Homeಮುಖಪುಟಪ್ರಧಾನಿಗೆ ಖರ್ಗೆ ಬರೆದ ಪತ್ರಕ್ಕೆ ಕರ್ನಾಟಕದ ಸಂಸದರಿಂದ ಆಕ್ಷೇಪ: ಇದು 'ಬಿಜೆಪಿಗರ ಅಸಹಿಷ್ಣುತೆಗೆ ಉದಾಹರಣೆಯಾಗಿದೆ' ಎಂದ...

ಪ್ರಧಾನಿಗೆ ಖರ್ಗೆ ಬರೆದ ಪತ್ರಕ್ಕೆ ಕರ್ನಾಟಕದ ಸಂಸದರಿಂದ ಆಕ್ಷೇಪ: ಇದು ‘ಬಿಜೆಪಿಗರ ಅಸಹಿಷ್ಣುತೆಗೆ ಉದಾಹರಣೆಯಾಗಿದೆ’ ಎಂದ ಪಿ. ಚಿದಂಬರಂ

- Advertisement -
- Advertisement -

ಒಡಿಶಾ ಭೀಕರ ರೈಲು ದುರಂತಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು. ಆ ಪತ್ರಕ್ಕೆ ಕರ್ನಾಟಕದ ನಾಲ್ವರು ಬಿಜೆಪಿ ಸಂಸದರು ಆಕ್ಷೇಪ ವ್ಯಕ್ತಪಡಿಸಿ ಪ್ರತಿಕ್ರಿಯೆ ನೀಡಿದ್ದರು. ಇದು ‘ಬಿಜೆಪಿಗರ ಅಸಹಿಷ್ಣುತೆಗೆ ಉದಾಹರಣೆಯಾಗಿದೆ’ ಎಂದು ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಅವರು ಶನಿವಾರ ಹೇಳಿದ್ದಾರೆ.

ಕರ್ನಾಟಕದ ಸಂಸದರಾದ ತೇಜಸ್ವಿ ಸೂರ್ಯ, ಸದಾನಂದ ಗೌಡ, ಪಿ.ಸಿ. ಮೋಹನ್ ಮತ್ತು ಎಸ್. ಮುನಿಸ್ವಾಮಿ ಅವರು ಖರ್ಗೆ ಅವರ ಪತ್ರವನ್ನು ಆಕ್ಷೇಪಿಸಿ ಪ್ರತಿಕ್ರಿಯೆ ನೀಡಿದ್ದಾರೆ. ಹಾಗಾಗಿ ಈ ವಿಚಾರವಾಗಿ  ಮಾತನಾಡಿದ ಚಿದಂಬರಂ ಅವರು, ”ಈ ಪ್ರತಿಕ್ರಿಯೆಯಲ್ಲಿ ಸತ್ವವಿಲ್ಲ ಮತ್ತು ವಿಷಯ ಮಂಡನೆಯು ಪೊಳ್ಳಾಗಿದೆ” ಎಂದಿದ್ದಾರೆ.

ಖರ್ಗೆ ಅವರು ಪತ್ರದಲ್ಲಿ, ”ರೈಲ್ವೆ ಭದ್ರತೆಯ ಕುರಿತು ಅಶ್ವಿನಿ ವೈಷ್ಣವ್ ಅವರು ನೀಡಿದ್ದ ಟೊಳ್ಳು ಭರವಸೆಗಳ ನಿಜ ಬಣ್ಣ ಈಗ ಬಯಲಾಗಿದೆ ಎಂದು ಉಲ್ಲೇಖಿಸಿದ್ದರು. ಜೊತೆಗೆ, ರೈಲು ಅಪಘಾತ ತನಿಖೆಯನ್ನು ಸಿಬಿಐಗೆ ವಹಿಸುವುದನ್ನು ವಿರೋಧಿಸಿದ್ದ ಅವರು, ಸಿಬಿಐ ಇರುವುದು ಅಪರಾಧ ಪ್ರಕರಣಗಳ ತನಿಖೆ ನಡೆಸಲು ಹೊರತು ಅಪಘಾತದ ತನಿಖೆ ನಡೆಸಲು ಅಲ್ಲ” ಎಂದು ಟೀಕಿಸಿದ್ದರು.

ಇದನ್ನೂ ಓದಿ: ಸಿಬಿಐ ಕೆಲಸ ಅಪರಾಧಗಳನ್ನು ತನಿಖೆ ಮಾಡುವುದು, ರೈಲ್ವೆ ಅಪಘಾತಗಳ ತನಿಖೆ ಮಾಡುವುದಲ್ಲ: ಪ್ರಧಾನಿಗೆ ಖರ್ಗೆ ಪತ್ರ

ಇದಕ್ಕೆ ಸಂಸರು ಪ್ರತಿಕ್ರಿಯಿ, ”ವಾಟ್ಸ್‌ಆ್ಯಪ್ ವಿಶ್ವವಿದ್ಯಾಲಯದಿಂದ ಎರವಲು ಪಡೆದ ಮಾಹಿತಿ ಆಧರಿಸಿ ಪ್ರಧಾನಿ ಅವರಿಗೆ ಪತ್ರ ಬರೆಯುವುದು ನಿಮ್ಮಂಥ ಉನ್ನತ ನಾಯಕರಿಗೆ ಸರಿಹೊಂದುವುದಿಲ್ಲ. ವಾಟ್ಸ್‌ಆ್ಯಪ್ ವಿ.ವಿಯ ಕುಲಪತಿಗಳಾದ ನೀವು ಸುಳ್ಳು ಸುದ್ದಿಗಳನ್ನು ಉಗುಳಲೇಬೇಕು ಎಂಬ ಒತ್ತಡಕ್ಕೆ ಒಳಗಾಗಿರುತ್ತೀರಿ” ಎಂದು ಸಂಸದರು ಹೇಳಿದ್ದಾರೆ.

ಬಿಜೆಪಿ ಸಂಸದರ ಈ ಹೇಳಿಕೆಯನ್ನು ವಿರೋಧಿಸಿರುವ ಚಿದಂಬರಂ ಅವರು, ”ಕಾರ್ಯಪ್ರವೃತ ಪ್ರಜಾಪ್ರಭುತ್ವದಲ್ಲಿ ಇಂಥ ಪತ್ರಗಳಿಗೆ ಪ್ರಧಾನಿ ಉತ್ತರಿಸಲಿ ಎಂದು ಜನರು ಎದುರು ನೋಡುತ್ತಾರೆ. ಆದರೆ ನಮ್ಮದೇಶದ ಪ್ರಜಾಪ್ರಭುತ್ವ ಹೇಗಿದೆ ಎಂದರೆ, ಪ್ರಧಾನಿಯು ಪತ್ರಕ್ಕೆ ಪ್ರತಿಕ್ರಿಯಿಸಬೇಕು ಎಂಬುದನ್ನು ಪರಿಗಣಿಸುವುದೂ ಇಲ್ಲ” ಎಂದು ಹೇಳಿದ್ದಾರೆ.

”ಖರ್ಗೆ ಅವರು ಎತ್ತಿದಂಥ ಪ್ರಶ್ನೆಗಳನ್ನೇ ಹೋಲುವಂಥ ಅಂಶಗಳನ್ನು ಮಹಾಲೇಖಪಾಲರು 2022ರ ಡಿಸೆಂಬರ್‌ನಲ್ಲಿ ನೀಡಿದ್ದ ವರದಿಯು ಉಲ್ಲೇಖಿಸಿತ್ತು. ಆಗ್ನೆಯ ವಿಭಾಗೀಯ ರೈಲ್ವೆಯ ಮುಖ್ಯ ಕಾರ್ಯಕಾರಿ ನಿರ್ವಾಹಕರು 2023ರ ಫೆಬ್ರುವರಿ 9ರಂದು ಬರೆದಿದ್ದ ಪತ್ರದಲ್ಲಿ ಒಡಿಶಾದ ಬಾಲೇಶ್ವರ ರೈಲು ದುರಂತದಂಥ ಘಟನೆಗಳು ನಡೆಯುವ ಸಂಭವದ ಕುರಿತು ಎಚ್ಚರಿಸಿದ್ದರು. ಈ ಪತ್ರಕ್ಕೆ ಸಂಬಂಧಿಸಿ ಸರ್ಕಾರವು ಯಾವ ಕ್ರಮ ಕೈಗೊಂಡಿದೆ ಎಂದು ಗೌರವಾನ್ವಿತ ಸಂಸದರು ಮಾಹಿತಿ ನೀಡುತ್ತಾರೆಯೇ?” ಎಂದು ಚಿದಂಬರಂ ಅವರು ಪ್ರಶ್ನೆ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...