Homeಕರ್ನಾಟಕಸಾಗರ: ದಲಿತ ಬಾಲಕಿಯ ಅನುಮಾನಾಸ್ಪದ ಸಾವು; 2 ಬಕೆಟ್‌ ನೀರು ಕುಡಿಸಿದ್ದ ವಸತಿ ಶಾಲೆ ಮುಖ್ಯಸ್ಥ-...

ಸಾಗರ: ದಲಿತ ಬಾಲಕಿಯ ಅನುಮಾನಾಸ್ಪದ ಸಾವು; 2 ಬಕೆಟ್‌ ನೀರು ಕುಡಿಸಿದ್ದ ವಸತಿ ಶಾಲೆ ಮುಖ್ಯಸ್ಥ- ಆರೋಪ

- Advertisement -
- Advertisement -

ಶಿವಮೊಗ್ಗ ಜಿಲ್ಲೆ ಸಾಗರದಲ್ಲಿರುವ ಖಾಸಗಿ ವಸತಿ ಶಾಲೆಯೊಂದರಲ್ಲಿ 13 ವರ್ಷದ ದಲಿತ ಬಾಲಕಿ ಅನುಮಾನಾಸ್ಪದ ಸಾವನ್ನಪ್ಪಿದ್ದು, ಶಾಲೆಯ ಮುಖ್ಯಸ್ಥನ ವಿರುದ್ಧ ಗುರುತರವಾದ ಆರೋಪ ಬಂದಿದೆ.

“ಬಲವಂತವಾಗಿ ಎರಡು ಬಕೆಟ್ ನೀರು ಕುಡಿಸಿದ್ದರಿಂದ ಬಾಲಕಿ ಸಾವನ್ನಪ್ಪಿದ್ದಾಳೆ” ಎಂಬ ದೂರುಗಳು ವ್ಯಕ್ತವಾಗಿವೆ.

ಸೊರಬ ತಾಲ್ಲೂಕು ಶಿವಪುರ ಗ್ರಾಮದ ಕಡುಬಡ ದಲಿತ ಕುಟುಂಬದ ತೇಜಸ್ವಿನಿಯವರನ್ನು ಸಾಗರದ ವನಶ್ರೀ ಎಂಬ ವಸತಿ ಶಾಲೆಗೆ ಐದು ದಿನಗಳ ಹಿಂದೆ ಸೇರಿಸಲಾಗಿತ್ತು. ವನಶ್ರೀ ಶಾಲೆ ನಡೆಸುವ ಎಚ್‌.ಪಿ. ಮಂಜಪ್ಪ ಬಲವಂತವಾಗಿ ನೀರು ಕುಡಿಸಿದ್ದರು ಎಂದು ಸ್ಥಳದಲ್ಲಿದ್ದ ವಿದ್ಯಾರ್ಥಿಗಳು ಹೇಳುತ್ತಿರುವುದಾಗಿ ವರದಿಯಾಗಿದೆ. ಮಂಜಪ್ಪ ಅವರು ಆರ್‌ಎಸ್‌ಎಸ್ ಹಿನ್ನೆಲೆಯವರೆಂದು ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿದೆ.

ಈ ಕುರಿತು ವರದಿ ಮಾಡಿರುವ ‘ವಿಜಯ ಕರ್ನಾಟಕ’ ಪತ್ರಿಕೆಯು, ಸಾವಿಗೀಡಾದ ಬಾಲಕಿಯ ಅಣ್ಣನ ಹೇಳಿಕೆಯನ್ನು ದಾಖಲಿಸಿದೆ. “ಬುಧವಾರ ರಾತ್ರಿ ವಸತಿ ಶಾಲೆಯಲ್ಲಿದ್ದವರು ತಮ್ಮ ಕುಟುಂಬದವರೊಂದಿಗೆ ಮಾತನಾಡಿದಾಗ ಹೇಳಿದ್ದೇ ಬೇರೆ. ಶಾಲೆಯಲ್ಲಿ ಯೋಗಾಸನ ಮಾಡಿಸಿದ್ದರಿಂದ ತೇಜಸ್ವಿನಿ ಕಾಲು ನೋವಾಗಿದೆ. ಇದಕ್ಕೆ ಮುಲಾಮು ಹಚ್ಚಿದ್ದು, ಗುಣಮುಖರಾಗುತ್ತಾರೆ ಎಂದು ಮಂಜಪ್ಪ ತಿಳಿಸಿದ್ದರು. ಗುರುವಾರ ಘಟನೆ ನಡೆದ ಬಳಿಕ ಮಕ್ಕಳೊಂದಿಗೆ ಮಾತನಾಡಿದಾಗ, ‘ನಾನು ನೀರು ಕುಡಿಸಿಯೇ ಇದನ್ನು ಪರಿಹರಿಸುತ್ತೇನೆ’ ಎಂದು ಮಂಜಪ್ಪ ಅವರು ಕುಡಿಯಲು ಲೀಟರ್‌ಗಟ್ಟಲೆ ನೀರು ಕೊಟ್ಟಿದ್ದಾರೆ. ಕಾಲಿಗೆ ಬಿದ್ದು ಪೋಷಕರೊಂದಿಗೆ ಮಾತನಾಡಲು ಕೇಳಿಕೊಂಡರೂ ಅವರು ಒಪ್ಪಿಲ್ಲ ಎಂಬುದು ತಿಳಿಯಿತು” ಎಂದು ನೋವು ತೋಡಿಕೊಂಡಿದ್ದಾರೆ.

“ಬಾಲಕಿಯ ಸಾವಿಗೆ ಕಾರಣವೇನು? ತಾಸುಗಟ್ಟಲೆ ಬಾಲಕಿಯನ್ನು ಕೂಡಿಹಾಕಲಾಗಿತ್ತು. ಯಾಕೆ ಈ ಭಯಾನಕ ಕೃತ್ಯ ಎಸಗಲಾಯಿತು? ಸತ್ಯ ಹೊರಗೆ ಬರಬೇಕು” ಎಂದು ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತರು ಆಗ್ರಹಿಸುತ್ತಿದ್ದಾರೆ.

13 ವರ್ಷದ ತೇಜಸ್ವಿನಿ 8ನೇ ಕ್ಲಾಸ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದರು. ವಸತಿ ಶಾಲೆಯಲ್ಲಿ ಬಾಲಕಿಯ ಆರೋಗ್ಯದಲ್ಲಿ ಏರುಪೇರಾಗಿದೆ ಎಂದು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ವಿದ್ಯಾರ್ಥಿನಿಯು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾಳೆಂದು ಪೋಷಕರು, ಮೃತಳ ಸಂಬಂಧಿಗಳು ತಿಳಿಸಿದ್ದಾರೆ.

ಖಾಸಗಿ ವಸತಿ ಶಾಲೆಯ ಸಿಬ್ಬಂದಿ ಕೂಡಲೇ ಸಾಗರ ತಾಲೂಕು ಆಸ್ಪತ್ರೆಗೆ ದಾಖಲು ಮಾಡಿದ್ದರು ಎಂದು ಹೇಳಲಾಗುತ್ತಿದೆ. ಆಸ್ಪತ್ರೆಗೆ ದಾಖಲಿಸುವ ಮೊದಲೇ ವಿದ್ಯಾರ್ಥಿನಿಯು ಮೃತಪಟ್ಟಿರುವ ಕುರಿತು ವೈದ್ಯರು ದೃಢಪಡಿಸಿದ್ದಾರೆ.

“ಆರೋಗ್ಯವಾಗಿದ್ದ ಮಗಳು, ವಸತಿ ಶಾಲೆಗೆ ಹೋದ ಕೆಲವೇ ದಿನದಲ್ಲಿ ಅನಾರೋಗ್ಯಕ್ಕೊಳಗಾಗಿದ್ದು ಹೇಗೆ? ಈ ಕುರಿತು ವಸತಿ ಶಾಲೆಯವರು ಯಾವುದೇ ಮಾಹಿತಿಯನ್ನು ಪೋಷಕರಿಗೆ ಕೊಟ್ಟಿರಲಿಲ್ಲ. ಈ ಹಿನ್ನಲೆಯಲ್ಲಿ ಮೃತಳ ಶವವನ್ನು ಮರಣೋತ್ತರ ಪರೀಕ್ಷೆಗೆ ಮೆಗ್ಗಾನ್ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿತ್ತು. ಮರಣೋತ್ತರ ಪರೀಕ್ಷೆ ಬಳಿಕ ಮೃತಳ ಶವವನ್ನು ಪೋಷಕರಿಗೆ ಹಸ್ತಾಂತರಿಸಲಾಗಿದೆ. ಹಾಸ್ಟೆಲ್‌ನಲ್ಲಿರುವ ಅವ್ಯವಸ್ಥೆಯಿಂದಲೇ ವಿದ್ಯಾರ್ಥಿನಿಯು ಮೃತಪಟ್ಟಿದ್ದಾಳೆ” ಎಂದು ಕುಟುಂಬಸ್ಥರು ದೂರಿದ್ದಾರೆ.

ಇದನ್ನೂ ಓದಿರಿ: ಬಿಕ್ಕಟ್ಟಿನಲ್ಲಿ ಬಿಜೆಪಿ-ಶಿವಸೇನೆ ಮೈತ್ರಿ; ಚರ್ಚೆಗೆ ಗ್ರಾಸವಾದ ಸಿಎಂ ಶಿಂಧೆ ಪುತ್ರನ ರಾಜೀನಾಮೆ ಹೇಳಿಕೆ

ಸಾಗರ ತಾಲೂಕಿನ ವನಶ್ರೀ ವಸತಿ ಶಾಲೆಯಲ್ಲಿ ಸ್ಥಳೀಯ ಬಡ ಹೆಣ್ಣು ಮಕ್ಕಳಿಗೆ ಉಚಿತವಾಗಿ ಶಿಕ್ಷಣ ನೀಡಲಾಗುತ್ತಿದೆ ಎಂದು ವರದಿಯಾಗಿದೆ.

ಇಲ್ಲಿ ಆರೋಗ್ಯ ಸಮಸ್ಯೆ ಆಗಿದ್ದರೂ, ಹಾಸ್ಟೇಲ್​ನಲ್ಲಿರುವ ಸಿಬ್ಬಂದಿ ಮತ್ತು ವಾರ್ಡನ್‌ಗಳು ನಿರ್ಲಕ್ಷ್ಯ ಮಾಡಿದ್ದಾರೆ. ಈ ಹಿನ್ನಲೆಯಲ್ಲಿ ವಿದ್ಯಾರ್ಥಿನಿಯ ಸಾವು ಹಾಸ್ಟೇಲ್​ನಲ್ಲೇ ಆಗಿದೆ ಎನ್ನುವುದು ಕುಟುಂಬಸ್ಥರ ವಾದವಾಗಿದೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿನಿಯ ಅನುಮಾನಸ್ಪದ ಸಾವು ಕುರಿತು ಕೇಸ್ ದಾಖಲಾಗಿದೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ವಸತಿ ಶಾಲೆ ಮುಖ್ಯಸ್ಥ ಎಚ್‌.ಪಿ. ಮಂಜಪ್ಪ, “ಭಾನುವಾರ 8ನೇ ತರಗತಿಗೆ ತೇಜಸ್ವಿನಿ ಅವರನ್ನು ದಾಖಲಿಸಿಕೊಳ್ಳಲಾಗಿತ್ತು. ಇವರ ಜತೆ ಇವರದೇ ಕುಟುಂಬದ 7 ಮಕ್ಕಳನ್ನು ಸೇರಿಸಿಕೊಳ್ಳಲಾಗಿತ್ತು. ಬುಧವಾರ ರಾತ್ರಿ ವಿದ್ಯಾರ್ಥಿನಿ ಸುಸ್ತು ಎಂದು ಹೇಳಿದ್ದಾಳೆ. ಕೂಡಲೇ ಶಾಲೆಯಲ್ಲಿ ಸೂಕ್ತ ಚಿಕಿತ್ಸೆ ನೀಡಲಾಗಿದೆ. ಗುರುವಾರ ಬೆಳಗ್ಗೆ ತೇಜಸ್ವಿನಿ ರೂಮಿನಲ್ಲಿ ವಾಂತಿ ಮಾಡಿಕೊಂಡಿದ್ದಾಳೆ. ಸುದ್ದಿ ತಿಳಿಯುತ್ತಿದ್ದಂತೆ ಆಕೆಯನ್ನು ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಲಾಯಿತು. ವಿದ್ಯಾರ್ಥಿನಿ ಶಾಲೆಗೆ ಬಂದು ಐದು ದಿನವಾಗಿದ್ದರಿಂದ ಹೆಚ್ಚಿನ ಮಾಹಿತಿ ನಮಗಿಲ್ಲ. ನಮ್ಮ ವಸತಿ ಶಾಲೆಯಲ್ಲಿ ಯಾವುದೇ ಲೋಪದೋಷಗಳಾಗಿಲ್ಲ. ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ಸತ್ಯ ತಿಳಿಯಲಿದೆ” ಎಂದು ತಿಳಿಸಿದ್ದಾರೆ.

ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಆಸ್ಪತ್ರೆಗೆ ಭೇಟಿ ನೀಡಿದ್ದರು. ಸೂಕ್ತ ತನಿಖೆ ನಡೆಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...