Homeಮುಖಪುಟಚಿಕ್ಕ ವಯಸ್ಸಿನಲ್ಲಿ ಮಕ್ಕಳನ್ನು ಹೆರುವುದು ಸಾಮಾನ್ಯವಾಗಿತ್ತು: ಮನುಸ್ಮೃತಿ ಓದಿ ಎಂದ ಗುಜರಾತ್ ಹೈಕೋರ್ಟ್‌

ಚಿಕ್ಕ ವಯಸ್ಸಿನಲ್ಲಿ ಮಕ್ಕಳನ್ನು ಹೆರುವುದು ಸಾಮಾನ್ಯವಾಗಿತ್ತು: ಮನುಸ್ಮೃತಿ ಓದಿ ಎಂದ ಗುಜರಾತ್ ಹೈಕೋರ್ಟ್‌

- Advertisement -
- Advertisement -

14 ರಿಂದ 16 ವರ್ಷ ವಯಸ್ಸಿನೊಳಗೆ ಹುಡುಗಿಯರಿಗೆ ಮದುವೆ ಮಾಡುತ್ತಿದ್ದರು ಮತ್ತು 17 ವರ್ಷ ವಯಸ್ಸಿನೊಳಗೆ ಕನಿಷ್ಠ ಒಂದು ಮಗುವಿಗೆ ಜನ್ಮ ನೀಡುವುದು ಸಾಮಾನ್ಯವಾಗಿತ್ತು ಎಂದು ಗುಜರಾತ್ ಹೈಕೋರ್ಟ್ ಬುಧವಾರ ಮನುಸ್ಮೃತಿಯನ್ನು ಉಲ್ಲೇಖಿಸಿ ಹೇಳಿದೆ. ಅತ್ಯಾಚಾರ ಸಂತ್ರಸ್ತ ಬಾಲಕಿ ತನ್ನ ಗರ್ಭಪಾತಕ್ಕೆ ಅನುಮತಿ ಕೋರಿ ಸಲ್ಲಿಸಿದ ಮನವಿಯ ವಿಚಾರಣೆ ವೇಳೆ ನ್ಯಾಯಮೂರ್ತಿಗಳು ಈ ರೀತಿಯಲ್ಲಿ ಹೇಳಿದ್ದಾರೆ.

ಮನುಸ್ಮೃತಿಯು ಮನು ಎಂಬ ತಪಸ್ವಿಯಿಂದ ರಚಿಸಲ್ಪಟ್ಟ ಗ್ರಂಥವಾಗಿದೆ. ಇದುರಲ್ಲಿ ಅಸಮಾನತೆ, ಕೊಳಕು ಸಂಪ್ರದಾಯ, ವೇದ-ಉಪನಿಷತ್ತು ಮುಂತಾದವುಗಳು ತುಂಬಿದ್ದವು ಎಂದು ಟೀಕಿಸಲ್ಪಟ್ಟಿದೆ.

ಏಕಸದಸ್ಯ ನ್ಯಾಯಮೂರ್ತಿ ಸಮೀರ್ ದವೆ ಅವರಿದ್ದ ಪೀಠವು ಅತ್ಯಾಚಾರಕ್ಕೊಳಗಾದ ಅಪ್ರಾಪ್ತ ಬಾಲಕಿಯ ತಂದೆಯ ಮನವಿಯನ್ನು ಆಲಿಸುವ ಸಂದರ್ಭದಲ್ಲಿ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ. ಅತ್ಯಾಚಾರ ಸಂತ್ರಸ್ತೆಗೆ 16 ವರ್ಷ 11 ತಿಂಗಳಾಗಿದ್ದು, ಏಳು ತಿಂಗಳ ಗರ್ಭಿಣಿಯಾಗಿದ್ದಾರೆ. ಗರ್ಭಾವಸ್ಥೆಯು 24 ವಾರಗಳ ಮಿತಿಯನ್ನು ದಾಟಿರುವುದರಿಂದ ಗರ್ಭಪಾತಕ್ಕೆ ಅನುಮತಿ ಕೋರಿ ಆಕೆಯ ತಂದೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ: ಮಹಿಳೆಯ ನಗ್ನತೆಯನ್ನು ಲೈಂಗಿಕ ದೃಷ್ಠಿಯಿಂದ ನೋಡುವುದು ಸರಿಯಲ್ಲ: ಕೇರಳ ಹೈಕೋರ್ಟ್

ಬಾಲಕಿಯ ವಯಸ್ಸು ಅತ್ಯಂತ ಚಿಕ್ಕದಿರುವುದರಿಂದ ಕುಟುಂಬ ವರ್ಗ ಬಹಳ ಆತಂಕದಲ್ಲಿದೆ. ಹೀಗಾಗಿ, ಅರ್ಜಿಯನ್ನು ತುರ್ತು ವಿಚಾರಣೆಗೆ ಪರಿಗಣಿಸಬೇಕೆಂದು ವಕೀಲರು ಮಾಡಿದ ಮನವಿ ಮಾಡಿದರು. ಆದರೆ, ಬಾಲಕಿ ಮತ್ತು ಭ್ರೂಣ ಆರೋಗ್ಯವಾಗಿದ್ದರೆ ಅವರ ಅರ್ಜಿಯನ್ನು ಪುರಸ್ಕರಿಸುವುದಿಲ್ಲ ಎಂದು ಹೈಕೋರ್ಟ್‌ನ ನ್ಯಾಯಮೂರ್ತಿ ಸಮೀರ್ ದವೆ ಅವರು ಹೇಳಿದ್ದಾರೆ. ಇದೇ ಸಂದರ್ಭ ಮನುಸ್ಮೃತಿಯನ್ನು ಉಲ್ಲೇಖಿಸಿದ್ದಾರೆ.

”ನಾವು 21ನೇ ಶತಮಾನದಲ್ಲಿ ಬದುಕುತ್ತಿದ್ದೇವೆ. ಅದಕ್ಕೆ ನಿಮಗೆ ಹಾಗೆನಿಸುತ್ತಿದೆ. ನಿಮ್ಮ ತಾಯಿ ಅಥವಾ ಅಜ್ಜಿಯನ್ನು ಕೇಳಿ, ಹದಿನಾಲ್ಕರಿಂದ ಹದಿನೇಳು ಮದುವೆಗೆ ಗರಿಷ್ಠ ವಯಸ್ಸಾಗಿತ್ತು. 17 ವರ್ಷ ತುಂಬುವ ಮೊದಲೇ ಬಾಲಕಿಯರು ತಮ್ಮ ಮೊದಲ ಮಗುವಿಗೆ ಜನ್ಮ ನೀಡುತ್ತಿದ್ದರು. ಬಾಲಕಿಯರು ಬಾಲಕರಿಗಿಂತ ಬೇಗನೆ ಪ್ರೌಢಾವಸ್ಥೆಗೆ ತಲುಪುತ್ತಾರೆ. ನೀವು ಓದಿಲ್ಲವೆಂದಾದರೆ, ಒಮ್ಮೆ ಮನುಸ್ಮೃತಿ ಓದಿ” ಎಂದು ನ್ಯಾಯಮೂರ್ತಿಗಳು ಸಲಹೆ ನೀಡಿದ್ದಾರೆ.

ತಮ್ಮ ಕೊಠಡಿಯಲ್ಲೇ ತಜ್ಞ ವೈದ್ಯರ ಸಲಹೆ ಪಡೆದ ನ್ಯಾಯಮೂರ್ತಿ, ಆಗಸ್ಟ್ 16ರಂದು ಬಾಲಕಿಯು ಮಗುವಿಗೆ ಜನ್ಮ ನೀಡುವ ಸಾಧ್ಯತೆ ಇದೆ ಎಂಬುದರ ಮಾಹಿತಿ ಪಡೆದರು. ಆದರೆ, ಬಾಲಕಿ ಮತ್ತು ಭ್ರೂಣಕ್ಕೆ ಗಂಭೀರ ಆರೋಗ್ಯ ಸಮಸ್ಯೆ ಇದೆ ಎಂಬುದು ಕಂಡುಬಂದರೆ ಮಾತ್ರ ಗರ್ಭಪಾತಕ್ಕೆ ಅನುಮತಿ ನೀಡುತ್ತೇನೆ. ಒಂದೊಮ್ಮೆ, ಆರೋಗ್ಯ ಸ್ಥಿತಿ ಉತ್ತಮವಾಗಿದ್ದರೆ ಅಂತಹ ಆದೇಶ ನೀಡುವುದು ನ್ಯಾಯಾಲಯಕ್ಕೆ ಕಷ್ಟವಾಗಲಿದೆ” ಎಂದು ವಕೀಲರಿಗೆ ತಿಳಿಸಿದರು.

ಕೊನೆಗೆ, ಬಾಲಕಿಗೆ ಗರ್ಭಪಾತ ನಡೆಸುವುದು ಸೂಕ್ತವೇ ಎಂಬುದನ್ನು ಕಂಡುಹಿಡಿಯಲು ವೈದ್ಯರ ಸಮಿತಿಯಿಂದ ಬಾಲಕಿಯನ್ನು ಪರೀಕ್ಷಿಸುವಂತೆ ನ್ಯಾಯಾಲಯವು ರಾಜ್‌ಕೋಟ್‌ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಿಗೆ ನಿರ್ದೇಶಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...