Homeದಲಿತ್ ಫೈಲ್ಸ್ಹತ್ತು ದಲಿತರ ಹತ್ಯೆ ಪ್ರಕರಣ; 42 ವರ್ಷಗಳ ಬಳಿಕ ಓರ್ವ ಅಪರಾಧಿಗೆ ಶಿಕ್ಷೆ

ಹತ್ತು ದಲಿತರ ಹತ್ಯೆ ಪ್ರಕರಣ; 42 ವರ್ಷಗಳ ಬಳಿಕ ಓರ್ವ ಅಪರಾಧಿಗೆ ಶಿಕ್ಷೆ

- Advertisement -
- Advertisement -

ಉತ್ತರಪ್ರದೇಶದ ಫಿರೋಜಾಬಾದ್‌ ಜಿಲ್ಲೆಯ ಸಾಧುಪುರ್‌‌ ಗ್ರಾಮದಲ್ಲಿ 1981 ಇಸವಿಯಲ್ಲಿ ನಡೆದ ಘಟನೆ ಇದು. ಏಕಾಏಕಿ ನಡೆದ ಗುಂಡಿನ ದಾಳಿ ಪ್ರಕರಣದಲ್ಲಿ ದಲಿತರ ಜೀವಗಳು ಹಾರಿಹೋಗಿದ್ದವು. ಆದರೆ ಪ್ರಕರಣ ನಡೆದು 42 ವರ್ಷಗಳ ಬಳಿಕ ಓರ್ವ ಅಪರಾಧಿಗೆ ಶಿಕ್ಷೆಯನ್ನು ನ್ಯಾಯಾಲಯ ಪ್ರಕಟಿದೆ.

ಪ್ರಕರಣ ಸವೆಸಿದ ಹಾದಿಯ ಕುರಿತು ‘ದಿ ಇಂಡಿಯನ್‌ ಎಕ್ಸ್‌ಪ್ರೆಸ್‌’ ವಿಸ್ತೃತವಾಗಿ ವರದಿ ಮಾಡಿದೆ. ಪ್ರಕರಣದ ಏಳುಬೀಳಿನಲ್ಲಿ ನೊಂದ ದಲಿತರ ತ್ರಾಸದಾಯಕ ಪಯಣವನ್ನು ವರದಿ ತೆರೆದಿಟ್ಟಿದೆ.

1981ರ ಡಿಸೆಂಬರ್‌ 30ನೇ ತಾರೀಕು. ಮೈನ್‌ಪುರಿ ಜಿಲ್ಲೆಗೆ ಸೇರಿದ, ಈಗ ಫಿರೋಜಾಬಾದ್‌ಗೆ ಒಳಪಟ್ಟಿರುವ ಸಾಧುಪುರ್ ಗ್ರಾಮದಲ್ಲಿ ಅಂದು ಸಂಜೆ 6 ಗಂಟೆಯಲ್ಲಿ ಭೀಕರ ದಾಳಿ ನಡೆದಿತ್ತು. 30ರ ಹರೆಯದ ಪ್ರೇಮಾವತಿ, ತನ್ನ 14 ವರ್ಷದ ಮಗಳು ಸುಖದೇವಿ ಅವರೊಂದಿಗೆ ರೊಟ್ಟಿಗಳನ್ನು ತಟ್ಟುತ್ತಿದ್ದರು. ಪ್ರೇಮಾವತಿ ಅವರ ಮಕ್ಕಳಾದ  ಹರಿಶಂಕರ್ (12), ಕೈಲಾಶ್  8 ಅಡುಗೆ ಮನೆಯಲ್ಲಿ ಕುಳಿತ್ತಿದ್ದರು.

ಇದ್ದಕ್ಕಿದ್ದಂತೆ, ಇಬ್ಬರು ಪುರುಷರು ಅಡುಗೆಮನೆಗೆ ಪ್ರವೇಶಿಸಿದರು. ಪೊಲೀಸ್‌ ಸಮವಸ್ತ್ರದಲ್ಲಿದ್ದ ಮೂರನೇ ವ್ಯಕ್ತಿ ಮುಖ್ಯ ಬಾಗಿಲಿನ ಹೊರಗೆ ಕವಾಲಾಗಿ ನಿಂತಿದ್ದ. ಐದು ನಿಮಿಷಗಳ ಕಾಲ ಇಬ್ಬರು ವ್ಯಕ್ತಿಗಳು ಮನಬಂದಂತೆ ಗುಂಡು ಹಾರಿಸಿದರು. ಸುಖದೇವಿ ಹೊಟ್ಟೆಗೆ, ಹರಿಶಂಕರ್ ಕುತ್ತಿಗೆಗೆ ಮತ್ತು ಕೈಲಾಶ್‌ನ ಎದೆ ಮತ್ತು ಹೊಟ್ಟೆಗೆ ಗುಂಡು ತಗುಲಿದವು. ಮೂವರೂ ಸ್ಥಳದಲ್ಲೇ ಸಾವನ್ನಪ್ಪಿದರು.

ಹೇಗೋ ಪ್ರೇಮಾವತಿ ಬದುಕುಳಿದಿದ್ದಳು. ಕಾಲಿಗೆ ಗುಂಡು ತಗುಲಿದ್ದರಿಂದ ವಾಕಿಂಗ್ ಸ್ಟಿಕ್ ಅವರಿಗೆ ಕಾಯಂ ಆಯಿತು. ಡಕಾಯಿತ ಅನಾರ್ ಸಿಂಗ್ ಯಾದವ್ ನೇತೃತ್ವದ ಗ್ಯಾಂಗ್‌ಗೆ ಸೇರಿದ ಮಂದಿ ಪರಿಶಿಷ್ಟ ಜಾತಿಗೆ ಸೇರಿದ ಆರು ಮಹಿಳೆಯರೂ ಸೇರಿದಂತೆ 10 ಜನರನ್ನು ಈ ಸರಣಿಯಲ್ಲಿ ಕಗ್ಗೊಲೆ ಮಾಡಿದ್ದರು.

ಸುಮಾರು 42 ವರ್ಷಗಳ ಹಿಂದೆ ನಡೆದ ಪ್ರಕರಣವಿದು. 1989ರಲ್ಲಿ ಹೊಸ ಜಿಲ್ಲೆಯ ರಚನೆ ಆಯಿತು. ಹೊಸ ಜಿಲ್ಲೆಯಲ್ಲಿ ಸುಮಾರು 32 ವರ್ಷ ನ್ಯಾಯಕ್ಕಾಗಿ ಕಾಯಬೇಕಾಯಿತು. ಫಿರೋಜಾಬಾದ್ ನ್ಯಾಯಾಲಯವು ಕಳೆದ ಮೇ 31 ರಂದು ಸಾಧುಪುರ್‌ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪನ್ನು ಪ್ರಕಟಿಸಿದೆ. ವಿಚಾರಣೆ ನಡೆಯುವ ವೇಳೆಯಲ್ಲಿಯೇ ಇಬ್ಬರು ಆರೋಪಿಗಳು (ಅನಾರ್ ಮತ್ತು ಜಪಾನ್ ಸಿಂಗ್) ನಿಧನರಾಗಿದ್ದರು.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 (ಕೊಲೆ) ಮತ್ತು 307 (ಕೊಲೆಗೆ ಯತ್ನ) ಅಡಿಯಲ್ಲಿ ಅಪರಾಧ ಸಾಬೀತಾಗಿರುವ ಹಿನ್ನೆಲೆಯಲ್ಲಿ 90 ವರ್ಷದ ಗಂಗಾ ದಯಾಳ್‌ಗೆ ಜೀವಾವಧಿ ಶಿಕ್ಷೆ, 50,000 ರೂಪಾಯಿ ದಂಡ ವಿಧಿಸಲಾಗಿದೆ.

“ಇದು ನ್ಯಾಯವೆಂದು ಕಾಣುತ್ತಿದೆಯೇ? ನಾನು ನನ್ನ ಇಡೀ ಜೀವನವನ್ನು ನ್ಯಾಯಕ್ಕಾಗಿ ಸವೆಸಿದೆ. ನನಗೆ ಈಗ ನ್ಯಾಯ ಸಿಗುತ್ತದೆಯೇ?”- ಸುಮಾರು ನಾಲ್ಕು ದಶಕಗಳ ಹಿಂದೆ ತನ್ನ ಮಕ್ಕಳನ್ನು ಕಳೆದುಕೊಂಡ, ಈಗ 72 ವರ್ಷದವರಾಗಿರುವ ಪ್ರೇಮಾವತಿಯವರು ಪತಿ ರಾಮ್ ಭರೋಸ್ (82) ಪಕ್ಕದಲ್ಲಿ ಕುಳಿತು ಹೀಗೆ ಅಳಲು ತೋಡಿಕೊಂಡಿದ್ದಾರೆ.

ಸಂತ್ರಸ್ತರ ಪರ ವಾದ ಮಂಡಿಸಿದ ಫಿರೋಜಾಬಾದ್ ಜಿಲ್ಲಾ ಪ್ರಧಾನ ವಕೀಲ ರಾಜೀವ್ ಉಪಾಧ್ಯಾಯ ಪ್ರತಿಕ್ರಿಯಿಸಿ, “1989ರಲ್ಲಿ ಹೊಸ ಜಿಲ್ಲೆ ರಚನೆಯಾದ ಕಾರಣ ವಿಚಾರಣೆ ಎಲ್ಲಿ ನಡೆಯಬೇಕು ಎಂದು ನಿರ್ಧರಿಸಲು ಸಾಕಷ್ಟು ಸಮಯ ವ್ಯಯಿಸಿದ್ದರಿಂದ ತೀರ್ಪು ವಿಳಂಬವಾಯಿತು” ಎಂದಿದ್ದಾರೆ.

“ಈ ಘಟನೆ ಸಂಭವಿಸಿದಾಗ, ಶಿಕೋಹಾಬಾದ್ ಪೊಲೀಸ್ ಠಾಣೆ (ಸಾಧುಪುರ್‌ ಗ್ರಾಮ ಈ ಠಾಣೆ ವ್ಯಾಪ್ತಿಗೆ ಸೇರಿದೆ) ಮೈನ್‌ಪುರಿ ಜಿಲ್ಲೆಯಲ್ಲಿತ್ತು. 1989ರಲ್ಲಿ, ಫಿರೋಜಾಬಾದ್ ಜಿಲ್ಲೆಯನ್ನು ರಚಿಸಲಾಯಿತು. ಶಿಕೋಹಾಬಾದ್ ಹೊಸ ಜಿಲ್ಲೆಯ ಭಾಗವಾಯಿತು. ಪ್ರಕರಣವು ಈಗಾಗಲೇ ಮೈನ್‌ಪುರಿ ಜಿಲ್ಲೆಯಲ್ಲಿ ಪ್ರಾರಂಭವಾಗಿರುವುದರಿಂದ, ಯಾವ ಜಿಲ್ಲಾ ನ್ಯಾಯಾಲಯವು ಈ ವಿಷಯವನ್ನು ಆಲಿಸಬೇಕು ಎಂಬುದರ ಕುರಿತು ವಾದಗಳು ಇದ್ದವು” ಎನ್ನುತ್ತಾರೆ ಉಪಾಧ್ಯಾಯ.

“(ಅಲಹಾಬಾದ್) ಹೈಕೋರ್ಟ್ ಫಿರೋಜಾಬಾದ್ ನ್ಯಾಯಾಲಯವನ್ನು ಆಯ್ಕೆ ಮಾಡುವ ಮೊದಲು ಸ್ವಲ್ಪ ಸಮಯವಾಗಿತ್ತು. ಆ ನಂತರವೂ ಆರೋಪಿಗಳು ಕಾಲಾವಕಾಶ ಕೋರುತ್ತಲೇ ಇದ್ದರು. ಇದು ಪ್ರಕರಣವನ್ನು ಮತ್ತಷ್ಟು ವಿಳಂಬಗೊಳಿಸಿತು” ಎಂದಿದ್ದಾರೆ.

ಇದನ್ನೂ ಓದಿರಿ: ಮಾಯಾವತಿ, ಮಾಂಝಿ ವಿರೋಧ ಪಕ್ಷಗಳ ಮೈತ್ರಿಯಿಂದ ದೂರ ಉಳಿಯುವರೇ?

ಅಂದಿನ ಘಟನೆಯನ್ನು ನೆನಪಿಸಿಕೊಂಡಿರುವ ಪ್ರೇಮಾವತಿ, “ಎಲ್ಲವೂ ತುಂಬಾ ವೇಗವಾಗಿ ನಡೆಯಿತು. ಒಂದು ಕ್ಷಣ, ಏನಾಗುತ್ತಿದೆ ಎಂದು ನನಗೆ ಅರ್ಥವಾಗಲಿಲ್ಲ. ನಾನು ಸಂಪೂರ್ಣವಾಗಿ ಪ್ರಜ್ಞೆ ಕಳೆದುಕೊಂಡಿದ್ದೆ. ಕಾಲಿಗೆ ಗುಂಡು ತಗುಲಿದ್ದರೂ ನನಗೆ ಯಾವುದೇ ನೋವು ಆಗಲಿಲ್ಲ. ಆಗಷ್ಟೇ ಗುಂಡಿನ ದಾಳಿ ಆರಂಭಿಸಿದ್ದರು. ಅವರು ನಮ್ಮನ್ನು ಯಾವುದೇ ವಿಚಾರ ಕೇಳಲಿಲ್ಲ. ಅವರು ನಮಗೆ ಮಾತನಾಡಲು ಅವಕಾಶ ನೀಡಲಿಲ್ಲ” ಎಂದು ನೆನೆದಿದ್ದಾರೆ.

ಅಂದು ಪ್ರೇಮಾವತಿಯವರ ಅರ್ಧದಷ್ಟು ಕುಟುಂಬ ಬಲಿಯಾಗಿತ್ತು. ಬದುಕುಳಿದವರು ರಾಮ್ ಭರೋಸ್, ಪ್ರೇಮಾವತಿ ಮತ್ತು ಅವರ ಮಗ ಮಹೇಂದ್ರ ಸಿಂಗ್ (ಆಗ ಕೇವಲ 2 ವರ್ಷದ ಮಗು). ಈಗ 44 ವರ್ಷ ವಯಸ್ಸಿನವರಾದ ಮಹೇಂದ್ರ ಅವರು ಆ ಸಂಜೆ ಮತ್ತೊಂದು ಕೋಣೆಯಲ್ಲಿ ಮಲಗಿದ್ದರಿಂದ ಮಾತ್ರ ಬದುಕುಳಿದ್ದರು. ರಾಮ್ ಭರೋಸ್ ಅವರು ನೆರೆಯ ಮನೆಯಲ್ಲಿದ್ದ ಕಾರಣ ಜೀವ ಉಳಿಸಿಕೊಂಡಿದ್ದರು.

ತನ್ನ ಏಳು ಮಂದಿಯ ಕುಟುಂಬವನ್ನು ಪೋಷಿಸಲು ಕೂಲಿ ಕೆಲಸ ಮಾಡುವ ಮಹೇಂದ್ರ ಅವರು, “ಸರ್ಕಾರವು ಪ್ರತಿ ಸಂತ್ರಸ್ತ ಕುಟುಂಬ ಸದಸ್ಯರಿಗೆ ಅನುಕಂಪದ ಆಧಾರದ ಮೇಲೆ ಉದ್ಯೋಗ ನೀಡುವ ಭರವಸೆ ನೀಡಿತು. ನಾನು 18 ನೇ ವರ್ಷಕ್ಕೆ ಕಾಲಿಟ್ಟಾಗಿನಿಂದ ಆ ಕೆಲಸವನ್ನು ಪಡೆಯಲು ಪ್ರಯತ್ನಿಸುತ್ತಿದ್ದೇನೆ. ನಾನು ಸರ್ಕಾರಕ್ಕೆ ಅನೇಕ ಪತ್ರಗಳನ್ನು ಬರೆದಿದ್ದೇನೆ. ನನ್ನನ್ನು ಒಂದು ಕಚೇರಿಯಿಂದ ಇನ್ನೊಂದು ಕಚೇರಿಗೆ ಅಲೆಸಲಾಯಿತು” ಎಂದು ಅಳಲು ತೋಡಿಕೊಂಡಿದ್ದಾರೆ.

(ಪೂರ್ಣ ವರದಿಗಾಗಿ ‘ಇಲ್ಲಿ’ ಕ್ಲಿಕ್ ಮಾಡಿರಿ)

ವರದಿ ಕೃಪೆ: ದಿ ಇಂಡಿಯನ್ ಎಕ್ಸ್‌ಪ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...