಿದ ಹೇಳಿಕೆಯ ಪ್ರಕಾರ, “ಜೂನ್ 15ರಂದು ಪೊಲೀಸ್ ತನಿಖೆ ಮುಕ್ತಾಯಗೊಳ್ಳಲಿದೆ. ತನಿಖೆಗೆ ಒಳಪಡಿಸಲಾದ ನಾಲ್ಕು ರಾಜ್ಯಗಳ 125ಕ್ಕೂ ಹೆಚ್ಚು ಸಂಭಾವ್ಯ ಸಾಕ್ಷಿಗಳಲ್ಲಿ ಜಗ್ಬೀರ್‌ ಸಿಂಗ್‌ ಕೂಡ ಒಬ್ಬರಾಗಿದ್ದಾರೆ.”

ಒಲಿಂಪಿಯನ್, ಕಾಮನ್ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತ, ಅಂತಾರಾಷ್ಟ್ರೀಯ ರೆಫರಿ ಮತ್ತು ರಾಜ್ಯ ಮಟ್ಟದ ಕೋಚ್- ಈ ನಾಲ್ವರು ಕನಿಷ್ಠ ಮೂವರು ಮಹಿಳಾ ಕುಸ್ತಿಪಟುಗಳ ಆರೋಪಗಳನ್ನು ದೃಢಪಡಿಸಿದ್ದಾರೆ ಎಂದು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಹೇಳಿದೆ.

“ಅವನು (ಬ್ರಿಜ್ ಭೂಷಣ್) ಅವಳ ಪಕ್ಕದಲ್ಲಿ ನಿಂತಿರುವುದನ್ನು ನಾನು ನೋಡಿದೆ. ಆಕೆ ಆತನಿಂದ ದೂರ ನಿಲ್ಲಲು ಮುಂದಾದಳು, ದೂರ ನಿಂತಳು, ಗೊಣಗಿದಳು. ಆಕೆ ಮೊದಲು ಅಧ್ಯಕ್ಷರ ಪಕ್ಕದಲ್ಲಿ ನಿಂತಿದ್ದಳು, ಆದರೆ ನಂತರ ಮುಂದೆ ಬಂದಳು. ಈ ಮಹಿಳಾ ಕುಸ್ತಿಪಟು ಹೇಗೆ ಪ್ರತಿಕ್ರಿಯಿಸುತ್ತಿದ್ದಾರೆಂದು ನಾನು ನೋಡಿದೆ. ಆಕೆ ತೊಂದರೆಯಲ್ಲಿದ್ದಾಳೆ ಅನಿಸಿತು. ಆಕೆಯೊಂದಿಗೆ ಏನೋ ತಪ್ಪಾಗಿರುವುದು ತಿಳಿಯಿತು. ಇಲ್ಲಿ ಬಾ, ಇಲ್ಲಿ ಬಂದು ನಿಲ್ಲು ಎಂದು ಕುಸ್ತಿಪಟುಗಳನ್ನು ಆತ ಮುಟ್ಟುತ್ತಲೇ ಇದ್ದನು. ಕುಸ್ತಿಪಟುವಿಗೆ ಆ ದಿನ (ಫೋಟೋ ಸೆಷನ್ ಸಮಯದಲ್ಲಿ) ಏನೋ ತಪ್ಪಾಗಿದೆ ಎಂದು ಸ್ಪಷ್ಟವಾಯಿತು” ಎಂದು ಜಗ್ಬೀರ್‌ ಸಿಂಗ್ ಸ್ಪಷ್ಟಪಡಿಸಿದ್ದಾರೆ.

ಎಫ್‌ಐಆರ್‌ನ ಪ್ರಕಾರ, “ಫೋಟೋ ತೆಗೆಸಿಕೊಳ್ಳುವ ಸಂದರ್ಭದಲ್ಲಿ ಆತನಿಂದ ಬಿಡಿಸಿಕೊಂಡು ಮುಂದಿನ ಸಾಲಿಗೆ ತೆರಳುವ ಮುನ್ನ ಆತ ಬಲವಂತವಾಗಿ ಆಕೆಯ ಭುಜವನ್ನು ಹಿಡಿದಿದ್ದನು.”

“ನಾನು ಅತ್ಯಂತ ಎತ್ತರದ ಕುಸ್ತಿಪಟುಗಳಲ್ಲಿ ಒಬ್ಬಳಾಗಿದ್ದರಿಂದ, ನಾನು ಕೊನೆಯ ಸಾಲಿನಲ್ಲಿ ನಿಲ್ಲಬೇಕಾಗಿತ್ತು. ನಾನು ಕೊನೆಯ ಸಾಲಿನಲ್ಲಿ ನಿಂತು, ಇತರ ಕುಸ್ತಿಪಟುಗಳು ತಮ್ಮ ಸ್ಥಾನಗಳಲ್ಲಿ ನಿಲ್ಲಲೆಂದು ಕಾಯುತ್ತಿದ್ದಾಗ ಬ್ರಿಜ್ ಭೂಷಣ್‌ ಬಂದು ನನ್ನ ಪಕ್ಕದಲ್ಲಿ ನಿಂತನು. ನನ್ನ ನಿತಂಬದ ಮೇಲೆ ಕೈ ಹಾಕಿದ್ದು ನನ್ನ ಅನುಭವಕ್ಕೆ ಬಂದಿತು…”

“…ನಾನು ತಕ್ಷಣ ಗಾಬರಿಯಿಂದ ಹಿಂತಿರುಗಿ ನೋಡಿದೆ. ಆರೋಪಿಯು ನನ್ನ ನಿತಂಬದ ಮೇಲೆ ತನ್ನ ಕೈಗಳನ್ನು ಇಟ್ಟಿದ್ದನು. ಆರೋಪಿಯು ಮತ್ತಷ್ಟು ಅನುಚಿತ ಸ್ಪರ್ಶ ಮಾಡುವುದರಿಂದ ತಪ್ಪಿಸಿಕೊಳ್ಳಲು ನಾನು ತಕ್ಷಣವೇ ಆ ಸ್ಥಳದಿಂದ ದೂರ ಸರಿಯಲು ಪ್ರಯತ್ನಿಸಿದೆ. ಆದರೆ, ನಾನು ದೂರ ಹೋಗಲು ಯತ್ನಿಸಿದಾಗ ಆರೋಪಿ ಬ್ರಿಜ್ ಭೂಷಣ್‌ ನನ್ನ ಭುಜವನ್ನು ಬಲವಂತವಾಗಿ ಹಿಡಿದಿದ್ದರು. ಹೇಗೋ ಆರೋಪಿಯ ಕಪಿಮುಷ್ಠಿಯಿಂದ ಪಾರಾದೆ. ತಂಡದ ಫೋಟೋ ಕ್ಲಿಕ್ಕಿಸುವುದನ್ನು ನಾನು ತಪ್ಪಿಸಲು ಸಾಧ್ಯವಾಗದ ಕಾರಣ, ನಾನು ಆರೋಪಿಯಿಂದ ದೂರವಿದ್ದು ಮೊದಲ ಸಾಲಿನಲ್ಲಿ ಕುಳಿತುಕೊಳ್ಳಲು ನಿರ್ಧರಿಸಿದೆ” ಎಂದು ದೂರುದಾರರು ವಿವರಿಸಿರುವುದಾಗಿ ಎಫ್‌ಐಆರ್‌ನಲ್ಲಿ ಉಲ್ಲೇಖಗೊಂಡಿದೆ.

“ಒಪ್ಪಿಗೆಯಿಲ್ಲದ ‘ಅತ್ಯಂತ ಅಸಭ್ಯ’ ಮತ್ತು ‘ಆಕ್ಷೇಪಾರ್ಹ’ ನಡೆಯಿಂದಾಗಿ ನಾನು ದಿಗ್ಭ್ರಮೆಗೊಂಡಿದ್ದೇನೆ” ಎಂದಿದ್ದಾರೆ ಕುಸ್ತಿಪಟು.

ಮತ್ತೊಬ್ಬ ಸಾಕ್ಷಿ, 2010ರ ಸಿಡಬ್ಲ್ಯುಜಿ ಚಿನ್ನದ ಪದಕ ವಿಜೇತೆ ಅನಿತಾ ಕೂಡ ಈ ಆರೋಪಗಳನ್ನು ದೃಢೀಕರಿಸಿದ್ದಾರೆ.

ಇದನ್ನೂ ಓದಿರಿ: ಜೂ.15ರ ವರೆಗೆ ಪ್ರತಿಭಟನೆ ಸ್ಥಗಿತ: ಕ್ರೀಡಾ ಸಚಿವರ ಭೇಟಿ ಬಳಿಕ ಕುಸ್ತಿಪಟುಗಳ ಹೇಳಿಕೆ

“ತನ್ನನ್ನು ಕೋಣೆಗೆ ಕರೆದು ಬಲವಂತವಾಗಿ ಬ್ರಿಜ್ ಭೂಷಣ್ ತಬ್ಬಿಕೊಂಡಿರುವ ಕುರಿತು ಕುಸ್ತಿಪಟು ತಿಳಿಸಿದ್ದರು” ಎಂದು ಅನಿತಾ ವಿವರಿಸಿದ್ದಾರೆ.

ಪಟಿಯಾಲದ ರಾಷ್ಟ್ರೀಯ ಶಿಬಿರಕ್ಕೆ ಹಿಂದಿರುಗಿದ ನಂತರ ಸಂತ್ರಸ್ತ ಕುಸ್ತಿಪಟು, ಅನಿತಾ ಅವರಲ್ಲಿ ತಮ್ಮ ನೋವನ್ನು ಹೇಳಿಕೊಳ್ಳುತ್ತಾ ಕಣ್ಣೀರು ಹಾಕಿದ್ದರು.

ಅಪ್ರಾಪ್ತ ಕುಸ್ತಿಪಟು ಸೇರಿದಂತೆ ಏಳು ಮಹಿಳಾ ಕುಸ್ತಿಪಟುಗಳು ದಾಖಲಿಸಿರುವ ಎರಡು ಎಫ್‌ಐಆರ್‌ಗಳು ಅಘಾತಕಾರಿ ಅಂಶಗಳನ್ನು ಹೊಂದಿವೆ. “ನೀನು ಈ ಕ್ಷೇತ್ರದಲ್ಲಿ ಬೆಳೆಯಬೇಕಾದರೆ ಲೈಂಗಿಕವಾಗಿ ಸಹಕರಿಸಬೇಕು” ಎಂದು ಬ್ರಿಜ್‌ ಭೂಷಣ್ ಒತ್ತಾಯಿಸುತ್ತಿದ್ದ ಕನಿಷ್ಠ ಎರಡು ನಿದರ್ಶನಗಳು ಉಲ್ಲೇಖಗೊಂಡಿವೆ.

ಅನುಚಿತ ಸ್ಪರ್ಶ ಕುರಿತ 15 ಲೈಂಗಿಕ ಕಿರುಕುಳ ಘಟನೆಗಳು, ಸ್ತನಗಳ ಮೇಲೆ ಕೈಗಳನ್ನು ಆಡಿಸಿದ್ದು, ಹೊಕ್ಕುಳನ್ನು ಸ್ಪರ್ಶಿಸಿದ್ದು, ಹಿಂಬಾಲಿಸಿದ್ದು-  ಮೊದಲಾದ ಆರೋಪಗಳನ್ನು ಕುಸ್ತಿಪಟುಗಳು ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...