Homeಮುಖಪುಟಬಿಕ್ಕಟ್ಟಿನಲ್ಲಿ ಬಿಜೆಪಿ-ಶಿವಸೇನೆ ಮೈತ್ರಿ; ಚರ್ಚೆಗೆ ಗ್ರಾಸವಾದ ಸಿಎಂ ಶಿಂಧೆ ಪುತ್ರನ ರಾಜೀನಾಮೆ ಹೇಳಿಕೆ

ಬಿಕ್ಕಟ್ಟಿನಲ್ಲಿ ಬಿಜೆಪಿ-ಶಿವಸೇನೆ ಮೈತ್ರಿ; ಚರ್ಚೆಗೆ ಗ್ರಾಸವಾದ ಸಿಎಂ ಶಿಂಧೆ ಪುತ್ರನ ರಾಜೀನಾಮೆ ಹೇಳಿಕೆ

- Advertisement -
- Advertisement -

ಮುಖ್ಯಮಂತ್ರಿ ಏಕನಾಥ್‌ ಶಿಂಧೆ ಅವರ ಪುತ್ರ ಶ್ರೀಕಾಂತ್ ಶಿಂಧೆ ಪ್ರತಿನಿಧಿಸುತ್ತಿರುವ ಕಲ್ಯಾಣ್-ಡೊಂಬಿವಲಿ ಲೋಕಸಭಾ ಕ್ಷೇತ್ರದ ವಿಚಾರವು ಬಿಜೆಪಿ ಮತ್ತು ಶಿಂಧೆ ನೇತೃತ್ವದ ಶಿವಸೇನೆ ಮೈತ್ರಿಯಲ್ಲಿ ಬಿಕ್ಕಟ್ಟು ತಂದೊಡ್ಡಿದೆ.

ಶುಕ್ರವಾರ ಸಂಜೆ ಶ್ರೀಕಾಂತ್ ಶಿಂಧೆ ವಿಡಿಯೋ ಸಂದೇಶವನ್ನು ಬಿಡುಗಡೆ ಮಾಡಿದ್ದು, “ಒಂದು ವೇಳೆ ಕ್ಷುಲ್ಲಕ ವಿಚಾರವಾಗಿ, ಕಲ್ಯಾಣ್ ಡೊಂಬಿವಲಿ ಕ್ಷೇತ್ರವನ್ನು ಪಡೆಯುವ ಬಗ್ಗೆ ಬಿಜೆಪಿ ಕಟಿಬದ್ಧವಾಗಿದ್ದರೆ ಲೋಕಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ” ಎಂದು ಹೇಳಿದ್ದಾರೆ.

“ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ಪೋಸ್ಟಿಂಗ್ ವಿಚಾರವನ್ನು ಬಿಜೆಪಿ ಮತ್ತು ಅದರ ಕಾರ್ಯಕರ್ತರು ದೊಡ್ಡದು ಮಾಡಬಾರದು. ಇದು ಸಣ್ಣ ವಿಚಾರ. ನಾವು ದೊಡ್ಡ ಗುರಿಗಾಗಿ ಕೆಲಸ ಮಾಡಬೇಕು. ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಭಾರತದ ಪ್ರಧಾನಿಯನ್ನಾಗಿ ಮಾಡಬೇಕು” ಎಂದು ಡಾ.ಶ್ರೀಕಾಂತ್ ಶಿಂಧೆ ತಿಳಿಸಿದ್ದಾರೆ.

ಡೊಂಬಿವಿಲಿಯಲ್ಲಿ ಮುಖ್ಯಮಂತ್ರಿ ಏಕನಾಥ್ ಶಿಂಧೆ, ದಿವಾದಲ್ಲಿ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನಾವೀಸ್ ಅವರು ಹಲವು ಯೋಜನೆಗಳನ್ನು ಉದ್ಘಾಟಿಸಿದ ಒಂದು ದಿನದ ನಂತರ ಬಿಜೆಪಿ ಮತ್ತು ಏಕನಾಥ್ ಶಿಂಧೆ ಅವರ ಶಿವಸೇನೆ ನಡುವೆ ಬಿಕ್ಕಟ್ಟುಗಳು ಮುನ್ನೆಲೆಗೆ ಬಂದಿವೆ.

ಜಾಹೀರಾತು ಫಲಕಗಳು, ಪೋಸ್ಟರ್‌ಗಳಲ್ಲಿ ಶಿವಸೇನೆ ಉದ್ದೇಶಪೂರ್ವಕವಾಗಿ ದೇವೇಂದ್ರ ಫಡ್ನಾವೀಸ್‌ ಅವರ ಭಾವಚಿತ್ರವನ್ನು ಕೈಬಿಟ್ಟಿರುವುದಕ್ಕೆ ಕೋಪಗೊಂಡ ಕಲ್ಯಾಣ್-ಡೊಂಬಿವಿಲಿ ಘಟಕದ ಬಿಜೆಪಿ ನಾಯಕರು ಮತ್ತು ಪಕ್ಷದ ಕಾರ್ಯಕರ್ತರು ಅಸಮಾಧಾನ ಹೊರಹಾಕಿದ್ದಾರೆ.

ಶಿವಸೇನೆ ಸಂಸದ ಶ್ರೀಕಾಂತ್‌ ಶಿಂಧೆಯವರ ನಿಕಟವರ್ತಿ ಎನಿಸಿರುವ ಮಾನ್ಪಾಡ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ಇನ್ಸ್‌ಪೆಕ್ಟರ್ ಸುರೇಶ್ ಬಾಗ್ಡೆ ಅವರನ್ನು ವರ್ಗಾವಣೆ ಮಾಡಬೇಕೆಂದು ಒತ್ತಾಯಿಸಿ ಬಿಜೆಪಿ ಮುಖಂಡರು ನಿರ್ಣಯ ಅಂಗೀಕರಿಸಿದ್ದಾರೆ.

ಬಿಜೆಪಿಯ ಡೊಂಬಿವಿಲಿ ಪೂರ್ವ ಮಂಡಲದ ಅಧ್ಯಕ್ಷ ನಂದು ಜೋಶಿ ವಿರುದ್ಧ ದಾಖಲಾದ ದೌರ್ಜನ್ಯ ಪ್ರಕರಣವೇ ಈ ಬಿಕ್ಕಟ್ಟಿಗೆ ಕಾರಣ ಎನ್ನಲಾಗುತ್ತಿದೆ. ಜೋಶಿಯವರನ್ನು ರಾಜಕೀಯವಾಗಿ ಮುಗಿಸಲು ಶಿವಸೇನೆ ಯತ್ನಿಸುತ್ತಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ. ಜೋಶಿ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿ ಸುರೇಶ್ ಬಾಗ್ಡೆ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ದೂರಿದ್ದಾರೆ.

“ಕಳೆದ ಒಂಬತ್ತು ವರ್ಷಗಳಿಂದ ಕಲ್ಯಾಣ ಡೊಂಬಿವಲಿ ಕ್ಷೇತ್ರವನ್ನು ಪ್ರತಿನಿಧಿಸುತ್ತಾ, ಸಾಕಷ್ಟು ಅಭಿವೃದ್ಧಿ ಯೋಜನೆಗಳನ್ನು ಕೈಗೊಂಡಿದ್ದೇನೆ. ಜನರು ಹೆಚ್ಚಿನ ಮತ ಹಾಕಿದ್ದಾರೆ” ಎಂದು ಶ್ರೀಕಾಂತ್‌ ಶಿಂಧೆ ಹೇಳಿಕೊಂಡಿದ್ದಾರೆ.

ಇದನ್ನೂ ಓದಿರಿ: ಮಾಯಾವತಿ, ಮಾಂಝಿ ವಿರೋಧ ಪಕ್ಷಗಳ ಮೈತ್ರಿಯಿಂದ ದೂರ ಉಳಿಯುವರೇ?

“ಬಿಜೆಪಿ ಉತ್ತಮ ಅಭ್ಯರ್ಥಿ ಹೊಂದಿದ್ದರೆ, ರಾಜೀನಾಮೆ ನೀಡಲು ಸಿದ್ಧ. ಆದರೆ ಬಿಜೆಪಿ ಸಣ್ಣ ವಿಷಯವನ್ನು ದೊಡ್ಡದು ಮಾಡಿ ಶಿವಸೇನೆ-ಬಿಜೆಪಿ ಮೈತ್ರಿಯಲ್ಲಿ ಗೊಂದಲ ಸೃಷ್ಟಿಸಬಾರದು” ಎಂದು ಶಿಂಧೆ ಮನವಿ ಮಾಡಿದ್ದಾರೆ.

ಇದು ಆರೆಸ್ಸೆಸ್-ಬಿಜೆಪಿ ಪ್ರಾಬಲ್ಯದ ಕ್ಷೇತ್ರವಾಗಿದೆ. ಆದ್ದರಿಂದ ಬಿಜೆಪಿಯವರು ಈ ಲೋಕಸಭಾ ಸ್ಥಾನವನ್ನು ಮರಳಿ ಪಡೆಯಬೇಕು ಎಂದು ಬಯಸುತ್ತಿದ್ದಾರೆ.

ಕಲ್ಯಾಣ್-ಡೊಂಬಿವಲಿ ಕ್ಷೇತ್ರದ ಜವಾಬ್ದಾರಿಯನ್ನು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರಿಗೆ ವಹಿಸಲಾಗಿದ್ದು, ಮಹಾರಾಷ್ಟ್ರದ ಕ್ಯಾಬಿನೆಟ್ ಸಚಿವ ಮತ್ತು ಬಿಜೆಪಿ ಶಾಸಕ ರವೀಂದ್ರ ಚವಾಣ್ ಅವರು ಈ ಸ್ಥಾನದಿಂದ ಸ್ಪರ್ಧಿಸುವ ಸುಳಿವು ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...