Homeಮುಖಪುಟಕೇಂದ್ರದ ಸುಗ್ರೀವಾಜ್ಞೆ ವಿರುದ್ಧ ಎಎಪಿ ರ್‍ಯಾಲಿ; ‘ನಾಳೆ ನಿಮ್ಮ ಸರದಿ’ ಎಂದು ಎಚ್ಚರಿಸಿದ ಕೇಜ್ರೀವಾಲ್

ಕೇಂದ್ರದ ಸುಗ್ರೀವಾಜ್ಞೆ ವಿರುದ್ಧ ಎಎಪಿ ರ್‍ಯಾಲಿ; ‘ನಾಳೆ ನಿಮ್ಮ ಸರದಿ’ ಎಂದು ಎಚ್ಚರಿಸಿದ ಕೇಜ್ರೀವಾಲ್

- Advertisement -
- Advertisement -

ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲಂಘಿಸಿ, ದೆಹಲಿ ಸರ್ಕಾರವನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಸುಗ್ರೀವಾಜ್ಞೆಯನ್ನು ವಿರೋಧಿಸಿ ಇಂದು ದೆಹಲಿಯ ರಾಮ್‌ ಲೀಲಾ ಮೈದಾನದಲ್ಲಿ ಆಮ್‌ ಆದ್ಮಿ ಪಕ್ಷ (ಎಎಪಿ) ರ್‍ಯಾಲಿಯನ್ನು ನಡೆಸಿತು.

ರ್‍ಯಾಲಿಯಲ್ಲಿ ಮಾತನಾಡಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರೀವಾಲ್, “ವಿರೋಧ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳಲ್ಲೂ ಇದು ಸಂಭವಿಸಬಹುದು” ಎಂದು ಎಚ್ಚರಿಸಿದರು.

“ಸುಗ್ರೀವಾಜ್ಞೆ ಏನು ಹೇಳುತ್ತದೆ? ಮೋದಿಜಿಯವರ ಸುಗ್ರೀವಾಜ್ಞೆಯು ದೆಹಲಿಯಲ್ಲಿ ಪ್ರಜಾಪ್ರಭುತ್ವ ಇರುವುದಿಲ್ಲ ಎಂದು ಹೇಳುತ್ತದೆ. ಸರ್ವಾಧಿಕಾರವಿದೆ. ಜನರು ಇಲ್ಲಿ ಸರ್ವೋಚ್ಚ ಅಲ್ಲ, ಇಲ್ಲಿ ಲೆಫ್ಟನೆಟ್‌ ಜನರಲ್‌ ಸರ್ವೋಚ್ಚರಾಗಿದ್ದಾರೆ” ಎಂದು ಟೀಕಿಸಿದ್ದಾರೆ.

“ಜನರು ಯಾರನ್ನು ಆರಿಸುತ್ತಾರೆ ಎಂಬುದು ಮುಖ್ಯವಲ್ಲ, ನಾನು ದೆಹಲಿಯನ್ನು ನಡೆಸುತ್ತೇನೆ ಎನ್ನುತ್ತಾರೆ ಮೋದಿ. ಇದು ದೆಹಲಿಗೆ ಮಾತ್ರ ಸೀಮಿತವಾಗುತ್ತದೆ ಎಂದು ಭಾವಿಸಬೇಡಿ. ದೇಶದ ಇತರ ಭಾಗಗಳಲ್ಲೂ ಇದೇ ರೀತಿಯ ಸುಗ್ರೀವಾಜ್ಞೆಯನ್ನು ತರಲು ಅವರು ಯೋಜಿಸುತ್ತಿದ್ದಾರೆ ಎಂದು ನಾನು ಕೇಳಿದ್ದೇನೆ. ದೆಹಲಿಗೆ ಬಂದಂತಹ ಸುಗ್ರೀವಾಜ್ಞೆ ಸರ್ವಾಧಿಕಾರದ ಘೋಷಣೆಯಂತಿದೆ. ಮಹಾರಾಷ್ಟ್ರ, ರಾಜಸ್ಥಾನ, ಪಂಜಾಬ್, ಮಧ್ಯಪ್ರದೇಶದಲ್ಲಿ ಇದನ್ನು ತರಲಾಗುತ್ತದೆ” ಎಂದು ಭವಿಷ್ಯ ನುಡಿದಿದ್ದಾರೆ.

“ಕೇಂದ್ರ ಸರ್ಕಾರ ತಂದಿರುವ ಸುಗ್ರೀವಾಜ್ಞೆಯು ಚುನಾಯಿತ ಸರ್ಕಾರವನ್ನು ದುರ್ಬಲಗೊಳಿಸುತ್ತದೆ” ಎಂದು ಎಚ್ಚರಿಸಿದ್ದಾರೆ.

ರಾಜ್ಯಸಭೆಯಲ್ಲಿ ಸುಗ್ರೀವಾಜ್ಞೆಯನ್ನು ಸೋಲಿಸಬೇಕೆಂದು ಬೆಂಬಲವನ್ನು ಕೋರಿ ಬಿಜೆಪಿಯೇತರ ಸರ್ಕಾರಗಳಿರುವ ರಾಜ್ಯಗಳಿಗೆ ಕೇಜ್ರಿವಾಲ್ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಈ ರ್‍ಯಾಲಿ ನಡೆದಿದೆ.

ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಪಂಜಾಬ್ ಸಿಎಂ ಭಗವಂತ್ ಮಾನ್, ಆಪ್ ಸಂಸದರಾದ ಸಂಜಯ್ ಸಿಂಗ್, ಸಂದೀಪ್ ಪಾಠಕ್, ಸುಶೀಲ್ ಗುಪ್ತಾ, ಶಾಸಕರಾದ ಗೋಪಾಲ್ ರೈ, ಸೌರಭ್ ಭಾರದ್ವಾಜ್, ದುರ್ಗೇಶ್ ಪಾಠಕ್ ಮತ್ತು ಮಾಜಿ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಹಾಜರಿದ್ದರು.

2012ರಲ್ಲಿ ರಾಮಲೀಲಾ ಮೈದಾನದಲ್ಲಿ ಎಎಪಿ ಹುಟ್ಟಿದ್ದನ್ನು ಸ್ಮರಿಸಿದ ಕೇಜ್ರಿವಾಲ್, “ಹನ್ನೆರಡು ವರ್ಷಗಳ ಹಿಂದೆ ಭ್ರಷ್ಟಾಚಾರದ ವಿರುದ್ಧ ಇಲ್ಲಿ ಒಟ್ಟುಗೂಡಿದ್ದೆವು. ಇದೊಂದು ಪವಿತ್ರ ವೇದಿಕೆ. ಇಂದು ನಾವು ಸರ್ವಾಧಿಕಾರಿಯನ್ನು ದೇಶದಿಂದ ಕಿತ್ತೊಗೆಯಲು ಒಟ್ಟುಗೂಡಿದ್ದೇವೆ. ಆ ಸಮಯದಲ್ಲಿ ನಮ್ಮ ಚಳವಳಿ ಯಶಸ್ವಿಯಾಗಿತ್ತು. ಇದು ಸರ್ವಾಧಿಕಾರವನ್ನು ಕೊನೆಗೊಳಿಸಿ ಪ್ರಜಾಪ್ರಭುತ್ವವನ್ನು ಮರಳಿ ತರುವ ಆಂದೋಲನವಾಗಿದೆ. ಸುಪ್ರೀಂಕೋರ್ಟ್‌ನಲ್ಲಿ ನಮ್ಮ ವಕೀಲ ಅಭಿಷೇಕ್ ಮನು ಸಿಂಘ್ವಿ, ನಮಗಾಗಿ, ನಿಮಗಾಗಿ ವಾದಿಸಿ ಗೆದ್ದಿದ್ದಕ್ಕಾಗಿ ನಾನು ಧನ್ಯವಾದ ಹೇಳುತ್ತೇನೆ” ಎಂದಿದ್ದಾರೆ.

“ನಾನು ಸುಪ್ರೀಂ ಕೋರ್ಟ್ ಅನ್ನು ಗೌರವಿಸುವುದಿಲ್ಲ ಎಂದು ಪ್ರಧಾನಿ ಹೇಳುತ್ತಾರೆ. ಪ್ರಧಾನಿಯೊಬ್ಬರು ಈ ರೀತಿ ನಡೆದುಕೊಳ್ಳುತ್ತಿರುವುದು ಇದೇ ಮೊದಲು. ದೇಶದ ಜನತೆ ಬೆಚ್ಚಿಬಿದ್ದಿದ್ದಾರೆ. ತಮ್ಮ ಪ್ರಧಾನಿ ತುಂಬಾ ದುರಹಂಕಾರಿ ಎಂಬುದನ್ನು ಅವರು ಒಪ್ಪಲ್ಲ. ಪ್ರಜಾಪ್ರಭುತ್ವವೇ ಸರ್ವೋಚ್ಚ ಎಂದು ಸುಪ್ರೀಕೋರ್ಟ್ ಹೇಳಿದೆ. ಜನರ ಇಚ್ಛೆಯೇ ಸರ್ವಶ್ರೇಷ್ಠ. ಚುನಾಯಿತ ಸರ್ಕಾರಕ್ಕೆ ಯಾವುದೇ ಪಕ್ಷ ಭೇದವಿಲ್ಲದೇ ಕೆಲಸ ಮಾಡುವ ಹಕ್ಕು ಇರಬೇಕು. ನಾನು ಕೇಳಲು ಬಯಸುತ್ತೇನೆ, ಸುಪ್ರೀಂಕೋರ್ಟ್‌ನಿಂದ ತಪ್ಪಾಗಿದೆಯೇ? ಪ್ರಧಾನಿ ಆದೇಶಕ್ಕೆ ಬದ್ಧರಾಗಬೇಕೇ?” ಎಂದು ಪ್ರಶ್ನಿಸಿದ್ದಾರೆ.

ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದೇನು?

ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್‌ ಆದ್ಮಿ ಸರ್ಕಾರದ ಪರವಾಗಿ ಮಹತ್ವದ ತೀರ್ಪನ್ನು ಸುಪ್ರೀಂಕೋರ್ಟ್ ಪ್ರಕಟಿಸಿತ್ತು. ದೆಹಲಿ ಸರ್ಕಾರದ ಎಲ್ಲ ನಿರ್ಧಾರಗಳಲ್ಲಿಯೂ ಕೇಂದ್ರ ಸರ್ಕಾರ ಮೂಗು ತೂರಿಸುವಂತಿಲ್ಲ ಎಂದು ಸೂಚಿಸಿತ್ತು.

ಕೇಂದ್ರದಿಂದ ನೇಮಕವಾಗುವ ಲೆಫ್ಟಿನೆಂಟ್ ಗವರ್ನರ್‌ಗೆ ಖಡಕ್ ಸೂಚನೆಗಳನ್ನು ನೀಡಿರುವ ಸರ್ವೋಚ್ಚ ನ್ಯಾಯಾಲಯ, “ದೆಹಲಿ ಸರ್ಕಾರವು ಸೇವೆಗಳ ಮೇಲೆ ನಿಯಂತ್ರಣ ಹೊಂದಿರಬೇಕು, ಲೆಫ್ಟಿನೆಂಟ್ ಗವರ್ನರ್ ಸರ್ಕಾರದ ನಿಯಂತ್ರಣಕ್ಕೆ ಬದ್ಧರಾಗಿರಬೇಕು” ಎಂದು ನಿರ್ದೇಶಿಸಿದೆ.

ಎಎಪಿ ಮತ್ತು ಕೇಂದ್ರ ಸರ್ಕಾರದ ನಡುವೆ ಅಧಿಕಾರದ ತಿಕ್ಕಾಟ ನಡೆಯುತ್ತಿರುವಾಗ ಈ ತೀರ್ಪು ಹೊರಬಿದ್ದಿದೆ. “ಜನರ ಇಚ್ಛೆಯನ್ನು ಪ್ರತಿನಿಧಿಸಿ ಕಾನೂನು ರೂಪಿಸುವ ಅಧಿಕಾರವನ್ನು ದೆಹಲಿ ವಿಧಾನಸಭೆಗೆ ನೀಡಲಾಗಿದೆ” ಎಂದು ಸುಪ್ರೀಂ ಕೋರ್ಟ್‌ನ ಸಂವಿಧಾನ ಪೀಠವು ಸರ್ವಾನುಮತದ ತೀರ್ಪಿನಲ್ಲಿ ಸ್ಪಷ್ಟಪಡಿಸಿದೆ.

“ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಆಡಳಿತದ ನಿಜವಾದ ಅಧಿಕಾರವು ಚುನಾಯಿತ ಸರ್ಕಾರದ ತೋಳಿನ ಮೇಲೆ ನಿಂತಿರಬೇಕು” ಎಂದು ಪೀಠವು ಅಭಿಪ್ರಾಯಪಟ್ಟಿದೆ. ಕೇಂದ್ರ ಮತ್ತು ರಾಜ್ಯಗಳೆರಡೂ ಸೇರಿ ಕಾನೂನು ರಚಿಸಬಹುದಾದ ವಿಷಯಗಳಲ್ಲಿ ಕೇಂದ್ರ ಸರ್ಕಾರವು ದೆಹಲಿ ಚುನಾಯಿತ ಸರ್ಕಾರದೊಂದಿಗೆ ಚರ್ಚಿಸಬಹುದು. ‘ಸದರಿ ವಿಚಾರದಲ್ಲಿ ಕೇಂದ್ರ ಸರ್ಕಾರವನ್ನು ಮೀರಲಾಗಿಲ್ಲ ಎಂದು ಖಚಿತಪಡಿಸಿಕೊಳ್ಳಲಷ್ಟೇ ಇದು ಸೀಮಿತವಾಗಿರುತ್ತದೆ’ ಎಂದು ಸ್ಪಷ್ಟವಾಗಿ ತಿಳಿಸಲಾಗಿದೆ.

ಆಡಳಿತ ಸೇವೆಗಳ ಮೇಲೆ ದೆಹಲಿ ಸರ್ಕಾರಕ್ಕೆ ಯಾವುದೇ ಅಧಿಕಾರವಿಲ್ಲ ಎಂದು ಒಪ್ಪದ ನ್ಯಾಯಾಧೀಶರು, “ಸಾರ್ವಜನಿಕ ಸುವ್ಯವಸ್ಥೆ, ಪೊಲೀಸ್ ಮತ್ತು ಭೂಮಿ ವಿಷಯಗಳನ್ನಷ್ಟೇ ಅದರ (ದೆಹಲಿ) ಅಧಿಕಾರ ವ್ಯಾಪ್ತಿಯಿಂದ ಹೊರಗಿಡಲಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿರಿ: ಸಾಗರದ ದಲಿತ ವಿದ್ಯಾರ್ಥಿನಿ ಪ್ರಕರಣ; ವಸತಿ ಶಾಲೆ ಮುಖ್ಯಸ್ಥನ ವಿರುದ್ಧ ‘ಪೋಕ್ಸೋ’, ‘ಅಟ್ರಾಸಿಟಿ’ ಕೇಸ್‌ ದಾಖಲು

“ಅಧಿಕಾರಿಗಳು ಮಂತ್ರಿಗಳಿಗೆ ವರದಿ ಮಾಡುವುದನ್ನು ನಿಲ್ಲಿಸಿದರೆ ಅಥವಾ ಅವರ ನಿರ್ದೇಶನಗಳನ್ನು ಪಾಲಿಸದಿದ್ದರೆ, ಸಾಮೂಹಿಕ ಜವಾಬ್ದಾರಿಯ ತತ್ವದಲ್ಲಿ ಪರಿಣಾಮ ಕಂಡುಬರುತ್ತದೆ” ಎಂದು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಆದೇಶಿಸಿದ್ದಾರೆ.

ರಾಷ್ಟ್ರದ ರಾಜಧಾನಿಯಲ್ಲಿ ಅಧಿಕಾರಶಾಹಿಗಳ ವರ್ಗಾವಣೆ ಮತ್ತು ಪೋಸ್ಟಿಂಗ್‌ಗಳ ಮೇಲೆ ಆಡಳಿತಾತ್ಮಕ ನಿಯಂತ್ರಣವನ್ನು ಯಾರು ಹೊಂದಿದ್ದಾರೆ ಎಂಬ ಪ್ರಶ್ನೆ ಕೋರ್ಟ್ ಮುಂದಿತ್ತು. ಐವರು ನ್ಯಾಯಾಧೀಶರ ಸಂವಿಧಾನ ಪೀಠವು ಈ ಪ್ರಕರಣವನ್ನು ಆಲಿಸಿತ್ತು.

ದೆಹಲಿ ಸರ್ಕಾರದಲ್ಲಿ ಕೇಂದ್ರ ಸರ್ಕಾರವನ್ನು ಪ್ರತಿನಿಧಿಸುವ ಲೆಫ್ಟಿನೆಂಟ್ ಗವರ್ನರ್, ಆಡಳಿತ ಸೇವೆಗಳ ವಿಚಾರದಲ್ಲಿ ಚುನಾಯಿತ ಸರ್ಕಾರದ ನಿರ್ಧಾರಕ್ಕೆ ಬದ್ಧರಾಗಿರುತ್ತಾರೆ ಎಂದು ನ್ಯಾಯಾಧೀಶರು ತೀರ್ಪು ನೀಡಿದ್ದಾರೆ. ಮಂತ್ರಿಮಂಡಲದ ಸಹಾಯ ಮತ್ತು ಸಲಹೆಗೂ ಲೆಫ್ಟಿನೆಂಟ್ ಗವರ್ನರ್ ಬದ್ಧರಾಗಿರುತ್ತಾರೆ ಎಂದು ಕೋರ್ಟ್ ಸ್ಪಷ್ಟಪಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...