Homeಕರ್ನಾಟಕಗ್ಯಾರಂಟಿಗಳು ಹಕ್ಕುಗಳೋ? ಆರ್ಥಿಕ ಹೊರೆಯೋ? ಉಳ್ಳವರು ಹೇಳುತ್ತಿರುವ ಬಿಟ್ಟಿಗಳೋ?

ಗ್ಯಾರಂಟಿಗಳು ಹಕ್ಕುಗಳೋ? ಆರ್ಥಿಕ ಹೊರೆಯೋ? ಉಳ್ಳವರು ಹೇಳುತ್ತಿರುವ ಬಿಟ್ಟಿಗಳೋ?

- Advertisement -
- Advertisement -

ಕರ್ನಾಟಕದಲ್ಲಿ ಜನರು ಆಯ್ಕೆ ಮಾಡಿದ ಕಾಂಗ್ರೆಸ್‌ ಪಕ್ಷ ಅಧಿಕ್ಕಾರಕ್ಕೇರಿದೆ. ಚುನಾವಣಾ ಪೂರ್ವ ಭರವಸೆಗಳಾದ ತನ್ನ ಮುಖ್ಯ ಐದು ಗ್ಯಾರಂಟಿಗಳನ್ನು ಜಾರಿಗೊಳಿಸಲು ದಿನಾಂಕ ಗೊತ್ತು ಮಾಡಿದೆ. ಆದರೆ ಚುನಾವಣೆಯ ನಂತರ ವಿರೋಧ ಪಕ್ಷಗಳು ಮಾಡುತ್ತಿರುವ ವಾದಗಳು ಅತ್ಯಂತ ಮುಟ್ಟಾಳುತನದಿಂದ ಕೂಡಿವೆ. ಇದಕ್ಕೆ ತಕ್ಕಂತೆ ಬಿಜೆಪಿ ಪರವಾಗಿನ ಕೆಲವು ಮಾಧ್ಯಮಗಳು ಸಹ, ಅವೈಜ್ಞಾನಿಕ ಹೇಳಿಕೆಗಳನ್ನು ಮುಂದಿಟ್ಟು ಜನರನ್ನು ಗೊಂದಲಕ್ಕೆ ತಳ್ಳುತ್ತಿವೆ.

ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿಗಳು ಜಾರಿಯಾದರೆ ರಾಜ್ಯ ದಿವಾಳಿ ಆಗುತ್ತದೆ ಎಂದು ಒಂದು ಕಡೆ ಹೇಳುವ ಬಿಜೆಪಿ ಮತ್ತೊಂದು ಗ್ಯಾರಂಟಿಗಳನ್ನು ಇನ್ನು ಏಕೆ ಜಾರಿಯಾಗಿಲ್ಲ? ಅವುಗಳಿಗೆ ಕಂಡಿಷನ್ ಏಕೆ ಎಂಬ ವಿರೋಧಭಾಸದ ಹೇಳಿಕೆಗಳನ್ನು ನೀಡುತ್ತಿದೆ. ಬಿಜೆಪಿ ಸಂಸದ ಪ್ರತಾಪ್ ಸಿಂಹ ಜೂನ್ ಒಂದರಿಂದ ಉಗ್ರ ಹೋರಾಟ ಮಾಡುತ್ತೇನೆ ಎಂದು ಹೇಳಿಕೆ ನೀಡಿದ್ದರು. ಸೋತಿರುವ ರೇಣುಕಾಚಾರ್ಯ ಮನೆ ಮನೆಗೆ ಹೋಗಿ ವಿದ್ಯುತ್ ಬಿಲ್ ಕಟ್ಟಬೇಡಿ ಎಂದು ಪ್ರಚೋದನೆ ನೀಡುತ್ತಿದ್ದಾರೆ. ಮಾಜಿ ಸಿಎಂ ಬೊಮ್ಮಾಯಿಯವರು ಮಾತ್ರ ಗ್ಯಾರಂಟಿ ಯೋಜನೆಗಳು ಜಾರಿಯಾದರೆ ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಡುತ್ತದೆ ಎನ್ನುತ್ತಾರೆ. ಇನ್ನು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಯವರು ಯಾವುದೇ ಕಂಡಿಷನ್ ಇಲ್ಲದೇ ಬಡವ ಶ್ರೀಮಂತ ಎಲ್ಲರಿಗೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಬೇಕು ಎಂದು ಆಗ್ರಹಿಸುತ್ತಿದ್ದಾರೆ. ಆದರೆ ಅವರು ಸಿಎಂ ಆಗಿದ್ದಾಗ ರೈತರ ಸಾಲ ಮನ್ನಾ ಮಾಡುವಾಗ ಏಕೆ ಕಂಡಿಷನ್‌ಗಳನ್ನು ಹಾಕಿದ್ದರು? ಇವರುಗಳ ದ್ವಿಮುಖ ನೀತಿಗೆ ಏನು ಹೇಳುವುದು?

ಗ್ಯಾರಂಟಿಗಳಿಂದ ರಾಜ್ಯಕ್ಕೆ ಆರ್ಥಿಕ ಹೊರೆಯೇ?

ಈ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಕರ್ನಾಟಕ ರಾಜ್ಯ ಸರ್ಕಾರಕ್ಕೆ ವಾರ್ಷಿಕ 50,000 ಕೋಟಿ ರೂಗಳು ತಗುಲುತ್ತದೆ. ಪಕ್ಕದ ಆಂಧ್ರ ಪ್ರದೇಶ ಸರ್ಕಾರವು ಕಳೆದ ನಾಲ್ಕು ವರ್ಷಗಳಿಂದ ಅಲ್ಲಿನ ಬಡಜನರ ಕಲ್ಯಾಣ ಯೋಜನೆಗಳಿಗಾಗಿ ಸುಮಾರು 2.12 ಲಕ್ಷ ಕೋಟಿ ರೂಗಳನ್ನು ಖರ್ಚು ಮಾಡಿದೆ. ಅಂದರೆ ಅಲ್ಲಿಯೂ ವಾರ್ಷಿಕ ಸರಾಸರಿ 53,000 ಕೋಟಿ ವೆಚ್ಚ ಮಾಡಿದೆ. ಅಂದ ಮಾತ್ರಕ್ಕೆ ಆಂಧ್ರ ಪ್ರದೇಶ ರಾಜ್ಯ ದಿವಾಳಿಯಾಗಿದೆಯೇ? ತೆಲಂಗಾಣ, ತಮಿಳುನಾಡು ಮತ್ತು ಕೇರಳ ರಾಜ್ಯಗಳು ಸಹ ಇದೇ ಮಾದರಿಯ ಕಲ್ಯಾಣ ಯೋಜನೆಗಳನ್ನು ಜಾರಿಗೊಳಿಸಿದರೂ ಅವು ಸದೃಢವಾಗಿವೆ ಎಂಬುದನ್ನು ಮರೆಯಬಾರದು.

ಆದರೆ ಸರ್ಕಾರ ಈ ಯೋಜನೆಗಳ ಜಾರಿಗಾಗಿ ಮತ್ತೆ ರಾಜ್ಯದ ಜನರ ಮೇಲೆ ತೆರಿಗೆ ಹಾಕುವುದು, ಕೆಲ ಇಲಾಖೆಗಳ ವೆಚ್ಚ ಕಡಿತ ಮಾಡುವುದನ್ನು ಮಾಡಬಾರದು. ಬದಲಿಗೆ 15ನೇ ಹಣಕಾಸು ಆಯೋಗದ ಶಿಫಾರಸ್ಸಿನಂತೆ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಿರುವ ಅನುವಾದ, ಜಿಎಸ್‌ಟಿ ಪಾಲನ್ನು ಗಟ್ಟಿಯಾಗಿ ಕೇಳಿ ಪಡೆದುಕೊಳ್ಳಬೇಕು. ಜೊತೆಗೆ ದೇಶದ ಅತಿ ಶ್ರೀಮಂತರ, ಕ್ರೋನಿ ಬಂಡವಾಳಶಾಹಿಗಳ ಮೇಲೆ ಸಂಪತ್ತಿನ ತೆರಿಗೆ ವಿಧಿಸಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಬೇಕು. ರಾಜ್ಯದಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರ ಮತ್ತು ಸೋರಿಕೆಯಾಗದಂತೆ ತಡೆಯಬೇಕಿದೆ.

ಅನೇಕ ಆರ್ಥಿಕ ತಜ್ಞರು ರಾಜ್ಯ ಸರ್ಕಾರ ಜಾರಿಮಾಡುವ ಗ್ಯಾರಂಟಿ ಯೋಜನೆಗಳು ರಾಜ್ಯದ ಆರ್ಥಿಕ ಪ್ರಗತಿಗೆ ಸಹಕಾರಿಯಾಗಲಿವೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಏಕೆಂದರೆ ಜಿಎಸ್‌ಟಿ, ನೋಟು ರದ್ಧತಿ, ಕೋವಿಡ್ ಸಾಂಕ್ರಾಮಿಕ ಕಾರಣದಿಂದ ಜನರ ಆರ್ಥಿಕ ಸ್ಥಿತಿ ಕುಸಿದಿದ್ದು, ಕೊಳ್ಳುವ ಶಕ್ತಿ ಕಡಿಮೆಯಾಗಿದೆ. ಹಾಗಾಗಿ ಈ ಯೋಜನೆಗಳಿಂದ ಜನರ ಕೈಗೆ ನೇರವಾಗಿ ಹಣ ಸಿಕ್ಕರೆ ಅಥವಾ ಉಚಿತ ವಿದ್ಯುತ್, ಅಕ್ಕಿ, ಬಸ್‌ಪಾಸ್‌ನಿಂದ ಅವರ ಹಣ ಉಳಿದರೆ ಅದನ್ನು ಬೇರೆ ವಸ್ತುಗಳನ್ನು ಕೊಳ್ಳಲು ಬಳಸುತ್ತಾರೆ. ಅವರ ಅಗತ್ಯ ವಸ್ತುಗಳನ್ನು ಕೊಳ್ಳಲು ಮುಂದಾಗುತ್ತಾರೆ. ಆಗ ಹಣದ ವಹಿವಾಟು ಹೆಚ್ಚಾಗುತ್ತದೆ. ಬೇಡಿಕೆ ಹೆಚ್ಚಾದಂತೆ ಉತ್ಪಾದನೆ ಹೆಚ್ಚಾಗುತ್ತದೆ. ಉದ್ಯೋಗ ಸೃಷ್ಟಿಯಾಗುತ್ತದೆ. ಉದ್ಯೋಗ ಸಿಕ್ಕಲ್ಲಿ ಜನ ಮತ್ತೆ ಖರ್ಚು ಮಾಡುತ್ತಾರೆ. ಜಿಡಿಪಿ – ತೆರಿಗೆ ಸಂಗ್ರಹ ಹೆಚ್ಚಳವಾಗುತ್ತದೆ.. ಹೀಗೆ ಆರ್ಥಿಕ ಸರಪಳಿ ಚೇತರಿಸಿಕೊಳ್ಳುತ್ತದೆ ಎಂಬುದು ಒಂದು ವಾದ.

ಉಳ್ಳವರು ಹೇಳುವಂತೆ ಇವು ಬಿಟ್ಟಿ ಭಾಗ್ಯಗಳೇ?

2021-22ರ ಹಣಕಾಸು ವರ್ಷದಲ್ಲಿ ಆದಾಯ ತೆರಿಗೆಯಾಗಿ ಭಾರತೀಯರು ಪಾವತಿಸಿದ 6.73 ಲಕ್ಷ ಕೋಟಿ ರೂಗಳಿಗೆ ಹೋಲಿಸಿದರೆ, ಪರೋಕ್ಷ ತೆರಿಗೆಯಿಂದ 20.73 ಲಕ್ಷ ಕೋಟಿ ರೂ ಸಂಗ್ರಹಿಸಲಾಗಿದೆ. ಅಂದರೆ ಈ ದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಬಡವರು ಮತ್ತು ಮಧ್ಯಮ ವರ್ಗದವರು ಕಟ್ಟುವ ಪರೋಕ್ಷ ತೆರಿಗೆಯ ಪಾಲು ಬೃಹತ್ ಪ್ರಮಾಣದಲ್ಲಿದೆ. ಈ ದೇಶದ ಶೇ.50 ರಷ್ಟು ಬಡವರು ಶೇ.64.3% ರಷ್ಟು ಜಿಎಸ್‌ಟಿ ಕಟ್ಟುತ್ತಿದ್ದಾರೆ ಎಂದು ಆಕ್ಸ್‌ಫಾಮ್ ವರದಿ ಹೇಳಿದೆ.

ಭಾರತದ ಕೇಂದ್ರ ಸರ್ಕಾರ ಮತ್ತು ಎಲ್ಲಾ ರಾಜ್ಯಗಳ ತೆರಿಗೆ ಆದಾಯದಲ್ಲಿ ಶೇ.67 ರಷ್ಟು ಭಾಗ ಪರೋಕ್ಷ ಭಾಗದಿಂದ ಬರುತ್ತದೆ.  ಕಾರ್ಪೋರೇಟ್ ಮತ್ತು ನೇರ ಆದಾಯ ತೆರಿಗೆ 33% ಬರುತ್ತದೆ. ಅದರಲ್ಲಿಯೂ ಈ 33% ತೆರಿಗೆಯನ್ನು ಕೇವಲ ಶ್ರೀಮಂತ ಉದ್ಯಮಿಗಳು ಮಾತ್ರ ಕಟ್ಟುವುದಿಲ್ಲ. ಬದಲಿಗೆ ಸಂಬಳ ಪಡೆಯುವ ಮಧ್ಯಮ ವರ್ಗದ ಜನರು ಸಹ ಆದಾಯ ತೆರಿಗೆಯ ಮೂಲಕ ಪ್ರತ್ಯಕ್ಷ ತೆರಿಗೆ ಕಟ್ಟುತ್ತಾರೆ. ಒಟ್ಟಾರೆಯಾಗಿ ಹೇಳುವುದಾದರೆ ಈ ದೇಶದಲ್ಲಿ ಹೆಚ್ಚಿನ ತೆರಿಗೆ ಕಟ್ಟುವವರು ಬಡವರೆ ಹೊರತು ಶ್ರೀಮಂತರಲ್ಲ. ಹಾಗಾಗಿ ಬಡವರ ಹಣದಿಂದಲೇ ಈ ದೇಶ ನಡೆಯುತ್ತಿರುವಾಗ ಅವರಿಗೆ ಸರ್ಕಾರ ನೀಡುವ ಯೋಜನೆಗಳು ಉಚಿತವಲ್ಲ, ಬದಲಿಗೆ ಅವರ ಹಕ್ಕು ಎಂಬುದನ್ನು ಮರೆಯಬಾರದು.

ಯಾವುದೇ ಪ್ರದೇಶದ ಆರ್ಥಿಕ ಸ್ಥಿತಿಗತಿಗಳು ಸುಧಾರಿಸಬೇಕಾದರೆ, ಅವರಿಗೆ ಮೂಲಭೂತ ಅವಶ್ಯಕತೆಗಳನ್ನು ಒದಗಿಸುವುದು ಸರ್ಕಾರದ ಕರ್ತವ್ಯ. ಆದರೆ ಇಂದು ಮೂಲಭೂತ ಹಕ್ಕುಗಳಾದ ಉಚಿತ ಗುಣಮಟ್ಟದ ಶಿಕ್ಷಣ ಮತ್ತು ಆರೋಗ್ಯ ವ್ಯಾಪಾರ ಆಗಿರುವುದು ದುರಂತ. ಹಾಗಾಗಿಯೇ ಜನರು ತಮ್ಮ ದುಡಿಮೆಯ ಬಹುತೇಕ ಪಾಲನ್ನು ತಮ್ಮ ಮಕ್ಕಳ ಶಿಕ್ಷಣ ಮತ್ತು ಕುಟುಂಬದ ಆರೋಗ್ಯಕ್ಕಾಗಿ ವಿನಿಯೋಗಿಸುತ್ತಿದ್ದಾರೆ. ಹಾಗಾಗಿ ಅವು ಸದಾ ಬಡತನದಲ್ಲಿಯೇ ಉಳಿಯಬೇಕಾಗಿದೆ. ಹಾಗಾಗಿ ಗ್ಯಾರಂಟಿ ಯೋಜನೆಗಳಷ್ಟೇ ಸಾಲುವುದಿಲ್ಲ. ಬದಲಿಗೆ ಉಚಿತ ಶಿಕ್ಷಣ, ಸುಭದ್ರ ಉದ್ಯೋಗ, ಉಚಿತ ಆರೋಗ್ಯದಂತಹ ಮೂಲಭೂತ ಬದಲಾವಣೆಗಳನ್ನು ತರುವ ಯೋಜನೆಗಳು ಜಾರಿಯಾಗಬೇಕಿದೆ. ಅವುಗಳು ಜಾರಿಯಾಗುವಂತೆ ವಿರೋಧ ಪಕ್ಷಗಳು ದನಿಯೆತ್ತಬೇಕೆ ಹೊರತು ಬಡವರಿಗೆ ನೀಡುವ ಯೋಜನೆಗಳನ್ನು ವಿರೋಧಿಸುತ್ತಾ, ಗೊಂದಲ ಮೂಡಿಸಬಾರದು.

ಇನ್ನು ಈ ಐದು ಗ್ಯಾರಂಟಿಗಳನ್ನು ವಿರೋಧಿಸುವವರು ನಮ್ಮ ದೇಶದ ಹಸಿವಿನ ಸೂಚ್ಯಾಂಕವನ್ನು ಗಮನಿಸಿದ್ದಾರೆಯೇ? ಅಪೌಷ್ಟಿಕ ಮಕ್ಕಳನ್ನು ನೋಡಿದ್ದಾರೆಯೇ? ಹೋಗಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಯಾವತ್ತಾದರೂ ದನಿ ಎತ್ತಿದ್ದಾರೆಯೇ? ಇವು ಯಾವುದನ್ನು ಗಮನಿಸದೇ ಬಿಟ್ಟಿ ಭಾಗ್ಯ ಎಂದು ಕರೆಯುವುದು ಹೊಟ್ಟೆ ತುಂಬಿದವರ ಅಹಂಕಾರವಲ್ಲವೇ? ಇನ್ನು ಈ ಯೋಜನೆಗಳ ಹೆಚ್ಚಿನ ಅನುಕೂಲ ಮಹಿಳೆಯರಿಗೆ ಸಿಗುತ್ತಿದೆ. ಆದರೆ ಮಹಿಳೆಯರು ಮನೆಯ ಹೊಸ್ತಿಲು ದಾಟಬಾರದು ಎಂಬು ಪುರುಷಾಧಿಪತ್ಯ ತುಂಬಿಕೊಂಡ ಮನಸ್ಥಿತಿಗಳು ಈ ಯೋಜನೆಗಳನ್ನು ವಿರೋಧಿಸುತ್ತಿವೆ. ಇದು ಸಾಮಾಜಿಕ ಚಲನೆಗೆ ಮಾಡುವ ದ್ರೋಹ. ಮುಖ್ಯವಾಗಿ ಸ್ತ್ರೀ ವಿರೋಧದ ವಿಕೃತ ರೂಪಕ ಅನ್ನುವುದನ್ನು ರಾಜ್ಯವು ಮರೆಯುವುದಿಲ್ಲ.

ಇದನ್ನೂ ಓದಿ:ಮತದಾರರಿಗೆ ಕಾಂಗ್ರೆಸ್ ನೀಡಿದ ಐದು ಗ್ಯಾರಂಟಿಗಳು ಮತ್ತು ಆರ್ಥಿಕತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...