Homeಎಕಾನಮಿಸ್ನೇಹಿತರೆ, ಮುಂದಿನ ಒಂದು ವರ್ಷ ಜಾಗ್ರತೆಯಾಗಿರೋಣ: ಬಹಿರಂಗ ಪತ್ರ ಬರೆದ ಡಾ.ಪುರುಷೋತ್ತಮ ಬಿಳಿಮಲೆ

ಸ್ನೇಹಿತರೆ, ಮುಂದಿನ ಒಂದು ವರ್ಷ ಜಾಗ್ರತೆಯಾಗಿರೋಣ: ಬಹಿರಂಗ ಪತ್ರ ಬರೆದ ಡಾ.ಪುರುಷೋತ್ತಮ ಬಿಳಿಮಲೆ

- Advertisement -
- Advertisement -

ಜೆ.ಎನ್.ಯು ನಲ್ಲಿ ಕನ್ನಡ ಅಧ್ಯಯನ ಪೀಠದ ಮುಖ್ಯಸ್ಥರಾಗಿರುವ ಡಾ.ಪುರುಷೋತ್ತಮ ಬಿಳಿಮಲೆಯವರು ತನ್ನೆಲ್ಲಾ ಸ್ನೇಹಿತರ ಮೇಲಿನ ಕಾಳಜಿಯಿಂದ ಫೇಸ್ ಬುಕ್ ನಲ್ಲಿ ಬಹಿರಂಗ ಪತ್ರವೊಂದನ್ನು ಬರೆದಿದ್ದಾರೆ. ಕುಸಿಯುತ್ತಿರುವ ಆರ್ಥಿಕ ಕ್ಷೇತ್ರವನ್ನು ಗಮನದಲ್ಲಿಟ್ಟುಕೊಂಡು ಅವರು ಬರೆದ ಕಾಳಜಿಯುತ ಪತ್ರ ಎಲ್ಲರ ಗಮನಸೆಳೆದಿದ್ದು ಅದನ್ನು ಇಲ್ಲಿ ಯಥಾವತ್ತಾಗಿ ಮುದ್ರಿಸುತ್ತಿದ್ದೇವೆ.

ಫೇಸ್ ಬುಕ್ ನಲ್ಲಿರುವ ನನ್ನ ಅನೇಕ ಗೆಳೆಯರು ಆರ್ಥಿಕವಾಗಿ ದುರ್ಬಲರೆಂಬುದನ್ನು ನಾನು ಬಲ್ಲೆ. ಇಂಥ ಗೆಳೆಯರ/ಗೆಳತಿಯರ ಸಾಮಾಜಿಕ ಕಳಕಳಿ ಮಾತ್ರ ಅತ್ಯುನ್ನತ ಮಟ್ಟದ್ದು. ಮಾನವನ ಘನತೆಗೆ ಕುಂದು ತರುವ ಯಾವುದೇ ವಿಷಯಗಳ ಮೇಲೆ ಅವರೆಲ್ಲ ತುಂಬ ದಿಟ್ಟವಾಗಿ , ಎಷ್ಟೋಬಾರಿ ಮುಗ್ಧವಾಗಿ ಬರೆಯುತ್ತಿದ್ದಾರೆ. ಅಂಥ ಗೆಳೆಯರ ಬಗ್ಗೆ ಹೆಮ್ಮೆಪಡುತ್ತಾ ಈ ಕೆಳಗಿನ ಟಿಪ್ಪಣಿ-

ಮುಂದಿನ ಕನಿಷ್ಠ ಒಂದು ವರುಷಗಳ ಕಾಲ ಬಡ ಭಾರತೀಯರು ತುಂಬ ಕಷ್ಟಗಳನ್ನು ಇದಿರಿಸಬೇಕಾಗಿದೆ. ಮಧ್ಯಮ ವರ್ಗದವರು ಕೂಡಾ ಈ ಆರ್ಥಿಕ ಸಂಕಷ್ಟಗಳಿಗೆ ಬಲಿಯಾಗಬೇಕಾದ ಎಲ್ಲ ಲಕ್ಷಣಗಳಿವೆ. ಹಾಗಾಗಿ ನಾವು ಅನೇಕ ವಿಷಯಗಳಲ್ಲಿ ಮುಖ್ಯವಾಗಿ ನಮ್ಮ ಹಣಕಾಸಿನ ವಿಷಯಗಳಲ್ಲಿ ತುಂಬ ಎಚ್ಚರಿಕೆಯನ್ನು ವಹಿಸಬೇಕಾಗಿದೆ.

1. ಭಾರತದ ಬ್ಯಾಂಕಿಂಗ್ ವ್ಯವಸ್ಥೆ ಹದಗೆಟ್ಟಿದ್ದು, ಅದು ಸುಧಾರಿಸಿಕೊಳ್ಳಲು ಬಹಳ ಸಮಯ ಬೇಕು. ಕೇಂದ್ರ ಸರಕಾರಕ್ಕೆ ಈ ಕುರಿತು ಸರಿಯಾಗಿ ಮಾರ್ಗದರ್ಶನ ಮಾಡಬಲ್ಲ ಆರ್ಥಿಕ ತಜ್ಞರಾರೂ ಇದ್ದಂತಿಲ್ಲ. ಇದ್ದವರು ಬಿಟ್ಟು ಹೋಗಿದ್ದಾರೆ. ಬ್ಯಾಂಕಿಂಗ್ ಕ್ಷೇತ್ರಕ್ಕೆ ನಿರೀಕ್ಷಿತ ಮಟ್ಟದಲ್ಲಿ ಹಣ ಹರಿದು ಬರುತ್ತಿಲ್ಲ, ಸಾಲ ತೆಗೆದುಕೊಂಡವರು ಹಣ ಹಿಂದಿರುಗಿಸುತ್ತಿಲ್ಲ ( ಈ ಒತ್ತಡ ತಾಳಲಾರದೆ, ಬ್ಯಾಂಕುಗಳಲ್ಲಿ ಕೆಲಸ ಮಾಡುವ ಕೆಲವು ಅಧಿಕಾರಿಗಳು ಸ್ವಯಂ ನಿವೃತ್ತಿ ಪಡೆಯುತ್ತಿದ್ದಾರೆ). ಹೀಗಾಗಿ ಬ್ಯಾಂಕುಗಳನ್ನು ಹೆಚ್ಚು ನಾವು ನೆಚ್ಚಿಕೊಳ್ಳುವಂತಿಲ್ಲ.

2. ಕಟ್ಟಿರುವ ಮನೆಗಳು ಮಾರಾಟವಾಗದೆ ಹಾಗೇ ಉಳಿಯುತ್ತಿವೆ ( ನೋಯ್ಡಾ, ಫರಿದಾಬಾದ್ ಮತ್ತು ಗುರುಗ್ರಾಮದಲ್ಲಿ ಪರಿಸ್ಥಿತಿ ವಿಷಮಿಸಿದೆ. ಅರ್ಧ ಕಟ್ಟಿ ಉಳಿದ ಮನೆಗಳನ್ನು ಸರಕಾರವೇ ಪೂರ್ಣಗೊಳಿಸಲು ಸುಪ್ರಿಂ ಕೋರ್ಟು ಆದೇಶ ನೀಡಿದೆ. (ಸರಕಾರ ಹೇಗೆ ಈ ಕೆಲಸವನ್ನು ಪೂರ್ಣಗೊಳಿಸುವುದೋ ಯಾರಿಗೂ ತಿಳಿಯದು)

3. ಹೊಸ ಮನೆಗಳು/ಕಟ್ಟಡಗಳು ನಿರೀಕ್ಷಿತ ವೇಗದಲ್ಲಿ ಮೇಲೇಳದೇ ಇರುವುದರಿಂದ ಸ್ಟೀಲ್, ಸಿಮೆಂಟ್, ಮತ್ತಿತರ ಸಾಮಗ್ರಿಗಳಿಗೆ ಬೇಡಿಕೆ ಇಲ್ಲವಾಗಿದೆ.

4. ಅಟೋಮೋಬಾಯಿಲ್ ಸೆಕ್ಟರ್ ಈಗಾಗಲೇ 350000 ಉದ್ಯೋಗಿಗಳನ್ನು ಕಳಕೊಂಡಿದೆ. ಮಾರುತಿ 16% ನಷ್ಟವನ್ನು ತೋರಿಸಿದೆಯಲ್ಲದೆ, ಶೇಕಡಾ 50 ಉತ್ಪಾದನೆಯನ್ನು ಕಡಿತಗೊಳಿಸಿದೆ. ಟಾಟಾ ಮೋಟಾರ್ಸ ನವರು ಪೂನಾ ಮತ್ತು ಜಮಶೆದ್ ಪುರ್ ನ ತನ್ನ ಉತ್ಪಾದನಾ ಘಟಕಗಳನ್ನು ಸ್ಥಗಿತಗೊಳಿಸಿದ್ದು, 8000 ಕೋಟಿ ರೂಪಾಯಿಗಳ ನಷ್ಟವನ್ನು ಡಿಕ್ಲೇರ್ ಮಾಡಿದೆ. ಮೊದಲ ಬಾರಿಗೆ ದ್ವಿಚಕ್ರ ವಾಹನಗಳ ಮಾರಾಟ ಕುಸಿದಿದೆ. ಪತಂಜಲಿ ಕೂಡಾ ತನ್ನ ಜಾಹೀರಾತುಗಳಿಗೆ ಕಡಿವಾಣ ಹಾಕಿದೆ. 2018ರಲ್ಲಿ ಅದು ತನ್ನ ಆದಾಯದಲ್ಲಿ 10% ಕಡಿತ ತೋರಿಸಿದೆ.

5. ಖಾಸಗಿಯವರು ಉತ್ಪಾದನೆ ಸ್ಥಗಿತಗೊಳಿಸಿದಾಗ, ಸಹಜವಾಗಿ ಸರಕಾರದ ಆದಾಯ ಇನ್ನಷ್ಟು ಕಡಿಮೆಯಾಗುತ್ತದೆ. ಲಾರಿಗಳನ್ನು ಬಾಡಿಗೆಗೆ ಕೊಳ್ಳುವವರಲ್ಲಿ ಈಗಾಗಲೇ ಶೇಕಡಾ 15 ಕಡಿತವುಂಟಾಗಿ, ಲಾರಿ ಚಾಲಕರು ಉದ್ಯೋಗವಿಲ್ಲದೆ ಅಳುತ್ತಿದ್ದಾರೆ. ಓಡಾಡುವವರಿಲ್ಲದೆ ವಿಮಾನಗಳು ನಿರಂತರ ನಷ್ಟ ಅನುಭವಿಸುತ್ತಿದ್ದು ಪ್ರಯಾಣಿಕರಲ್ಲಿ 25% ಕಡಿತ ಉಂಟಾಗಿದೆ. ಈ ವಿತ್ತೀಯ ಕೊರತೆಯನ್ನು ತುಂಬಿಕೊಳ್ಳಲು ಸರಕಾರ ಇನ್ನಷ್ಟು ತೆರಿಗೆಗಳನ್ನು ನಮ್ಮ ಮೇಲೆ ಹೇರುತ್ತದೆ.

6. ಜನರ ಕೊಳ್ಳುವ ಶಕ್ತಿಯು ಈಗಾಗಲೇ 20% ಕಡಿಮೆಯಾಗಿದೆ.

7. ಕೆಲವು ಆಯ್ದ ಜಾಗಗಳನ್ನು ಹೊರತು ಪಡಿಸಿದರೆ, ಉಳಿದೆಡೆಗಳಲ್ಲಿ ಉದ್ಯೋಗ ಸೃಷ್ಟಿಯಾಗುತ್ತಿಲ್ಲ. ಭಾರತದ ಅರ್ಥವ್ಯವಸ್ಥೆಗೆ ಮಾರಕ ಹೊಡೆತ ನೀಡಿದ ಡಿಮೋನಿಟೈಸೇಶನ್ ನಿಂದಾಗಿ ಸಣ್ಣ ಉದ್ಯಮಿಗಳೆಲ್ಲಾ ಬೀದಿ ಪಾಲಾಗಿದ್ದಾರೆ. ಇದು ಪರೋಕ್ಷವಾಗಿ ದೊಡ್ಡ ಉದ್ಯಮಗಳ ಮೇಲೂ ಪರಿಣಾಮ ಬೀರಿದೆ.

8. ಭಾರತ ಸರಕಾರವು 2020ರಲ್ಲಿ ಐದು ಟ್ರಿಲಿಯನ್ ಅರ್ಥವ್ಯಸ್ಥೆಯನ್ನು ಹೊಂದುವುದಾಗಿ ಘೋಷಿಸಿದೆ. ಇದು ಸಾಧ್ಯವಾಗಬೇಕಾದರೆ, ಭಾರತವು 14-15% ಅಭಿವೃದ್ಧಿಯನ್ನು ಸಾಧಿಸಬೇಕು. ಈಗ ಇರುವಂತೆ ಸರಕಾರ 7% ಅಭಿವೃದ್ಧಿಯನ್ನು ಘೋಷಿಸುತ್ತಿದ್ದರೂ ವಾಸ್ತವವಾಗಿ ಅದಿನ್ನೂ 4% ಆಗಿದೆ ಎಂದು ಅರ್ಥಶಾಸ್ತ್ರಜ್ಞರು ಹೇಳುತ್ತಿದ್ದಾರೆ. ಹೀಗಾಗಿ 14-15 % ಅಭಿವೃದ್ಧಿ ಮರೀಚಿಕೆಯೇ ಸರಿ.

9. ಅಂಕಿ ಅಂಶಗಳನ್ನು ಬೇಕಾದಂತೆ ತಿದ್ದುವ ಪರಿಪಾಠ ಬೆಳೆಯುತ್ತಿದ್ದು, ಸರಕಾರ ಹೇಳಿದ್ದನ್ನು ಯಾರೂ ನಂಬುತ್ತಿಲ್ಲವಾದ್ದರಿಂದ ವಿದೇಶಿ ಬಂಡವಾಳ ಹೂಡಿಕೆಯಲ್ಲಿ ವ್ಯತ್ಯಯ ಕಾಣಲಾರಂಭಿಸಿದೆ.
10. ಮಳೆ ಇಲ್ಲದೆ/ ಹೆಚ್ಚು ಮಳೆಬಂದು, ರೈತರು ಆತ್ಮಹತ್ಯೆ ಮಾಡಿಕೊಳ್ಳಲೇಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ಆರ್ಥಿಕ ಕುಸಿತದ ಸಮಸ್ಯೆಯು ಭಾರತಕ್ಕೆ ಮಾತ್ರ ಸೀಮಿತವಾಗಿರದೆ, ಜಾಗತಿಕವಾಗಿದೆ. ಆಳುವವರು ಈ ಆರ್ಥಿಕ ವಿಫಲತೆಯನ್ನು ಜನರೆದುರು ತೆರೆದಿಡದೆ, ಅದನ್ನು ಮುಚ್ಚಿ ಹಾಕಲು ಬಗೆ ಬಗೆಯ ತಂತ್ರಗಳನ್ನು ಹೆಣೆಯುತ್ತಿರುವುದನ್ನು ನಾವು ದಿನನಿತ್ಯ ಕಾಣುತ್ತಿದ್ದೇವೆ.
ಹಿಂದೂ’ಗಳೆಲ್ಲರೂ ಒಂದಾದ ಆನಂತರವೂ ಮೇಲೆ ಹೇಳಿದ ಭಾರತದ ಸಮಸ್ಯೆಗಳು ಹಾಗೆಯೇ ಉಳಿಯುತ್ತವೆ

ಹೀಗಾಗಿ ಕನಿಷ್ಠ ಮುಂದಿನ ಒಂದು ವರ್ಷಗಳವರೆಗೆ ದಯವಿಟ್ಟು ತಮ್ಮ ಹಣ ಕಾಸಿನ ವಿಚಾರದಲ್ಲಿ ಜಾಗ್ರತೆಯಾಗಿರಿ. ಶ್ರೀಮಂತರು ಸಹಾಯ ಮಾಡುವುದಿಲ್ಲ. ಮಾಡದಿರುವುದರಿಂದಲೇ ಅವರು ಶ್ರೀಮಂತರಾದದ್ದು. ಕಷ್ಟಕಾಲದಲ್ಲಿ ನೆರವಿಗೆ ಬರುವವರೂ ಕಡಿಮೆ, ಮತ್ತು ಅವರೂ ಕಷ್ಟದಲ್ಲಿರುತ್ತಾರೆ ಎಂಬುದನ್ನು ಮರೆಯದಿರೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...