Homeಅಂಕಣಗಳುನಾನಂತೂ ನಿವೃತ್ತಿಯಾಗಲ್ಲ ಕಂಡ್ರೀ!

ನಾನಂತೂ ನಿವೃತ್ತಿಯಾಗಲ್ಲ ಕಂಡ್ರೀ!

- Advertisement -
- Advertisement -

ಮೋದಿ ಸರಕಾರ ಒಂಬತ್ತು ವರ್ಷ ತುಂಬಿಸಿದ ಸಂತಸವನ್ನು, ದೇಶದ ತುಂಬ ಸಭೆ ಸಮಾರಂಭ ಯಜ್ಞ ಹೋಮ ಹವನ ಇತ್ಯಾದಿ ವೈದಿಕಾಚರಣೆಗಳಿಂದ ವಿಜೃಂಭಿಸಲು ತಯಾರಾಗುತ್ತಿರುವಾಗಲೇ ಭೀಕರ ರೈಲ್ವೆ ಅಪಘಾತ ಸಂಭವಿಸಿದೆ. ಎದೆ ನಡುಗಿಸುವ ಈ ಘಟನೆಯಿಂದ ದೇಶವೇ ಬೆಚ್ಚಿಬಿದ್ದಿದೆ. ಈ ಘಟನೆಗೆ ಕಾರಣರ್‍ಯಾರು, ಹೊಣೆಗಾರರಾರು ಎಂಬ ಚರ್ಚೆಯು ಅವ್ಯಾಹತವಾಗಿ ನಡೆದಿದೆ. ಇದು ಒಂದೆಡೆಯಾದರೆ ಮೋದಿಯವರ ಒಂಬತ್ತು ವರ್ಷದ ಸಂಭ್ರಮದ ಸಮಯದಲ್ಲಿ ಸಂಭವಿಸಿದ ಸಾವುಗಳನ್ನು ನೆನೆಯುವುದಾದರೆ: 2019ರಲ್ಲಿ ನಡೆದ ಘಟನೆಯಲ್ಲಿ, 40 ಜನ ಸೈನಿಕರ ಬಲಿದಾನಕ್ಕೆ ಸರಕಾರದ ನಿರ್ಲಕ್ಷವೇ ಕಾರಾಣವೆಂದು ಜಮ್ಮುಕಾಶ್ಮೀರದ ಮಾಜಿ ರಾಜ್ಯಪಾಲರು ಬಹಿರಂಗಂಪಡಿಸಿದ್ದಾರೆ; ನಂತರ ಕೃಷಿಕಾಯ್ದೆ ಜಾರಿಯನ್ನು ವಿರೋಧಿಸಿ ದೆಹಲಿ ಗಡಿಗಳಲ್ಲಿ ನಡೆದ ರೈತ ಪ್ರತಿಭಟನೆಯಲ್ಲಿ 750 ಜನ ರೈತರು ಅಸುನೀಗಿದರು. ಆ ಸಾವುಗಳ ಬಗ್ಗೆ ಮಾತನಾಡದ ಪ್ರಧಾನಿಯವರು, ಶಿವಮೊಗ್ಗ ಸುಬ್ಬಣ್ಣ ಎಂಬ ಗಾಯಕರೊಬ್ಬರು ತೀರಿಕೊಂಡಾಗ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಸಾವಿನಂಚಿನಲ್ಲಿದ್ದ ಸಿದ್ದೇಶ್ವರ ಸ್ವಾಮಿಗಳಿಗೆ ಫೋನ್ ಮಾಡಿದರು; ಆದರೆ ಸಿದ್ದೇಶ್ವರರಿಗೆ ಮಾತನಾಡಲು ಸಾಧ್ಯವಾಯಿತೋ ಇಲ್ಲವೋ! ಇವೆಲ್ಲಾ ಘಟನೆ ಪ್ರಧಾನಿಯ ಒಂಬತ್ತು ವರ್ಷದ ಸಂಭ್ರಮದಲ್ಲಿ ನೆನೆಸುವ ಘಟನೆಗಳಂತಲ್ಲಾ, ಥೂತ್ತೇರಿ.

*****

ಕಾಂಗ್ರೆಸ್ ಪಕ್ಷ ಚುನಾವಣಾ ಸಮಯದಲ್ಲಿ ಘೋಷಣೆ ಮಾಡಿದ ಗ್ಯಾರಂಟಿಗಳನ್ನು, ಸರ್ಕಾರ ರಚಿಸಿದ ಮೇಲೆ ಜಾರಿ ಮಾಡಲು ತೆಗೆದುಕೊಂಡ ಹದಿನೈದು ದಿನಗಳ ಅವಧಿಯಲ್ಲಿ, ಮನೆಯಿಂದ ಈಚೆಗೆದ್ದು ಬಂದ ಸೋತ ಬಿಜೆಪಿ ಎಮ್ಮೆಲ್ಲೆಗಳು, ಗ್ಯಾರಂಟಿಗಳನ್ನು ತಕ್ಷಣವೇ ಜಾರಿ ಮಾಡದಿದ್ದರೆ ಹೋರಾಟ ಮಾಡುತ್ತೇವೆ ಎಂದಿದ್ದರು. ದಳದ ಕುಮಾರಣ್ಣನವರು ಬೀದಿಗಿಳಿಯುವ ಬೆದರಿಕೆ ಹಾಕಿದರು. ಇದಾವುದಕ್ಕೂ ಕಿವಿಗೊಡದ ಸಿದ್ದು ಟೀಮು ಗ್ಯಾರಂಟಿಗಳನ್ನು ಜಾರಿ ಮಾಡಿಯೇಬಿಟ್ಟಿತು. ಇದರಿಂದ ಆಘಾತಗೊಂಡಂತಾದ ಟಿ.ವಿ ಮಾಧ್ಯಮದವರು ಸರಕಾರವನ್ನು ಅಕಾರಣವಾಗಿ ಟೀಕಿಸುವ ಅಡ್ನಾಡಿಗಳನ್ನು ತಂದು ಕೂರಿಸಿಕೊಂಡು ಎರಡು ಸಾವಿರ ರೂಗಳಿಂದ ಅತ್ತೆ ಸೊಸೆ ಜಗಳ ಶುರುವಾಗುತ್ತೆ, ಲಕ್ಷ ರೂಗಳ ಸಂಬಳ ತೆಗೆಯುವ ಕೆಲ ಮಹಿಳೆಯರಿಗೆ 2000 ಕೊಡುವುದು ಎಷ್ಟು ಸರಿ, ಈ ಭಾಗ್ಯಗಳಿಂದ ದೇಶ ದಿವಾಳಿಯಾಗುತ್ತೆ, ಇವುಗಳ ಮುಂದುವರಿಕೆ ಸಾಧ್ಯವಿಲ್ಲ ಎಂದು ಬೊಬ್ಬೆ ಹೊಡೆದವಲ್ಲ. ಸಾಮಾನ್ಯವಾಗಿ ಬಿಜೆಪಿ ಮನಸ್ಸುಗಳು ಬಡವರು ಸಫಲರಾಗುವುದನ್ನು ಸಹಿಸುವುದಿಲ್ಲವಂತಲ್ಲಾ, ಥೂತ್ತೇರಿ.

*****

ಬಿಜೆಪಿ ಮನಸ್ಸುಗಳಿಗೆ ಗ್ಯಾರಂಟಿ ಭಾಗ್ಯಗಳನ್ನು ಏಕೆ ಸಹಿಸಲಾಗುವುದಿಲ್ಲ ಎಂದರೆ ಅವರ ಧರ್ಮಗುರುವಾದ ಗೋಳವಲಕರ ಬಡವರ ಉದ್ಧಾರದ ವಿರೋಧಿ; ಬಡವರು ಅದರಲ್ಲೂ ಶೋಷಿತಜಾತಿ ಜನರಿಗೆ ಯಾವ ಸವಲತ್ತನ್ನು ಕೊಡಬಾರದು, ಅವರು ಉನ್ನತ ಹುದ್ದೆಗೆ ಬರದಂತೆ ನೋಡಿಕೊಳ್ಳಬೇಕು, ಅವರು ಎ.ಸಿ ಮತ್ತು ಡಿ.ಸಿ ಹಾಗೂ ತಹಸೀಲ್ದಾರನಾಗದಂತೆ ನೋಡಿಕೊಳ್ಳಬೇಕು, ನಿಮ್ಮನ್ನ ನೋಡಿದ ಕೂಡಲೇ ಅವರು ನಿಮ್ಮ ಪಾದ ನೋಡುತ್ತ ನಿಲ್ಲಬೇಕು, ಅದು ಬಿಟ್ಟು ಸರಿಸಮಾನರಾಗಿ ವರ್ತಿಸಬಾರದು, ಬಡವರು ಮತ್ತು ಕೆಳಜಾತಿಗಳು ಎಂದಿನವರೆಗೆ ಬಡವರಾಗಿರುತ್ತಾರೊ ಅಲ್ಲಿಯವರೆಗೆ ನೀವು ಸುಖವಾಗಿರುತ್ತೀರಿ ತಿಳಿಯಿರಿ ಎಂದು ಆತ ಹೇಳಿದ್ದಾನೆ. ಈ ವೇದವಾಕ್ಯ ಅವರ ಬರವಣಿಗೆಯಲ್ಲಿ ದಾಖಲಾಗಿದೆ. ಅನುಮಾನಗೊಂಡವರು ಗೋಳವಲಕರನನ್ನ ಓದಬಹುದು. ಅದನ್ನು ಓದಿಕೊಂಡ ಬಿಜೆಪಿಗಳು ಗ್ಯಾರಂಟಿ ಜಾರಿಯಾದಂದಿನಿಂದ ನಿದ್ದೆಯನ್ನೆ ಕಳೆದುಕೊಂಡು, ಗ್ಯಾರಂಟಿ ನಂಬಬೇಡಿ ಎಂದು ಕೂಗಾಡುತ್ತ ತಿರುಗುತ್ತಿವೆಯಂತಲ್ಲಾ, ಥೂತ್ತೇರಿ.

*****

ರಾಜಕಾರಣದಲ್ಲಿದ್ದರೆ ಮಾತ್ರ ಎಲ್ಲ ರೀತಿಯ ಮಜಗಳನ್ನೂ ಮಾಡುತ್ತ, ಆಸ್ತಿಪಾಸ್ತಿ ಗಳಿಸುತ್ತ, ಅದನ್ನು ನಿಭಾಯಿಸುತ್ತಾ ಇರಬಹುದುದೆಂದು ನಂಬಿರುವ ರಾಜಕಾರಣಿಗಳ ಪೈಕಿ ಮುಂಚೂಣಿಯಲ್ಲಿರುವ ಹೊನ್ನಾಳಿ ರೇಣುಕಾಚಾರಿ ಚುನಾವಣಾ ಫಲಿತಾಂಶ ಬಂದಕೂಡಲೇ ಸಿಡಿಲು ಬಡಿದವನಂತೆ ರಾಜಕೀಯಕ್ಕೆ ನಿವೃತ್ತಿ ಘೋಷಿಸಿ ಹೊನ್ನಾಳಿಯ ಜೊತೆಗೆ ಇಡೀ ನಾಡೇ ಬೆಚ್ಚುವಂತೆ ಮಾಡಿಬಿಟ್ಟರಲ್ಲಾ. ಬಿಜೆಪಿಯ ಜೊತೆಗೆ ಇಡೀ ನಾಡನ್ನೇ ಡಲ್ಲು ಮಾಡಿದ ರೇಣುಕಾಚಾರಿಯನ್ನು ಮಾತನಾಡಿಸಿ ಸಾಂತ್ವಾನ ಹೇಳುವುದು ನಮ್ಮ ಕರ್ತವ್ಯ ಎಂದು ಭಾವಿಸಿ ಫೋನ್ ಮಾಡಲಾಗಿ ರಿಂಗಾಯ್ತು. ರಿಂಗ್‌ಟೋನ್: “ನೀವು ಪ್ರಯತ್ನಿಸುತ್ತಿರುವ ಗ್ರಾಹಕ ವ್ಯಾಪ್ತಿ ಪ್ರದೇಶದಿಂದ ಹೊರಗಿದ್ದಾರೆ”; ಮತ್ತೆಮತ್ತೆ ಫೋನ್ ಮಾಡಲಾಗಿ ರಿಂಗಾಯ್ತು. “ಕ್ಯಂಚಾಲೊ ಮಚ್ಚಾಲೊ ಯಂಗವುಲಾ ನಿನ್ ಡವ್‌ಗಳು”..

“ಹಲೊ ಯಾರ್ರಿ?”

“ನಾನು ಸಾರ್ ಯಾಹು. ನಿಮ್ಮ ಬಾಮೈದುನ ಗೆಳೆಯ.”

“ಬಾಮೈದನ ಗೆಳೆಯ ಆಗಿದ್ರೆ ಅವುನಿಗೆ ಫೋನ್ ಮಾಡ್ರಿ.”

“ನಿಮ್ಮತ್ರ ಒಂದೆರಡು ಮಾತಾಡಬೇಕು ಸಾರ್.”

“ಅದೇನು ಜಲ್ದಿ ಹೇಳ್ರಿ.”

“ಬ್ಯುಸಿನಾ ಸಾರ್?”

“ಇಲ್ಲಿ ಕ್ರಿಕೆಟ್ ಆಡ್ತಾಯಿದ್ದಿನಿ ಕಂಡ್ರಿ.”

“ಎಲ್ಲಿ ಸಾರ್?”

“ನಮ್ಮೂರ ಸ್ಕೂಲು ಮೈದಾನದಲ್ಲಿ.”

“ಯಾರ ಜೊತೆ ಸಾರ್?”

“ಇನ್ಯಾರು.. ನಮ್ಮೂರ ಹುಡುಗರ ಜೊತೆ ಆಡ್ತಾಯಿದ್ದಿನಿ ಕಂಡ್ರೀ.”

“ನಿಜಕ್ಕೂ ನೀವು ಅಪರೂಪದ ರಾಜಕಾರಣಿ ಸಾರ್. ಮಂಡಿ ಉದ್ದ ನೀರಲ್ಲಿ ತೆಪ್ಪ ನಡುಸ್ತಿರಿ. ಸಣ್ಣುಡಗರ ಜೊತೆ ಕ್ರಿಕೆಟ್ ಆಡ್ತಿರಿ. ರಾಜಕಾರಣಿ ಈ ತರ ತಮಾಸಿಯಾಗಿರಬೇಕು ಸಾರ್.”

“ನಾನು ಯಾವತ್ತು ತಮಾಸಿ ಕಂಡ್ರಿ. ಯಾವುದ್ನೂ ಸೀರಿಯಸ್ಸಾಗಿ ತಗಳದಿಲ್ಲ.”

“ತಗೊಬಾರ್ದು ಸಾ. ಅಂಗೆ ತಗಂಡಿದ್ರೆ ಇಷ್ಟೊತ್ತಿಗೆ ಮನೆ ಬಿಟ್ಟು ಎಲ್ಲೋ ಇರ್ತಿದ್ರಿ ಅಲ್ಲುವಾ ಸರ್?”

“ಮುಗದೋದ ಕತೆನೆಲ್ಲ ನಾನೇ ಯೋಚನೆ ಮಾಡ್ತಯಿಲ್ಲ, ಇನ್ನ ನೀವ್ಯಾಕೆ ತಲೆ ಕೆಡಿಸಿಕೊಳ್ತಿರಿ.”

“ಈಶ್ವರಪ್ಪ ಅಂಥ ವ್ಯಕ್ತಿ ಮತ್ತೆ ನೀವು ಜೊತೆಲಿ ಸೋತರಿ; ಅವುರು ಚುನಾವಣಾ ರಾಜಕೀಯದಿಂದ ನಿವೃತ್ತರಾದ್ರೆ ನೀವು ರಾಜಕಾರಣದಿಂದ್ಲೇ ನಿವೃತ್ತರಾದರಲ್ಲಾ ಸಾರ್.”

“ರೀ ನಾನಿನ್ನೂ ನಿವೃತ್ತಿಯಾಗಿಲ್ಲ ಕಂಡ್ರಿ.”

“ಮತ್ತೆ ಘೋಷಣೆ ಮಾಡಿದರಲ್ಲಾ ಸಾರ್?”

“ಅದು ರಿಜಲ್ಟ್ ಬಂದಾಗ ಅಂಗಂದೆ; ಈಗ ನಮ್ಮ ಕ್ಷೇತ್ರದ ಜನತೆ ನೀವು ನಿವೃತ್ತಿಯಾದ್ರೆ ನಮ್ಮ ಕತೆಯೇನು ಅಂತಾವುರೆ..”

“ಗೆದ್ದಿರೋರು ನೋಡಕತರೆ ಬುಡಿ ಸಾರ್.”

“ಗೆದ್ದಿರೋರು ಅವುರ ಕಡಿಯೋರ್ನ ನೋಡಕತರೆ ಕಂಡ್ರಿ. ನನ್ನ ಪಾಲೊಯರ್ಸ್‌ನ ಯಾರು ರಕ್ಷಣೆ ಮಾಡ್ತರ್ರಿ?”

“ರಕ್ಷಣೆ ಮಾಡಬೇಕಾದ ಸ್ಥಿತಿಯಿದಿಯಾ ಸಾರ್?”

“ಇಲ್ಲಿನ ಮುಸ್ಲಿಮರಿಗೂ ನನಿಗೂ ಆಗಲ್ಲ ಕಂಡ್ರಿ.”

“ಶಾಸಕನಾದವನು ಎಲ್ಲಾ ಜನಾಂಗದ ರಕ್ಷಕನಾಗಬೇಕು ಸಾರ್. ಅದು ಬಿಟ್ಟು ಒಂದು ಜನಾಂಗನ ಅಪಾಯಕಾರಿಗಳು ದೇಶದ್ರೋಹಿಗಳು, ನಂಬಿಕೆಗೆ ಯೋಗ್ಯರಲ್ಲ ಅಂತ ಸುಳ್ಳುಸುಳ್ಳೆ ಬೈದರೆ ಅವರ ಮನಸ್ಸಿಗೆ ನೋವಾಗಲ್ಲಾವಾ ಸಾರ್?”

“ನೋವಾಗೋ ಅಂತ ಕೆಲಸ ಯಾಕ್ ಮಾಡಬೇಕ್ರಿ?”

“ಹೊನ್ನಾಳಿಲಿ ಯಾರಿಗೂ ಆಗದೆಯಿರೊ ಸಮಸ್ಯೆ ನಿಮಗ್ಯಂಗಾಯ್ತು ಸಾರ್? ಅಲ್ಲಿನ ಮುಸ್ಲಿಮರು, ಕುರುಬರು, ಲಿಂಗಾಯತರು ಮತ್ತು ಇತರೆ ಶೋಷಿತ ಜಾತಿಗಳ ಜೊತೆ ಆರಾಮಾಗಿರುವಾಗ, ನೀವು ಬಂದು ಈ ಮುಸ್ಲಿಮರ ನಂಬಬೇಡಿ ಅವರ ಮಸೀದಿಲಿ ವೆಪನ್ನಿವೆ, ಮಾರಕಾಸ್ತ್ರಗಳಿವೆ ಅಂತ ರೈಲು ಬುಟ್ಟು ಬೊಬ್ಬೆ ಹೊಡೆದರಲ್ಲಾ, ಇದು ಹೊನ್ನಾಳಿ ಜನಗಳಿಗೆ ಸುಳ್ಳು ಅನ್ನಸ್ತು. ಅದಕ್ಕೆ ತಕ್ಕ ಶಿಕ್ಷೆ ಅಂದ್ರೆ ನಿಮ್ಮನ್ನ ಚುನಾವಣೆಲಿ ಸೋಲುಸೋದನ್ನ ಯಲ್ಲ ಜನಾಂಗ ಮಾಡಿ ತೋರಿಸಿದಾವೆ ಸಾರ್. ಈ ಟೈಮಲ್ಲಿ ನಿಮ್ಮ ನಿವೃತ್ತಿ ಘೋಷಣೆ ಬಹಳ ಸೂಕ್ತವಾಗಿದೆ ಸಾರ್. ನಿಜಕ್ಕೂ ಪ್ರಾಯಶ್ಚಿತ್ತ ಅಂದ್ರೆ ಇದೆನೆ.”

“ನಾನು ನಿವೃತ್ತಿಯಾಗಿಲ್ಲ ಕಣ್ರಿ. ಮತ್ತೆ ಚುನಾವಣೆಗೆ ಬರ್ತಿನಿ.”

“ಜನ ಪುನಹ ಸೋಲಿಸಿದ್ರೆ?”

“ಆಗ ಬೇಕಾದ್ರೆ ನಿವೃತ್ತಿ ಘೋಷಣೆ ಮಾಡ್ತಿನಿ.”

“ಥೂತ್ತೇರಿ.”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...