Homeಮುಖಪುಟಮೋದಿ ಸರ್ಕಾರದಿಂದ ಕೋವಿಡ್ ಲಸಿಕೆ ಪಡೆದವರ ವೈಯಕ್ತಿಕ ವಿವರ ಸೋರಿಕೆ: ಸ್ಕ್ರೀನ್‌ಶಾಟ್‌ ಹಂಚಿಕೊಂಡ ಟಿಎಂಸಿ ಮುಖಂಡ

ಮೋದಿ ಸರ್ಕಾರದಿಂದ ಕೋವಿಡ್ ಲಸಿಕೆ ಪಡೆದವರ ವೈಯಕ್ತಿಕ ವಿವರ ಸೋರಿಕೆ: ಸ್ಕ್ರೀನ್‌ಶಾಟ್‌ ಹಂಚಿಕೊಂಡ ಟಿಎಂಸಿ ಮುಖಂಡ

ಕೋವಿಡ್ ಲಸಿಕೆ ಪಡೆದ ಪ್ರತಿಯೊಬ್ಬ ಭಾರತೀಯರ ಮೊಬೈಲ್ ಸಂಖ್ಯೆಗಳು, ಆಧಾರ್ ಸಂಖ್ಯೆ, ಪಾಸ್‌ಪೋರ್ಟ್ ಸಂಖ್ಯೆ, ವೋಟರ್ ಐಡಿ, ಕುಟುಂಬ ಸದಸ್ಯರ ವಿವರಗಳು ಸೋರಿಕೆಯಾಗಿವೆ.

- Advertisement -
- Advertisement -

ಮೋದಿ ಸರ್ಕಾರದಿಂದ ಪ್ರಮುಖ ದತ್ತಾಂಶ ಉಲ್ಲಂಘನೆಯಾಗಿದೆ. ಕೋವಿಡ್ ಲಸಿಕೆ ಪಡೆದ ಪ್ರತಿಯೊಬ್ಬ ಭಾರತೀಯರ ಮೊಬೈಲ್ ಸಂಖ್ಯೆಗಳು, ಆಧಾರ್ ಸಂಖ್ಯೆಗಳು, ಪಾಸ್‌ಪೋರ್ಟ್ ಸಂಖ್ಯೆಗಳು, ವೋಟರ್ ಐಡಿ, ಕುಟುಂಬ ಸದಸ್ಯರ ವಿವರಗಳು ಇತ್ಯಾದಿ ಸೇರಿದಂತೆ ಇತರ ವೈಯಕ್ತಿಕ ವಿವರಗಳು ಸೋರಿಕೆಯಾಗಿವೆ ಮತ್ತು ಉಚಿತವಾಗಿ ಲಭ್ಯವಿವೆ ಎಂದು ಟಿಎಂಸಿ ಮುಖಂಡ ಸಾಕೇತ್ ಗೋಖಲೆ ಆರೋಪಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, “ರಾಜ್ಯಸಭಾ ಸಂಸದ ಮತ್ತು ಟಿಎಂಸಿ ನಾಯಕ ಡೆರೆಕ್ ಒ’ಬ್ರೇನ್, ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ, ಕಾಂಗ್ರೆಸ್ ನಾಯಕರಾದ ಜೈರಾಮ್ ರಮೇಶ್ & ಕೆ.ಸಿ. ವೇಣುಗೋಪಾಲ್ ಸೇರಿದಂತೆ ಹಲವು ಪತ್ರಕರ್ತರ ವೈಯಕ್ತಿಕ ಮಾಹಿತಿಗಳು ಟೆಲಿಗ್ರಾಂನಲ್ಲಿ ಸೋರಿಕೆಯಾಗಿರುವುದರ ಸ್ಕ್ರೀನ್‌ಶಾಟ್‌ಗಳನ್ನು ಲಗತ್ತಿಸಿದ್ದಾರೆ.

ಮೋದಿ ಸರ್ಕಾರವು “ಬಲವಾದ ಡೇಟಾ ಭದ್ರತೆ” ಅನ್ನು ಅನುಸರಿಸುತ್ತದೆ ಎಂದು ಹೇಳಿಕೊಳ್ಳುವಾಗ ಪಾಸ್‌ಪೋರ್ಟ್ ಸಂಖ್ಯೆ, ಆಧಾರ್ ಸಂಖ್ಯೆ, ಇತ್ಯಾದಿ ಸೇರಿದಂತೆ ವೈಯಕ್ತಿಕ ವಿವರಗಳು ಹೇಗೆ ಸೋರಿಕೆಯಾದವು? ಈ ಸೋರಿಕೆಯ ಬಗ್ಗೆ ಮೋದಿ ಸರ್ಕಾರ ಸೇರಿದಂತೆ ಗೃಹ ಸಚಿವಾಲಯಕ್ಕೆ ಏಕೆ ತಿಳಿದಿಲ್ಲ ಮತ್ತು ಡೇಟಾ ಉಲ್ಲಂಘನೆಯ ಬಗ್ಗೆ ಭಾರತೀಯರಿಗೆ ಏಕೆ ಮಾಹಿತಿ ನೀಡಿಲ್ಲ ಎಂದು ಸಾಕೇತ್ ಗೋಖಲೆ ಪ್ರಶ್ನಿಸಿದ್ದಾರೆ.

ಮೋದಿ ಸರ್ಕಾರವು ಆಧಾರ್ ಮತ್ತು ಪಾಸ್‌ಪೋರ್ಟ್ ಸಂಖ್ಯೆಗಳನ್ನು ಒಳಗೊಂಡಂತೆ ಭಾರತೀಯರ ಸೂಕ್ಷ್ಮ ವೈಯಕ್ತಿಕ ಡೇಟಾಗೆ ಹೊರಗಿನವರಿಗೆ ಪ್ರವೇಶವನ್ನು ನೀಡಿದೆ. ಹಾಗಾಗಿ ಈ ಸೋರಿಕೆ ಕಂಡುಬಂದಿದೆ. ಇದು ಗಂಭೀರ ರಾಷ್ಟ್ರೀಯ ಕಾಳಜಿಯ ವಿಷಯವಾಗಿದೆ ಎಂದು ಅವರು ಹೇಳಿದ್ದಾರೆ.

ರೈಲ್ವೆಯ ಜೊತೆಗೆ ಎಲೆಕ್ಟ್ರಾನಿಕ್ಸ್, ಕಮ್ಯುನಿಕೇಷನ್ಸ್ ಮತ್ತು ಐಟಿ ಖಾತೆಯ ಸಚಿವರಾಗಿರುವ ಅಶ್ವಿನಿ ವೈಷ್ಣವ್ ಏನು ಮಾಡುತ್ತಿದ್ದಾರೆ? ಅವರ ಸಮರ್ಥತೆಯನ್ನು ಪ್ರಧಾನಿ ಮೋದಿ ಎಷ್ಟು ದಿನ ಕಡೆಗಣಿಸುತ್ತಾರೆ ಎಂದು ಗೋಖಲೆ ಪ್ರಶ್ನಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಹಿರಿಯ ಪತ್ರಕರ್ತರಾದ ರಾಜರಾಂ ತಲ್ಲೂರುರವರು, “ಕೋವಿಡ್ ಲಸಿಕೆಯ ನೀತಿ-ನಿಯಮಗಳ ಪ್ರಕಾರ ಲಸಿಕೆ ಪಡೆದವರ ಮಾಹಿತಿಯನ್ನು ಆರು ತಿಂಗಳ ಒಳಗೆ ಡಿಲೀಟ್ ಮಾಡಬೇಕು. ಡಿಲೀಟ್ ಮಾಡಿರುವುದಾಗಿಯೂ ಕೇಂದ್ರ ಸರ್ಕಾರ ಹೇಳಿದೆ. ಒಂದು ವೇಳೆ ಮಾಡಿಲ್ಲದಿದ್ದರೆ ಅದು ದೊಡ್ಡ ಅಪರಾಧವಾಗುತ್ತದೆ” ಎಂದರು.

ಮುಂದುವರಿದು “ಸಾಕೇತ್ ಗೋಖಲೆಯವರಿಗೆ ಈ ಮಾಹಿತಿಗಳು ಹೇಗೆ ಸಿಕ್ಕವು? ಅವುಗಳ ಮೂಲವೇನು ಎಂಬುದನ್ನು ಬಹಿರಂಗಪಡಿಸಿಲ್ಲ. ಈ ಡೇಟಾವನ್ನು ಯರ್ಯಾರು ಬಳಸಿರಬಹುದು ಎಂಬುದರ ಅಂದಾಜು ಕೂಡ ಇಲ್ಲ. ಆದರೆ ಈ ಕುರಿತು ಸಮಗ್ರ ತನಿಖೆ ನಡೆಯುವ ಅಗತ್ಯವಿದೆ” ಎಂದರು.

ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು 2023ರ ಫೆಬ್ರವರಿ 08 ರಂದು ‘ಆರೋಗ್ಯ ಸೇತು ಡೇಟಾ ಕುರಿತ ಶಿಷ್ಟಾಚಾರ’ ಹೆಸರಿನಲ್ಲಿ ಪತ್ರಿಕಾ ಹೇಳಿಕೆಯೊಂದನ್ನು ಬಿಡುಗಡೆ ಮಾಡಿತ್ತು. ಅದರಲ್ಲಿ “ಈ ಶಿಷ್ಟಾಚಾರದ ನಿಬಂಧನೆಗಳಿಗೆ ಅನುಸಾರವಾಗಿ, ಆರೋಗ್ಯ ಸೇತು ಮೊಬೈಲ್ ಅಪ್ಲಿಕೇಶನ್‌ನ ಸಂಪರ್ಕ ಪತ್ತೆ ಹಚ್ಚುವಿಕೆಯ ವೈಶಿಷ್ಟ್ಯವನ್ನು ಸ್ಥಗಿತಗೊಳಿಸಲಾಗಿದೆ ಮತ್ತು ಅದರ ಮೂಲಕ ಸಂಗ್ರಹಿಸಲಾದ ಸಂಪರ್ಕ ಪತ್ತೆಹಚ್ಚುವಿಕೆಯ ಡೇಟಾವನ್ನು ಅಳಿಸಲಾಗಿದೆ. ಮತ್ತು ಆರೋಗ್ಯ ಸೇತು ಮೊಬೈಲ್ ಅಪ್ಲಿಕೇಶನ್ ಮೂಲಕ ಸಂಗ್ರಹಿಸಲಾದ ಸಂಪರ್ಕ ಪತ್ತೆಹಚ್ಚುವಿಕೆಯ ಡೇಟಾವನ್ನು ಅಳಿಸಲಾಗಿದೆ. ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರದಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಹಾಯಕ ಸಚಿವ ರಾಜೀವ್ ಚಂದ್ರಶೇಖರ್ ಅವರು ಈ ಮಾಹಿತಿಯನ್ನು ನೀಡಿದ್ದಾರೆ” ಎಂದು ಘೋಷಿಸಿದೆ. ಆದರೂ ಈ ಡೇಟಾಗಳು ಹರಿದಾಡುತ್ತಿರುವುದು ಹೇಗೆ ಎಂಬುದು ಪ್ರಶ್ನೆಯಾಗಿದೆ.

ಇದನ್ನೂ ಓದಿ: ಡೇಟಾ ಸಂರಕ್ಷಣೆ: ಹೇಳಿದ್ದೇನು? ಮಾಡಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...