Homeಕರ್ನಾಟಕಸಾಗರದ ದಲಿತ ವಿದ್ಯಾರ್ಥಿನಿ ಪ್ರಕರಣ; ವಸತಿ ಶಾಲೆ ಮುಖ್ಯಸ್ಥನ ವಿರುದ್ಧ ‘ಪೋಕ್ಸೋ’, ‘ಅಟ್ರಾಸಿಟಿ’ ಕೇಸ್‌ ದಾಖಲು

ಸಾಗರದ ದಲಿತ ವಿದ್ಯಾರ್ಥಿನಿ ಪ್ರಕರಣ; ವಸತಿ ಶಾಲೆ ಮುಖ್ಯಸ್ಥನ ವಿರುದ್ಧ ‘ಪೋಕ್ಸೋ’, ‘ಅಟ್ರಾಸಿಟಿ’ ಕೇಸ್‌ ದಾಖಲು

- Advertisement -
- Advertisement -

ಸಾಗರದ ವನಶ್ರೀ ವಸತಿ ಶಾಲೆಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ದಲಿತ ವಿದ್ಯಾರ್ಥಿನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಮುಖ್ಯಸ್ಥನ ವಿರುದ್ಧ ‘ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ’ (ಪೋಕ್ಸೋ) ಮತ್ತು ‘ಎಸ್‌ಸಿ, ಎಸ್‌ಟಿ ಸಮುದಾಯಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ’ (ಅಟ್ರಾಸಿಟಿ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಸೊರಬ ತಾಲ್ಲೂಕಿನ ದಲಿತ ಕುಟುಂಬದ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಬಳಿಕ ಹಲವು ಸಂಗತಿಗಳು ಹೊರಬೀಳತೊಡಗಿವೆ. ಸಾಗರದ ವನಶ್ರೀ ವಸತಿ ಶಾಲೆಗೆ ಸೇರಿದ ಐದು ದಿನಗಳ ಬಳಿಕ ವಿದ್ಯಾರ್ಥಿ ಸಾವಿಗೀಡಾಗಿದ್ದಳು. ಶಾಲೆಯ ಮುಖ್ಯಸ್ಥ, ಆರ್‌ಎಸ್‌ಎಸ್‌ ಮುಖಂಡ ಮಂಜಪ್ಪ ನೀಡಿದ ಕಿರುಕುಳದಿಂದಾಗಿ ವಿದ್ಯಾರ್ಥಿನಿ ಕೊನೆಯುಸಿರೆಳೆದಿದ್ದು, ಈ ಸಂಬಂಧ ಎರಡು ಎಫ್‌ಐಆರ್‌ಗಳು ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ. ಅನುಮಾನಾಸ್ಪದ ಸಾವಿಗೆ ಸಂಬಂಧಿಸಿದಂತೆ ಮೊದಲ ಎಫ್‌ಐಆರ್‌ ಇದ್ದರೆ, ಪೋಕ್ಸೋ ಮತ್ತು ಅಟ್ರಾಸಿಟಿಗೆ ಸಂಬಂಧಿಸಿದಂತೆ ಎರಡನೇ ಎಫ್‌ಐಆರ್‌ ಇದೆ.

ವಸತಿ ಶಾಲೆಯಲ್ಲಿದ್ದ ವಿದ್ಯಾರ್ಥಿನಿಯರು ನೀಡಿರುವ ಹೇಳಿಕೆಗಳನ್ನು ಆಧರಿಸಿ ಮತ್ತು ಸಂತ್ರಸ್ತ ಪೋಷಕರು ನೀಡಿದ ದೂರಿನ ಅನ್ವಯ ಪೊಲೀಸರು ಕ್ರಮ ಜರುಗಿಸಿದ್ದಾರೆ. ದಲಿತ ವಿದ್ಯಾರ್ಥಿನಿ ಸಾವಿನ ಹಿಂದೆ ಹಲವು ರೀತಿಯ ಕಿರುಕುಳಗಳು ಇರುವುದು ಕಂಡು ಬಂದಿದೆ. ಇದೇ ರೀತಿಯ ಸಮಸ್ಯೆಯನ್ನು ಅನೇಕ ಹೆಣ್ಣುಮಗಳು ಅನುಭವಿಸಿರುವ ಸಂಬಂಧ ಎಫ್‌ಐಆರ್‌ ಉಲ್ಲೇಖಿಸಿದೆ.

ಎರಡನೇ ಎಫ್‌ಐಆರ್‌ನಲ್ಲಿ ಏನಿದೆ?

ಸಾವಿಗೀಡಾದ ವಿದ್ಯಾರ್ಥಿನಿ ಸೇರಿದಂತೆ ಅವರ ಸಂಬಂಧಿಕರಾದ ಇತರ ವಿದ್ಯಾರ್ಥಿನಿಯರು ವನಶ್ರೀ ವಸತಿ ಶಾಲೆಯಲ್ಲಿ ಓದುತ್ತಿದ್ದರು. ಜೂನ್‌ 7ನೇ ತಾರೀಕು, ಮಧ್ಯಾಹ್ನ 2 ಗಂಟೆಯ ವೇಳೆಗೆ ವಿದ್ಯಾರ್ಥಿನಿಯ ಆರೋಗ್ಯದಲ್ಲಿ ವ್ಯತ್ಯಾಸವಾಗಿತ್ತು. ಮಂಜಪ್ಪನ ಗಮನಕ್ಕೆ ತಂದಾಗ ನಿರ್ಲಕ್ಷ್ಯ ತಾಳಿದ್ದಲ್ಲದೆ ತಮಗೆ ತಿಳಿದ ಮಾತ್ರೆ, ಕಷಾಯ ಕುಡಿಸಿದ್ದರು. ತೊಂದರೆಗೆ ಒಳಗಾಗಿದ್ದ ವಿದ್ಯಾರ್ಥಿನಿಯು ತಮ್ಮ ಜೊತೆಯಲ್ಲಿದ್ದ ಇತರ ಹೆಣ್ಣುಮಕ್ಕಳಿಗೆ, “ಕಾಲು ಮತ್ತು ತೊಡೆ ನೋವು ಕಂಡು ಬಂದಿದೆ” ಎಂದು ತಿಳಿಸಿದ್ದಳು. ಈ ವಿಷಯವನ್ನು ಮಂಜಪ್ಪನ ಗಮನಕ್ಕೆ ಬಾಲಕಿಯರು ತಂದಿದ್ದರು.

ಅಸ್ವಸ್ಥಗೊಂಡಿರುವ  ಹೆಣ್ಣಮಗಳನ್ನು ಪ್ರತ್ಯೇಕವಾಗಿ ತಮ್ಮ ರೂಮ್‌ಗೆ ಕರೆದುಕೊಂಡು ಹೋದ ಮಂಜಪ್ಪ, ಮೊಣಕಾಲು, ತೊಡೆ ಹಾಗೂ ಇತರೆ ಕಡೆ ಮುಲಾಮು ಹಚ್ಚಿದ್ದನು. ಸುಮಾರು ಸಮಯದ ನಂತರ ಹೊರಗೆ ಬಂದು ಉಳಿದವರ ಹತ್ತಿರ, “ಅವಳ ಕಾಲಿಗೆ ಮುಲಾಮು ಹಚ್ಚಿದ್ದೇನೆ, ಆಕೆ ಹುಷಾರಾಗುತ್ತಾಳೆ. ನೀವು ಹೋಗಿ” ಎಂದು ತಿಳಿಸಿದ್ದನು. ಆಗಲೂ ಆಸ್ಪತ್ರೆಗೆ ಸೇರಿಸದೆ ಅಲಕ್ಷ್ಯ ತೋರಿದ್ದನು. “ಹುಷಾರಿಲ್ಲದಿರುವ ಕುರಿತು ಪೋಷಕರಿಗೆ ತಿಳಿಸಿ” ಎಂದು ಇತರ ವಿದ್ಯಾರ್ಥಿನಿಯರು ಕೋರಿದ್ದರು.

“ಯಾರಿಗೂ ಫೋನ್ ಮಾಡುವುದು ಬೇಡ. ಆಕೆ ಆರಾಮಾಗುತ್ತಾಳೆ. ನೀವು ಹೋಗಿ ಮಲಗಿಕೊಳ್ಳಿ” ಎಂದು ಗದರಿಸಿದ್ದನು. ವಿದ್ಯಾರ್ಥಿನಿಗೆ ತುಂಬಾ ಆರೋಗ್ಯ ಹದಗೆಟ್ಟಾಗ ಆರೋಪಿ ಮಂಜಪ್ಪ, ವಿದ್ಯಾರ್ಥಿನಿಗೆ ಹೊಟ್ಟೆ ತುಂಬಾ ಬಲವಂತವಾಗಿ ನೀರು ಕುಡಿಸಿ, ಮತ್ತೆ ಮಲಗಿಸಿದ್ದನು. ಅಸ್ವಸ್ಥಗೊಂಡಿರುವ ಹೆಣ್ಣುಮಗಳನ್ನು ಇತರ ವಿದ್ಯಾರ್ಥಿನಿಯರು ಮಾತನಾಡಿಸಲು ಹೋಗಿದ್ದರು. ಆಕೆ ಯಾವುದೇ ಪ್ರತಿಕ್ರಿಯೆಯನ್ನು ನೀಡಲಿಲ್ಲ. ವಿಷಯವನ್ನು ಮತ್ತೆ ಮಂಜಪ್ಪನ ಗಮನಕ್ಕೆ ತರಲಾಯಿತು.

ಮಕ್ಕಳನ್ನು ಹೊರಗೆ ಕಳುಹಿಸಿದ ಮಂಜಪ್ಪ, ವಿದ್ಯಾರ್ಥಿನಿಯನ್ನು ಮಾತನಾಡಿಸಲು ಯತ್ನಿಸಿದ್ದನು. ಆ ಹೆಣ್ಣುಮಗಳು ನಾಲಿಗೆ ಕಚ್ಚಿಕೊಂಡು ಯಾವ ಪ್ರತಿಕ್ರಿಯೆ ನೀಡದ ಸ್ಥಿತಿಯಲ್ಲಿದ್ದಳು. ಆ ನಂತರ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಆಗಲೂ ಮಂಜಪ್ಪ ಪೋಷಕರಿಗೆ ವಿಷಯ ತಿಳಿಸಿರಲಿಲ್ಲ. ಆಸ್ಪತ್ರೆಯ ಆವರಣದಲ್ಲಿದ್ದ ಅಪರಿಚಿತರ ಮೊಬೈಲ್‌ ಸಹಾಯದಿಂದ ವಿಚಾರ ತಿಳಿದ ನಂತರ ಪೋಷಕರು ಸಾಗರ ಆಸ್ಪತ್ರೆಗೆ ಧಾವಿಸಿದ್ದರು. ಅಷ್ಟರಲ್ಲಿ ಮಗಳು ಸಾವನ್ನಪ್ಪಿದ್ದಳು.

ಶವ ಪರೀಕ್ಷೆ ನಂತರ ಅದೇ ದಿನ ರಾತ್ರಿ ವಿದ್ಯಾರ್ಥಿನಿಯನ್ನು ಮಣ್ಣು ಮಾಡಿದರು. ಸಾವಿಗೀಡಾದ ವಿದ್ಯಾರ್ಥಿನಿಯ ಜೊತೆಯಲ್ಲಿದ್ದ ಇತರ ಹೆಣ್ಣುಮಕ್ಕಳಲ್ಲಿ ಸಂತ್ರಸ್ತ ಪೋಷಕರು ಘಟನೆಯ ಕುರಿತು ವಿಚಾರಿಸಿದಾಗ ಆಘಾತಕಾರಿ ಸಂಗತಿಗಳು ತಿಳಿದುಬಂದಿವೆ.

ಇದನ್ನೂ ಓದಿರಿ: ಸಾಗರ: ದಲಿತ ಬಾಲಕಿಯ ಅನುಮಾನಾಸ್ಪದ ಸಾವು; 2 ಬಕೆಟ್‌ ನೀರು ಕುಡಿಸಿದ್ದ ವಸತಿ ಶಾಲೆ ಮುಖ್ಯಸ್ಥ- ಆರೋಪ

ಶಾಲೆಯ ಮುಖ್ಯಸ್ಥ ಮಂಜಪ್ಪ ಅಶ್ಲೀಲವಾಗಿ ವರ್ತಿಸುತ್ತಿದ್ದನು, ಹೆಣ್ಣು ಮಕ್ಕಳ ದೇಹದ ಖಾಸಗಿ ಭಾಗಗಳನ್ನು ಮುಟ್ಟುತ್ತಿದ್ದನು, ಅಪ್ಪಿಕೊಳ್ಳುತ್ತಿದ್ದನು, ಅವ್ಯಾಚ್ಯವಾಗಿ ಮಾತನಾಡುತ್ತಿದ್ದನು- ಎಂದು ತಮಗಾದ ಹಿಂಸೆಯನ್ನು ಮಕ್ಕಳು ಬಿಚ್ಚಿಟ್ಟಿದ್ದಾರೆ.

ಇದೇ ರೀತಿಯ ಲೈಂಗಿಕ ದೌರ್ಜನ್ಯವನ್ನು ತಮ್ಮ ಮಗಳಿಗೆ ಮಂಜಪ್ಪ ನೀಡಬಹುದೆಂದು ಪೋಷಕರು ಪೊಲೀಸರಲ್ಲಿ ತಿಳಿಸಿದ್ದಾರೆ. “ನಮ್ಮ ಮಗಳು ಇದರಿಂದ ಹೆದರಿಕೊಂಡು, ಮಾನಸಿಕವಾಗಿ ದೈಹಿಕವಾಗಿ ಹಿಂಸೆ ಅನುಭವಿಸಿ ಭಯ ಹಾಗೂ ಬೇಸರದಲ್ಲಿದ್ದಳು. ಮನಸಿಗೆ ಹಚ್ಚಿಕೊಂಡಿದ್ದರಿಂದ ಜ್ವರ, ಸುಸ್ತು, ವಾಂತಿ ಪ್ರಾರಂಭವಾಗಿ ಎರಡು ದಿನ ನರಳಾಡಿದ್ದಾಳೆ. ಮಂಜಪ್ಪನ ಮೇಲಿನ ಭಯದಿಂದ ಆರೋಗ್ಯ ಕೆಟ್ಟಿದೆ. ಆಸ್ಪತ್ರೆಗೆ ತೋರಿಸದೇ ತಾನೇ ಮಾತ್ರೆ ಮುಲಾಮು ಕಷಾಯ ಕುಡಿಸಿ ಆಸ್ಪತ್ರೆಗೂ ಸೇರಿಸಿಲ್ಲ. ನಮಗೂ ವಿಚಾರ ತಿಳಿಸದೆ ಕೊನೆ ಗಳಿಗೆಯಲ್ಲಿ, ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರಿಂದ ನಮ್ಮ ಮಗಳು ಮೃತಪಟ್ಟಿರುತ್ತಾಳೆ” ಎಂದು ಪೋಷಕರು ತಿಳಿಸಿರುವುದಾಗಿ ಎಫ್‌ಐಆರ್‌ ತಿಳಿಸಿದೆ.

ದೂರಿನ ಅನ್ವಯ ಐಪಿಸಿ ಸೆಕ್ಷನ್‌ 504, 506, 354(ಎ)(2), ಅಟ್ರಾಸಿಟಿ ಕಾಯ್ದೆಯ ಸೆಕ್ಷನ್‌ 3(1)(ಡಬ್ಲ್ಯ)(ಐ)(ii), 3(2)(ವಿಎ), ಪೋಕ್ಸೋ ಕಾಯ್ದೆಯ ಸೆಕ್ಷನ್‌ -8, 12 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...