Homeಕರ್ನಾಟಕಹಜ್ ಭವನಕ್ಕೆ 5000 ಕೋಟಿ ರೂ. ಬಿಡುಗಡೆ ವಿಚಾರ: ಸುಳ್ಳು ಸುದ್ದಿ ಹರಡದಂತೆ ಮಾಧ್ಯಮಗಳಿಗೆ ಕಾಂಗ್ರೆಸ್...

ಹಜ್ ಭವನಕ್ಕೆ 5000 ಕೋಟಿ ರೂ. ಬಿಡುಗಡೆ ವಿಚಾರ: ಸುಳ್ಳು ಸುದ್ದಿ ಹರಡದಂತೆ ಮಾಧ್ಯಮಗಳಿಗೆ ಕಾಂಗ್ರೆಸ್ ಕಿವಿಮಾತು

- Advertisement -
- Advertisement -

ಹಜ್ ಭವನ ನವೀಕರಣಕ್ಕೆ ಮುಖ್ಯಮಂತ್ರಿಗಳು 5 ಸಾವಿರ ಕೋಟಿ ರೂ. ನೀಡಿದ್ದಾರೆ ಎಂದು ಕನ್ನಡದ ಪಬ್ಲಿಕ್ ಟಿವಿ ವಾಹಿನಿಯು ಸುದ್ದಿ ಪ್ರಸಾರ ಮಾಡಿತ್ತು. ಈ ಬಗ್ಗೆ ಸಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ ನಡೆಯುತ್ತಿದೆ. ಆದರೆ ಇದು ಸುಳ್ಳು ಸುದ್ದಿ ಎನ್ನುವುದನ್ನು ಕಾಂಗ್ರೆಸ್ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ತಿಳಿಸಿದೆ.

ಕಾಂಗ್ರೆಸ್ ಸರಕಾರದ ಐದು ಗ್ಯಾರಂಟಿ ಯೋಜನೆಗಳ ಪೈಕಿ ಅತ್ಯಂತ ಮಹತ್ವದ ಗೃಹಲಕ್ಷ್ಮಿ ಯೋಜನೆಯ ಅರ್ಜಿ ನಮೂನೆಯು ಸಾಮಾಜಿಕ ಮಾಧ್ಯಮದಲ್ಲಿ ಭಾರೀ ವೈರಲ್ ಆಗಿದೆ. ಅದರಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಮಹಿಳೆ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಭಾವಚಿತ್ರವಿದ್ದು, ಅದರಲ್ಲಿನ ಮಾಹಿತಿ ವಿಚಾರ ಕೂಡ ಗೊಂದಲಕಾರಿಯಾಗಿರುವುದರಿಂದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ ಇದು ಕೂಡ ನಕಲಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸ್ಪಷ್ಟಪಡಿಸಿದೆ.

”ಗೃಹ ಲಕ್ಷ್ಮೀ ಯೋಜನೆಗೆ ಸಂಬಂಧಿಸಿ ಇಲಾಖೆಯಿಂದ ಅಧಿಕೃತವಾಗಿ ಅರ್ಜಿ ನಮೂನೆ ಬಿಡುಗಡೆಯಾಗಿಲ್ಲ. ಅದರ ಸಿದ್ಧತೆ ನಡೆಯುತ್ತಿದೆ, ಈಗ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗುತ್ತಿರುವ ಅರ್ಜಿ ನಮೂನೆ ನಕಲಿ” ಎಂದು ಇಲಾಖೆಯ ನಿರ್ದೇಶನಾಲಯ ಕಚೇರಿಯ ಸಿಬ್ಬಂದಿಯೊಬ್ಬರು ತಿಳಿಸಿದ್ದಾರೆ.

ಈ ಬಗ್ಗೆ ಕಾಂಗ್ರೆಸ್ ಟ್ವೀಟ್ ಮಾಡಿದ್ದು, ”ಮಾಧ್ಯಮಗಳು ಹೊಣೆಗಾರಿಕೆಯಿಂದ ವರ್ತಿಸಬೇಕು, ಪತ್ರಿಕಾಧರ್ಮಕ್ಕೆ ಚ್ಯುತಿ ಬಾರದಂತೆ ನಡೆದುಕೊಂಡಾಗ ಮಾತ್ರ ಸ್ವಸ್ಥ ಸಮಾಜ ರೂಪಿಸಲು ಸಾಧ್ಯ. ನಮ್ಮ ಸರ್ಕಾರದ ಬಗ್ಗೆ ರಚನಾತ್ಮಕ ಟೀಕೆ, ವಿಮರ್ಶೆ, ಸಲಹೆಗಳಿಗೆ ಸದಾ ಸ್ವಾಗತವಿರುತ್ತದೆ. ಆದರೆ ಉದ್ದೇಶಪೂರ್ವಕವಾಗಿ ನಕಾರಾತ್ಮಕ ಅಭಿಪ್ರಾಯ ಮೂಡಿಸುವ ಪ್ರಯತ್ನ ಮಾಡಬೇಡಿ ಎಂಬುದು ನಮ್ಮ ಕಳಕಳಿಯ ಮನವಿ” ಎಂದು ಹೇಳಿದೆ.

ಹಜ್ ಭವನಕ್ಕೆ 5000 ಕೋಟಿ ರೂ. ಕೊಟ್ಟ ಸರ್ಕಾರ: ಮಾಧ್ಯಮ ವರದಿಗೆ ಸಚಿವ ಝಮೀರ್ ಅಹ್ಮದ್ ಸ್ಪಷ್ಟಣೆ

”ಕರ್ನಾಟಕ ಹಜ್ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಹಜ್ ಭವನ ನಿರ್ಮಾಣಕ್ಕೆ ಐದು ಸಾವಿರ ಕೋಟಿ ರೂ. ಕೊಡುವಂತೆ ನಾನು ಬೇಡಿಕೆ ಇಟ್ಟಿದ್ದೇನೆ ಎಂದು ಟ್ರೋಲ್ ಮಾಡಲಾಗುತ್ತಿದೆ. ಅದು ಶುದ್ಧ ಸುಳ್ಳು” ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಝಮೀರ್ ಅಹ್ಮದ್ ಸ್ಪಷ್ಟ ಪಡಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ”ವಾಸ್ತವವಾಗಿ ನಾನು ಅಂದು ಮನವಿ ಮಾಡಿದ್ದು, ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಅಲ್ಪಸಂಖ್ಯಾತ ಸಮುದಾಯದ ಅಭಿವೃದ್ಧಿಗೆ 5000 ಕೋಟಿ ರೂ. ಕೊಡುವುದಾಗಿ ಭರವಸೆ ನೀಡಲಾಗಿದೆ. ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಹಿನ್ನೆಲೆಯಲ್ಲಿ ನಮಗೆ ನೀಡುವುದಾಗಿ ಹೇಳಿರುವ ಅನುದಾನ ಕಡಿತ ಮಾಡಬಹುದು ಎಂಬ ಮಾತುಗಳು ಕೇಳಿಬರುತ್ತಿರುವುದರಿಂದ ನಮ್ಮ ಧರ್ಮ ಗುರುಗಳು ಆತಂಕಗೊಂಡಿದ್ದಾರೆ. ದಯವಿಟ್ಟು ತಾವು ಯಾವುದೇ ರೀತಿಯ ಕಡಿತ ಮಾಡಬಾರದು. ಹಿಂದೆ ನೀವು ಮುಖ್ಯಮಂತ್ರಿ ಆಗಿದ್ದಾಗ 2018ರಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿಗೆ 3150 ಕೋಟಿ ರೂ. ಕೊಟ್ಟಿದ್ದೀರಿ. ಆ ನಂತರ ಬಂದ ಸರ್ಕಾರಗಳು ಕ್ರಮೇಣ ಅನುದಾನ ಕಡಿಮೆ ಮಾಡುತ್ತಾ ಹೋಗಿವೆ. ಹೀಗಾಗಿ ಐದು ಸಾವಿರ ಕೋಟಿ ರೂ. ಅನುದಾನ ನೀಡಿದರೆ ನಮ್ಮ ಸಮುದಾಯಕ್ಕೆ ಬಹಳ ದೊಡ್ಡ ಉಪಕಾರ ಆಗುತ್ತದೆ ಎಂದು ನಾನು ಮನವಿ ಮಾಡಿದ್ದೇನೆ” ಎಂದು ತಿಳಿಸಿದ್ದಾರೆ.

”ಹಜ್ ಭವನದ ನವೀಕರಣಕ್ಕೆ ಐದು ಕೋಟಿ ರೂ. ಕೊಟ್ಟಿದ್ದೀರಿ ಅದಕ್ಕೆ ಕೃತಜ್ಞತೆ ಸಲ್ಲಿಸುತ್ತಿದ್ದೇನೆ ಎಂದು ಹೇಳಿದ್ದೇನೆ. ಆದರೆ ಕೆಲವರು ನನ್ನ ಹೇಳಿಕೆ ತಪ್ಪಾಗಿ ತಿರುಚಿ ಟ್ರೋಲ್ ಮಾಡುತ್ತಿದ್ದಾರೆ. ಅದು ಸತ್ಯಕ್ಕೆ ದೂರ. ಇಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದ್ದಾರೆ.

5 ಕೋಟಿ ಎಂದಿದ್ದನ್ನು 5000 ಕೋಟಿ ಮಾಡಿದ ಪಬ್ಲಿಕ್ ಟಿವಿ

”ಹಜ್ ಭವನದ ನವೀಕರಣಕ್ಕೆ ಐದು ಕೋಟಿ ರೂ. ಕೊಟ್ಟಿದ್ದಕ್ಕೆ ಸಚಿವ ಝಮೀರ್ ಅಹ್ಮದ್ ಅವರು ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿದ್ದರು. ಇದನ್ನೇ ಪಬ್ಲಿಕ್ ಟಿವಿ ಸುದ್ದಿವಾಹಿನಿಯು ”ಹಜ್ ಭವನ ನವೀಕರಣಕ್ಕೆ 5000 ಕೋಟಿದ್ದಾರೆ” ಎಂದು ಝಮೀರ್ ಅಹ್ಮದ್ ಅವರು ಹೇಳಿರುವುದಾಗಿ ವರದಿ ಮಾಡಿದೆ. ಇದರಿಂದ ಗೊಂದಲ ಸೃಷ್ಟಿಯಾಗಿದ್ದು, ಇದೀಗ ಖುದ್ದು ಝಮೀರ್ ಅಹ್ಮದ್ ಅವರೇ ಸ್ಪಷ್ಟನೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...