Homeಮುಖಪುಟ‘ಮದರಸಾಗಳಲ್ಲಿ ಲವ್ ಜಿಹಾದ್‌ ಕಲಿಸಲಾಗುತ್ತಿದೆ’: ಸಾಧ್ವಿ ಪ್ರಾಚಿ ಆರೋಪ

‘ಮದರಸಾಗಳಲ್ಲಿ ಲವ್ ಜಿಹಾದ್‌ ಕಲಿಸಲಾಗುತ್ತಿದೆ’: ಸಾಧ್ವಿ ಪ್ರಾಚಿ ಆರೋಪ

- Advertisement -
- Advertisement -

ವಿಶ್ವ ಹಿಂದೂ ಪರಿಷತ್‌ (ವಿಎಚ್‌ಪಿ) ನಾಯಕಿ ಸಾಧ್ವಿ ಪ್ರಾಚಿ ಮತ್ತೊಮ್ಮೆ ವಿವಾದ ಸೃಷ್ಟಿಸಿದ್ದು, “ಮದರಸಾಗಳ ಮೂಲಕ ‘ಲವ್ ಜಿಹಾದ್’ ಹೇಳಿಕೊಡಲಾಗುತ್ತಿದೆ. ದೇಶದಲ್ಲಿ ಮದರಸಾಗಳನ್ನು ಮುಚ್ಚಬೇಕು” ಎಂದು ಹೇಳಿಕೆ ನೀಡಿದ್ದಾರೆ.

ಹಿಂದೂ ಯುವತಿಯರನ್ನು ಮುಸ್ಲಿಂ ಯುವಕರು ಪ್ರೇಮ ಪ್ರಕರಣದಲ್ಲಿ ಸಿಲುಕಿಸಿ, ನಂತರ ಮತಾಂತರ ಮಾಡುತ್ತಾರೆಂಬ ಬಲಪಂಥೀಯ ಪಿತೂರಿ ಸಿದ್ಧಾಂತವಾದ ‘ಲವ್‌ ಜಿಹಾದ್‌’ಗೆ ಮದರಸಾಗಳನ್ನು ಥಳುಕಿ ಹಾಕಿರುವ ಅವರು ದ್ವೇಷಯುಕ್ತ ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಪ್ರಾಚಿ, “ಹಿಂದೂಗಳು ಕೇವಲ ಹಣ ಗಳಿಸುವ ಬಗ್ಗೆ ಮಾತ್ರ ಯೋಚಿಸುತ್ತಾರೆ. ಆದರೆ ವಿಶೇಷ ಸಮುದಾಯವೊಂದಿದೆ, ಅದು ಭಾರತವನ್ನು ಆಳುವ ಬಗ್ಗೆ ಯೋಚಿಸುತ್ತದೆ. ಭಾರತವನ್ನು ಆಳುವ ಅವರ ಅಜೆಂಡಾ ಸಾವಿರಾರು ವರ್ಷಗಳಿಂದ ಇದೆ. ಅವರು ಏನು ಮಾಡುತ್ತಾರೆ? ರಾಷ್ಟ್ರೀಯ ಹೆದ್ದಾರಿಯಲ್ಲಿ ಪಂಕ್ಚರ್ ಅಂಗಡಿ ನಡೆಸುತ್ತಾರೆ. ನಗರದ ಯಾವುದೇ ಬೈಲೇನ್‌ನಲ್ಲಿ ಪಂಕ್ಚರ್ ಅಂಗಡಿ ಏಕೆ ಕಾಣಿಸುವುದಿಲ್ಲ?” ಎಂದು ಪ್ರಶ್ನಿಸಿದ್ದಾರೆ

“ಲವ್ ಜಿಹಾದ್ ಮದರಸಾಗಳಿಂದ ಪ್ರಾರಂಭವಾಗುತ್ತದೆ, ಲವ್‌ ಜಿಹಾದ್‌ ಬಗ್ಗೆ ತಿಳಿಸಿಕೊಡಲಾಗುತ್ತದೆ. ಇದೇ ಕಾರಣಕ್ಕಾಗಿ ‘ಲವ್ ಜಿಹಾದ್’ ಹೆಚ್ಚುತ್ತಿದೆ. ಭಾರತದಲ್ಲಿ ಮದರಸಾಗಳು ಮುಚ್ಚಲ್ಪಟ್ಟ ದಿನ, ‘ಲವ್ ಜಿಹಾದ್’ ಅಸ್ತಿತ್ವದಲ್ಲಿ ಇರುವುದಿಲ್ಲ. ಭಾರತದಲ್ಲಿ ಮಾತ್ರವಲ್ಲದೆ ಇಡೀ ವಿಶ್ವದಲ್ಲಿ ಶಾಂತಿ ಮತ್ತು ಸೌಹಾರ್ದತೆ ಇರಬೇಕು” ಎಂದು ತಿಳಿಸಿದ್ದಾರೆ.

‘ಲವ್ ಜಿಹಾದ್’ ಎಂಬ ಪಿತೂರಿ ಸಿದ್ಧಾಂತವನ್ನು ಬಿಜೆಪಿ ಮತ್ತು ಬಲಪಂಥೀಯ ಕಾರ್ಯಕರ್ತರು ಹೆಚ್ಚಾಗಿ ಮಂಡಿಸುತ್ತಾರೆ. ಆದರೆ ಈ ಕುರಿತು ಕೇಂದ್ರ ಸರ್ಕಾರವೇ ಅಲ್ಲಗಳೆದಿರುವ ಪ್ರಸಂಗಗಳೂ ಇವೆ.

ಭಾರತ ಸರ್ಕಾರವು ಈ ಪದಕ್ಕೆ ಯಾವುದೇ ಮಾನ್ಯತೆ ನೀಡಿಲ್ಲ. 2020ರಲ್ಲಿ ಸಂಸತ್ತಿನಲ್ಲಿ ಪ್ರತಿಕ್ರಿಯಿಸಿದ ಸಚಿವರು, “ಲವ್‌ ಜಿಹಾದ್ ಸಂಬಂಧ ಕೇಂದ್ರೀಯ ಸಂಸ್ಥೆಗಳು ಯಾವುದೇ ಪ್ರಕರಣಗಳನ್ನು ದಾಖಲಿಸಿಲ್ಲ” ಎಂದು ಸ್ಪಷ್ಟಪಡಿಸಿದ್ದರು.

ಲವ್ ಜಿಹಾದ್ ಎಂಬ ಪದವನ್ನು ಅಸ್ತಿತ್ವದಲ್ಲಿರುವ ಕಾನೂನುಗಳ ಅಡಿಯಲ್ಲಿ ವ್ಯಾಖ್ಯಾನಿಸಲಾಗಿಲ್ಲ.

ಲವ್ ಜಿಹಾದ್‌ನ ಯಾವುದೇ ಪ್ರಕರಣವನ್ನು ಕೇಂದ್ರೀಯ ಸಂಸ್ಥೆಗಳು ವರದಿ ಮಾಡಿಲ್ಲ ಎಂದು ಕಿರಿಯ ಗೃಹ ಸಚಿವ ಜಿ ಕಿಶನ್ ರೆಡ್ಡಿ ಪ್ರತಿಕ್ರಿಯಿಸಿದ್ದರು.

ಮುಂದುವರಿದು ಮಾತನಾಡಿರುವ ಸಾಧ್ವಿ ಪ್ರಾಚಿ, “ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗುವ ತಮ್ಮ ಕನಸುಗಳನ್ನು ಕೈಬಿಡಬೇಕು” ಎಂದಿದ್ದಾರೆ.

ಇದನ್ನೂ ಓದಿರಿ: ಸಾಗರದ ದಲಿತ ವಿದ್ಯಾರ್ಥಿನಿ ಪ್ರಕರಣ; ವಸತಿ ಶಾಲೆ ಮುಖ್ಯಸ್ಥನ ವಿರುದ್ಧ ‘ಪೋಕ್ಸೋ’, ‘ಅಟ್ರಾಸಿಟಿ’ ಕೇಸ್‌ ದಾಖಲು

“ಅವರು ಯುಪಿ ಮುಖ್ಯಮಂತ್ರಿಯಾಗುವುದಿಲ್ಲ ಅಥವಾ ಪ್ರಧಾನಿಯಾಗುವುದಿಲ್ಲ. 2024ರ ಸಂಸತ್ತಿನ ಚುನಾವಣೆಯಲ್ಲೂ ನರೇಂದ್ರ ಮೋದಿ ಗೆಲ್ಲುತ್ತಾರೆ. ಇದು ಜನರಿಗೆ ತಿಳಿದಿದೆ. ಜನರು ನರೇಂದ್ರ ಮೋದಿಯವರಿಗೆ ಮಾತ್ರ ಮತ ಹಾಕುತ್ತಾರೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಉತ್ತರಾಖಂಡ್ ರಾಜ್ಯದಲ್ಲಿ ಯಾವುದೇ ಮಸೀದಿಯನ್ನು ತೆರವು ಮಾಡಿಲ್ಲ. ಅಕ್ರಮ ಸಮಾಧಿಗಳನ್ನು ಮಾತ್ರ ಧ್ವಂಸಗೊಳಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಅಕ್ರಮ ಧಾರ್ಮಿಕ ಕಟ್ಟಡಗಳ ತೆರವು ಕಾರ್ಯಾಚರಣೆಯನ್ನು ಕೈಗೊಂಡಿರುವುದಾಗಿ ಉತ್ತರಖಾಂಡ್ ಸರ್ಕಾರ ಹೇಳುತ್ತಿದೆ.

“ದೇವಭೂಮಿಯಲ್ಲಿ ಹಿಂದೂಯೇತರರ ಸಂಖ್ಯೆ ಹೆಚ್ಚುತ್ತಿದೆ. ಉತ್ತರಾಖಂಡ್‌ನ ಹಿಂದೂಗಳು ವಲಸೆ ಹೋಗುತ್ತಿದ್ದಾರೆ” ಎಂದು ಪ್ರಾಚಿ ಆರೋಪಿಸಿದ್ದಾರೆ.

ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿಯವರು ಇದರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...