Homeಮುಖಪುಟ2024ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ: ಆರೋಪಿ ಬ್ರಿಜ್ ಭೂಷಣ್

2024ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ: ಆರೋಪಿ ಬ್ರಿಜ್ ಭೂಷಣ್

- Advertisement -
- Advertisement -

“2024ರ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದ ಕೈಸರ್‌ಗಂಜ್ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ” ಎಂದು ಲೈಂಗಿಕ ಕಿರುಕುಳ ಪ್ರಕರಣದ ಆರೋಪಿ, ಕುಸ್ತಿ ಫೆಡರೇಶನ್ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ತಿಳಿಸಿರುವುದಾಗಿ ಎಎನ್‌ಐ ವರದಿ ಮಾಡಿದೆ.

ಅಪ್ರಾಪ್ತ ವಯಸ್ಸಿನ ಕುಸ್ತಿಪಟು ಸೇರಿದಂತೆ ಏಳು ಮಂದಿ ಮಹಿಳಾ ಕುಸ್ತಿಪಟುಗಳು ನೀಡಿರುವ ದೂರುಗಳಿಗೆ ಸಂಬಂಧಿಸಿದಂತೆ ಬ್ರಿಜ್ ಭೂಷಣ್ ವಿರುದ್ಧ ಎರಡು ಎಫ್‌ಐಆರ್‌ಗಳು ದಾಖಲಾಗಿವೆ.

ಏಪ್ರಿಲ್‌ನಲ್ಲಿ ಬ್ರಿಜ್ ಭೂಷಣ್ ವಿರುದ್ಧ ತನಿಖೆ ಆರಂಭವಾಗಿದೆ. ಇದರ ನಡುವೆ ಭಾನುವಾರ ನಡೆದ ರ್‍ಯಾಲಿಯಲ್ಲಿ ಅವರು ಮಾತನಾಡಿದ್ದಾರೆ. 2024ರ ಚುನಾವಣೆಗಾಗಿ ಬಿಜೆಪಿಯ ಮಹಾಸಂಪರ್ಕ್ ಅಭಿಯಾನದ ಭಾಗವಾಗಿ ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ರ್‍ಯಾಲಿ ಆಯೋಜನೆಗೊಂಡಿತ್ತು.

2024ರ ಚುನಾವಣೆಯಲ್ಲಿ ಬಿಜೆಪಿ ಸಂಪೂರ್ಣ ಬಹುಮತದೊಂದಿಗೆ ಗೆಲ್ಲಲಿದೆ ಎಂದು ಬ್ರಿಜ್ ಭೂಷಣ್‌ ಸುದ್ದಿಗಾರರಿಗೆ ತಿಳಿಸಿದ್ದಾರೆ. “ಲೋಕಸಭೆಯ ಎಲ್ಲಾ ಸ್ಥಾನಗಳನ್ನು ಬಿಜೆಪಿ ಗೆಲ್ಲುತ್ತದೆ. ನಾನು ಕೈಸರ್‌ಗಂಜ್ ಕ್ಷೇತ್ರದಲ್ಲಿ ಸ್ಪರ್ಧಿಸುತ್ತೇನೆ” ಎಂದು ಸ್ಪಷ್ಟಪಡಿಸಿದ್ದಾರೆ.

ಅವರ ವಿರುದ್ಧದ ಆರೋಪಗಳ ಬಗ್ಗೆ ಕೇಳಿದಾಗ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. “ನಾನು ಈ ಪ್ರಕರಣ ಸಂಬಂಧ ನ್ಯಾಯಾಲಯದ ಆದೇಶಕ್ಕಾಗಿ ಕಾಯುತ್ತಿದ್ದೇನೆ” ಎಂದಿದ್ದಾರೆ.

ಬ್ರಿಜ್ ಭೂಷಣ್ ಆರು ಬಾರಿ ಸಂಸದರಾಗಿದ್ದಾರೆ, ಐದು ಬಾರಿ ಬಿಜೆಪಿ ಟಿಕೆಟ್‌ನಲ್ಲಿ ಮತ್ತು ಒಮ್ಮೆ (2009 ರಲ್ಲಿ) ಎಸ್‌ಪಿ ಟಿಕೆಟ್‌ನಲ್ಲಿ ಗೆದ್ದಿದ್ದಾರೆ. ಅವರು ಗೊಂಡಾ ಲೋಕಸಭಾ ಕ್ಷೇತ್ರದಿಂದ 1991 ಮತ್ತು 1999ರಲ್ಲಿ ಮೊದಲ ಎರಡು ಚುನಾವಣೆಗಳನ್ನು ಗೆದ್ದರು. 2004ರ ಲೋಕಸಭಾ ಚುನಾವಣೆಯಲ್ಲಿ, ಬಿಜೆಪಿ ಇವರಿಗೆ ಬಲರಾಂಪುರ ಕ್ಷೇತ್ರದಿಂದ ಟಿಕೆಟ್ ನೀಡಿತು, ಗೊಂಡಾದಿಂದ ಘನಶ್ಯಾಮ್ ಶುಕ್ಲಾ ಅವರನ್ನು ನಿಲ್ಲಿಸಿತ್ತು. ಮತದಾನದ ದಿನ ರಸ್ತೆ ಅಪಘಾತದಲ್ಲಿ ಶುಕ್ಲಾ ಸಾವನ್ನಪ್ಪಿದ್ದರು.

ಸ್ಕ್ರಾಲ್‌ನೊಂದಿಗಿನ ಸಂದರ್ಭದಲ್ಲಿ ಒಮ್ಮೆ ಮಾತನಾಡಿದ್ದ ಬ್ರಿಜ್ ಭೂಷಣ್, “ನನ್ನ ವಿರೋಧಿಗಳು- ಇದು ಅಪಘಾತವಲ್ಲ ಕೊಲೆ ಎಂದು ವದಂತಿಗಳನ್ನು ಹರಡಿದರು. ಅಟಲ್ ಬಿಹಾರಿ ವಾಜಪೇಯಿ ಅವರು ನನಗೆ ಕರೆ ಮಾಡಿ, ‘ಮಾರ್ವಾ ದಿಯಾ (ನೀವು ಅವನನ್ನು ಕೊಂದಿದ್ದೀರಿ) ಎಂದಿದ್ದರು” ಎಂದು ಸ್ಮರಿಸಿದ್ದರು.

ಇದು ಬಿಜೆಪಿಯೊಂದಿಗಿನ ಭಿನ್ನಾಭಿಪ್ರಾಯಕ್ಕೆ ಕಾರಣವಾಯಿತು ಎಂದು ಬ್ರಿಜ್ ಭೂಷಣ್ ಅಭಿಪ್ರಾಯಪಡುತ್ತಾನೆ. ಪರಿಣಾಮವಾಗಿ, ಆತ 2008ರಲ್ಲಿ ಮಾಡಿದ್ದೇನು ಗೊತ್ತೆ? ಯುನೈಟೆಡ್ ಪ್ರೋಗ್ರೆಸ್ಸಿವ್ ಅಲೈಯನ್ಸ್ (ಯುಪಿಎ) ಸರ್ಕಾರದ ವಿರುದ್ಧ ವಿರೋಧ ಪಕ್ಷ ವಿಶ್ವಾಸ ನಿರ್ಣಯ ಮಾಡಿದಾಗ ತಮ್ಮದೇ ಪಕ್ಷದ ವಿರುದ್ಧ ಅಡ್ಡ ಮತದಾನ ಮಾಡಿ ಸುದ್ದಿಯಾಗಿದ್ದರು. ಬಿಜೆಪಿ ಅವರನ್ನು ಹೊರಹಾಕಿತ್ತು, ಆದರೆ ಸಮಾಜವಾದಿ ಪಾರ್ಟಿ ಬ್ರಿಜ್‌ ಭೂಷಣ್‌ಗೆ ಬಾಗಿಲು ತೆರೆದಿತ್ತು.

2009ರಲ್ಲಿ ಎಸ್‌ಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ ಕೈಸರ್‌ಗಂಜ್ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದರು. 2014ರಲ್ಲಿ ಮತ್ತೆ ಬಿಜೆಪಿ ಮರಳಿದರು. ಕೈಸರ್‌ಗಂಜ್‌ನಿಂದಲೇ 2019ರಲ್ಲೂ ಗೆದ್ದು ಸಂಸದನಾಗಿ ಮುಂದುವರಿದರು.

ಬಿಜೆಪಿ ಅಭ್ಯರ್ಥಿಯನ್ನು ಹತ್ಯೆ ಮಾಡಿರುವ ಬಗ್ಗೆ ಅಂದಿನ ಪ್ರಧಾನಿ ಭೂಷಣ್‌ ಮೇಲೆ ಶಂಕೆ ವ್ಯಕ್ತಪಡಿಸಿದ ಬಳಿಕವೂ ಅವರು ಬಿಜೆಪಿಯಲ್ಲೇ ಉಳಿದುಕೊಂಡಿರುವುದು ಗಮನಾರ್ಹ. ಅಡ್ಡ ಮತದಾನದ ನಂತರವೇ ಅವರು ಬಿಜೆಪಿಯಿಂದ ಉಚ್ಚಾಟಿತನಾಗಿದ್ದು!

ಇದನ್ನೂ ಓದಿರಿ: ಕುಸ್ತಿಪಟುಗಳಿಗೆ ಸವಾಲಾಗಿರುವ ‘ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌’ ಯಾರು? ಆತನ ಹಿನ್ನಲೆ, ಪ್ರಭಾವವೇನು?

ಇದ್ಯಾವುದೂ ಬ್ರಿಜ್ ಭೂಷಣ್‌ನ ರಾಜಕೀಯದ ಮೇಲೆ ಪರಿಣಾಮ ಬೀರಲಿಲ್ಲ. ಒಂದು ಕೊಲೆ ಮಾಡಿದ್ದೇನೆ ಎಂಬ ತಪ್ಪೊಪ್ಪಿಗೆ ಮತ್ತು ಆಗಿನ ಪ್ರಧಾನಿ ಮತ್ತೊಂದು ಕೊಲೆಯ ಆರೋಪ ಹೊರಿಸಿದರೂ, ಬಿಜೆಪಿ ಮತ್ತು ಪ್ರತಿಪಕ್ಷ ಎಸ್‌ಪಿ ಎರಡೂ ಬ್ರಿಜ್‌ಭೂಷಣ್‌ನನ್ನು ಅಪ್ಪಿಕೊಂಡಿವೆ! ಇವರ ಅಪರಾಧಗಳನ್ನು ಮುಚ್ಚಿಹಾಕಿವೆ. ಏಕೆಂದರೆ ಚುನಾವಣೆಯ ನಂತರ ಚುನಾವಣೆಯಲ್ಲಿ ಗೆಲ್ಲುವುದನ್ನು ಬ್ರಿಜ್ ಮುಂದುವರಿಸಿದ್ದಾರೆ. ಒಂದು ದಶಕಕ್ಕೂ ಹೆಚ್ಚು ಕಾಲ ರಾಷ್ಟ್ರೀಯ ಕ್ರೀಡಾ ಸಂಘದ ಅಧ್ಯಕ್ಷರಾಗಿದ್ದಾರೆ.

ಲೈಂಗಿಕ ಕಿರುಕುಳ ನೀಡಿರುವ ಬ್ರಿಜ್‌ ಭೂಷಣ್‌ ಅವರನ್ನು ಬಂಧಿಸಬೇಕೆಂದು ಆಗ್ರಹಿಸಿ ದೇಶದ ಪ್ರಮುಖ ಕುಸ್ತಿಪಟುಗಳು ಕಳೆದ ಏಪ್ರಿಲ್‌ನಿಂದಲೂ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರನ್ನು ಬುಧವಾರ ಭೇಟಿಯಾದ ನಂತರ ಕುಸ್ತಿಪಟುಗಳು ಒಂದು ವಾರ ಕಾಲ ಪ್ರತಿಭಟನೆಯನ್ನು ಕೈಬಿಟ್ಟಿದ್ದಾರೆ. ಬ್ರಿಜ್‌ ಭೂಷಣ್‌ ವಿರುದ್ಧದ ತನಿಖೆಯನ್ನು ಜೂನ್ 15 ರೊಳಗೆ ಪೂರ್ಣಗೊಳಿಸಿ ದೋಷಾರೋಪ ಪಟ್ಟಿ ಸಲ್ಲಿಸಲಾಗುವುದು ಎಂದು ಸರ್ಕಾರ ಕುಸ್ತಿಪಟುಗಳಿಗೆ ಭರವಸೆ ನೀಡಿದೆ.

ಶನಿವಾರ ಪ್ರತಿಕ್ರಿಯೆ ನೀಡಿದ್ದ ಒಲಂಪಿಕ್ ಪದಕ ವಿಜೇತೆ ಸಾಕ್ಷಿ ಮಲ್ಲಿಕ್‌, “ಪ್ರಕರಣ ಇತ್ಯರ್ಥವಾಗುವವರೆಗೂ ಪ್ರತಿಭಟನಾನಿರತ ಕುಸ್ತಿಪಟುಗಳು ಏಷ್ಯನ್ ಗೇಮ್ಸ್‌ನಲ್ಲಿ ಭಾಗವಹಿಸುವುದಿಲ್ಲ. ದೂರನ್ನು ಹಿಂಪಡೆದು ಪ್ರತಿಭಟನೆಯನ್ನು ಅಂತ್ಯಗೊಳಿಸುವಂತೆ ಬ್ರಿಜ್ ಭೂಷಣ್‌ ತಮ್ಮ ಮೇಲೆ ಒತ್ತಡ ಹೇರುತ್ತಿದ್ದಾರೆ” ಎಂದು ಆರೋಪಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...