Homeಕರ್ನಾಟಕಬಸ್‌ಗೆ ನಮಸ್ಕರಿಸಿ ಸರ್ಕಾರಕ್ಕೆ ಧನ್ಯವಾದ ಹೇಳಿದ ಮಹಿಳೆಯ ಫೋಟೊ ವೈರಲ್; 'ಬಹುಕಾಲ ನೆನಪಿನಲ್ಲಿ ಉಳಿಯುವ ಚಿತ್ರ'...

ಬಸ್‌ಗೆ ನಮಸ್ಕರಿಸಿ ಸರ್ಕಾರಕ್ಕೆ ಧನ್ಯವಾದ ಹೇಳಿದ ಮಹಿಳೆಯ ಫೋಟೊ ವೈರಲ್; ‘ಬಹುಕಾಲ ನೆನಪಿನಲ್ಲಿ ಉಳಿಯುವ ಚಿತ್ರ’ ಎಂದ ಸಿಎಂ ಸಿದ್ದು

- Advertisement -
- Advertisement -

ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಪಕ್ಷ ಘೋಷಿಸಿದ್ದ ಐದು ‘ಗ್ಯಾರಂಟಿ’ಗಳಲ್ಲಿ ಒಂದಾದ, ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೇವೆ ಒದಗಿಸುವ ‘ಶಕ್ತಿ’ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಚಾಲನೆ ನೀಡಿದ್ದಾರೆ. ರಾಜ್ಯಾದ್ಯಂತ ಈ ಯೋಜನೆಗೆ ಚಾಲನೆ ದೊರೆತಿದ್ದು, ಎಲ್ಲ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡುತ್ತಿದ್ದಾರೆ.

ಈ ಯೋಜನೆಯಿಂದ ರಾಜ್ಯದ ಬಹುತೇಕ ಎಲ್ಲಾ ಮಹಿಳೆಯರು ಸಂತಸ ವ್ಯಕ್ತಪಡಿಸಿದ್ದಾರೆ. ಇನ್ನೂ ಕೆಲ ಬಡ ಹೆಣ್ಣುಮಕ್ಕಳು ಸರ್ಕಾರಕ್ಕೆ ಧನ್ಯವಾದ ಸಲ್ಲಿಸಿದ್ದಾರೆ. ಅದೇ ರೀತಿ ಧಾರವಾಡದ ಹೊಸ ಬಸ್ ನಿಲ್ದಾಣದಲ್ಲಿ, ಶಕ್ತಿ ಯೋಜನೆಗೆ ಚಾಲನೆ ಕೊಟ್ಟಬಳಿಕ ಬಸ್ ಏರಲು ಮುಂದಾದ ಮಹಿಳೆಯೊಬ್ಬರು ಬಸ್‌ಗೆ ನಮಸ್ಕರಿಸಿದ್ದಾರೆ. ಈ ಚಿತ್ರ ಸೋಷಿಯಲ್ ಮಿಡಿಯಾದಲ್ಲಿ ಭಾರೀ ವೈರಲ್ ಆಗಿದೆ.

ಪ್ರಜಾವಾಣಿ ಪತ್ರಿಕೆಯ ಛಾಯಾಗ್ರಾಹಕ ಬಿ.ಎಂ.ಕೇದಾರನಾಥ ಅವರು ತೆಗೆದ ಈ ಮಹಿಳೆಯ ಚಿತ್ರವನ್ನು ಸಿಎಂ ಸಿದ್ದರಾಮಯ್ಯ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು, ”ನಾವು ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಘೋಷಿಸಿದಾಗ ಶ್ರಮಪಡದೆ ಸಮಾಜದ ಎಲ್ಲಾ ವಿಧದ ಸೌಲಭ್ಯಗಳನ್ನು ಕೂತಲ್ಲಿಯೇ ಅನುಭವಿಸುತ್ತಿರುವ ಜನರಿಂದ ತರತರನಾದ ಟೀಕೆಗಳು, ಕುಹಕ, ವ್ಯಂಗ್ಯಗಳು ವ್ಯಕ್ತವಾದವು. ಅದ್ಯಾವುದಕ್ಕೂ ತಲೆಕೆಡಿಸಿಕೊಳ್ಳದೆ ಇಂದು ಶಕ್ತಿ ಯೋಜನೆಯನ್ನು ಜಾರಿಗೆ ಕೊಟ್ಟೆವು. ನಮ್ಮ ಯೋಜನೆ ಜಾರಿಗೊಂಡ ನಂತರ ತಾಯಿಯೊಬ್ಬರು ಧಾರವಾಡ ಬಸ್ ನಿಲ್ದಾಣದಲ್ಲಿ ಬಸ್ಸಿಗೆ ನಮಸ್ಕರಿಸಿ ಅತ್ಯಂತ ಸಂತೋಷದಿಂದ ಉಚಿತ ಪ್ರಯಾಣ ಬೆಳೆಸಿದರು” ಎಂದು ಚಿತ್ರವನ್ನು ಹಂಚಿಕೊಂಡಿದ್ದಾರೆ.

”ನಾವು ಎಷ್ಟು ಅನುದಾನ ಖರ್ಚು ಮಾಡುತ್ತೇವೆ ಎನ್ನುವುದಕ್ಕಿಂತ ಯಾರಿಗಾಗಿ ಆ ಹಣ ವಿನಿಯೋಗಿಸುತ್ತಿದ್ದೇವೆ ಎಂಬುದು ಮುಖ್ಯ. ಈ ಕ್ಷಣ ಇನ್ನೂ ನೂರು ವಿಧದಲ್ಲಿ ಟೀಕೆಗಳು ಎದುರಾದರೂ ಅದ್ಯಾವುದಕ್ಕೂ ಕುಗ್ಗದಂತೆ ನನ್ನನ್ನು ಗುರಿಯೆಡೆಗೆ ಮತ್ತಷ್ಟು ದೃಢವಾಗಿಸಿದೆ” ಎಂದು ಹೇಳಿದ್ದಾರೆ.

”ಯೋಜನೆ ಜಾರಿಗೆ ಕೊಟ್ಟ ನನಗೆ ಸಂತೃಪ್ತಿ ನೀಡಿದ ಜೊತೆಗೆ ಬಹುಕಾಲ ನೆನಪಿನಲ್ಲಿ ಉಳಿಯುವ ಚಿತ್ರವಿದು” ಎಂದು ಸಿದ್ದರಾಮಯ್ಯ ಟ್ವಿಟ್ ಮಾಡಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಮಹಿಳೆಯ ಫೋಟೋ ಭಾರೀ ವೈರಲ್

ಮಹಿಳೆಯ ಚಿತ್ರವನ್ನು ಹಂಚಿಕೊಂಡಿರುವ ಲೇಖಕ ಅರಣ್ ಜೋಳದಕೂಡ್ಲಿಗಿ ಅವರು, ”ಸ್ತ್ರೀಶಕ್ತಿಗೆ ಅಜ್ಜಿಯ ಗೌರವಾರ್ಪಣೆ.. ಹೃದಯ ಸ್ಪರ್ಶಿಸಿದ ಚಿತ್ರ, ಶಕ್ತಿ ಯೋಜನೆ ಯಾರಿಗೆ ಎಷ್ಟು ಉಪಯೋಗ ಆಗುತ್ತೋ ಗೊತ್ತಿಲ್ಲ. ಆದ್ರೆ ಉತ್ತರ ಕರ್ನಾಟಕದ ಕೆಲ ಹಳ್ಳಿ ಜನ್ರಿಗಂತೂ ತುಂಬಾ ಅನುಕೂಲವಾಗಿದೆ. ಹೇಳಿಕೊಳ್ಳದಂತಹ ಸಂಭ್ರಮವಿದೆ. ವಯಸ್ಸು 60 ದಾಟಿದ್ರೂ, ಹೊಲದಲ್ಲಿ 44 ಡಿಗ್ರಿ‌ ಸೆಲ್ಸಿಯಸ್ ಬಿಸಿಲಿನಲ್ಲಿ ದೇಹ ದಂಡಿಸಿ ಕೆಲಸ ಮಾಡಿದ್ರೆ 1 ದಿನಕ್ಕೆ 200 ಕೂಲಿ ಕೊಡ್ತಾರೆ. ಅದರಲ್ಲಿ ಆಸ್ಪತ್ರೆಗೆ ಹೋಗ್ಬೇಕು, ಮಗಳು- ಸಂಬಂಧಿಕರ ಊರಿಗೆ ಹೋಗ್ಬೇಕು ಅಂತ ಬಸ್ ಹತ್ತಿದ್ರೆ ಅಲ್ಲೇ ದುಡ್ಡು ಖಾಲಿಯಾಗೋದು. ಆದ್ರೆ ಇನ್ಮುಂದೆ ದುಡ್ಡು ಉಳಿತು. ಕೊಡೋ ಕೂಲಿಯಲ್ಲಿ ಮೂರೊತ್ತು ನೆಮ್ಮದಿಯಾಗಿ ಊಟ ಮಾಡಬಹುದು ಅನ್ನೋ ಭಾವುಕತೆ, ಖುಷಿ ಈ ಫೋಟೋದಲ್ಲಿ ಕಾಣಿಸ್ತಿದೆ. ಈ ಅಜ್ಜಿಯನ್ನ ನೋಡಿದಾಗ ಅದು ಸತ್ಯ ಅನ್ನಿಸ್ತಾ ಇದೆ” ಎಂದು ಬರೆದಿದ್ದಾರೆ.

ಬಾಲರಾಜ ತಾಳಕೇರಿ ಎನ್ನುವವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಫೋಟೋ ಶೇರ್ ಮಾಡಿದ್ದು, “ಶಕ್ತಿ” ಯೋಜನೆ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಬಡ .ಮಧ್ಯಮ ವರ್ಗದ ಹೆಣ್ಣು ಮಕ್ಕಳಿಗೆ ವರದಾನ ವಾಯಿತು. ಇವತ್ತು ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸಿದ ರಾಜ್ಯ ಸರ್ಕಾರ ಅಜ್ಜಿಯೊಬ್ಬಳ ಬಸ್ ಗೆ ನಮಸ್ಕರಿಸಿ ಬಸ್ ಹತ್ತಿ ಪ್ರಯಾಣಿಸುವ ದೃಶ್ಯ ಕಂಡುಬಂದಿತ್ತು. ಸೋ ಬಡ ,ಮದ್ಯಮ ವರ್ಗದ ಹೆಣ್ಣು ಮಕ್ಕಳಿಗೆ ತಮ್ಮ ಕೆಲಸ ಸ್ಥಳಗಳಿಗೆ. ಕಂಪನಿಗಳಿಗೆ, ಗಾಮೆ೯ಂಟ್ಸ್ ಗಳಿಗೆ,ಹೋಗಲು ತುಂಬಾ ಪ್ರಯೋಜನಕಾರಿಯಾಗಿದೆ. ದುಡಿದ ಸಂಬಳದಲ್ಲಿ ಸ್ವಲ್ಪ ಹಣ ಉಳಿತಾಯ ಮಾಡಿದಂತೆ ಆಯಿತು… ನಿಜವಾದ ಬಡ, ಮದ್ಯಮ ವರ್ಗದ ಮಹಿಳೆಯರಿಗೆ ನೆರವಾಗುವುದಂತು ಕಟು ಸತ್ಯ… ಸ್ತ್ರೀ ಸಬಲೀಕರಣ. ಸ್ವಾವಲಂಬನೆ” ಎಂದು ಬರೆದಿದ್ದಾರೆ.

ಪ್ರಕಾಶ್ ಎನ್ನುವವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಮಹಿಳೆಯ ಫೋಟೋ ಶೇರ್ ಮಾಡಿದ್ದು, ಹೃದಯ ಸ್ಪರ್ಶಿಸಿದ ಚಿತ್ರ ಎಂದಿದ್ದಾರೆ. ”ಶಕ್ತಿ ಯೋಜನೆ ಯಾರಿಗೆ ಎಷ್ಟು ಉಪಯೋಗ ಆಗುತ್ತೋ ಗೊತ್ತಿಲ್ಲ. ಆದ್ರೆ ಉತ್ತರ ಕರ್ನಾಟಕದ ಕೆಲ ಹಳ್ಳಿ ಜನ್ರಿಗಂತೂ ತುಂಬಾ ಅನುಕೂಲವಾಗಿದೆ. ಹೇಳಿಕೊಳ್ಳದಂತಹ ಸಂಭ್ರಮವಿದೆ.
ವಯಸ್ಸು 60 ದಾಟಿದ್ರೂ, ಹೊಲದಲ್ಲಿ 44 ಡಿಗ್ರಿ‌ ಸೆಲ್ಸಿಯಸ್ ಬಿಸಿಲಿನಲ್ಲಿ ದೇಹ ದಂಡಿಸಿ ಕೆಲಸ ಮಾಡಿದ್ರೆ 1 ದಿನಕ್ಕೆ 200 ಕೂಲಿ ಕೊಡ್ತಾರೆ. ಅದರಲ್ಲಿ ಆಸ್ಪತ್ರೆಗೆ ಹೋಗ್ಬೇಕು, ಮಗಳು- ಸಂಬಂಧಿಕರ ಊರಿಗೆ ಹೋಗ್ಬೇಕು ಅಂತ ಬಸ್ ಹತ್ತಿದ್ರೆ ಅಲ್ಲೇ ದುಡ್ಡು ಖಾಲಿಯಾಗೋದು. ಆದ್ರೆ ಇನ್ಮುಂದೆ ದುಡ್ಡು ಉಳಿತು. ಕೊಡೋ ಕೂಲಿಯಲ್ಲಿ ಮೂರೋತ್ತು ನೆಮ್ಮದಿಯಾಗಿ ಊಟ ಮಾಡಬಹುದು ಅನ್ನೋ ಭಾವುಕತೆ, ಖುಷಿ ಈ ಫೋಟೋದಲ್ಲಿ ಕಾಣಿಸ್ತಿದೆ. ಈ ಅಜ್ಜಿಯನ್ನ ನೋಡಿದಾಗ ನನ್ನ ಅವ್ವ ( ತಾಯಿ ) ನನೆಪಾದ್ಳು. ಗೊತ್ತಿಲ್ದೇ ಕಣ್ಣಲ್ಲಿ ನೀರು ಜಿನುಗಿತು)” ಎಂದು ಬರೆದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...