Homeಮುಖಪುಟಚಿಕ್ಕ ವಯಸ್ಸಿನಲ್ಲಿ ಮಕ್ಕಳನ್ನು ಹೆರುವುದು ಸಾಮಾನ್ಯವಾಗಿತ್ತು: ಮನುಸ್ಮೃತಿ ಓದಿ ಎಂದ ಗುಜರಾತ್ ಹೈಕೋರ್ಟ್‌

ಚಿಕ್ಕ ವಯಸ್ಸಿನಲ್ಲಿ ಮಕ್ಕಳನ್ನು ಹೆರುವುದು ಸಾಮಾನ್ಯವಾಗಿತ್ತು: ಮನುಸ್ಮೃತಿ ಓದಿ ಎಂದ ಗುಜರಾತ್ ಹೈಕೋರ್ಟ್‌

- Advertisement -
- Advertisement -

14 ರಿಂದ 16 ವರ್ಷ ವಯಸ್ಸಿನೊಳಗೆ ಹುಡುಗಿಯರಿಗೆ ಮದುವೆ ಮಾಡುತ್ತಿದ್ದರು ಮತ್ತು 17 ವರ್ಷ ವಯಸ್ಸಿನೊಳಗೆ ಕನಿಷ್ಠ ಒಂದು ಮಗುವಿಗೆ ಜನ್ಮ ನೀಡುವುದು ಸಾಮಾನ್ಯವಾಗಿತ್ತು ಎಂದು ಗುಜರಾತ್ ಹೈಕೋರ್ಟ್ ಬುಧವಾರ ಮನುಸ್ಮೃತಿಯನ್ನು ಉಲ್ಲೇಖಿಸಿ ಹೇಳಿದೆ. ಅತ್ಯಾಚಾರ ಸಂತ್ರಸ್ತ ಬಾಲಕಿ ತನ್ನ ಗರ್ಭಪಾತಕ್ಕೆ ಅನುಮತಿ ಕೋರಿ ಸಲ್ಲಿಸಿದ ಮನವಿಯ ವಿಚಾರಣೆ ವೇಳೆ ನ್ಯಾಯಮೂರ್ತಿಗಳು ಈ ರೀತಿಯಲ್ಲಿ ಹೇಳಿದ್ದಾರೆ.

ಮನುಸ್ಮೃತಿಯು ಮನು ಎಂಬ ತಪಸ್ವಿಯಿಂದ ರಚಿಸಲ್ಪಟ್ಟ ಗ್ರಂಥವಾಗಿದೆ. ಇದುರಲ್ಲಿ ಅಸಮಾನತೆ, ಕೊಳಕು ಸಂಪ್ರದಾಯ, ವೇದ-ಉಪನಿಷತ್ತು ಮುಂತಾದವುಗಳು ತುಂಬಿದ್ದವು ಎಂದು ಟೀಕಿಸಲ್ಪಟ್ಟಿದೆ.

ಏಕಸದಸ್ಯ ನ್ಯಾಯಮೂರ್ತಿ ಸಮೀರ್ ದವೆ ಅವರಿದ್ದ ಪೀಠವು ಅತ್ಯಾಚಾರಕ್ಕೊಳಗಾದ ಅಪ್ರಾಪ್ತ ಬಾಲಕಿಯ ತಂದೆಯ ಮನವಿಯನ್ನು ಆಲಿಸುವ ಸಂದರ್ಭದಲ್ಲಿ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ. ಅತ್ಯಾಚಾರ ಸಂತ್ರಸ್ತೆಗೆ 16 ವರ್ಷ 11 ತಿಂಗಳಾಗಿದ್ದು, ಏಳು ತಿಂಗಳ ಗರ್ಭಿಣಿಯಾಗಿದ್ದಾರೆ. ಗರ್ಭಾವಸ್ಥೆಯು 24 ವಾರಗಳ ಮಿತಿಯನ್ನು ದಾಟಿರುವುದರಿಂದ ಗರ್ಭಪಾತಕ್ಕೆ ಅನುಮತಿ ಕೋರಿ ಆಕೆಯ ತಂದೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ: ಮಹಿಳೆಯ ನಗ್ನತೆಯನ್ನು ಲೈಂಗಿಕ ದೃಷ್ಠಿಯಿಂದ ನೋಡುವುದು ಸರಿಯಲ್ಲ: ಕೇರಳ ಹೈಕೋರ್ಟ್

ಬಾಲಕಿಯ ವಯಸ್ಸು ಅತ್ಯಂತ ಚಿಕ್ಕದಿರುವುದರಿಂದ ಕುಟುಂಬ ವರ್ಗ ಬಹಳ ಆತಂಕದಲ್ಲಿದೆ. ಹೀಗಾಗಿ, ಅರ್ಜಿಯನ್ನು ತುರ್ತು ವಿಚಾರಣೆಗೆ ಪರಿಗಣಿಸಬೇಕೆಂದು ವಕೀಲರು ಮಾಡಿದ ಮನವಿ ಮಾಡಿದರು. ಆದರೆ, ಬಾಲಕಿ ಮತ್ತು ಭ್ರೂಣ ಆರೋಗ್ಯವಾಗಿದ್ದರೆ ಅವರ ಅರ್ಜಿಯನ್ನು ಪುರಸ್ಕರಿಸುವುದಿಲ್ಲ ಎಂದು ಹೈಕೋರ್ಟ್‌ನ ನ್ಯಾಯಮೂರ್ತಿ ಸಮೀರ್ ದವೆ ಅವರು ಹೇಳಿದ್ದಾರೆ. ಇದೇ ಸಂದರ್ಭ ಮನುಸ್ಮೃತಿಯನ್ನು ಉಲ್ಲೇಖಿಸಿದ್ದಾರೆ.

”ನಾವು 21ನೇ ಶತಮಾನದಲ್ಲಿ ಬದುಕುತ್ತಿದ್ದೇವೆ. ಅದಕ್ಕೆ ನಿಮಗೆ ಹಾಗೆನಿಸುತ್ತಿದೆ. ನಿಮ್ಮ ತಾಯಿ ಅಥವಾ ಅಜ್ಜಿಯನ್ನು ಕೇಳಿ, ಹದಿನಾಲ್ಕರಿಂದ ಹದಿನೇಳು ಮದುವೆಗೆ ಗರಿಷ್ಠ ವಯಸ್ಸಾಗಿತ್ತು. 17 ವರ್ಷ ತುಂಬುವ ಮೊದಲೇ ಬಾಲಕಿಯರು ತಮ್ಮ ಮೊದಲ ಮಗುವಿಗೆ ಜನ್ಮ ನೀಡುತ್ತಿದ್ದರು. ಬಾಲಕಿಯರು ಬಾಲಕರಿಗಿಂತ ಬೇಗನೆ ಪ್ರೌಢಾವಸ್ಥೆಗೆ ತಲುಪುತ್ತಾರೆ. ನೀವು ಓದಿಲ್ಲವೆಂದಾದರೆ, ಒಮ್ಮೆ ಮನುಸ್ಮೃತಿ ಓದಿ” ಎಂದು ನ್ಯಾಯಮೂರ್ತಿಗಳು ಸಲಹೆ ನೀಡಿದ್ದಾರೆ.

ತಮ್ಮ ಕೊಠಡಿಯಲ್ಲೇ ತಜ್ಞ ವೈದ್ಯರ ಸಲಹೆ ಪಡೆದ ನ್ಯಾಯಮೂರ್ತಿ, ಆಗಸ್ಟ್ 16ರಂದು ಬಾಲಕಿಯು ಮಗುವಿಗೆ ಜನ್ಮ ನೀಡುವ ಸಾಧ್ಯತೆ ಇದೆ ಎಂಬುದರ ಮಾಹಿತಿ ಪಡೆದರು. ಆದರೆ, ಬಾಲಕಿ ಮತ್ತು ಭ್ರೂಣಕ್ಕೆ ಗಂಭೀರ ಆರೋಗ್ಯ ಸಮಸ್ಯೆ ಇದೆ ಎಂಬುದು ಕಂಡುಬಂದರೆ ಮಾತ್ರ ಗರ್ಭಪಾತಕ್ಕೆ ಅನುಮತಿ ನೀಡುತ್ತೇನೆ. ಒಂದೊಮ್ಮೆ, ಆರೋಗ್ಯ ಸ್ಥಿತಿ ಉತ್ತಮವಾಗಿದ್ದರೆ ಅಂತಹ ಆದೇಶ ನೀಡುವುದು ನ್ಯಾಯಾಲಯಕ್ಕೆ ಕಷ್ಟವಾಗಲಿದೆ” ಎಂದು ವಕೀಲರಿಗೆ ತಿಳಿಸಿದರು.

ಕೊನೆಗೆ, ಬಾಲಕಿಗೆ ಗರ್ಭಪಾತ ನಡೆಸುವುದು ಸೂಕ್ತವೇ ಎಂಬುದನ್ನು ಕಂಡುಹಿಡಿಯಲು ವೈದ್ಯರ ಸಮಿತಿಯಿಂದ ಬಾಲಕಿಯನ್ನು ಪರೀಕ್ಷಿಸುವಂತೆ ನ್ಯಾಯಾಲಯವು ರಾಜ್‌ಕೋಟ್‌ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಿಗೆ ನಿರ್ದೇಶಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...