Homeಮುಖಪುಟಕೇಂದ್ರದ ಸುಗ್ರೀವಾಜ್ಞೆ ವಿರುದ್ಧ ಎಎಪಿ ರ್‍ಯಾಲಿ; ‘ನಾಳೆ ನಿಮ್ಮ ಸರದಿ’ ಎಂದು ಎಚ್ಚರಿಸಿದ ಕೇಜ್ರೀವಾಲ್

ಕೇಂದ್ರದ ಸುಗ್ರೀವಾಜ್ಞೆ ವಿರುದ್ಧ ಎಎಪಿ ರ್‍ಯಾಲಿ; ‘ನಾಳೆ ನಿಮ್ಮ ಸರದಿ’ ಎಂದು ಎಚ್ಚರಿಸಿದ ಕೇಜ್ರೀವಾಲ್

- Advertisement -
- Advertisement -

ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲಂಘಿಸಿ, ದೆಹಲಿ ಸರ್ಕಾರವನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಸುಗ್ರೀವಾಜ್ಞೆಯನ್ನು ವಿರೋಧಿಸಿ ಇಂದು ದೆಹಲಿಯ ರಾಮ್‌ ಲೀಲಾ ಮೈದಾನದಲ್ಲಿ ಆಮ್‌ ಆದ್ಮಿ ಪಕ್ಷ (ಎಎಪಿ) ರ್‍ಯಾಲಿಯನ್ನು ನಡೆಸಿತು.

ರ್‍ಯಾಲಿಯಲ್ಲಿ ಮಾತನಾಡಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರೀವಾಲ್, “ವಿರೋಧ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳಲ್ಲೂ ಇದು ಸಂಭವಿಸಬಹುದು” ಎಂದು ಎಚ್ಚರಿಸಿದರು.

“ಸುಗ್ರೀವಾಜ್ಞೆ ಏನು ಹೇಳುತ್ತದೆ? ಮೋದಿಜಿಯವರ ಸುಗ್ರೀವಾಜ್ಞೆಯು ದೆಹಲಿಯಲ್ಲಿ ಪ್ರಜಾಪ್ರಭುತ್ವ ಇರುವುದಿಲ್ಲ ಎಂದು ಹೇಳುತ್ತದೆ. ಸರ್ವಾಧಿಕಾರವಿದೆ. ಜನರು ಇಲ್ಲಿ ಸರ್ವೋಚ್ಚ ಅಲ್ಲ, ಇಲ್ಲಿ ಲೆಫ್ಟನೆಟ್‌ ಜನರಲ್‌ ಸರ್ವೋಚ್ಚರಾಗಿದ್ದಾರೆ” ಎಂದು ಟೀಕಿಸಿದ್ದಾರೆ.

“ಜನರು ಯಾರನ್ನು ಆರಿಸುತ್ತಾರೆ ಎಂಬುದು ಮುಖ್ಯವಲ್ಲ, ನಾನು ದೆಹಲಿಯನ್ನು ನಡೆಸುತ್ತೇನೆ ಎನ್ನುತ್ತಾರೆ ಮೋದಿ. ಇದು ದೆಹಲಿಗೆ ಮಾತ್ರ ಸೀಮಿತವಾಗುತ್ತದೆ ಎಂದು ಭಾವಿಸಬೇಡಿ. ದೇಶದ ಇತರ ಭಾಗಗಳಲ್ಲೂ ಇದೇ ರೀತಿಯ ಸುಗ್ರೀವಾಜ್ಞೆಯನ್ನು ತರಲು ಅವರು ಯೋಜಿಸುತ್ತಿದ್ದಾರೆ ಎಂದು ನಾನು ಕೇಳಿದ್ದೇನೆ. ದೆಹಲಿಗೆ ಬಂದಂತಹ ಸುಗ್ರೀವಾಜ್ಞೆ ಸರ್ವಾಧಿಕಾರದ ಘೋಷಣೆಯಂತಿದೆ. ಮಹಾರಾಷ್ಟ್ರ, ರಾಜಸ್ಥಾನ, ಪಂಜಾಬ್, ಮಧ್ಯಪ್ರದೇಶದಲ್ಲಿ ಇದನ್ನು ತರಲಾಗುತ್ತದೆ” ಎಂದು ಭವಿಷ್ಯ ನುಡಿದಿದ್ದಾರೆ.

“ಕೇಂದ್ರ ಸರ್ಕಾರ ತಂದಿರುವ ಸುಗ್ರೀವಾಜ್ಞೆಯು ಚುನಾಯಿತ ಸರ್ಕಾರವನ್ನು ದುರ್ಬಲಗೊಳಿಸುತ್ತದೆ” ಎಂದು ಎಚ್ಚರಿಸಿದ್ದಾರೆ.

ರಾಜ್ಯಸಭೆಯಲ್ಲಿ ಸುಗ್ರೀವಾಜ್ಞೆಯನ್ನು ಸೋಲಿಸಬೇಕೆಂದು ಬೆಂಬಲವನ್ನು ಕೋರಿ ಬಿಜೆಪಿಯೇತರ ಸರ್ಕಾರಗಳಿರುವ ರಾಜ್ಯಗಳಿಗೆ ಕೇಜ್ರಿವಾಲ್ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಈ ರ್‍ಯಾಲಿ ನಡೆದಿದೆ.

ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಪಂಜಾಬ್ ಸಿಎಂ ಭಗವಂತ್ ಮಾನ್, ಆಪ್ ಸಂಸದರಾದ ಸಂಜಯ್ ಸಿಂಗ್, ಸಂದೀಪ್ ಪಾಠಕ್, ಸುಶೀಲ್ ಗುಪ್ತಾ, ಶಾಸಕರಾದ ಗೋಪಾಲ್ ರೈ, ಸೌರಭ್ ಭಾರದ್ವಾಜ್, ದುರ್ಗೇಶ್ ಪಾಠಕ್ ಮತ್ತು ಮಾಜಿ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಹಾಜರಿದ್ದರು.

2012ರಲ್ಲಿ ರಾಮಲೀಲಾ ಮೈದಾನದಲ್ಲಿ ಎಎಪಿ ಹುಟ್ಟಿದ್ದನ್ನು ಸ್ಮರಿಸಿದ ಕೇಜ್ರಿವಾಲ್, “ಹನ್ನೆರಡು ವರ್ಷಗಳ ಹಿಂದೆ ಭ್ರಷ್ಟಾಚಾರದ ವಿರುದ್ಧ ಇಲ್ಲಿ ಒಟ್ಟುಗೂಡಿದ್ದೆವು. ಇದೊಂದು ಪವಿತ್ರ ವೇದಿಕೆ. ಇಂದು ನಾವು ಸರ್ವಾಧಿಕಾರಿಯನ್ನು ದೇಶದಿಂದ ಕಿತ್ತೊಗೆಯಲು ಒಟ್ಟುಗೂಡಿದ್ದೇವೆ. ಆ ಸಮಯದಲ್ಲಿ ನಮ್ಮ ಚಳವಳಿ ಯಶಸ್ವಿಯಾಗಿತ್ತು. ಇದು ಸರ್ವಾಧಿಕಾರವನ್ನು ಕೊನೆಗೊಳಿಸಿ ಪ್ರಜಾಪ್ರಭುತ್ವವನ್ನು ಮರಳಿ ತರುವ ಆಂದೋಲನವಾಗಿದೆ. ಸುಪ್ರೀಂಕೋರ್ಟ್‌ನಲ್ಲಿ ನಮ್ಮ ವಕೀಲ ಅಭಿಷೇಕ್ ಮನು ಸಿಂಘ್ವಿ, ನಮಗಾಗಿ, ನಿಮಗಾಗಿ ವಾದಿಸಿ ಗೆದ್ದಿದ್ದಕ್ಕಾಗಿ ನಾನು ಧನ್ಯವಾದ ಹೇಳುತ್ತೇನೆ” ಎಂದಿದ್ದಾರೆ.

“ನಾನು ಸುಪ್ರೀಂ ಕೋರ್ಟ್ ಅನ್ನು ಗೌರವಿಸುವುದಿಲ್ಲ ಎಂದು ಪ್ರಧಾನಿ ಹೇಳುತ್ತಾರೆ. ಪ್ರಧಾನಿಯೊಬ್ಬರು ಈ ರೀತಿ ನಡೆದುಕೊಳ್ಳುತ್ತಿರುವುದು ಇದೇ ಮೊದಲು. ದೇಶದ ಜನತೆ ಬೆಚ್ಚಿಬಿದ್ದಿದ್ದಾರೆ. ತಮ್ಮ ಪ್ರಧಾನಿ ತುಂಬಾ ದುರಹಂಕಾರಿ ಎಂಬುದನ್ನು ಅವರು ಒಪ್ಪಲ್ಲ. ಪ್ರಜಾಪ್ರಭುತ್ವವೇ ಸರ್ವೋಚ್ಚ ಎಂದು ಸುಪ್ರೀಕೋರ್ಟ್ ಹೇಳಿದೆ. ಜನರ ಇಚ್ಛೆಯೇ ಸರ್ವಶ್ರೇಷ್ಠ. ಚುನಾಯಿತ ಸರ್ಕಾರಕ್ಕೆ ಯಾವುದೇ ಪಕ್ಷ ಭೇದವಿಲ್ಲದೇ ಕೆಲಸ ಮಾಡುವ ಹಕ್ಕು ಇರಬೇಕು. ನಾನು ಕೇಳಲು ಬಯಸುತ್ತೇನೆ, ಸುಪ್ರೀಂಕೋರ್ಟ್‌ನಿಂದ ತಪ್ಪಾಗಿದೆಯೇ? ಪ್ರಧಾನಿ ಆದೇಶಕ್ಕೆ ಬದ್ಧರಾಗಬೇಕೇ?” ಎಂದು ಪ್ರಶ್ನಿಸಿದ್ದಾರೆ.

ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದೇನು?

ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್‌ ಆದ್ಮಿ ಸರ್ಕಾರದ ಪರವಾಗಿ ಮಹತ್ವದ ತೀರ್ಪನ್ನು ಸುಪ್ರೀಂಕೋರ್ಟ್ ಪ್ರಕಟಿಸಿತ್ತು. ದೆಹಲಿ ಸರ್ಕಾರದ ಎಲ್ಲ ನಿರ್ಧಾರಗಳಲ್ಲಿಯೂ ಕೇಂದ್ರ ಸರ್ಕಾರ ಮೂಗು ತೂರಿಸುವಂತಿಲ್ಲ ಎಂದು ಸೂಚಿಸಿತ್ತು.

ಕೇಂದ್ರದಿಂದ ನೇಮಕವಾಗುವ ಲೆಫ್ಟಿನೆಂಟ್ ಗವರ್ನರ್‌ಗೆ ಖಡಕ್ ಸೂಚನೆಗಳನ್ನು ನೀಡಿರುವ ಸರ್ವೋಚ್ಚ ನ್ಯಾಯಾಲಯ, “ದೆಹಲಿ ಸರ್ಕಾರವು ಸೇವೆಗಳ ಮೇಲೆ ನಿಯಂತ್ರಣ ಹೊಂದಿರಬೇಕು, ಲೆಫ್ಟಿನೆಂಟ್ ಗವರ್ನರ್ ಸರ್ಕಾರದ ನಿಯಂತ್ರಣಕ್ಕೆ ಬದ್ಧರಾಗಿರಬೇಕು” ಎಂದು ನಿರ್ದೇಶಿಸಿದೆ.

ಎಎಪಿ ಮತ್ತು ಕೇಂದ್ರ ಸರ್ಕಾರದ ನಡುವೆ ಅಧಿಕಾರದ ತಿಕ್ಕಾಟ ನಡೆಯುತ್ತಿರುವಾಗ ಈ ತೀರ್ಪು ಹೊರಬಿದ್ದಿದೆ. “ಜನರ ಇಚ್ಛೆಯನ್ನು ಪ್ರತಿನಿಧಿಸಿ ಕಾನೂನು ರೂಪಿಸುವ ಅಧಿಕಾರವನ್ನು ದೆಹಲಿ ವಿಧಾನಸಭೆಗೆ ನೀಡಲಾಗಿದೆ” ಎಂದು ಸುಪ್ರೀಂ ಕೋರ್ಟ್‌ನ ಸಂವಿಧಾನ ಪೀಠವು ಸರ್ವಾನುಮತದ ತೀರ್ಪಿನಲ್ಲಿ ಸ್ಪಷ್ಟಪಡಿಸಿದೆ.

“ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಆಡಳಿತದ ನಿಜವಾದ ಅಧಿಕಾರವು ಚುನಾಯಿತ ಸರ್ಕಾರದ ತೋಳಿನ ಮೇಲೆ ನಿಂತಿರಬೇಕು” ಎಂದು ಪೀಠವು ಅಭಿಪ್ರಾಯಪಟ್ಟಿದೆ. ಕೇಂದ್ರ ಮತ್ತು ರಾಜ್ಯಗಳೆರಡೂ ಸೇರಿ ಕಾನೂನು ರಚಿಸಬಹುದಾದ ವಿಷಯಗಳಲ್ಲಿ ಕೇಂದ್ರ ಸರ್ಕಾರವು ದೆಹಲಿ ಚುನಾಯಿತ ಸರ್ಕಾರದೊಂದಿಗೆ ಚರ್ಚಿಸಬಹುದು. ‘ಸದರಿ ವಿಚಾರದಲ್ಲಿ ಕೇಂದ್ರ ಸರ್ಕಾರವನ್ನು ಮೀರಲಾಗಿಲ್ಲ ಎಂದು ಖಚಿತಪಡಿಸಿಕೊಳ್ಳಲಷ್ಟೇ ಇದು ಸೀಮಿತವಾಗಿರುತ್ತದೆ’ ಎಂದು ಸ್ಪಷ್ಟವಾಗಿ ತಿಳಿಸಲಾಗಿದೆ.

ಆಡಳಿತ ಸೇವೆಗಳ ಮೇಲೆ ದೆಹಲಿ ಸರ್ಕಾರಕ್ಕೆ ಯಾವುದೇ ಅಧಿಕಾರವಿಲ್ಲ ಎಂದು ಒಪ್ಪದ ನ್ಯಾಯಾಧೀಶರು, “ಸಾರ್ವಜನಿಕ ಸುವ್ಯವಸ್ಥೆ, ಪೊಲೀಸ್ ಮತ್ತು ಭೂಮಿ ವಿಷಯಗಳನ್ನಷ್ಟೇ ಅದರ (ದೆಹಲಿ) ಅಧಿಕಾರ ವ್ಯಾಪ್ತಿಯಿಂದ ಹೊರಗಿಡಲಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿರಿ: ಸಾಗರದ ದಲಿತ ವಿದ್ಯಾರ್ಥಿನಿ ಪ್ರಕರಣ; ವಸತಿ ಶಾಲೆ ಮುಖ್ಯಸ್ಥನ ವಿರುದ್ಧ ‘ಪೋಕ್ಸೋ’, ‘ಅಟ್ರಾಸಿಟಿ’ ಕೇಸ್‌ ದಾಖಲು

“ಅಧಿಕಾರಿಗಳು ಮಂತ್ರಿಗಳಿಗೆ ವರದಿ ಮಾಡುವುದನ್ನು ನಿಲ್ಲಿಸಿದರೆ ಅಥವಾ ಅವರ ನಿರ್ದೇಶನಗಳನ್ನು ಪಾಲಿಸದಿದ್ದರೆ, ಸಾಮೂಹಿಕ ಜವಾಬ್ದಾರಿಯ ತತ್ವದಲ್ಲಿ ಪರಿಣಾಮ ಕಂಡುಬರುತ್ತದೆ” ಎಂದು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಆದೇಶಿಸಿದ್ದಾರೆ.

ರಾಷ್ಟ್ರದ ರಾಜಧಾನಿಯಲ್ಲಿ ಅಧಿಕಾರಶಾಹಿಗಳ ವರ್ಗಾವಣೆ ಮತ್ತು ಪೋಸ್ಟಿಂಗ್‌ಗಳ ಮೇಲೆ ಆಡಳಿತಾತ್ಮಕ ನಿಯಂತ್ರಣವನ್ನು ಯಾರು ಹೊಂದಿದ್ದಾರೆ ಎಂಬ ಪ್ರಶ್ನೆ ಕೋರ್ಟ್ ಮುಂದಿತ್ತು. ಐವರು ನ್ಯಾಯಾಧೀಶರ ಸಂವಿಧಾನ ಪೀಠವು ಈ ಪ್ರಕರಣವನ್ನು ಆಲಿಸಿತ್ತು.

ದೆಹಲಿ ಸರ್ಕಾರದಲ್ಲಿ ಕೇಂದ್ರ ಸರ್ಕಾರವನ್ನು ಪ್ರತಿನಿಧಿಸುವ ಲೆಫ್ಟಿನೆಂಟ್ ಗವರ್ನರ್, ಆಡಳಿತ ಸೇವೆಗಳ ವಿಚಾರದಲ್ಲಿ ಚುನಾಯಿತ ಸರ್ಕಾರದ ನಿರ್ಧಾರಕ್ಕೆ ಬದ್ಧರಾಗಿರುತ್ತಾರೆ ಎಂದು ನ್ಯಾಯಾಧೀಶರು ತೀರ್ಪು ನೀಡಿದ್ದಾರೆ. ಮಂತ್ರಿಮಂಡಲದ ಸಹಾಯ ಮತ್ತು ಸಲಹೆಗೂ ಲೆಫ್ಟಿನೆಂಟ್ ಗವರ್ನರ್ ಬದ್ಧರಾಗಿರುತ್ತಾರೆ ಎಂದು ಕೋರ್ಟ್ ಸ್ಪಷ್ಟಪಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...