Homeದಲಿತ್ ಫೈಲ್ಸ್ಹತ್ತು ದಲಿತರ ಹತ್ಯೆ ಪ್ರಕರಣ; 42 ವರ್ಷಗಳ ಬಳಿಕ ಓರ್ವ ಅಪರಾಧಿಗೆ ಶಿಕ್ಷೆ

ಹತ್ತು ದಲಿತರ ಹತ್ಯೆ ಪ್ರಕರಣ; 42 ವರ್ಷಗಳ ಬಳಿಕ ಓರ್ವ ಅಪರಾಧಿಗೆ ಶಿಕ್ಷೆ

- Advertisement -
- Advertisement -

ಉತ್ತರಪ್ರದೇಶದ ಫಿರೋಜಾಬಾದ್‌ ಜಿಲ್ಲೆಯ ಸಾಧುಪುರ್‌‌ ಗ್ರಾಮದಲ್ಲಿ 1981 ಇಸವಿಯಲ್ಲಿ ನಡೆದ ಘಟನೆ ಇದು. ಏಕಾಏಕಿ ನಡೆದ ಗುಂಡಿನ ದಾಳಿ ಪ್ರಕರಣದಲ್ಲಿ ದಲಿತರ ಜೀವಗಳು ಹಾರಿಹೋಗಿದ್ದವು. ಆದರೆ ಪ್ರಕರಣ ನಡೆದು 42 ವರ್ಷಗಳ ಬಳಿಕ ಓರ್ವ ಅಪರಾಧಿಗೆ ಶಿಕ್ಷೆಯನ್ನು ನ್ಯಾಯಾಲಯ ಪ್ರಕಟಿದೆ.

ಪ್ರಕರಣ ಸವೆಸಿದ ಹಾದಿಯ ಕುರಿತು ‘ದಿ ಇಂಡಿಯನ್‌ ಎಕ್ಸ್‌ಪ್ರೆಸ್‌’ ವಿಸ್ತೃತವಾಗಿ ವರದಿ ಮಾಡಿದೆ. ಪ್ರಕರಣದ ಏಳುಬೀಳಿನಲ್ಲಿ ನೊಂದ ದಲಿತರ ತ್ರಾಸದಾಯಕ ಪಯಣವನ್ನು ವರದಿ ತೆರೆದಿಟ್ಟಿದೆ.

1981ರ ಡಿಸೆಂಬರ್‌ 30ನೇ ತಾರೀಕು. ಮೈನ್‌ಪುರಿ ಜಿಲ್ಲೆಗೆ ಸೇರಿದ, ಈಗ ಫಿರೋಜಾಬಾದ್‌ಗೆ ಒಳಪಟ್ಟಿರುವ ಸಾಧುಪುರ್ ಗ್ರಾಮದಲ್ಲಿ ಅಂದು ಸಂಜೆ 6 ಗಂಟೆಯಲ್ಲಿ ಭೀಕರ ದಾಳಿ ನಡೆದಿತ್ತು. 30ರ ಹರೆಯದ ಪ್ರೇಮಾವತಿ, ತನ್ನ 14 ವರ್ಷದ ಮಗಳು ಸುಖದೇವಿ ಅವರೊಂದಿಗೆ ರೊಟ್ಟಿಗಳನ್ನು ತಟ್ಟುತ್ತಿದ್ದರು. ಪ್ರೇಮಾವತಿ ಅವರ ಮಕ್ಕಳಾದ  ಹರಿಶಂಕರ್ (12), ಕೈಲಾಶ್  8 ಅಡುಗೆ ಮನೆಯಲ್ಲಿ ಕುಳಿತ್ತಿದ್ದರು.

ಇದ್ದಕ್ಕಿದ್ದಂತೆ, ಇಬ್ಬರು ಪುರುಷರು ಅಡುಗೆಮನೆಗೆ ಪ್ರವೇಶಿಸಿದರು. ಪೊಲೀಸ್‌ ಸಮವಸ್ತ್ರದಲ್ಲಿದ್ದ ಮೂರನೇ ವ್ಯಕ್ತಿ ಮುಖ್ಯ ಬಾಗಿಲಿನ ಹೊರಗೆ ಕವಾಲಾಗಿ ನಿಂತಿದ್ದ. ಐದು ನಿಮಿಷಗಳ ಕಾಲ ಇಬ್ಬರು ವ್ಯಕ್ತಿಗಳು ಮನಬಂದಂತೆ ಗುಂಡು ಹಾರಿಸಿದರು. ಸುಖದೇವಿ ಹೊಟ್ಟೆಗೆ, ಹರಿಶಂಕರ್ ಕುತ್ತಿಗೆಗೆ ಮತ್ತು ಕೈಲಾಶ್‌ನ ಎದೆ ಮತ್ತು ಹೊಟ್ಟೆಗೆ ಗುಂಡು ತಗುಲಿದವು. ಮೂವರೂ ಸ್ಥಳದಲ್ಲೇ ಸಾವನ್ನಪ್ಪಿದರು.

ಹೇಗೋ ಪ್ರೇಮಾವತಿ ಬದುಕುಳಿದಿದ್ದಳು. ಕಾಲಿಗೆ ಗುಂಡು ತಗುಲಿದ್ದರಿಂದ ವಾಕಿಂಗ್ ಸ್ಟಿಕ್ ಅವರಿಗೆ ಕಾಯಂ ಆಯಿತು. ಡಕಾಯಿತ ಅನಾರ್ ಸಿಂಗ್ ಯಾದವ್ ನೇತೃತ್ವದ ಗ್ಯಾಂಗ್‌ಗೆ ಸೇರಿದ ಮಂದಿ ಪರಿಶಿಷ್ಟ ಜಾತಿಗೆ ಸೇರಿದ ಆರು ಮಹಿಳೆಯರೂ ಸೇರಿದಂತೆ 10 ಜನರನ್ನು ಈ ಸರಣಿಯಲ್ಲಿ ಕಗ್ಗೊಲೆ ಮಾಡಿದ್ದರು.

ಸುಮಾರು 42 ವರ್ಷಗಳ ಹಿಂದೆ ನಡೆದ ಪ್ರಕರಣವಿದು. 1989ರಲ್ಲಿ ಹೊಸ ಜಿಲ್ಲೆಯ ರಚನೆ ಆಯಿತು. ಹೊಸ ಜಿಲ್ಲೆಯಲ್ಲಿ ಸುಮಾರು 32 ವರ್ಷ ನ್ಯಾಯಕ್ಕಾಗಿ ಕಾಯಬೇಕಾಯಿತು. ಫಿರೋಜಾಬಾದ್ ನ್ಯಾಯಾಲಯವು ಕಳೆದ ಮೇ 31 ರಂದು ಸಾಧುಪುರ್‌ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪನ್ನು ಪ್ರಕಟಿಸಿದೆ. ವಿಚಾರಣೆ ನಡೆಯುವ ವೇಳೆಯಲ್ಲಿಯೇ ಇಬ್ಬರು ಆರೋಪಿಗಳು (ಅನಾರ್ ಮತ್ತು ಜಪಾನ್ ಸಿಂಗ್) ನಿಧನರಾಗಿದ್ದರು.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 (ಕೊಲೆ) ಮತ್ತು 307 (ಕೊಲೆಗೆ ಯತ್ನ) ಅಡಿಯಲ್ಲಿ ಅಪರಾಧ ಸಾಬೀತಾಗಿರುವ ಹಿನ್ನೆಲೆಯಲ್ಲಿ 90 ವರ್ಷದ ಗಂಗಾ ದಯಾಳ್‌ಗೆ ಜೀವಾವಧಿ ಶಿಕ್ಷೆ, 50,000 ರೂಪಾಯಿ ದಂಡ ವಿಧಿಸಲಾಗಿದೆ.

“ಇದು ನ್ಯಾಯವೆಂದು ಕಾಣುತ್ತಿದೆಯೇ? ನಾನು ನನ್ನ ಇಡೀ ಜೀವನವನ್ನು ನ್ಯಾಯಕ್ಕಾಗಿ ಸವೆಸಿದೆ. ನನಗೆ ಈಗ ನ್ಯಾಯ ಸಿಗುತ್ತದೆಯೇ?”- ಸುಮಾರು ನಾಲ್ಕು ದಶಕಗಳ ಹಿಂದೆ ತನ್ನ ಮಕ್ಕಳನ್ನು ಕಳೆದುಕೊಂಡ, ಈಗ 72 ವರ್ಷದವರಾಗಿರುವ ಪ್ರೇಮಾವತಿಯವರು ಪತಿ ರಾಮ್ ಭರೋಸ್ (82) ಪಕ್ಕದಲ್ಲಿ ಕುಳಿತು ಹೀಗೆ ಅಳಲು ತೋಡಿಕೊಂಡಿದ್ದಾರೆ.

ಸಂತ್ರಸ್ತರ ಪರ ವಾದ ಮಂಡಿಸಿದ ಫಿರೋಜಾಬಾದ್ ಜಿಲ್ಲಾ ಪ್ರಧಾನ ವಕೀಲ ರಾಜೀವ್ ಉಪಾಧ್ಯಾಯ ಪ್ರತಿಕ್ರಿಯಿಸಿ, “1989ರಲ್ಲಿ ಹೊಸ ಜಿಲ್ಲೆ ರಚನೆಯಾದ ಕಾರಣ ವಿಚಾರಣೆ ಎಲ್ಲಿ ನಡೆಯಬೇಕು ಎಂದು ನಿರ್ಧರಿಸಲು ಸಾಕಷ್ಟು ಸಮಯ ವ್ಯಯಿಸಿದ್ದರಿಂದ ತೀರ್ಪು ವಿಳಂಬವಾಯಿತು” ಎಂದಿದ್ದಾರೆ.

“ಈ ಘಟನೆ ಸಂಭವಿಸಿದಾಗ, ಶಿಕೋಹಾಬಾದ್ ಪೊಲೀಸ್ ಠಾಣೆ (ಸಾಧುಪುರ್‌ ಗ್ರಾಮ ಈ ಠಾಣೆ ವ್ಯಾಪ್ತಿಗೆ ಸೇರಿದೆ) ಮೈನ್‌ಪುರಿ ಜಿಲ್ಲೆಯಲ್ಲಿತ್ತು. 1989ರಲ್ಲಿ, ಫಿರೋಜಾಬಾದ್ ಜಿಲ್ಲೆಯನ್ನು ರಚಿಸಲಾಯಿತು. ಶಿಕೋಹಾಬಾದ್ ಹೊಸ ಜಿಲ್ಲೆಯ ಭಾಗವಾಯಿತು. ಪ್ರಕರಣವು ಈಗಾಗಲೇ ಮೈನ್‌ಪುರಿ ಜಿಲ್ಲೆಯಲ್ಲಿ ಪ್ರಾರಂಭವಾಗಿರುವುದರಿಂದ, ಯಾವ ಜಿಲ್ಲಾ ನ್ಯಾಯಾಲಯವು ಈ ವಿಷಯವನ್ನು ಆಲಿಸಬೇಕು ಎಂಬುದರ ಕುರಿತು ವಾದಗಳು ಇದ್ದವು” ಎನ್ನುತ್ತಾರೆ ಉಪಾಧ್ಯಾಯ.

“(ಅಲಹಾಬಾದ್) ಹೈಕೋರ್ಟ್ ಫಿರೋಜಾಬಾದ್ ನ್ಯಾಯಾಲಯವನ್ನು ಆಯ್ಕೆ ಮಾಡುವ ಮೊದಲು ಸ್ವಲ್ಪ ಸಮಯವಾಗಿತ್ತು. ಆ ನಂತರವೂ ಆರೋಪಿಗಳು ಕಾಲಾವಕಾಶ ಕೋರುತ್ತಲೇ ಇದ್ದರು. ಇದು ಪ್ರಕರಣವನ್ನು ಮತ್ತಷ್ಟು ವಿಳಂಬಗೊಳಿಸಿತು” ಎಂದಿದ್ದಾರೆ.

ಇದನ್ನೂ ಓದಿರಿ: ಮಾಯಾವತಿ, ಮಾಂಝಿ ವಿರೋಧ ಪಕ್ಷಗಳ ಮೈತ್ರಿಯಿಂದ ದೂರ ಉಳಿಯುವರೇ?

ಅಂದಿನ ಘಟನೆಯನ್ನು ನೆನಪಿಸಿಕೊಂಡಿರುವ ಪ್ರೇಮಾವತಿ, “ಎಲ್ಲವೂ ತುಂಬಾ ವೇಗವಾಗಿ ನಡೆಯಿತು. ಒಂದು ಕ್ಷಣ, ಏನಾಗುತ್ತಿದೆ ಎಂದು ನನಗೆ ಅರ್ಥವಾಗಲಿಲ್ಲ. ನಾನು ಸಂಪೂರ್ಣವಾಗಿ ಪ್ರಜ್ಞೆ ಕಳೆದುಕೊಂಡಿದ್ದೆ. ಕಾಲಿಗೆ ಗುಂಡು ತಗುಲಿದ್ದರೂ ನನಗೆ ಯಾವುದೇ ನೋವು ಆಗಲಿಲ್ಲ. ಆಗಷ್ಟೇ ಗುಂಡಿನ ದಾಳಿ ಆರಂಭಿಸಿದ್ದರು. ಅವರು ನಮ್ಮನ್ನು ಯಾವುದೇ ವಿಚಾರ ಕೇಳಲಿಲ್ಲ. ಅವರು ನಮಗೆ ಮಾತನಾಡಲು ಅವಕಾಶ ನೀಡಲಿಲ್ಲ” ಎಂದು ನೆನೆದಿದ್ದಾರೆ.

ಅಂದು ಪ್ರೇಮಾವತಿಯವರ ಅರ್ಧದಷ್ಟು ಕುಟುಂಬ ಬಲಿಯಾಗಿತ್ತು. ಬದುಕುಳಿದವರು ರಾಮ್ ಭರೋಸ್, ಪ್ರೇಮಾವತಿ ಮತ್ತು ಅವರ ಮಗ ಮಹೇಂದ್ರ ಸಿಂಗ್ (ಆಗ ಕೇವಲ 2 ವರ್ಷದ ಮಗು). ಈಗ 44 ವರ್ಷ ವಯಸ್ಸಿನವರಾದ ಮಹೇಂದ್ರ ಅವರು ಆ ಸಂಜೆ ಮತ್ತೊಂದು ಕೋಣೆಯಲ್ಲಿ ಮಲಗಿದ್ದರಿಂದ ಮಾತ್ರ ಬದುಕುಳಿದ್ದರು. ರಾಮ್ ಭರೋಸ್ ಅವರು ನೆರೆಯ ಮನೆಯಲ್ಲಿದ್ದ ಕಾರಣ ಜೀವ ಉಳಿಸಿಕೊಂಡಿದ್ದರು.

ತನ್ನ ಏಳು ಮಂದಿಯ ಕುಟುಂಬವನ್ನು ಪೋಷಿಸಲು ಕೂಲಿ ಕೆಲಸ ಮಾಡುವ ಮಹೇಂದ್ರ ಅವರು, “ಸರ್ಕಾರವು ಪ್ರತಿ ಸಂತ್ರಸ್ತ ಕುಟುಂಬ ಸದಸ್ಯರಿಗೆ ಅನುಕಂಪದ ಆಧಾರದ ಮೇಲೆ ಉದ್ಯೋಗ ನೀಡುವ ಭರವಸೆ ನೀಡಿತು. ನಾನು 18 ನೇ ವರ್ಷಕ್ಕೆ ಕಾಲಿಟ್ಟಾಗಿನಿಂದ ಆ ಕೆಲಸವನ್ನು ಪಡೆಯಲು ಪ್ರಯತ್ನಿಸುತ್ತಿದ್ದೇನೆ. ನಾನು ಸರ್ಕಾರಕ್ಕೆ ಅನೇಕ ಪತ್ರಗಳನ್ನು ಬರೆದಿದ್ದೇನೆ. ನನ್ನನ್ನು ಒಂದು ಕಚೇರಿಯಿಂದ ಇನ್ನೊಂದು ಕಚೇರಿಗೆ ಅಲೆಸಲಾಯಿತು” ಎಂದು ಅಳಲು ತೋಡಿಕೊಂಡಿದ್ದಾರೆ.

(ಪೂರ್ಣ ವರದಿಗಾಗಿ ‘ಇಲ್ಲಿ’ ಕ್ಲಿಕ್ ಮಾಡಿರಿ)

ವರದಿ ಕೃಪೆ: ದಿ ಇಂಡಿಯನ್ ಎಕ್ಸ್‌ಪ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...