Homeಮುಖಪುಟಮೋದಿ ಸರ್ಕಾರದಿಂದ ಕೋವಿಡ್ ಲಸಿಕೆ ಪಡೆದವರ ವೈಯಕ್ತಿಕ ವಿವರ ಸೋರಿಕೆ: ಸ್ಕ್ರೀನ್‌ಶಾಟ್‌ ಹಂಚಿಕೊಂಡ ಟಿಎಂಸಿ ಮುಖಂಡ

ಮೋದಿ ಸರ್ಕಾರದಿಂದ ಕೋವಿಡ್ ಲಸಿಕೆ ಪಡೆದವರ ವೈಯಕ್ತಿಕ ವಿವರ ಸೋರಿಕೆ: ಸ್ಕ್ರೀನ್‌ಶಾಟ್‌ ಹಂಚಿಕೊಂಡ ಟಿಎಂಸಿ ಮುಖಂಡ

ಕೋವಿಡ್ ಲಸಿಕೆ ಪಡೆದ ಪ್ರತಿಯೊಬ್ಬ ಭಾರತೀಯರ ಮೊಬೈಲ್ ಸಂಖ್ಯೆಗಳು, ಆಧಾರ್ ಸಂಖ್ಯೆ, ಪಾಸ್‌ಪೋರ್ಟ್ ಸಂಖ್ಯೆ, ವೋಟರ್ ಐಡಿ, ಕುಟುಂಬ ಸದಸ್ಯರ ವಿವರಗಳು ಸೋರಿಕೆಯಾಗಿವೆ.

- Advertisement -
- Advertisement -

ಮೋದಿ ಸರ್ಕಾರದಿಂದ ಪ್ರಮುಖ ದತ್ತಾಂಶ ಉಲ್ಲಂಘನೆಯಾಗಿದೆ. ಕೋವಿಡ್ ಲಸಿಕೆ ಪಡೆದ ಪ್ರತಿಯೊಬ್ಬ ಭಾರತೀಯರ ಮೊಬೈಲ್ ಸಂಖ್ಯೆಗಳು, ಆಧಾರ್ ಸಂಖ್ಯೆಗಳು, ಪಾಸ್‌ಪೋರ್ಟ್ ಸಂಖ್ಯೆಗಳು, ವೋಟರ್ ಐಡಿ, ಕುಟುಂಬ ಸದಸ್ಯರ ವಿವರಗಳು ಇತ್ಯಾದಿ ಸೇರಿದಂತೆ ಇತರ ವೈಯಕ್ತಿಕ ವಿವರಗಳು ಸೋರಿಕೆಯಾಗಿವೆ ಮತ್ತು ಉಚಿತವಾಗಿ ಲಭ್ಯವಿವೆ ಎಂದು ಟಿಎಂಸಿ ಮುಖಂಡ ಸಾಕೇತ್ ಗೋಖಲೆ ಆರೋಪಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, “ರಾಜ್ಯಸಭಾ ಸಂಸದ ಮತ್ತು ಟಿಎಂಸಿ ನಾಯಕ ಡೆರೆಕ್ ಒ’ಬ್ರೇನ್, ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ, ಕಾಂಗ್ರೆಸ್ ನಾಯಕರಾದ ಜೈರಾಮ್ ರಮೇಶ್ & ಕೆ.ಸಿ. ವೇಣುಗೋಪಾಲ್ ಸೇರಿದಂತೆ ಹಲವು ಪತ್ರಕರ್ತರ ವೈಯಕ್ತಿಕ ಮಾಹಿತಿಗಳು ಟೆಲಿಗ್ರಾಂನಲ್ಲಿ ಸೋರಿಕೆಯಾಗಿರುವುದರ ಸ್ಕ್ರೀನ್‌ಶಾಟ್‌ಗಳನ್ನು ಲಗತ್ತಿಸಿದ್ದಾರೆ.

ಮೋದಿ ಸರ್ಕಾರವು “ಬಲವಾದ ಡೇಟಾ ಭದ್ರತೆ” ಅನ್ನು ಅನುಸರಿಸುತ್ತದೆ ಎಂದು ಹೇಳಿಕೊಳ್ಳುವಾಗ ಪಾಸ್‌ಪೋರ್ಟ್ ಸಂಖ್ಯೆ, ಆಧಾರ್ ಸಂಖ್ಯೆ, ಇತ್ಯಾದಿ ಸೇರಿದಂತೆ ವೈಯಕ್ತಿಕ ವಿವರಗಳು ಹೇಗೆ ಸೋರಿಕೆಯಾದವು? ಈ ಸೋರಿಕೆಯ ಬಗ್ಗೆ ಮೋದಿ ಸರ್ಕಾರ ಸೇರಿದಂತೆ ಗೃಹ ಸಚಿವಾಲಯಕ್ಕೆ ಏಕೆ ತಿಳಿದಿಲ್ಲ ಮತ್ತು ಡೇಟಾ ಉಲ್ಲಂಘನೆಯ ಬಗ್ಗೆ ಭಾರತೀಯರಿಗೆ ಏಕೆ ಮಾಹಿತಿ ನೀಡಿಲ್ಲ ಎಂದು ಸಾಕೇತ್ ಗೋಖಲೆ ಪ್ರಶ್ನಿಸಿದ್ದಾರೆ.

ಮೋದಿ ಸರ್ಕಾರವು ಆಧಾರ್ ಮತ್ತು ಪಾಸ್‌ಪೋರ್ಟ್ ಸಂಖ್ಯೆಗಳನ್ನು ಒಳಗೊಂಡಂತೆ ಭಾರತೀಯರ ಸೂಕ್ಷ್ಮ ವೈಯಕ್ತಿಕ ಡೇಟಾಗೆ ಹೊರಗಿನವರಿಗೆ ಪ್ರವೇಶವನ್ನು ನೀಡಿದೆ. ಹಾಗಾಗಿ ಈ ಸೋರಿಕೆ ಕಂಡುಬಂದಿದೆ. ಇದು ಗಂಭೀರ ರಾಷ್ಟ್ರೀಯ ಕಾಳಜಿಯ ವಿಷಯವಾಗಿದೆ ಎಂದು ಅವರು ಹೇಳಿದ್ದಾರೆ.

ರೈಲ್ವೆಯ ಜೊತೆಗೆ ಎಲೆಕ್ಟ್ರಾನಿಕ್ಸ್, ಕಮ್ಯುನಿಕೇಷನ್ಸ್ ಮತ್ತು ಐಟಿ ಖಾತೆಯ ಸಚಿವರಾಗಿರುವ ಅಶ್ವಿನಿ ವೈಷ್ಣವ್ ಏನು ಮಾಡುತ್ತಿದ್ದಾರೆ? ಅವರ ಸಮರ್ಥತೆಯನ್ನು ಪ್ರಧಾನಿ ಮೋದಿ ಎಷ್ಟು ದಿನ ಕಡೆಗಣಿಸುತ್ತಾರೆ ಎಂದು ಗೋಖಲೆ ಪ್ರಶ್ನಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಹಿರಿಯ ಪತ್ರಕರ್ತರಾದ ರಾಜರಾಂ ತಲ್ಲೂರುರವರು, “ಕೋವಿಡ್ ಲಸಿಕೆಯ ನೀತಿ-ನಿಯಮಗಳ ಪ್ರಕಾರ ಲಸಿಕೆ ಪಡೆದವರ ಮಾಹಿತಿಯನ್ನು ಆರು ತಿಂಗಳ ಒಳಗೆ ಡಿಲೀಟ್ ಮಾಡಬೇಕು. ಡಿಲೀಟ್ ಮಾಡಿರುವುದಾಗಿಯೂ ಕೇಂದ್ರ ಸರ್ಕಾರ ಹೇಳಿದೆ. ಒಂದು ವೇಳೆ ಮಾಡಿಲ್ಲದಿದ್ದರೆ ಅದು ದೊಡ್ಡ ಅಪರಾಧವಾಗುತ್ತದೆ” ಎಂದರು.

ಮುಂದುವರಿದು “ಸಾಕೇತ್ ಗೋಖಲೆಯವರಿಗೆ ಈ ಮಾಹಿತಿಗಳು ಹೇಗೆ ಸಿಕ್ಕವು? ಅವುಗಳ ಮೂಲವೇನು ಎಂಬುದನ್ನು ಬಹಿರಂಗಪಡಿಸಿಲ್ಲ. ಈ ಡೇಟಾವನ್ನು ಯರ್ಯಾರು ಬಳಸಿರಬಹುದು ಎಂಬುದರ ಅಂದಾಜು ಕೂಡ ಇಲ್ಲ. ಆದರೆ ಈ ಕುರಿತು ಸಮಗ್ರ ತನಿಖೆ ನಡೆಯುವ ಅಗತ್ಯವಿದೆ” ಎಂದರು.

ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು 2023ರ ಫೆಬ್ರವರಿ 08 ರಂದು ‘ಆರೋಗ್ಯ ಸೇತು ಡೇಟಾ ಕುರಿತ ಶಿಷ್ಟಾಚಾರ’ ಹೆಸರಿನಲ್ಲಿ ಪತ್ರಿಕಾ ಹೇಳಿಕೆಯೊಂದನ್ನು ಬಿಡುಗಡೆ ಮಾಡಿತ್ತು. ಅದರಲ್ಲಿ “ಈ ಶಿಷ್ಟಾಚಾರದ ನಿಬಂಧನೆಗಳಿಗೆ ಅನುಸಾರವಾಗಿ, ಆರೋಗ್ಯ ಸೇತು ಮೊಬೈಲ್ ಅಪ್ಲಿಕೇಶನ್‌ನ ಸಂಪರ್ಕ ಪತ್ತೆ ಹಚ್ಚುವಿಕೆಯ ವೈಶಿಷ್ಟ್ಯವನ್ನು ಸ್ಥಗಿತಗೊಳಿಸಲಾಗಿದೆ ಮತ್ತು ಅದರ ಮೂಲಕ ಸಂಗ್ರಹಿಸಲಾದ ಸಂಪರ್ಕ ಪತ್ತೆಹಚ್ಚುವಿಕೆಯ ಡೇಟಾವನ್ನು ಅಳಿಸಲಾಗಿದೆ. ಮತ್ತು ಆರೋಗ್ಯ ಸೇತು ಮೊಬೈಲ್ ಅಪ್ಲಿಕೇಶನ್ ಮೂಲಕ ಸಂಗ್ರಹಿಸಲಾದ ಸಂಪರ್ಕ ಪತ್ತೆಹಚ್ಚುವಿಕೆಯ ಡೇಟಾವನ್ನು ಅಳಿಸಲಾಗಿದೆ. ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರದಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಹಾಯಕ ಸಚಿವ ರಾಜೀವ್ ಚಂದ್ರಶೇಖರ್ ಅವರು ಈ ಮಾಹಿತಿಯನ್ನು ನೀಡಿದ್ದಾರೆ” ಎಂದು ಘೋಷಿಸಿದೆ. ಆದರೂ ಈ ಡೇಟಾಗಳು ಹರಿದಾಡುತ್ತಿರುವುದು ಹೇಗೆ ಎಂಬುದು ಪ್ರಶ್ನೆಯಾಗಿದೆ.

ಇದನ್ನೂ ಓದಿ: ಡೇಟಾ ಸಂರಕ್ಷಣೆ: ಹೇಳಿದ್ದೇನು? ಮಾಡಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...