Homeಮುಖಪುಟ‘ಫೋಟೋ ತೆಗೆಸಿಕೊಳ್ಳುವಾಗ ಬ್ರಿಜ್‌ಭೂಷಣ್ ನಿತಂಬ ಸ್ಪರ್ಶಿಸಿದ್ದ’: ಕುಸ್ತಿಪಟುವಿನ ಆರೋಪ ದೃಢೀಕರಿಸಿದ ಅಂತಾರಾಷ್ಟ್ರೀಯ ರೆಫರಿ

‘ಫೋಟೋ ತೆಗೆಸಿಕೊಳ್ಳುವಾಗ ಬ್ರಿಜ್‌ಭೂಷಣ್ ನಿತಂಬ ಸ್ಪರ್ಶಿಸಿದ್ದ’: ಕುಸ್ತಿಪಟುವಿನ ಆರೋಪ ದೃಢೀಕರಿಸಿದ ಅಂತಾರಾಷ್ಟ್ರೀಯ ರೆಫರಿ

- Advertisement -
- Advertisement -

ಭಾರತೀಯ ಕುಸ್ತಿ ಫೆಡರೇಷನ್‌ ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಹೊಸ ಸಂಗತಿಗಳು ಹೊರಬೀಳುತ್ತಿವೆ. ವಯಸ್ಕ ಆರು ಮಂದಿ ಮಹಿಳಾ ಕುಸ್ತಿಪಟುಗಳು ನೀಡಿರುವ ದೂರಿನ ಪೈಕಿ ಒಬ್ಬ ಕುಸ್ತಿಪಟುವಿನ ಆರೋಪಗಳನ್ನು ಅಂತಾರಾಷ್ಟ್ರೀಯ ರೆಫರಿ ದೃಢೀಕರಿಸಿದ್ದಾರೆ.

“ಏಷಿಯನ್ ಚಾಂಪಿಯನ್‌ಶಿಪ್‌ಗಾಗಿ ಅಭ್ಯಾಸವನ್ನು ನಡೆಸಿದ ಬಳಿಕ ಕೊನೆಯಲ್ಲಿ ತಂಡದ ಫೋಟೋ ಸೆಷನ್‌ ಇತ್ತು. ಆ ಸಂದರ್ಭದಲ್ಲಿ ಆತ (ಬ್ರಿಜ್‌ ಭೂಷಣ್) ನನ್ನ ನಿತಂಬದ (ಕುಂಡಿ) ಮೇಲೆ ಕೈ ಇಟ್ಟನು. ನಂತರ ನಾನು ದೂರು ಸರಿಯಲು ಯತ್ನಿಸಿದೆ” ಎಂದು ತಿಳಿಸಿದ್ದಾರೆ. ಈ ಆರೋಪವನ್ನು ಅಂತಾರಾಷ್ಟ್ರೀಯ ಕುಸ್ತಿ ರೆಫರಿ ದೃಢಪಡಿಸಿದ್ದಾರೆ ಎಂದು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

2007ರಿಂದಲೂ ಅಂತಾರಾಷ್ಟ್ರೀಯ ಕುಸ್ತಿ ರೆಫರಿಯಾಗಿರುವ ಜಗಬೀರ್‌ ಸಿಂಗ್‌, ಸಂತ್ರಸ್ತ ಕುಸ್ತಿಪಟು ಮಾಡಿರುವ ಆರೋಪವನ್ನು ದೃಢಪಡಿಸಿದ್ದಾರೆ. ಅಂದು ಈ ರೆಫರಿಯು ದೂರದಾರ ಕುಸ್ತಿಪಟು ಮತ್ತು ಬ್ರಿಜ್ ಭೂಷಣ್‌ ಅವರಿಂದ ಕೆಲವೇ ಅಡಿಗಳ ಅಂತರದಲ್ಲಿ ನಿಂತಿದ್ದರು. ದೆಹಲಿ ಪೊಲೀಸರಿಗೆ ಕುಸ್ತಿಪಟು ಫೋಟೋ ಸಾಕ್ಷಿಯನ್ನು ಒದಗಿಸಿದ್ದಾರೆ.

ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರು ಬುಧವಾರ ನೀಡಿದ ಹೇಳಿಕೆಯ ಪ್ರಕಾರ, “ಜೂನ್ 15ರಂದು ಪೊಲೀಸ್ ತನಿಖೆ ಮುಕ್ತಾಯಗೊಳ್ಳಲಿದೆ. ತನಿಖೆಗೆ ಒಳಪಡಿಸಲಾದ ನಾಲ್ಕು ರಾಜ್ಯಗಳ 125ಕ್ಕೂ ಹೆಚ್ಚು ಸಂಭಾವ್ಯ ಸಾಕ್ಷಿಗಳಲ್ಲಿ ಜಗ್ಬೀರ್‌ ಸಿಂಗ್‌ ಕೂಡ ಒಬ್ಬರಾಗಿದ್ದಾರೆ.”

ಒಲಿಂಪಿಯನ್, ಕಾಮನ್ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತ, ಅಂತಾರಾಷ್ಟ್ರೀಯ ರೆಫರಿ ಮತ್ತು ರಾಜ್ಯ ಮಟ್ಟದ ಕೋಚ್- ಈ ನಾಲ್ವರು ಕನಿಷ್ಠ ಮೂವರು ಮಹಿಳಾ ಕುಸ್ತಿಪಟುಗಳ ಆರೋಪಗಳನ್ನು ದೃಢಪಡಿಸಿದ್ದಾರೆ ಎಂದು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಹೇಳಿದೆ.

“ಅವನು (ಬ್ರಿಜ್ ಭೂಷಣ್) ಅವಳ ಪಕ್ಕದಲ್ಲಿ ನಿಂತಿರುವುದನ್ನು ನಾನು ನೋಡಿದೆ. ಆಕೆ ಆತನಿಂದ ದೂರ ನಿಲ್ಲಲು ಮುಂದಾದಳು, ದೂರ ನಿಂತಳು, ಗೊಣಗಿದಳು. ಆಕೆ ಮೊದಲು ಅಧ್ಯಕ್ಷರ ಪಕ್ಕದಲ್ಲಿ ನಿಂತಿದ್ದಳು, ಆದರೆ ನಂತರ ಮುಂದೆ ಬಂದಳು. ಈ ಮಹಿಳಾ ಕುಸ್ತಿಪಟು ಹೇಗೆ ಪ್ರತಿಕ್ರಿಯಿಸುತ್ತಿದ್ದಾರೆಂದು ನಾನು ನೋಡಿದೆ. ಆಕೆ ತೊಂದರೆಯಲ್ಲಿದ್ದಾಳೆ ಅನಿಸಿತು. ಆಕೆಯೊಂದಿಗೆ ಏನೋ ತಪ್ಪಾಗಿರುವುದು ತಿಳಿಯಿತು. ಇಲ್ಲಿ ಬಾ, ಇಲ್ಲಿ ಬಂದು ನಿಲ್ಲು ಎಂದು ಕುಸ್ತಿಪಟುಗಳನ್ನು ಆತ ಮುಟ್ಟುತ್ತಲೇ ಇದ್ದನು. ಕುಸ್ತಿಪಟುವಿಗೆ ಆ ದಿನ (ಫೋಟೋ ಸೆಷನ್ ಸಮಯದಲ್ಲಿ) ಏನೋ ತಪ್ಪಾಗಿದೆ ಎಂದು ಸ್ಪಷ್ಟವಾಯಿತು” ಎಂದು ಜಗ್ಬೀರ್‌ ಸಿಂಗ್ ಸ್ಪಷ್ಟಪಡಿಸಿದ್ದಾರೆ.

ಎಫ್‌ಐಆರ್‌ನ ಪ್ರಕಾರ, “ಫೋಟೋ ತೆಗೆಸಿಕೊಳ್ಳುವ ಸಂದರ್ಭದಲ್ಲಿ ಆತನಿಂದ ಬಿಡಿಸಿಕೊಂಡು ಮುಂದಿನ ಸಾಲಿಗೆ ತೆರಳುವ ಮುನ್ನ ಆತ ಬಲವಂತವಾಗಿ ಆಕೆಯ ಭುಜವನ್ನು ಹಿಡಿದಿದ್ದನು.”

“ನಾನು ಅತ್ಯಂತ ಎತ್ತರದ ಕುಸ್ತಿಪಟುಗಳಲ್ಲಿ ಒಬ್ಬಳಾಗಿದ್ದರಿಂದ, ನಾನು ಕೊನೆಯ ಸಾಲಿನಲ್ಲಿ ನಿಲ್ಲಬೇಕಾಗಿತ್ತು. ನಾನು ಕೊನೆಯ ಸಾಲಿನಲ್ಲಿ ನಿಂತು, ಇತರ ಕುಸ್ತಿಪಟುಗಳು ತಮ್ಮ ಸ್ಥಾನಗಳಲ್ಲಿ ನಿಲ್ಲಲೆಂದು ಕಾಯುತ್ತಿದ್ದಾಗ ಬ್ರಿಜ್ ಭೂಷಣ್‌ ಬಂದು ನನ್ನ ಪಕ್ಕದಲ್ಲಿ ನಿಂತನು. ನನ್ನ ನಿತಂಬದ ಮೇಲೆ ಕೈ ಹಾಕಿದ್ದು ನನ್ನ ಅನುಭವಕ್ಕೆ ಬಂದಿತು…”

“…ನಾನು ತಕ್ಷಣ ಗಾಬರಿಯಿಂದ ಹಿಂತಿರುಗಿ ನೋಡಿದೆ. ಆರೋಪಿಯು ನನ್ನ ನಿತಂಬದ ಮೇಲೆ ತನ್ನ ಕೈಗಳನ್ನು ಇಟ್ಟಿದ್ದನು. ಆರೋಪಿಯು ಮತ್ತಷ್ಟು ಅನುಚಿತ ಸ್ಪರ್ಶ ಮಾಡುವುದರಿಂದ ತಪ್ಪಿಸಿಕೊಳ್ಳಲು ನಾನು ತಕ್ಷಣವೇ ಆ ಸ್ಥಳದಿಂದ ದೂರ ಸರಿಯಲು ಪ್ರಯತ್ನಿಸಿದೆ. ಆದರೆ, ನಾನು ದೂರ ಹೋಗಲು ಯತ್ನಿಸಿದಾಗ ಆರೋಪಿ ಬ್ರಿಜ್ ಭೂಷಣ್‌ ನನ್ನ ಭುಜವನ್ನು ಬಲವಂತವಾಗಿ ಹಿಡಿದಿದ್ದರು. ಹೇಗೋ ಆರೋಪಿಯ ಕಪಿಮುಷ್ಠಿಯಿಂದ ಪಾರಾದೆ. ತಂಡದ ಫೋಟೋ ಕ್ಲಿಕ್ಕಿಸುವುದನ್ನು ನಾನು ತಪ್ಪಿಸಲು ಸಾಧ್ಯವಾಗದ ಕಾರಣ, ನಾನು ಆರೋಪಿಯಿಂದ ದೂರವಿದ್ದು ಮೊದಲ ಸಾಲಿನಲ್ಲಿ ಕುಳಿತುಕೊಳ್ಳಲು ನಿರ್ಧರಿಸಿದೆ” ಎಂದು ದೂರುದಾರರು ವಿವರಿಸಿರುವುದಾಗಿ ಎಫ್‌ಐಆರ್‌ನಲ್ಲಿ ಉಲ್ಲೇಖಗೊಂಡಿದೆ.

“ಒಪ್ಪಿಗೆಯಿಲ್ಲದ ‘ಅತ್ಯಂತ ಅಸಭ್ಯ’ ಮತ್ತು ‘ಆಕ್ಷೇಪಾರ್ಹ’ ನಡೆಯಿಂದಾಗಿ ನಾನು ದಿಗ್ಭ್ರಮೆಗೊಂಡಿದ್ದೇನೆ” ಎಂದಿದ್ದಾರೆ ಕುಸ್ತಿಪಟು.

ಮತ್ತೊಬ್ಬ ಸಾಕ್ಷಿ, 2010ರ ಸಿಡಬ್ಲ್ಯುಜಿ ಚಿನ್ನದ ಪದಕ ವಿಜೇತೆ ಅನಿತಾ ಕೂಡ ಈ ಆರೋಪಗಳನ್ನು ದೃಢೀಕರಿಸಿದ್ದಾರೆ.

ಇದನ್ನೂ ಓದಿರಿ: ಜೂ.15ರ ವರೆಗೆ ಪ್ರತಿಭಟನೆ ಸ್ಥಗಿತ: ಕ್ರೀಡಾ ಸಚಿವರ ಭೇಟಿ ಬಳಿಕ ಕುಸ್ತಿಪಟುಗಳ ಹೇಳಿಕೆ

“ತನ್ನನ್ನು ಕೋಣೆಗೆ ಕರೆದು ಬಲವಂತವಾಗಿ ಬ್ರಿಜ್ ಭೂಷಣ್ ತಬ್ಬಿಕೊಂಡಿರುವ ಕುರಿತು ಕುಸ್ತಿಪಟು ತಿಳಿಸಿದ್ದರು” ಎಂದು ಅನಿತಾ ವಿವರಿಸಿದ್ದಾರೆ.

ಪಟಿಯಾಲದ ರಾಷ್ಟ್ರೀಯ ಶಿಬಿರಕ್ಕೆ ಹಿಂದಿರುಗಿದ ನಂತರ ಸಂತ್ರಸ್ತ ಕುಸ್ತಿಪಟು, ಅನಿತಾ ಅವರಲ್ಲಿ ತಮ್ಮ ನೋವನ್ನು ಹೇಳಿಕೊಳ್ಳುತ್ತಾ ಕಣ್ಣೀರು ಹಾಕಿದ್ದರು.

ಅಪ್ರಾಪ್ತ ಕುಸ್ತಿಪಟು ಸೇರಿದಂತೆ ಏಳು ಮಹಿಳಾ ಕುಸ್ತಿಪಟುಗಳು ದಾಖಲಿಸಿರುವ ಎರಡು ಎಫ್‌ಐಆರ್‌ಗಳು ಅಘಾತಕಾರಿ ಅಂಶಗಳನ್ನು ಹೊಂದಿವೆ. “ನೀನು ಈ ಕ್ಷೇತ್ರದಲ್ಲಿ ಬೆಳೆಯಬೇಕಾದರೆ ಲೈಂಗಿಕವಾಗಿ ಸಹಕರಿಸಬೇಕು” ಎಂದು ಬ್ರಿಜ್‌ ಭೂಷಣ್ ಒತ್ತಾಯಿಸುತ್ತಿದ್ದ ಕನಿಷ್ಠ ಎರಡು ನಿದರ್ಶನಗಳು ಉಲ್ಲೇಖಗೊಂಡಿವೆ.

ಅನುಚಿತ ಸ್ಪರ್ಶ ಕುರಿತ 15 ಲೈಂಗಿಕ ಕಿರುಕುಳ ಘಟನೆಗಳು, ಸ್ತನಗಳ ಮೇಲೆ ಕೈಗಳನ್ನು ಆಡಿಸಿದ್ದು, ಹೊಕ್ಕುಳನ್ನು ಸ್ಪರ್ಶಿಸಿದ್ದು, ಹಿಂಬಾಲಿಸಿದ್ದು-  ಮೊದಲಾದ ಆರೋಪಗಳನ್ನು ಕುಸ್ತಿಪಟುಗಳು ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...