Homeಮುಖಪುಟ‘ಶೌಚಾಲಯದ ನೀರು ಕುಡಿಯಲು ಒತ್ತಾಯಿಸಲಾಗಿತ್ತು’: ನೈಜೀರಿಯಾದಲ್ಲಿ ಬಂಧಿಯಾಗಿದ್ದ ಕೇರಳ ನಾವಿಕರ ಮಾತು

‘ಶೌಚಾಲಯದ ನೀರು ಕುಡಿಯಲು ಒತ್ತಾಯಿಸಲಾಗಿತ್ತು’: ನೈಜೀರಿಯಾದಲ್ಲಿ ಬಂಧಿಯಾಗಿದ್ದ ಕೇರಳ ನಾವಿಕರ ಮಾತು

- Advertisement -
- Advertisement -

ಬಂಧನಕ್ಕೊಳಗಾಗಿ ಹತ್ತು ತಿಂಗಳ ನಂತರ ನೈಜೀರಿಯಾದಿಂದ ಬಿಡುಗಡೆಯಾಗಿರುವ ಕೇರಳದ ಮೂವರು ನಾವಿಕರು ತಾವು ಅನುಭವಿಸಿದ ಕಷ್ಟಗಳನ್ನು ಹಂಚಿಕೊಂಡಿದ್ದು, “ಸೆರೆಯಲ್ಲಿದ್ದಾಗ ಶೌಚಾಲಯದ ನೀರನ್ನು ಕುಡಿಯಲು ಒತ್ತಾಯಿಸಲಾಯಿತು” ಎಂದು ಹೇಳಿದ್ದಾರೆ.

ಹತ್ತು ತಿಂಗಳಿಂದ ಸೆರೆಯಲ್ಲಿದ್ದ ನಾವಿಕರು ಜೂನ್ 10ರಂದು ತಮ್ಮ ನಿವಾಸಗಳನ್ನು ತಲುಪಿಸಿದ್ದಾರೆ.

ಹಡಗಿನ ಮುಖ್ಯ ಅಧಿಕಾರಿಯಾಗಿದ್ದ ಕೊಚ್ಚಿಯ ಸಾನು ಜೋಸೆಫ್, ಆಯಿಲರ್ ಮಿಲ್ಟನ್ ಡಿ ಕೌತ್, ಕೊಲ್ಲಂನ ಹಡಗಿನ ಮೂರನೇ ಅಧಿಕಾರಿ ವಿ ವಿಜಿತ್ ಬಂಧನಕ್ಕೊಳಗಾದವರಲ್ಲಿ ಮೂವರು.

ಹಡಗು ತನ್ನ ಪ್ರಾದೇಶಿಕ ನೀರಿನ ಗಡಿಯನ್ನು ದಾಟಿದೆ ಎಂಬ ಆರೋಪದ ಮೇಲೆ ಹಡಗು ಮತ್ತು ಅದರ ಸಿಬ್ಬಂದಿಯನ್ನು ‘ಈಕ್ವಟೋರಿಯಲ್ ಗಿನಿಯಾ’ ದೇಶವು ಮೊದಲು ಬಂಧಿಸಿತು. ಮೂರು ತಿಂಗಳ ಕಾಲ ಕಸ್ಟಡಿಗೆ ತೆಗೆದುಕೊಳ್ಳಲಾಗಿತ್ತು.

16 ಭಾರತೀಯರನ್ನು ಒಳಗೊಂಡ 26 ಸದಸ್ಯ ಸಿಬ್ಬಂದಿ ಇದರಲ್ಲಿದ್ದರು. ಆ ಪೈಕಿ ಮೂವರು ಕೇರಳೀಯರಿದ್ದರು. ಎಂಟು ಮಂದಿ ಶ್ರೀಲಂಕಾ ಮೂಲದವರಾಗಿದ್ದರು. ಆಗಸ್ಟ್ 2022ರಲ್ಲಿ ಈಕ್ವಟೋರಿಯಲ್ ಗಿನಿಯಾದಲ್ಲಿ ಮೊದಲು ಬಂಧಿಸಲಾಯಿತು. ನವೆಂಬರ್‌ನಲ್ಲಿ ನೈಜೀರಿಯಾ ದೇಶಕ್ಕೆ ಅವರನ್ನು ಒಪ್ಪಿಸಲಾಗಿತ್ತು.

ಇದನ್ನೂ ಓದಿರಿ: ಕೇಂದ್ರದ ಸುಗ್ರೀವಾಜ್ಞೆ ವಿರುದ್ಧ ಎಎಪಿ ರ್‍ಯಾಲಿ; ‘ನಾಳೆ ನಿಮ್ಮ ಸರದಿ’ ಎಂದು ಎಚ್ಚರಿಸಿದ ಕೇಜ್ರೀವಾಲ್

ಶಿಪ್ಪಿಂಗ್ ಕಂಪನಿಯು ಈಕ್ವಟೋರಿಯಲ್ ಗಿನಿಯಾ ದೇಶಕ್ಕೆ ಭಾರಿ ಮೊತ್ತವನ್ನು ಪಾವತಿಸಿದೆ ಎಂಬ ವರದಿಗಳಿವೆ. ಆದರೆ ಆರಂಭದಲ್ಲಿ ಬಿಡುಗಡೆ ಮಾಡಲಾಗಿರಲಿಲ್ಲ. ಇದರ ನಡುವೆ ನೈಜೀರಿಯಾ ಸರ್ಕಾರವು ಹೊಸ ಆರೋಪವನ್ನು ಮಾಡಿತು. ಹಡಗಿನ ಸಿಬ್ಬಂದಿ ನೈಜೀರಿಯಾದ ತೈಲ ಟ್ಯಾಂಕರ್‌ಗಳಿಂದ ತೈಲವನ್ನು ಕಳ್ಳಸಾಗಣೆ ಮಾಡಿದ್ದಾರೆ ಎಂದು ದೂರಿತು.

ನೈಜೀರಿಯಾದ ಪೊಲೀಸರು ಹಡಗು ಮತ್ತು ನಾವಿಕರನ್ನು ಕಸ್ಟಡಿಗೆ ತೆಗೆದುಕೊಂಡರು. ಮುಂದಿನ ಎಂಟು ತಿಂಗಳ ಕಾಲ ಅಗ್ನಿಪರೀಕ್ಷೆಯನ್ನು ನಾವಿಕರು ಎದುರಿಸಬೇಕಾಯಿತು. ಭಾರತ ಸರ್ಕಾರ ಮತ್ತು ಹಲವಾರು ಇತರ ಏಜೆನ್ಸಿಗಳು ಈ ವಿಷಯದಲ್ಲಿ ಮಧ್ಯಪ್ರವೇಶಿಸಿ ನಾವಿಕರನ್ನು ಬಿಡುಗಡೆಗೊಳಿಸಿದವು.

ನಾವಿಕರು ಸೆರೆಯಲ್ಲಿದ್ದಾಗ ಸಾಕಷ್ಟು ಸಂಕಷ್ಟ ಅನುಭವಿಸಿದರು. ಅನಾರೋಗ್ಯಕ್ಕೆ ಒಳಗಾದರು. ಮಲೇರಿಯಾ ಜ್ವರಕ್ಕೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದರು.

ಅವರು ಭರವಸೆಯನ್ನೇ ಕಳೆದುಕೊಂಡಿದ್ದರು. “ನಮ್ಮ ಕುಟುಂಬ ಮತ್ತು ಸ್ನೇಹಿತರನ್ನು ಮತ್ತೆ ನೋಡುವ ನಿರೀಕ್ಷೆಯೇ ಇರಲಿಲ್ಲ” ಎಂದು ನಾವಿಕರೊಬ್ಬರು ಪ್ರತಿಕ್ರಿಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...