Homeದಲಿತ್ ಫೈಲ್ಸ್ಹತ್ತು ದಲಿತರ ಹತ್ಯೆ ಪ್ರಕರಣ; 42 ವರ್ಷಗಳ ಬಳಿಕ ಓರ್ವ ಅಪರಾಧಿಗೆ ಶಿಕ್ಷೆ

ಹತ್ತು ದಲಿತರ ಹತ್ಯೆ ಪ್ರಕರಣ; 42 ವರ್ಷಗಳ ಬಳಿಕ ಓರ್ವ ಅಪರಾಧಿಗೆ ಶಿಕ್ಷೆ

- Advertisement -
- Advertisement -

ಉತ್ತರಪ್ರದೇಶದ ಫಿರೋಜಾಬಾದ್‌ ಜಿಲ್ಲೆಯ ಸಾಧುಪುರ್‌‌ ಗ್ರಾಮದಲ್ಲಿ 1981 ಇಸವಿಯಲ್ಲಿ ನಡೆದ ಘಟನೆ ಇದು. ಏಕಾಏಕಿ ನಡೆದ ಗುಂಡಿನ ದಾಳಿ ಪ್ರಕರಣದಲ್ಲಿ ದಲಿತರ ಜೀವಗಳು ಹಾರಿಹೋಗಿದ್ದವು. ಆದರೆ ಪ್ರಕರಣ ನಡೆದು 42 ವರ್ಷಗಳ ಬಳಿಕ ಓರ್ವ ಅಪರಾಧಿಗೆ ಶಿಕ್ಷೆಯನ್ನು ನ್ಯಾಯಾಲಯ ಪ್ರಕಟಿದೆ.

ಪ್ರಕರಣ ಸವೆಸಿದ ಹಾದಿಯ ಕುರಿತು ‘ದಿ ಇಂಡಿಯನ್‌ ಎಕ್ಸ್‌ಪ್ರೆಸ್‌’ ವಿಸ್ತೃತವಾಗಿ ವರದಿ ಮಾಡಿದೆ. ಪ್ರಕರಣದ ಏಳುಬೀಳಿನಲ್ಲಿ ನೊಂದ ದಲಿತರ ತ್ರಾಸದಾಯಕ ಪಯಣವನ್ನು ವರದಿ ತೆರೆದಿಟ್ಟಿದೆ.

1981ರ ಡಿಸೆಂಬರ್‌ 30ನೇ ತಾರೀಕು. ಮೈನ್‌ಪುರಿ ಜಿಲ್ಲೆಗೆ ಸೇರಿದ, ಈಗ ಫಿರೋಜಾಬಾದ್‌ಗೆ ಒಳಪಟ್ಟಿರುವ ಸಾಧುಪುರ್ ಗ್ರಾಮದಲ್ಲಿ ಅಂದು ಸಂಜೆ 6 ಗಂಟೆಯಲ್ಲಿ ಭೀಕರ ದಾಳಿ ನಡೆದಿತ್ತು. 30ರ ಹರೆಯದ ಪ್ರೇಮಾವತಿ, ತನ್ನ 14 ವರ್ಷದ ಮಗಳು ಸುಖದೇವಿ ಅವರೊಂದಿಗೆ ರೊಟ್ಟಿಗಳನ್ನು ತಟ್ಟುತ್ತಿದ್ದರು. ಪ್ರೇಮಾವತಿ ಅವರ ಮಕ್ಕಳಾದ  ಹರಿಶಂಕರ್ (12), ಕೈಲಾಶ್  8 ಅಡುಗೆ ಮನೆಯಲ್ಲಿ ಕುಳಿತ್ತಿದ್ದರು.

ಇದ್ದಕ್ಕಿದ್ದಂತೆ, ಇಬ್ಬರು ಪುರುಷರು ಅಡುಗೆಮನೆಗೆ ಪ್ರವೇಶಿಸಿದರು. ಪೊಲೀಸ್‌ ಸಮವಸ್ತ್ರದಲ್ಲಿದ್ದ ಮೂರನೇ ವ್ಯಕ್ತಿ ಮುಖ್ಯ ಬಾಗಿಲಿನ ಹೊರಗೆ ಕವಾಲಾಗಿ ನಿಂತಿದ್ದ. ಐದು ನಿಮಿಷಗಳ ಕಾಲ ಇಬ್ಬರು ವ್ಯಕ್ತಿಗಳು ಮನಬಂದಂತೆ ಗುಂಡು ಹಾರಿಸಿದರು. ಸುಖದೇವಿ ಹೊಟ್ಟೆಗೆ, ಹರಿಶಂಕರ್ ಕುತ್ತಿಗೆಗೆ ಮತ್ತು ಕೈಲಾಶ್‌ನ ಎದೆ ಮತ್ತು ಹೊಟ್ಟೆಗೆ ಗುಂಡು ತಗುಲಿದವು. ಮೂವರೂ ಸ್ಥಳದಲ್ಲೇ ಸಾವನ್ನಪ್ಪಿದರು.

ಹೇಗೋ ಪ್ರೇಮಾವತಿ ಬದುಕುಳಿದಿದ್ದಳು. ಕಾಲಿಗೆ ಗುಂಡು ತಗುಲಿದ್ದರಿಂದ ವಾಕಿಂಗ್ ಸ್ಟಿಕ್ ಅವರಿಗೆ ಕಾಯಂ ಆಯಿತು. ಡಕಾಯಿತ ಅನಾರ್ ಸಿಂಗ್ ಯಾದವ್ ನೇತೃತ್ವದ ಗ್ಯಾಂಗ್‌ಗೆ ಸೇರಿದ ಮಂದಿ ಪರಿಶಿಷ್ಟ ಜಾತಿಗೆ ಸೇರಿದ ಆರು ಮಹಿಳೆಯರೂ ಸೇರಿದಂತೆ 10 ಜನರನ್ನು ಈ ಸರಣಿಯಲ್ಲಿ ಕಗ್ಗೊಲೆ ಮಾಡಿದ್ದರು.

ಸುಮಾರು 42 ವರ್ಷಗಳ ಹಿಂದೆ ನಡೆದ ಪ್ರಕರಣವಿದು. 1989ರಲ್ಲಿ ಹೊಸ ಜಿಲ್ಲೆಯ ರಚನೆ ಆಯಿತು. ಹೊಸ ಜಿಲ್ಲೆಯಲ್ಲಿ ಸುಮಾರು 32 ವರ್ಷ ನ್ಯಾಯಕ್ಕಾಗಿ ಕಾಯಬೇಕಾಯಿತು. ಫಿರೋಜಾಬಾದ್ ನ್ಯಾಯಾಲಯವು ಕಳೆದ ಮೇ 31 ರಂದು ಸಾಧುಪುರ್‌ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪನ್ನು ಪ್ರಕಟಿಸಿದೆ. ವಿಚಾರಣೆ ನಡೆಯುವ ವೇಳೆಯಲ್ಲಿಯೇ ಇಬ್ಬರು ಆರೋಪಿಗಳು (ಅನಾರ್ ಮತ್ತು ಜಪಾನ್ ಸಿಂಗ್) ನಿಧನರಾಗಿದ್ದರು.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 (ಕೊಲೆ) ಮತ್ತು 307 (ಕೊಲೆಗೆ ಯತ್ನ) ಅಡಿಯಲ್ಲಿ ಅಪರಾಧ ಸಾಬೀತಾಗಿರುವ ಹಿನ್ನೆಲೆಯಲ್ಲಿ 90 ವರ್ಷದ ಗಂಗಾ ದಯಾಳ್‌ಗೆ ಜೀವಾವಧಿ ಶಿಕ್ಷೆ, 50,000 ರೂಪಾಯಿ ದಂಡ ವಿಧಿಸಲಾಗಿದೆ.

“ಇದು ನ್ಯಾಯವೆಂದು ಕಾಣುತ್ತಿದೆಯೇ? ನಾನು ನನ್ನ ಇಡೀ ಜೀವನವನ್ನು ನ್ಯಾಯಕ್ಕಾಗಿ ಸವೆಸಿದೆ. ನನಗೆ ಈಗ ನ್ಯಾಯ ಸಿಗುತ್ತದೆಯೇ?”- ಸುಮಾರು ನಾಲ್ಕು ದಶಕಗಳ ಹಿಂದೆ ತನ್ನ ಮಕ್ಕಳನ್ನು ಕಳೆದುಕೊಂಡ, ಈಗ 72 ವರ್ಷದವರಾಗಿರುವ ಪ್ರೇಮಾವತಿಯವರು ಪತಿ ರಾಮ್ ಭರೋಸ್ (82) ಪಕ್ಕದಲ್ಲಿ ಕುಳಿತು ಹೀಗೆ ಅಳಲು ತೋಡಿಕೊಂಡಿದ್ದಾರೆ.

ಸಂತ್ರಸ್ತರ ಪರ ವಾದ ಮಂಡಿಸಿದ ಫಿರೋಜಾಬಾದ್ ಜಿಲ್ಲಾ ಪ್ರಧಾನ ವಕೀಲ ರಾಜೀವ್ ಉಪಾಧ್ಯಾಯ ಪ್ರತಿಕ್ರಿಯಿಸಿ, “1989ರಲ್ಲಿ ಹೊಸ ಜಿಲ್ಲೆ ರಚನೆಯಾದ ಕಾರಣ ವಿಚಾರಣೆ ಎಲ್ಲಿ ನಡೆಯಬೇಕು ಎಂದು ನಿರ್ಧರಿಸಲು ಸಾಕಷ್ಟು ಸಮಯ ವ್ಯಯಿಸಿದ್ದರಿಂದ ತೀರ್ಪು ವಿಳಂಬವಾಯಿತು” ಎಂದಿದ್ದಾರೆ.

“ಈ ಘಟನೆ ಸಂಭವಿಸಿದಾಗ, ಶಿಕೋಹಾಬಾದ್ ಪೊಲೀಸ್ ಠಾಣೆ (ಸಾಧುಪುರ್‌ ಗ್ರಾಮ ಈ ಠಾಣೆ ವ್ಯಾಪ್ತಿಗೆ ಸೇರಿದೆ) ಮೈನ್‌ಪುರಿ ಜಿಲ್ಲೆಯಲ್ಲಿತ್ತು. 1989ರಲ್ಲಿ, ಫಿರೋಜಾಬಾದ್ ಜಿಲ್ಲೆಯನ್ನು ರಚಿಸಲಾಯಿತು. ಶಿಕೋಹಾಬಾದ್ ಹೊಸ ಜಿಲ್ಲೆಯ ಭಾಗವಾಯಿತು. ಪ್ರಕರಣವು ಈಗಾಗಲೇ ಮೈನ್‌ಪುರಿ ಜಿಲ್ಲೆಯಲ್ಲಿ ಪ್ರಾರಂಭವಾಗಿರುವುದರಿಂದ, ಯಾವ ಜಿಲ್ಲಾ ನ್ಯಾಯಾಲಯವು ಈ ವಿಷಯವನ್ನು ಆಲಿಸಬೇಕು ಎಂಬುದರ ಕುರಿತು ವಾದಗಳು ಇದ್ದವು” ಎನ್ನುತ್ತಾರೆ ಉಪಾಧ್ಯಾಯ.

“(ಅಲಹಾಬಾದ್) ಹೈಕೋರ್ಟ್ ಫಿರೋಜಾಬಾದ್ ನ್ಯಾಯಾಲಯವನ್ನು ಆಯ್ಕೆ ಮಾಡುವ ಮೊದಲು ಸ್ವಲ್ಪ ಸಮಯವಾಗಿತ್ತು. ಆ ನಂತರವೂ ಆರೋಪಿಗಳು ಕಾಲಾವಕಾಶ ಕೋರುತ್ತಲೇ ಇದ್ದರು. ಇದು ಪ್ರಕರಣವನ್ನು ಮತ್ತಷ್ಟು ವಿಳಂಬಗೊಳಿಸಿತು” ಎಂದಿದ್ದಾರೆ.

ಇದನ್ನೂ ಓದಿರಿ: ಮಾಯಾವತಿ, ಮಾಂಝಿ ವಿರೋಧ ಪಕ್ಷಗಳ ಮೈತ್ರಿಯಿಂದ ದೂರ ಉಳಿಯುವರೇ?

ಅಂದಿನ ಘಟನೆಯನ್ನು ನೆನಪಿಸಿಕೊಂಡಿರುವ ಪ್ರೇಮಾವತಿ, “ಎಲ್ಲವೂ ತುಂಬಾ ವೇಗವಾಗಿ ನಡೆಯಿತು. ಒಂದು ಕ್ಷಣ, ಏನಾಗುತ್ತಿದೆ ಎಂದು ನನಗೆ ಅರ್ಥವಾಗಲಿಲ್ಲ. ನಾನು ಸಂಪೂರ್ಣವಾಗಿ ಪ್ರಜ್ಞೆ ಕಳೆದುಕೊಂಡಿದ್ದೆ. ಕಾಲಿಗೆ ಗುಂಡು ತಗುಲಿದ್ದರೂ ನನಗೆ ಯಾವುದೇ ನೋವು ಆಗಲಿಲ್ಲ. ಆಗಷ್ಟೇ ಗುಂಡಿನ ದಾಳಿ ಆರಂಭಿಸಿದ್ದರು. ಅವರು ನಮ್ಮನ್ನು ಯಾವುದೇ ವಿಚಾರ ಕೇಳಲಿಲ್ಲ. ಅವರು ನಮಗೆ ಮಾತನಾಡಲು ಅವಕಾಶ ನೀಡಲಿಲ್ಲ” ಎಂದು ನೆನೆದಿದ್ದಾರೆ.

ಅಂದು ಪ್ರೇಮಾವತಿಯವರ ಅರ್ಧದಷ್ಟು ಕುಟುಂಬ ಬಲಿಯಾಗಿತ್ತು. ಬದುಕುಳಿದವರು ರಾಮ್ ಭರೋಸ್, ಪ್ರೇಮಾವತಿ ಮತ್ತು ಅವರ ಮಗ ಮಹೇಂದ್ರ ಸಿಂಗ್ (ಆಗ ಕೇವಲ 2 ವರ್ಷದ ಮಗು). ಈಗ 44 ವರ್ಷ ವಯಸ್ಸಿನವರಾದ ಮಹೇಂದ್ರ ಅವರು ಆ ಸಂಜೆ ಮತ್ತೊಂದು ಕೋಣೆಯಲ್ಲಿ ಮಲಗಿದ್ದರಿಂದ ಮಾತ್ರ ಬದುಕುಳಿದ್ದರು. ರಾಮ್ ಭರೋಸ್ ಅವರು ನೆರೆಯ ಮನೆಯಲ್ಲಿದ್ದ ಕಾರಣ ಜೀವ ಉಳಿಸಿಕೊಂಡಿದ್ದರು.

ತನ್ನ ಏಳು ಮಂದಿಯ ಕುಟುಂಬವನ್ನು ಪೋಷಿಸಲು ಕೂಲಿ ಕೆಲಸ ಮಾಡುವ ಮಹೇಂದ್ರ ಅವರು, “ಸರ್ಕಾರವು ಪ್ರತಿ ಸಂತ್ರಸ್ತ ಕುಟುಂಬ ಸದಸ್ಯರಿಗೆ ಅನುಕಂಪದ ಆಧಾರದ ಮೇಲೆ ಉದ್ಯೋಗ ನೀಡುವ ಭರವಸೆ ನೀಡಿತು. ನಾನು 18 ನೇ ವರ್ಷಕ್ಕೆ ಕಾಲಿಟ್ಟಾಗಿನಿಂದ ಆ ಕೆಲಸವನ್ನು ಪಡೆಯಲು ಪ್ರಯತ್ನಿಸುತ್ತಿದ್ದೇನೆ. ನಾನು ಸರ್ಕಾರಕ್ಕೆ ಅನೇಕ ಪತ್ರಗಳನ್ನು ಬರೆದಿದ್ದೇನೆ. ನನ್ನನ್ನು ಒಂದು ಕಚೇರಿಯಿಂದ ಇನ್ನೊಂದು ಕಚೇರಿಗೆ ಅಲೆಸಲಾಯಿತು” ಎಂದು ಅಳಲು ತೋಡಿಕೊಂಡಿದ್ದಾರೆ.

(ಪೂರ್ಣ ವರದಿಗಾಗಿ ‘ಇಲ್ಲಿ’ ಕ್ಲಿಕ್ ಮಾಡಿರಿ)

ವರದಿ ಕೃಪೆ: ದಿ ಇಂಡಿಯನ್ ಎಕ್ಸ್‌ಪ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...