Homeಕರ್ನಾಟಕಗ್ಯಾರಂಟಿಗಳು ಹಕ್ಕುಗಳೋ? ಆರ್ಥಿಕ ಹೊರೆಯೋ? ಉಳ್ಳವರು ಹೇಳುತ್ತಿರುವ ಬಿಟ್ಟಿಗಳೋ?

ಗ್ಯಾರಂಟಿಗಳು ಹಕ್ಕುಗಳೋ? ಆರ್ಥಿಕ ಹೊರೆಯೋ? ಉಳ್ಳವರು ಹೇಳುತ್ತಿರುವ ಬಿಟ್ಟಿಗಳೋ?

- Advertisement -
- Advertisement -

ಕರ್ನಾಟಕದಲ್ಲಿ ಜನರು ಆಯ್ಕೆ ಮಾಡಿದ ಕಾಂಗ್ರೆಸ್‌ ಪಕ್ಷ ಅಧಿಕ್ಕಾರಕ್ಕೇರಿದೆ. ಚುನಾವಣಾ ಪೂರ್ವ ಭರವಸೆಗಳಾದ ತನ್ನ ಮುಖ್ಯ ಐದು ಗ್ಯಾರಂಟಿಗಳನ್ನು ಜಾರಿಗೊಳಿಸಲು ದಿನಾಂಕ ಗೊತ್ತು ಮಾಡಿದೆ. ಆದರೆ ಚುನಾವಣೆಯ ನಂತರ ವಿರೋಧ ಪಕ್ಷಗಳು ಮಾಡುತ್ತಿರುವ ವಾದಗಳು ಅತ್ಯಂತ ಮುಟ್ಟಾಳುತನದಿಂದ ಕೂಡಿವೆ. ಇದಕ್ಕೆ ತಕ್ಕಂತೆ ಬಿಜೆಪಿ ಪರವಾಗಿನ ಕೆಲವು ಮಾಧ್ಯಮಗಳು ಸಹ, ಅವೈಜ್ಞಾನಿಕ ಹೇಳಿಕೆಗಳನ್ನು ಮುಂದಿಟ್ಟು ಜನರನ್ನು ಗೊಂದಲಕ್ಕೆ ತಳ್ಳುತ್ತಿವೆ.

ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿಗಳು ಜಾರಿಯಾದರೆ ರಾಜ್ಯ ದಿವಾಳಿ ಆಗುತ್ತದೆ ಎಂದು ಒಂದು ಕಡೆ ಹೇಳುವ ಬಿಜೆಪಿ ಮತ್ತೊಂದು ಗ್ಯಾರಂಟಿಗಳನ್ನು ಇನ್ನು ಏಕೆ ಜಾರಿಯಾಗಿಲ್ಲ? ಅವುಗಳಿಗೆ ಕಂಡಿಷನ್ ಏಕೆ ಎಂಬ ವಿರೋಧಭಾಸದ ಹೇಳಿಕೆಗಳನ್ನು ನೀಡುತ್ತಿದೆ. ಬಿಜೆಪಿ ಸಂಸದ ಪ್ರತಾಪ್ ಸಿಂಹ ಜೂನ್ ಒಂದರಿಂದ ಉಗ್ರ ಹೋರಾಟ ಮಾಡುತ್ತೇನೆ ಎಂದು ಹೇಳಿಕೆ ನೀಡಿದ್ದರು. ಸೋತಿರುವ ರೇಣುಕಾಚಾರ್ಯ ಮನೆ ಮನೆಗೆ ಹೋಗಿ ವಿದ್ಯುತ್ ಬಿಲ್ ಕಟ್ಟಬೇಡಿ ಎಂದು ಪ್ರಚೋದನೆ ನೀಡುತ್ತಿದ್ದಾರೆ. ಮಾಜಿ ಸಿಎಂ ಬೊಮ್ಮಾಯಿಯವರು ಮಾತ್ರ ಗ್ಯಾರಂಟಿ ಯೋಜನೆಗಳು ಜಾರಿಯಾದರೆ ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಡುತ್ತದೆ ಎನ್ನುತ್ತಾರೆ. ಇನ್ನು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಯವರು ಯಾವುದೇ ಕಂಡಿಷನ್ ಇಲ್ಲದೇ ಬಡವ ಶ್ರೀಮಂತ ಎಲ್ಲರಿಗೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಬೇಕು ಎಂದು ಆಗ್ರಹಿಸುತ್ತಿದ್ದಾರೆ. ಆದರೆ ಅವರು ಸಿಎಂ ಆಗಿದ್ದಾಗ ರೈತರ ಸಾಲ ಮನ್ನಾ ಮಾಡುವಾಗ ಏಕೆ ಕಂಡಿಷನ್‌ಗಳನ್ನು ಹಾಕಿದ್ದರು? ಇವರುಗಳ ದ್ವಿಮುಖ ನೀತಿಗೆ ಏನು ಹೇಳುವುದು?

ಗ್ಯಾರಂಟಿಗಳಿಂದ ರಾಜ್ಯಕ್ಕೆ ಆರ್ಥಿಕ ಹೊರೆಯೇ?

ಈ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಕರ್ನಾಟಕ ರಾಜ್ಯ ಸರ್ಕಾರಕ್ಕೆ ವಾರ್ಷಿಕ 50,000 ಕೋಟಿ ರೂಗಳು ತಗುಲುತ್ತದೆ. ಪಕ್ಕದ ಆಂಧ್ರ ಪ್ರದೇಶ ಸರ್ಕಾರವು ಕಳೆದ ನಾಲ್ಕು ವರ್ಷಗಳಿಂದ ಅಲ್ಲಿನ ಬಡಜನರ ಕಲ್ಯಾಣ ಯೋಜನೆಗಳಿಗಾಗಿ ಸುಮಾರು 2.12 ಲಕ್ಷ ಕೋಟಿ ರೂಗಳನ್ನು ಖರ್ಚು ಮಾಡಿದೆ. ಅಂದರೆ ಅಲ್ಲಿಯೂ ವಾರ್ಷಿಕ ಸರಾಸರಿ 53,000 ಕೋಟಿ ವೆಚ್ಚ ಮಾಡಿದೆ. ಅಂದ ಮಾತ್ರಕ್ಕೆ ಆಂಧ್ರ ಪ್ರದೇಶ ರಾಜ್ಯ ದಿವಾಳಿಯಾಗಿದೆಯೇ? ತೆಲಂಗಾಣ, ತಮಿಳುನಾಡು ಮತ್ತು ಕೇರಳ ರಾಜ್ಯಗಳು ಸಹ ಇದೇ ಮಾದರಿಯ ಕಲ್ಯಾಣ ಯೋಜನೆಗಳನ್ನು ಜಾರಿಗೊಳಿಸಿದರೂ ಅವು ಸದೃಢವಾಗಿವೆ ಎಂಬುದನ್ನು ಮರೆಯಬಾರದು.

ಆದರೆ ಸರ್ಕಾರ ಈ ಯೋಜನೆಗಳ ಜಾರಿಗಾಗಿ ಮತ್ತೆ ರಾಜ್ಯದ ಜನರ ಮೇಲೆ ತೆರಿಗೆ ಹಾಕುವುದು, ಕೆಲ ಇಲಾಖೆಗಳ ವೆಚ್ಚ ಕಡಿತ ಮಾಡುವುದನ್ನು ಮಾಡಬಾರದು. ಬದಲಿಗೆ 15ನೇ ಹಣಕಾಸು ಆಯೋಗದ ಶಿಫಾರಸ್ಸಿನಂತೆ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಿರುವ ಅನುವಾದ, ಜಿಎಸ್‌ಟಿ ಪಾಲನ್ನು ಗಟ್ಟಿಯಾಗಿ ಕೇಳಿ ಪಡೆದುಕೊಳ್ಳಬೇಕು. ಜೊತೆಗೆ ದೇಶದ ಅತಿ ಶ್ರೀಮಂತರ, ಕ್ರೋನಿ ಬಂಡವಾಳಶಾಹಿಗಳ ಮೇಲೆ ಸಂಪತ್ತಿನ ತೆರಿಗೆ ವಿಧಿಸಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಬೇಕು. ರಾಜ್ಯದಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರ ಮತ್ತು ಸೋರಿಕೆಯಾಗದಂತೆ ತಡೆಯಬೇಕಿದೆ.

ಅನೇಕ ಆರ್ಥಿಕ ತಜ್ಞರು ರಾಜ್ಯ ಸರ್ಕಾರ ಜಾರಿಮಾಡುವ ಗ್ಯಾರಂಟಿ ಯೋಜನೆಗಳು ರಾಜ್ಯದ ಆರ್ಥಿಕ ಪ್ರಗತಿಗೆ ಸಹಕಾರಿಯಾಗಲಿವೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಏಕೆಂದರೆ ಜಿಎಸ್‌ಟಿ, ನೋಟು ರದ್ಧತಿ, ಕೋವಿಡ್ ಸಾಂಕ್ರಾಮಿಕ ಕಾರಣದಿಂದ ಜನರ ಆರ್ಥಿಕ ಸ್ಥಿತಿ ಕುಸಿದಿದ್ದು, ಕೊಳ್ಳುವ ಶಕ್ತಿ ಕಡಿಮೆಯಾಗಿದೆ. ಹಾಗಾಗಿ ಈ ಯೋಜನೆಗಳಿಂದ ಜನರ ಕೈಗೆ ನೇರವಾಗಿ ಹಣ ಸಿಕ್ಕರೆ ಅಥವಾ ಉಚಿತ ವಿದ್ಯುತ್, ಅಕ್ಕಿ, ಬಸ್‌ಪಾಸ್‌ನಿಂದ ಅವರ ಹಣ ಉಳಿದರೆ ಅದನ್ನು ಬೇರೆ ವಸ್ತುಗಳನ್ನು ಕೊಳ್ಳಲು ಬಳಸುತ್ತಾರೆ. ಅವರ ಅಗತ್ಯ ವಸ್ತುಗಳನ್ನು ಕೊಳ್ಳಲು ಮುಂದಾಗುತ್ತಾರೆ. ಆಗ ಹಣದ ವಹಿವಾಟು ಹೆಚ್ಚಾಗುತ್ತದೆ. ಬೇಡಿಕೆ ಹೆಚ್ಚಾದಂತೆ ಉತ್ಪಾದನೆ ಹೆಚ್ಚಾಗುತ್ತದೆ. ಉದ್ಯೋಗ ಸೃಷ್ಟಿಯಾಗುತ್ತದೆ. ಉದ್ಯೋಗ ಸಿಕ್ಕಲ್ಲಿ ಜನ ಮತ್ತೆ ಖರ್ಚು ಮಾಡುತ್ತಾರೆ. ಜಿಡಿಪಿ – ತೆರಿಗೆ ಸಂಗ್ರಹ ಹೆಚ್ಚಳವಾಗುತ್ತದೆ.. ಹೀಗೆ ಆರ್ಥಿಕ ಸರಪಳಿ ಚೇತರಿಸಿಕೊಳ್ಳುತ್ತದೆ ಎಂಬುದು ಒಂದು ವಾದ.

ಉಳ್ಳವರು ಹೇಳುವಂತೆ ಇವು ಬಿಟ್ಟಿ ಭಾಗ್ಯಗಳೇ?

2021-22ರ ಹಣಕಾಸು ವರ್ಷದಲ್ಲಿ ಆದಾಯ ತೆರಿಗೆಯಾಗಿ ಭಾರತೀಯರು ಪಾವತಿಸಿದ 6.73 ಲಕ್ಷ ಕೋಟಿ ರೂಗಳಿಗೆ ಹೋಲಿಸಿದರೆ, ಪರೋಕ್ಷ ತೆರಿಗೆಯಿಂದ 20.73 ಲಕ್ಷ ಕೋಟಿ ರೂ ಸಂಗ್ರಹಿಸಲಾಗಿದೆ. ಅಂದರೆ ಈ ದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಬಡವರು ಮತ್ತು ಮಧ್ಯಮ ವರ್ಗದವರು ಕಟ್ಟುವ ಪರೋಕ್ಷ ತೆರಿಗೆಯ ಪಾಲು ಬೃಹತ್ ಪ್ರಮಾಣದಲ್ಲಿದೆ. ಈ ದೇಶದ ಶೇ.50 ರಷ್ಟು ಬಡವರು ಶೇ.64.3% ರಷ್ಟು ಜಿಎಸ್‌ಟಿ ಕಟ್ಟುತ್ತಿದ್ದಾರೆ ಎಂದು ಆಕ್ಸ್‌ಫಾಮ್ ವರದಿ ಹೇಳಿದೆ.

ಭಾರತದ ಕೇಂದ್ರ ಸರ್ಕಾರ ಮತ್ತು ಎಲ್ಲಾ ರಾಜ್ಯಗಳ ತೆರಿಗೆ ಆದಾಯದಲ್ಲಿ ಶೇ.67 ರಷ್ಟು ಭಾಗ ಪರೋಕ್ಷ ಭಾಗದಿಂದ ಬರುತ್ತದೆ.  ಕಾರ್ಪೋರೇಟ್ ಮತ್ತು ನೇರ ಆದಾಯ ತೆರಿಗೆ 33% ಬರುತ್ತದೆ. ಅದರಲ್ಲಿಯೂ ಈ 33% ತೆರಿಗೆಯನ್ನು ಕೇವಲ ಶ್ರೀಮಂತ ಉದ್ಯಮಿಗಳು ಮಾತ್ರ ಕಟ್ಟುವುದಿಲ್ಲ. ಬದಲಿಗೆ ಸಂಬಳ ಪಡೆಯುವ ಮಧ್ಯಮ ವರ್ಗದ ಜನರು ಸಹ ಆದಾಯ ತೆರಿಗೆಯ ಮೂಲಕ ಪ್ರತ್ಯಕ್ಷ ತೆರಿಗೆ ಕಟ್ಟುತ್ತಾರೆ. ಒಟ್ಟಾರೆಯಾಗಿ ಹೇಳುವುದಾದರೆ ಈ ದೇಶದಲ್ಲಿ ಹೆಚ್ಚಿನ ತೆರಿಗೆ ಕಟ್ಟುವವರು ಬಡವರೆ ಹೊರತು ಶ್ರೀಮಂತರಲ್ಲ. ಹಾಗಾಗಿ ಬಡವರ ಹಣದಿಂದಲೇ ಈ ದೇಶ ನಡೆಯುತ್ತಿರುವಾಗ ಅವರಿಗೆ ಸರ್ಕಾರ ನೀಡುವ ಯೋಜನೆಗಳು ಉಚಿತವಲ್ಲ, ಬದಲಿಗೆ ಅವರ ಹಕ್ಕು ಎಂಬುದನ್ನು ಮರೆಯಬಾರದು.

ಯಾವುದೇ ಪ್ರದೇಶದ ಆರ್ಥಿಕ ಸ್ಥಿತಿಗತಿಗಳು ಸುಧಾರಿಸಬೇಕಾದರೆ, ಅವರಿಗೆ ಮೂಲಭೂತ ಅವಶ್ಯಕತೆಗಳನ್ನು ಒದಗಿಸುವುದು ಸರ್ಕಾರದ ಕರ್ತವ್ಯ. ಆದರೆ ಇಂದು ಮೂಲಭೂತ ಹಕ್ಕುಗಳಾದ ಉಚಿತ ಗುಣಮಟ್ಟದ ಶಿಕ್ಷಣ ಮತ್ತು ಆರೋಗ್ಯ ವ್ಯಾಪಾರ ಆಗಿರುವುದು ದುರಂತ. ಹಾಗಾಗಿಯೇ ಜನರು ತಮ್ಮ ದುಡಿಮೆಯ ಬಹುತೇಕ ಪಾಲನ್ನು ತಮ್ಮ ಮಕ್ಕಳ ಶಿಕ್ಷಣ ಮತ್ತು ಕುಟುಂಬದ ಆರೋಗ್ಯಕ್ಕಾಗಿ ವಿನಿಯೋಗಿಸುತ್ತಿದ್ದಾರೆ. ಹಾಗಾಗಿ ಅವು ಸದಾ ಬಡತನದಲ್ಲಿಯೇ ಉಳಿಯಬೇಕಾಗಿದೆ. ಹಾಗಾಗಿ ಗ್ಯಾರಂಟಿ ಯೋಜನೆಗಳಷ್ಟೇ ಸಾಲುವುದಿಲ್ಲ. ಬದಲಿಗೆ ಉಚಿತ ಶಿಕ್ಷಣ, ಸುಭದ್ರ ಉದ್ಯೋಗ, ಉಚಿತ ಆರೋಗ್ಯದಂತಹ ಮೂಲಭೂತ ಬದಲಾವಣೆಗಳನ್ನು ತರುವ ಯೋಜನೆಗಳು ಜಾರಿಯಾಗಬೇಕಿದೆ. ಅವುಗಳು ಜಾರಿಯಾಗುವಂತೆ ವಿರೋಧ ಪಕ್ಷಗಳು ದನಿಯೆತ್ತಬೇಕೆ ಹೊರತು ಬಡವರಿಗೆ ನೀಡುವ ಯೋಜನೆಗಳನ್ನು ವಿರೋಧಿಸುತ್ತಾ, ಗೊಂದಲ ಮೂಡಿಸಬಾರದು.

ಇನ್ನು ಈ ಐದು ಗ್ಯಾರಂಟಿಗಳನ್ನು ವಿರೋಧಿಸುವವರು ನಮ್ಮ ದೇಶದ ಹಸಿವಿನ ಸೂಚ್ಯಾಂಕವನ್ನು ಗಮನಿಸಿದ್ದಾರೆಯೇ? ಅಪೌಷ್ಟಿಕ ಮಕ್ಕಳನ್ನು ನೋಡಿದ್ದಾರೆಯೇ? ಹೋಗಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಯಾವತ್ತಾದರೂ ದನಿ ಎತ್ತಿದ್ದಾರೆಯೇ? ಇವು ಯಾವುದನ್ನು ಗಮನಿಸದೇ ಬಿಟ್ಟಿ ಭಾಗ್ಯ ಎಂದು ಕರೆಯುವುದು ಹೊಟ್ಟೆ ತುಂಬಿದವರ ಅಹಂಕಾರವಲ್ಲವೇ? ಇನ್ನು ಈ ಯೋಜನೆಗಳ ಹೆಚ್ಚಿನ ಅನುಕೂಲ ಮಹಿಳೆಯರಿಗೆ ಸಿಗುತ್ತಿದೆ. ಆದರೆ ಮಹಿಳೆಯರು ಮನೆಯ ಹೊಸ್ತಿಲು ದಾಟಬಾರದು ಎಂಬು ಪುರುಷಾಧಿಪತ್ಯ ತುಂಬಿಕೊಂಡ ಮನಸ್ಥಿತಿಗಳು ಈ ಯೋಜನೆಗಳನ್ನು ವಿರೋಧಿಸುತ್ತಿವೆ. ಇದು ಸಾಮಾಜಿಕ ಚಲನೆಗೆ ಮಾಡುವ ದ್ರೋಹ. ಮುಖ್ಯವಾಗಿ ಸ್ತ್ರೀ ವಿರೋಧದ ವಿಕೃತ ರೂಪಕ ಅನ್ನುವುದನ್ನು ರಾಜ್ಯವು ಮರೆಯುವುದಿಲ್ಲ.

ಇದನ್ನೂ ಓದಿ:ಮತದಾರರಿಗೆ ಕಾಂಗ್ರೆಸ್ ನೀಡಿದ ಐದು ಗ್ಯಾರಂಟಿಗಳು ಮತ್ತು ಆರ್ಥಿಕತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...