Homeಮುಖಪುಟದಾಭೋಲ್ಕರ್ ರೀತಿ ಕೊಲ್ಲುವುದಾಗಿ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್‌ಗೆ ಜೀವ ಬೆದರಿಕೆ: ಆರೋಪಿ ಅರೆಸ್ಟ್

ದಾಭೋಲ್ಕರ್ ರೀತಿ ಕೊಲ್ಲುವುದಾಗಿ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್‌ಗೆ ಜೀವ ಬೆದರಿಕೆ: ಆರೋಪಿ ಅರೆಸ್ಟ್

- Advertisement -
- Advertisement -

ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್‌ಗೆ ಫೇಸ್‌ಬುಕ್‌ನಲ್ಲಿ ಜೀವ ಬೆದರಿಕೆ ಹಾಕಿದ್ದ ಆರೋಪದ ಮೇಲೆ ಮುಂಬೈ ಅಪರಾಧ ವಿಭಾಗವು ಭಾನುವಾರ ಪುಣೆಯಲ್ಲಿ ಶಂಕಿತನನ್ನು ಬಂಧಿಸಿದೆ.

ಆರೋಪಿ ಸಾಗರ್ ಬರ್ವೆ (35) ಅವರನ್ನು ಭಾನುವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ತನಿಖೆಗಾಗಿ ಜೂನ್ 13 ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಶುಕ್ರವಾರ, ಪವಾರ್ ಅವರಿಗೆ ಆರೋಪಿ ಸಾಗರ್ ಬರ್ವೆ ಅವರು ಫೇಸ್‌ಬುಕ್‌ನಲ್ಲಿ “ಅವರು (ಪವಾರ್) ಶೀಘ್ರದಲ್ಲೇ (ನರೇಂದ್ರ) ದಾಭೋಲ್ಕರ್ ಅವರಿಗಾದ ರೀತಿಯಲ್ಲೇ ನಿಮಗು ಆಗುತ್ತದೆ” ಎಂದು ಸಂದೇಶ ಕಳುಹಿಸಿದ್ದಾರೆ. 2013ರಲ್ಲಿ ಪುಣೆಯಲ್ಲಿ ನಾಗರಿಕ ಕಾರ್ಯಕರ್ತ ದಾಭೋಲ್ಕರ್ ಕೊಲೆಯಾಗಿದ್ದರು.

”ಆರೋಪಿ ಬಾರ್ವೆ ಅವರು ಪ್ರಮುಖ ಸಾಫ್ಟ್‌ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಾರೆ. ಸಧ್ಯ ಅವರನ್ನು ಬಂಧಿಸಿರುವ ಪೊಲೀಸರು, ಅವರ ಮೊಬೈಲ್ ಫೋನ್ ಅನ್ನು ವಶಪಡಿಸಿಕೊಂಡಿದ್ದಾರೆ. ಸೈಬರ್ ಪೊಲೀಸರು ತಾಂತ್ರಿಕ ವಿವರಗಳನ್ನು ಸಂಗ್ರಹಿಸುತ್ತಿದ್ದಾರೆ. ಅವರು ಏಕೆ ಬೆದರಿಕೆ ಹಾಕಿದರು ಎಂಬುದನ್ನು ತಿಳಿಯಲು ನಾವು ಬಾರ್ವೆ ಅವರನ್ನು ಪ್ರಶ್ನಿಸುತ್ತೇವೆ” ಎಂದು ಹಿರಿಯ ಅಪರಾಧ ವಿಭಾಗದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಸಂಸತ್ ಉದ್ಘಾಟನೆಯಲ್ಲಿ ನಡೆಸಿದ ಆಚರಣೆಗಳು ದೇಶವನ್ನು ಹಿಂದಕ್ಕೆ ಕೊಂಡೊಯ್ಯುತ್ತಿವೆ: ಶರದ್ ಪವಾರ್ ಆಕ್ರೋಶ

ಪವಾರ್ ಅವರ ಪುತ್ರಿ ಸುಪ್ರಿಯಾ ಸುಳೆ ಶುಕ್ರವಾರ ಸಾಮಾಜಿಕ ಮಾಧ್ಯಮದಲ್ಲಿ ತನ್ನ ತಂದೆಗೆ ಕೊಲೆ ಬೆದರಿಕೆ ಇದೆ ಎಂದು ಆರೋಪಿಸಿದ್ದಾರೆ. ಎನ್‌ಸಿಪಿ ನಾಯಕರ ನಿಯೋಗದೊಂದಿಗೆ ಸುಪ್ರಿಯಾ ಸುಳೆ ಅವರು ಶುಕ್ರವಾರ ಮುಂಬೈ ಪೊಲೀಸ್ ಕಮಿಷನರ್ ವಿವೇಕ್ ಫನ್ಸಾಲ್ಕರ್ ಅವರನ್ನು ಭೇಟಿ ಮಾಡಿದರು. ಎಲ್‌ಟಿ ಮಾರ್ಗ್ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 506 (2) ಮತ್ತು 504 ಮತ್ತು 153 (ಎ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಪ್ರಕರಣವನ್ನು ಮುಂಬೈ ಅಪರಾಧ ವಿಭಾಗದ ಘಟಕ 2ಕ್ಕೆ ವರ್ಗಾಯಿಸಲಾಗಿದೆ.

ಟ್ವಿಟ್ಟರ್ ಹ್ಯಾಂಡಲ್ ‘@SbhBJP’ ನಿಂದ ಸೌರಭ್ ಪಿಂಪಾಲ್ಕರ್ ಪ್ರೊಫೈಲ್ ಹೆಸರಿನಲ್ಲಿ ಪವಾರ್ ವಿರುದ್ಧ ಮತ್ತೊಂದು ಅವಹೇಳನಕಾರಿ ಹೇಳಿಕೆಯನ್ನು ಪೋಸ್ಟ್ ಮಾಡಲಾಗಿದೆ.

ಸೈಬರ್ ಪೊಲೀಸರೊಂದಿಗೆ ಹಲವು ಪೊಲೀಸ್ ತಂಡಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರಕರಣದಲ್ಲಿ ಭಾಗಿಯಾಗಿರುವ ಇತರ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಅಧಿಕಾರಿ ತಿಳಿಸಿದರು.

ಈ ಬಗ್ಗೆ ಪವಾರ್ ಮಾತನಾಡಿದ ಪವಾರ್ ಅವರು, ನಾನು ಬೆದರಿಕೆಯ ಬಗ್ಗೆ ಚಿಂತಿಸುವುದಿಲ್ಲ ಎಂದಿದ್ದಾರೆ. ಮಹಾರಾಷ್ಟ್ರದ ಏಕನಾಥ್ ಶಿಂಧೆ-ದೇವೇಂದ್ರ ಫಡ್ನವಿಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯ ಹೊಣೆ ಹೊತ್ತಿರುವವರು ತಮ್ಮ ಕರ್ತವ್ಯವನ್ನು ನಿರ್ಲಕ್ಷಿಸುವಂತಿಲ್ಲ ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...