Homeಕರ್ನಾಟಕಹಜ್ ಭವನಕ್ಕೆ 5000 ಕೋಟಿ ರೂ. ಬಿಡುಗಡೆ ವಿಚಾರ: ಸುಳ್ಳು ಸುದ್ದಿ ಹರಡದಂತೆ ಮಾಧ್ಯಮಗಳಿಗೆ ಕಾಂಗ್ರೆಸ್...

ಹಜ್ ಭವನಕ್ಕೆ 5000 ಕೋಟಿ ರೂ. ಬಿಡುಗಡೆ ವಿಚಾರ: ಸುಳ್ಳು ಸುದ್ದಿ ಹರಡದಂತೆ ಮಾಧ್ಯಮಗಳಿಗೆ ಕಾಂಗ್ರೆಸ್ ಕಿವಿಮಾತು

- Advertisement -
- Advertisement -

ಹಜ್ ಭವನ ನವೀಕರಣಕ್ಕೆ ಮುಖ್ಯಮಂತ್ರಿಗಳು 5 ಸಾವಿರ ಕೋಟಿ ರೂ. ನೀಡಿದ್ದಾರೆ ಎಂದು ಕನ್ನಡದ ಪಬ್ಲಿಕ್ ಟಿವಿ ವಾಹಿನಿಯು ಸುದ್ದಿ ಪ್ರಸಾರ ಮಾಡಿತ್ತು. ಈ ಬಗ್ಗೆ ಸಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ ನಡೆಯುತ್ತಿದೆ. ಆದರೆ ಇದು ಸುಳ್ಳು ಸುದ್ದಿ ಎನ್ನುವುದನ್ನು ಕಾಂಗ್ರೆಸ್ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ತಿಳಿಸಿದೆ.

ಕಾಂಗ್ರೆಸ್ ಸರಕಾರದ ಐದು ಗ್ಯಾರಂಟಿ ಯೋಜನೆಗಳ ಪೈಕಿ ಅತ್ಯಂತ ಮಹತ್ವದ ಗೃಹಲಕ್ಷ್ಮಿ ಯೋಜನೆಯ ಅರ್ಜಿ ನಮೂನೆಯು ಸಾಮಾಜಿಕ ಮಾಧ್ಯಮದಲ್ಲಿ ಭಾರೀ ವೈರಲ್ ಆಗಿದೆ. ಅದರಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಮಹಿಳೆ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಭಾವಚಿತ್ರವಿದ್ದು, ಅದರಲ್ಲಿನ ಮಾಹಿತಿ ವಿಚಾರ ಕೂಡ ಗೊಂದಲಕಾರಿಯಾಗಿರುವುದರಿಂದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ ಇದು ಕೂಡ ನಕಲಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸ್ಪಷ್ಟಪಡಿಸಿದೆ.

”ಗೃಹ ಲಕ್ಷ್ಮೀ ಯೋಜನೆಗೆ ಸಂಬಂಧಿಸಿ ಇಲಾಖೆಯಿಂದ ಅಧಿಕೃತವಾಗಿ ಅರ್ಜಿ ನಮೂನೆ ಬಿಡುಗಡೆಯಾಗಿಲ್ಲ. ಅದರ ಸಿದ್ಧತೆ ನಡೆಯುತ್ತಿದೆ, ಈಗ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗುತ್ತಿರುವ ಅರ್ಜಿ ನಮೂನೆ ನಕಲಿ” ಎಂದು ಇಲಾಖೆಯ ನಿರ್ದೇಶನಾಲಯ ಕಚೇರಿಯ ಸಿಬ್ಬಂದಿಯೊಬ್ಬರು ತಿಳಿಸಿದ್ದಾರೆ.

ಈ ಬಗ್ಗೆ ಕಾಂಗ್ರೆಸ್ ಟ್ವೀಟ್ ಮಾಡಿದ್ದು, ”ಮಾಧ್ಯಮಗಳು ಹೊಣೆಗಾರಿಕೆಯಿಂದ ವರ್ತಿಸಬೇಕು, ಪತ್ರಿಕಾಧರ್ಮಕ್ಕೆ ಚ್ಯುತಿ ಬಾರದಂತೆ ನಡೆದುಕೊಂಡಾಗ ಮಾತ್ರ ಸ್ವಸ್ಥ ಸಮಾಜ ರೂಪಿಸಲು ಸಾಧ್ಯ. ನಮ್ಮ ಸರ್ಕಾರದ ಬಗ್ಗೆ ರಚನಾತ್ಮಕ ಟೀಕೆ, ವಿಮರ್ಶೆ, ಸಲಹೆಗಳಿಗೆ ಸದಾ ಸ್ವಾಗತವಿರುತ್ತದೆ. ಆದರೆ ಉದ್ದೇಶಪೂರ್ವಕವಾಗಿ ನಕಾರಾತ್ಮಕ ಅಭಿಪ್ರಾಯ ಮೂಡಿಸುವ ಪ್ರಯತ್ನ ಮಾಡಬೇಡಿ ಎಂಬುದು ನಮ್ಮ ಕಳಕಳಿಯ ಮನವಿ” ಎಂದು ಹೇಳಿದೆ.

ಹಜ್ ಭವನಕ್ಕೆ 5000 ಕೋಟಿ ರೂ. ಕೊಟ್ಟ ಸರ್ಕಾರ: ಮಾಧ್ಯಮ ವರದಿಗೆ ಸಚಿವ ಝಮೀರ್ ಅಹ್ಮದ್ ಸ್ಪಷ್ಟಣೆ

”ಕರ್ನಾಟಕ ಹಜ್ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಹಜ್ ಭವನ ನಿರ್ಮಾಣಕ್ಕೆ ಐದು ಸಾವಿರ ಕೋಟಿ ರೂ. ಕೊಡುವಂತೆ ನಾನು ಬೇಡಿಕೆ ಇಟ್ಟಿದ್ದೇನೆ ಎಂದು ಟ್ರೋಲ್ ಮಾಡಲಾಗುತ್ತಿದೆ. ಅದು ಶುದ್ಧ ಸುಳ್ಳು” ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಝಮೀರ್ ಅಹ್ಮದ್ ಸ್ಪಷ್ಟ ಪಡಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ”ವಾಸ್ತವವಾಗಿ ನಾನು ಅಂದು ಮನವಿ ಮಾಡಿದ್ದು, ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಅಲ್ಪಸಂಖ್ಯಾತ ಸಮುದಾಯದ ಅಭಿವೃದ್ಧಿಗೆ 5000 ಕೋಟಿ ರೂ. ಕೊಡುವುದಾಗಿ ಭರವಸೆ ನೀಡಲಾಗಿದೆ. ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಹಿನ್ನೆಲೆಯಲ್ಲಿ ನಮಗೆ ನೀಡುವುದಾಗಿ ಹೇಳಿರುವ ಅನುದಾನ ಕಡಿತ ಮಾಡಬಹುದು ಎಂಬ ಮಾತುಗಳು ಕೇಳಿಬರುತ್ತಿರುವುದರಿಂದ ನಮ್ಮ ಧರ್ಮ ಗುರುಗಳು ಆತಂಕಗೊಂಡಿದ್ದಾರೆ. ದಯವಿಟ್ಟು ತಾವು ಯಾವುದೇ ರೀತಿಯ ಕಡಿತ ಮಾಡಬಾರದು. ಹಿಂದೆ ನೀವು ಮುಖ್ಯಮಂತ್ರಿ ಆಗಿದ್ದಾಗ 2018ರಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿಗೆ 3150 ಕೋಟಿ ರೂ. ಕೊಟ್ಟಿದ್ದೀರಿ. ಆ ನಂತರ ಬಂದ ಸರ್ಕಾರಗಳು ಕ್ರಮೇಣ ಅನುದಾನ ಕಡಿಮೆ ಮಾಡುತ್ತಾ ಹೋಗಿವೆ. ಹೀಗಾಗಿ ಐದು ಸಾವಿರ ಕೋಟಿ ರೂ. ಅನುದಾನ ನೀಡಿದರೆ ನಮ್ಮ ಸಮುದಾಯಕ್ಕೆ ಬಹಳ ದೊಡ್ಡ ಉಪಕಾರ ಆಗುತ್ತದೆ ಎಂದು ನಾನು ಮನವಿ ಮಾಡಿದ್ದೇನೆ” ಎಂದು ತಿಳಿಸಿದ್ದಾರೆ.

”ಹಜ್ ಭವನದ ನವೀಕರಣಕ್ಕೆ ಐದು ಕೋಟಿ ರೂ. ಕೊಟ್ಟಿದ್ದೀರಿ ಅದಕ್ಕೆ ಕೃತಜ್ಞತೆ ಸಲ್ಲಿಸುತ್ತಿದ್ದೇನೆ ಎಂದು ಹೇಳಿದ್ದೇನೆ. ಆದರೆ ಕೆಲವರು ನನ್ನ ಹೇಳಿಕೆ ತಪ್ಪಾಗಿ ತಿರುಚಿ ಟ್ರೋಲ್ ಮಾಡುತ್ತಿದ್ದಾರೆ. ಅದು ಸತ್ಯಕ್ಕೆ ದೂರ. ಇಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದ್ದಾರೆ.

5 ಕೋಟಿ ಎಂದಿದ್ದನ್ನು 5000 ಕೋಟಿ ಮಾಡಿದ ಪಬ್ಲಿಕ್ ಟಿವಿ

”ಹಜ್ ಭವನದ ನವೀಕರಣಕ್ಕೆ ಐದು ಕೋಟಿ ರೂ. ಕೊಟ್ಟಿದ್ದಕ್ಕೆ ಸಚಿವ ಝಮೀರ್ ಅಹ್ಮದ್ ಅವರು ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿದ್ದರು. ಇದನ್ನೇ ಪಬ್ಲಿಕ್ ಟಿವಿ ಸುದ್ದಿವಾಹಿನಿಯು ”ಹಜ್ ಭವನ ನವೀಕರಣಕ್ಕೆ 5000 ಕೋಟಿದ್ದಾರೆ” ಎಂದು ಝಮೀರ್ ಅಹ್ಮದ್ ಅವರು ಹೇಳಿರುವುದಾಗಿ ವರದಿ ಮಾಡಿದೆ. ಇದರಿಂದ ಗೊಂದಲ ಸೃಷ್ಟಿಯಾಗಿದ್ದು, ಇದೀಗ ಖುದ್ದು ಝಮೀರ್ ಅಹ್ಮದ್ ಅವರೇ ಸ್ಪಷ್ಟನೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...