Homeಕರ್ನಾಟಕಸಾಗರದ ದಲಿತ ವಿದ್ಯಾರ್ಥಿನಿ ಪ್ರಕರಣ; ವಸತಿ ಶಾಲೆ ಮುಖ್ಯಸ್ಥನ ವಿರುದ್ಧ ‘ಪೋಕ್ಸೋ’, ‘ಅಟ್ರಾಸಿಟಿ’ ಕೇಸ್‌ ದಾಖಲು

ಸಾಗರದ ದಲಿತ ವಿದ್ಯಾರ್ಥಿನಿ ಪ್ರಕರಣ; ವಸತಿ ಶಾಲೆ ಮುಖ್ಯಸ್ಥನ ವಿರುದ್ಧ ‘ಪೋಕ್ಸೋ’, ‘ಅಟ್ರಾಸಿಟಿ’ ಕೇಸ್‌ ದಾಖಲು

- Advertisement -
- Advertisement -

ಸಾಗರದ ವನಶ್ರೀ ವಸತಿ ಶಾಲೆಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ದಲಿತ ವಿದ್ಯಾರ್ಥಿನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಮುಖ್ಯಸ್ಥನ ವಿರುದ್ಧ ‘ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ’ (ಪೋಕ್ಸೋ) ಮತ್ತು ‘ಎಸ್‌ಸಿ, ಎಸ್‌ಟಿ ಸಮುದಾಯಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ’ (ಅಟ್ರಾಸಿಟಿ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಸೊರಬ ತಾಲ್ಲೂಕಿನ ದಲಿತ ಕುಟುಂಬದ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಬಳಿಕ ಹಲವು ಸಂಗತಿಗಳು ಹೊರಬೀಳತೊಡಗಿವೆ. ಸಾಗರದ ವನಶ್ರೀ ವಸತಿ ಶಾಲೆಗೆ ಸೇರಿದ ಐದು ದಿನಗಳ ಬಳಿಕ ವಿದ್ಯಾರ್ಥಿ ಸಾವಿಗೀಡಾಗಿದ್ದಳು. ಶಾಲೆಯ ಮುಖ್ಯಸ್ಥ, ಆರ್‌ಎಸ್‌ಎಸ್‌ ಮುಖಂಡ ಮಂಜಪ್ಪ ನೀಡಿದ ಕಿರುಕುಳದಿಂದಾಗಿ ವಿದ್ಯಾರ್ಥಿನಿ ಕೊನೆಯುಸಿರೆಳೆದಿದ್ದು, ಈ ಸಂಬಂಧ ಎರಡು ಎಫ್‌ಐಆರ್‌ಗಳು ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ. ಅನುಮಾನಾಸ್ಪದ ಸಾವಿಗೆ ಸಂಬಂಧಿಸಿದಂತೆ ಮೊದಲ ಎಫ್‌ಐಆರ್‌ ಇದ್ದರೆ, ಪೋಕ್ಸೋ ಮತ್ತು ಅಟ್ರಾಸಿಟಿಗೆ ಸಂಬಂಧಿಸಿದಂತೆ ಎರಡನೇ ಎಫ್‌ಐಆರ್‌ ಇದೆ.

ವಸತಿ ಶಾಲೆಯಲ್ಲಿದ್ದ ವಿದ್ಯಾರ್ಥಿನಿಯರು ನೀಡಿರುವ ಹೇಳಿಕೆಗಳನ್ನು ಆಧರಿಸಿ ಮತ್ತು ಸಂತ್ರಸ್ತ ಪೋಷಕರು ನೀಡಿದ ದೂರಿನ ಅನ್ವಯ ಪೊಲೀಸರು ಕ್ರಮ ಜರುಗಿಸಿದ್ದಾರೆ. ದಲಿತ ವಿದ್ಯಾರ್ಥಿನಿ ಸಾವಿನ ಹಿಂದೆ ಹಲವು ರೀತಿಯ ಕಿರುಕುಳಗಳು ಇರುವುದು ಕಂಡು ಬಂದಿದೆ. ಇದೇ ರೀತಿಯ ಸಮಸ್ಯೆಯನ್ನು ಅನೇಕ ಹೆಣ್ಣುಮಗಳು ಅನುಭವಿಸಿರುವ ಸಂಬಂಧ ಎಫ್‌ಐಆರ್‌ ಉಲ್ಲೇಖಿಸಿದೆ.

ಎರಡನೇ ಎಫ್‌ಐಆರ್‌ನಲ್ಲಿ ಏನಿದೆ?

ಸಾವಿಗೀಡಾದ ವಿದ್ಯಾರ್ಥಿನಿ ಸೇರಿದಂತೆ ಅವರ ಸಂಬಂಧಿಕರಾದ ಇತರ ವಿದ್ಯಾರ್ಥಿನಿಯರು ವನಶ್ರೀ ವಸತಿ ಶಾಲೆಯಲ್ಲಿ ಓದುತ್ತಿದ್ದರು. ಜೂನ್‌ 7ನೇ ತಾರೀಕು, ಮಧ್ಯಾಹ್ನ 2 ಗಂಟೆಯ ವೇಳೆಗೆ ವಿದ್ಯಾರ್ಥಿನಿಯ ಆರೋಗ್ಯದಲ್ಲಿ ವ್ಯತ್ಯಾಸವಾಗಿತ್ತು. ಮಂಜಪ್ಪನ ಗಮನಕ್ಕೆ ತಂದಾಗ ನಿರ್ಲಕ್ಷ್ಯ ತಾಳಿದ್ದಲ್ಲದೆ ತಮಗೆ ತಿಳಿದ ಮಾತ್ರೆ, ಕಷಾಯ ಕುಡಿಸಿದ್ದರು. ತೊಂದರೆಗೆ ಒಳಗಾಗಿದ್ದ ವಿದ್ಯಾರ್ಥಿನಿಯು ತಮ್ಮ ಜೊತೆಯಲ್ಲಿದ್ದ ಇತರ ಹೆಣ್ಣುಮಕ್ಕಳಿಗೆ, “ಕಾಲು ಮತ್ತು ತೊಡೆ ನೋವು ಕಂಡು ಬಂದಿದೆ” ಎಂದು ತಿಳಿಸಿದ್ದಳು. ಈ ವಿಷಯವನ್ನು ಮಂಜಪ್ಪನ ಗಮನಕ್ಕೆ ಬಾಲಕಿಯರು ತಂದಿದ್ದರು.

ಅಸ್ವಸ್ಥಗೊಂಡಿರುವ  ಹೆಣ್ಣಮಗಳನ್ನು ಪ್ರತ್ಯೇಕವಾಗಿ ತಮ್ಮ ರೂಮ್‌ಗೆ ಕರೆದುಕೊಂಡು ಹೋದ ಮಂಜಪ್ಪ, ಮೊಣಕಾಲು, ತೊಡೆ ಹಾಗೂ ಇತರೆ ಕಡೆ ಮುಲಾಮು ಹಚ್ಚಿದ್ದನು. ಸುಮಾರು ಸಮಯದ ನಂತರ ಹೊರಗೆ ಬಂದು ಉಳಿದವರ ಹತ್ತಿರ, “ಅವಳ ಕಾಲಿಗೆ ಮುಲಾಮು ಹಚ್ಚಿದ್ದೇನೆ, ಆಕೆ ಹುಷಾರಾಗುತ್ತಾಳೆ. ನೀವು ಹೋಗಿ” ಎಂದು ತಿಳಿಸಿದ್ದನು. ಆಗಲೂ ಆಸ್ಪತ್ರೆಗೆ ಸೇರಿಸದೆ ಅಲಕ್ಷ್ಯ ತೋರಿದ್ದನು. “ಹುಷಾರಿಲ್ಲದಿರುವ ಕುರಿತು ಪೋಷಕರಿಗೆ ತಿಳಿಸಿ” ಎಂದು ಇತರ ವಿದ್ಯಾರ್ಥಿನಿಯರು ಕೋರಿದ್ದರು.

“ಯಾರಿಗೂ ಫೋನ್ ಮಾಡುವುದು ಬೇಡ. ಆಕೆ ಆರಾಮಾಗುತ್ತಾಳೆ. ನೀವು ಹೋಗಿ ಮಲಗಿಕೊಳ್ಳಿ” ಎಂದು ಗದರಿಸಿದ್ದನು. ವಿದ್ಯಾರ್ಥಿನಿಗೆ ತುಂಬಾ ಆರೋಗ್ಯ ಹದಗೆಟ್ಟಾಗ ಆರೋಪಿ ಮಂಜಪ್ಪ, ವಿದ್ಯಾರ್ಥಿನಿಗೆ ಹೊಟ್ಟೆ ತುಂಬಾ ಬಲವಂತವಾಗಿ ನೀರು ಕುಡಿಸಿ, ಮತ್ತೆ ಮಲಗಿಸಿದ್ದನು. ಅಸ್ವಸ್ಥಗೊಂಡಿರುವ ಹೆಣ್ಣುಮಗಳನ್ನು ಇತರ ವಿದ್ಯಾರ್ಥಿನಿಯರು ಮಾತನಾಡಿಸಲು ಹೋಗಿದ್ದರು. ಆಕೆ ಯಾವುದೇ ಪ್ರತಿಕ್ರಿಯೆಯನ್ನು ನೀಡಲಿಲ್ಲ. ವಿಷಯವನ್ನು ಮತ್ತೆ ಮಂಜಪ್ಪನ ಗಮನಕ್ಕೆ ತರಲಾಯಿತು.

ಮಕ್ಕಳನ್ನು ಹೊರಗೆ ಕಳುಹಿಸಿದ ಮಂಜಪ್ಪ, ವಿದ್ಯಾರ್ಥಿನಿಯನ್ನು ಮಾತನಾಡಿಸಲು ಯತ್ನಿಸಿದ್ದನು. ಆ ಹೆಣ್ಣುಮಗಳು ನಾಲಿಗೆ ಕಚ್ಚಿಕೊಂಡು ಯಾವ ಪ್ರತಿಕ್ರಿಯೆ ನೀಡದ ಸ್ಥಿತಿಯಲ್ಲಿದ್ದಳು. ಆ ನಂತರ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಆಗಲೂ ಮಂಜಪ್ಪ ಪೋಷಕರಿಗೆ ವಿಷಯ ತಿಳಿಸಿರಲಿಲ್ಲ. ಆಸ್ಪತ್ರೆಯ ಆವರಣದಲ್ಲಿದ್ದ ಅಪರಿಚಿತರ ಮೊಬೈಲ್‌ ಸಹಾಯದಿಂದ ವಿಚಾರ ತಿಳಿದ ನಂತರ ಪೋಷಕರು ಸಾಗರ ಆಸ್ಪತ್ರೆಗೆ ಧಾವಿಸಿದ್ದರು. ಅಷ್ಟರಲ್ಲಿ ಮಗಳು ಸಾವನ್ನಪ್ಪಿದ್ದಳು.

ಶವ ಪರೀಕ್ಷೆ ನಂತರ ಅದೇ ದಿನ ರಾತ್ರಿ ವಿದ್ಯಾರ್ಥಿನಿಯನ್ನು ಮಣ್ಣು ಮಾಡಿದರು. ಸಾವಿಗೀಡಾದ ವಿದ್ಯಾರ್ಥಿನಿಯ ಜೊತೆಯಲ್ಲಿದ್ದ ಇತರ ಹೆಣ್ಣುಮಕ್ಕಳಲ್ಲಿ ಸಂತ್ರಸ್ತ ಪೋಷಕರು ಘಟನೆಯ ಕುರಿತು ವಿಚಾರಿಸಿದಾಗ ಆಘಾತಕಾರಿ ಸಂಗತಿಗಳು ತಿಳಿದುಬಂದಿವೆ.

ಇದನ್ನೂ ಓದಿರಿ: ಸಾಗರ: ದಲಿತ ಬಾಲಕಿಯ ಅನುಮಾನಾಸ್ಪದ ಸಾವು; 2 ಬಕೆಟ್‌ ನೀರು ಕುಡಿಸಿದ್ದ ವಸತಿ ಶಾಲೆ ಮುಖ್ಯಸ್ಥ- ಆರೋಪ

ಶಾಲೆಯ ಮುಖ್ಯಸ್ಥ ಮಂಜಪ್ಪ ಅಶ್ಲೀಲವಾಗಿ ವರ್ತಿಸುತ್ತಿದ್ದನು, ಹೆಣ್ಣು ಮಕ್ಕಳ ದೇಹದ ಖಾಸಗಿ ಭಾಗಗಳನ್ನು ಮುಟ್ಟುತ್ತಿದ್ದನು, ಅಪ್ಪಿಕೊಳ್ಳುತ್ತಿದ್ದನು, ಅವ್ಯಾಚ್ಯವಾಗಿ ಮಾತನಾಡುತ್ತಿದ್ದನು- ಎಂದು ತಮಗಾದ ಹಿಂಸೆಯನ್ನು ಮಕ್ಕಳು ಬಿಚ್ಚಿಟ್ಟಿದ್ದಾರೆ.

ಇದೇ ರೀತಿಯ ಲೈಂಗಿಕ ದೌರ್ಜನ್ಯವನ್ನು ತಮ್ಮ ಮಗಳಿಗೆ ಮಂಜಪ್ಪ ನೀಡಬಹುದೆಂದು ಪೋಷಕರು ಪೊಲೀಸರಲ್ಲಿ ತಿಳಿಸಿದ್ದಾರೆ. “ನಮ್ಮ ಮಗಳು ಇದರಿಂದ ಹೆದರಿಕೊಂಡು, ಮಾನಸಿಕವಾಗಿ ದೈಹಿಕವಾಗಿ ಹಿಂಸೆ ಅನುಭವಿಸಿ ಭಯ ಹಾಗೂ ಬೇಸರದಲ್ಲಿದ್ದಳು. ಮನಸಿಗೆ ಹಚ್ಚಿಕೊಂಡಿದ್ದರಿಂದ ಜ್ವರ, ಸುಸ್ತು, ವಾಂತಿ ಪ್ರಾರಂಭವಾಗಿ ಎರಡು ದಿನ ನರಳಾಡಿದ್ದಾಳೆ. ಮಂಜಪ್ಪನ ಮೇಲಿನ ಭಯದಿಂದ ಆರೋಗ್ಯ ಕೆಟ್ಟಿದೆ. ಆಸ್ಪತ್ರೆಗೆ ತೋರಿಸದೇ ತಾನೇ ಮಾತ್ರೆ ಮುಲಾಮು ಕಷಾಯ ಕುಡಿಸಿ ಆಸ್ಪತ್ರೆಗೂ ಸೇರಿಸಿಲ್ಲ. ನಮಗೂ ವಿಚಾರ ತಿಳಿಸದೆ ಕೊನೆ ಗಳಿಗೆಯಲ್ಲಿ, ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರಿಂದ ನಮ್ಮ ಮಗಳು ಮೃತಪಟ್ಟಿರುತ್ತಾಳೆ” ಎಂದು ಪೋಷಕರು ತಿಳಿಸಿರುವುದಾಗಿ ಎಫ್‌ಐಆರ್‌ ತಿಳಿಸಿದೆ.

ದೂರಿನ ಅನ್ವಯ ಐಪಿಸಿ ಸೆಕ್ಷನ್‌ 504, 506, 354(ಎ)(2), ಅಟ್ರಾಸಿಟಿ ಕಾಯ್ದೆಯ ಸೆಕ್ಷನ್‌ 3(1)(ಡಬ್ಲ್ಯ)(ಐ)(ii), 3(2)(ವಿಎ), ಪೋಕ್ಸೋ ಕಾಯ್ದೆಯ ಸೆಕ್ಷನ್‌ -8, 12 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...