Homeಮುಖಪುಟಚಿಕ್ಕ ವಯಸ್ಸಿನಲ್ಲಿ ಮಕ್ಕಳನ್ನು ಹೆರುವುದು ಸಾಮಾನ್ಯವಾಗಿತ್ತು: ಮನುಸ್ಮೃತಿ ಓದಿ ಎಂದ ಗುಜರಾತ್ ಹೈಕೋರ್ಟ್‌

ಚಿಕ್ಕ ವಯಸ್ಸಿನಲ್ಲಿ ಮಕ್ಕಳನ್ನು ಹೆರುವುದು ಸಾಮಾನ್ಯವಾಗಿತ್ತು: ಮನುಸ್ಮೃತಿ ಓದಿ ಎಂದ ಗುಜರಾತ್ ಹೈಕೋರ್ಟ್‌

- Advertisement -
- Advertisement -

14 ರಿಂದ 16 ವರ್ಷ ವಯಸ್ಸಿನೊಳಗೆ ಹುಡುಗಿಯರಿಗೆ ಮದುವೆ ಮಾಡುತ್ತಿದ್ದರು ಮತ್ತು 17 ವರ್ಷ ವಯಸ್ಸಿನೊಳಗೆ ಕನಿಷ್ಠ ಒಂದು ಮಗುವಿಗೆ ಜನ್ಮ ನೀಡುವುದು ಸಾಮಾನ್ಯವಾಗಿತ್ತು ಎಂದು ಗುಜರಾತ್ ಹೈಕೋರ್ಟ್ ಬುಧವಾರ ಮನುಸ್ಮೃತಿಯನ್ನು ಉಲ್ಲೇಖಿಸಿ ಹೇಳಿದೆ. ಅತ್ಯಾಚಾರ ಸಂತ್ರಸ್ತ ಬಾಲಕಿ ತನ್ನ ಗರ್ಭಪಾತಕ್ಕೆ ಅನುಮತಿ ಕೋರಿ ಸಲ್ಲಿಸಿದ ಮನವಿಯ ವಿಚಾರಣೆ ವೇಳೆ ನ್ಯಾಯಮೂರ್ತಿಗಳು ಈ ರೀತಿಯಲ್ಲಿ ಹೇಳಿದ್ದಾರೆ.

ಮನುಸ್ಮೃತಿಯು ಮನು ಎಂಬ ತಪಸ್ವಿಯಿಂದ ರಚಿಸಲ್ಪಟ್ಟ ಗ್ರಂಥವಾಗಿದೆ. ಇದುರಲ್ಲಿ ಅಸಮಾನತೆ, ಕೊಳಕು ಸಂಪ್ರದಾಯ, ವೇದ-ಉಪನಿಷತ್ತು ಮುಂತಾದವುಗಳು ತುಂಬಿದ್ದವು ಎಂದು ಟೀಕಿಸಲ್ಪಟ್ಟಿದೆ.

ಏಕಸದಸ್ಯ ನ್ಯಾಯಮೂರ್ತಿ ಸಮೀರ್ ದವೆ ಅವರಿದ್ದ ಪೀಠವು ಅತ್ಯಾಚಾರಕ್ಕೊಳಗಾದ ಅಪ್ರಾಪ್ತ ಬಾಲಕಿಯ ತಂದೆಯ ಮನವಿಯನ್ನು ಆಲಿಸುವ ಸಂದರ್ಭದಲ್ಲಿ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ. ಅತ್ಯಾಚಾರ ಸಂತ್ರಸ್ತೆಗೆ 16 ವರ್ಷ 11 ತಿಂಗಳಾಗಿದ್ದು, ಏಳು ತಿಂಗಳ ಗರ್ಭಿಣಿಯಾಗಿದ್ದಾರೆ. ಗರ್ಭಾವಸ್ಥೆಯು 24 ವಾರಗಳ ಮಿತಿಯನ್ನು ದಾಟಿರುವುದರಿಂದ ಗರ್ಭಪಾತಕ್ಕೆ ಅನುಮತಿ ಕೋರಿ ಆಕೆಯ ತಂದೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ: ಮಹಿಳೆಯ ನಗ್ನತೆಯನ್ನು ಲೈಂಗಿಕ ದೃಷ್ಠಿಯಿಂದ ನೋಡುವುದು ಸರಿಯಲ್ಲ: ಕೇರಳ ಹೈಕೋರ್ಟ್

ಬಾಲಕಿಯ ವಯಸ್ಸು ಅತ್ಯಂತ ಚಿಕ್ಕದಿರುವುದರಿಂದ ಕುಟುಂಬ ವರ್ಗ ಬಹಳ ಆತಂಕದಲ್ಲಿದೆ. ಹೀಗಾಗಿ, ಅರ್ಜಿಯನ್ನು ತುರ್ತು ವಿಚಾರಣೆಗೆ ಪರಿಗಣಿಸಬೇಕೆಂದು ವಕೀಲರು ಮಾಡಿದ ಮನವಿ ಮಾಡಿದರು. ಆದರೆ, ಬಾಲಕಿ ಮತ್ತು ಭ್ರೂಣ ಆರೋಗ್ಯವಾಗಿದ್ದರೆ ಅವರ ಅರ್ಜಿಯನ್ನು ಪುರಸ್ಕರಿಸುವುದಿಲ್ಲ ಎಂದು ಹೈಕೋರ್ಟ್‌ನ ನ್ಯಾಯಮೂರ್ತಿ ಸಮೀರ್ ದವೆ ಅವರು ಹೇಳಿದ್ದಾರೆ. ಇದೇ ಸಂದರ್ಭ ಮನುಸ್ಮೃತಿಯನ್ನು ಉಲ್ಲೇಖಿಸಿದ್ದಾರೆ.

”ನಾವು 21ನೇ ಶತಮಾನದಲ್ಲಿ ಬದುಕುತ್ತಿದ್ದೇವೆ. ಅದಕ್ಕೆ ನಿಮಗೆ ಹಾಗೆನಿಸುತ್ತಿದೆ. ನಿಮ್ಮ ತಾಯಿ ಅಥವಾ ಅಜ್ಜಿಯನ್ನು ಕೇಳಿ, ಹದಿನಾಲ್ಕರಿಂದ ಹದಿನೇಳು ಮದುವೆಗೆ ಗರಿಷ್ಠ ವಯಸ್ಸಾಗಿತ್ತು. 17 ವರ್ಷ ತುಂಬುವ ಮೊದಲೇ ಬಾಲಕಿಯರು ತಮ್ಮ ಮೊದಲ ಮಗುವಿಗೆ ಜನ್ಮ ನೀಡುತ್ತಿದ್ದರು. ಬಾಲಕಿಯರು ಬಾಲಕರಿಗಿಂತ ಬೇಗನೆ ಪ್ರೌಢಾವಸ್ಥೆಗೆ ತಲುಪುತ್ತಾರೆ. ನೀವು ಓದಿಲ್ಲವೆಂದಾದರೆ, ಒಮ್ಮೆ ಮನುಸ್ಮೃತಿ ಓದಿ” ಎಂದು ನ್ಯಾಯಮೂರ್ತಿಗಳು ಸಲಹೆ ನೀಡಿದ್ದಾರೆ.

ತಮ್ಮ ಕೊಠಡಿಯಲ್ಲೇ ತಜ್ಞ ವೈದ್ಯರ ಸಲಹೆ ಪಡೆದ ನ್ಯಾಯಮೂರ್ತಿ, ಆಗಸ್ಟ್ 16ರಂದು ಬಾಲಕಿಯು ಮಗುವಿಗೆ ಜನ್ಮ ನೀಡುವ ಸಾಧ್ಯತೆ ಇದೆ ಎಂಬುದರ ಮಾಹಿತಿ ಪಡೆದರು. ಆದರೆ, ಬಾಲಕಿ ಮತ್ತು ಭ್ರೂಣಕ್ಕೆ ಗಂಭೀರ ಆರೋಗ್ಯ ಸಮಸ್ಯೆ ಇದೆ ಎಂಬುದು ಕಂಡುಬಂದರೆ ಮಾತ್ರ ಗರ್ಭಪಾತಕ್ಕೆ ಅನುಮತಿ ನೀಡುತ್ತೇನೆ. ಒಂದೊಮ್ಮೆ, ಆರೋಗ್ಯ ಸ್ಥಿತಿ ಉತ್ತಮವಾಗಿದ್ದರೆ ಅಂತಹ ಆದೇಶ ನೀಡುವುದು ನ್ಯಾಯಾಲಯಕ್ಕೆ ಕಷ್ಟವಾಗಲಿದೆ” ಎಂದು ವಕೀಲರಿಗೆ ತಿಳಿಸಿದರು.

ಕೊನೆಗೆ, ಬಾಲಕಿಗೆ ಗರ್ಭಪಾತ ನಡೆಸುವುದು ಸೂಕ್ತವೇ ಎಂಬುದನ್ನು ಕಂಡುಹಿಡಿಯಲು ವೈದ್ಯರ ಸಮಿತಿಯಿಂದ ಬಾಲಕಿಯನ್ನು ಪರೀಕ್ಷಿಸುವಂತೆ ನ್ಯಾಯಾಲಯವು ರಾಜ್‌ಕೋಟ್‌ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಿಗೆ ನಿರ್ದೇಶಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...