Homeಕರ್ನಾಟಕಬಸ್‌ಗೆ ನಮಸ್ಕರಿಸಿ ಸರ್ಕಾರಕ್ಕೆ ಧನ್ಯವಾದ ಹೇಳಿದ ಮಹಿಳೆಯ ಫೋಟೊ ವೈರಲ್; 'ಬಹುಕಾಲ ನೆನಪಿನಲ್ಲಿ ಉಳಿಯುವ ಚಿತ್ರ'...

ಬಸ್‌ಗೆ ನಮಸ್ಕರಿಸಿ ಸರ್ಕಾರಕ್ಕೆ ಧನ್ಯವಾದ ಹೇಳಿದ ಮಹಿಳೆಯ ಫೋಟೊ ವೈರಲ್; ‘ಬಹುಕಾಲ ನೆನಪಿನಲ್ಲಿ ಉಳಿಯುವ ಚಿತ್ರ’ ಎಂದ ಸಿಎಂ ಸಿದ್ದು

- Advertisement -
- Advertisement -

ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಪಕ್ಷ ಘೋಷಿಸಿದ್ದ ಐದು ‘ಗ್ಯಾರಂಟಿ’ಗಳಲ್ಲಿ ಒಂದಾದ, ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೇವೆ ಒದಗಿಸುವ ‘ಶಕ್ತಿ’ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಚಾಲನೆ ನೀಡಿದ್ದಾರೆ. ರಾಜ್ಯಾದ್ಯಂತ ಈ ಯೋಜನೆಗೆ ಚಾಲನೆ ದೊರೆತಿದ್ದು, ಎಲ್ಲ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡುತ್ತಿದ್ದಾರೆ.

ಈ ಯೋಜನೆಯಿಂದ ರಾಜ್ಯದ ಬಹುತೇಕ ಎಲ್ಲಾ ಮಹಿಳೆಯರು ಸಂತಸ ವ್ಯಕ್ತಪಡಿಸಿದ್ದಾರೆ. ಇನ್ನೂ ಕೆಲ ಬಡ ಹೆಣ್ಣುಮಕ್ಕಳು ಸರ್ಕಾರಕ್ಕೆ ಧನ್ಯವಾದ ಸಲ್ಲಿಸಿದ್ದಾರೆ. ಅದೇ ರೀತಿ ಧಾರವಾಡದ ಹೊಸ ಬಸ್ ನಿಲ್ದಾಣದಲ್ಲಿ, ಶಕ್ತಿ ಯೋಜನೆಗೆ ಚಾಲನೆ ಕೊಟ್ಟಬಳಿಕ ಬಸ್ ಏರಲು ಮುಂದಾದ ಮಹಿಳೆಯೊಬ್ಬರು ಬಸ್‌ಗೆ ನಮಸ್ಕರಿಸಿದ್ದಾರೆ. ಈ ಚಿತ್ರ ಸೋಷಿಯಲ್ ಮಿಡಿಯಾದಲ್ಲಿ ಭಾರೀ ವೈರಲ್ ಆಗಿದೆ.

ಪ್ರಜಾವಾಣಿ ಪತ್ರಿಕೆಯ ಛಾಯಾಗ್ರಾಹಕ ಬಿ.ಎಂ.ಕೇದಾರನಾಥ ಅವರು ತೆಗೆದ ಈ ಮಹಿಳೆಯ ಚಿತ್ರವನ್ನು ಸಿಎಂ ಸಿದ್ದರಾಮಯ್ಯ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು, ”ನಾವು ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಘೋಷಿಸಿದಾಗ ಶ್ರಮಪಡದೆ ಸಮಾಜದ ಎಲ್ಲಾ ವಿಧದ ಸೌಲಭ್ಯಗಳನ್ನು ಕೂತಲ್ಲಿಯೇ ಅನುಭವಿಸುತ್ತಿರುವ ಜನರಿಂದ ತರತರನಾದ ಟೀಕೆಗಳು, ಕುಹಕ, ವ್ಯಂಗ್ಯಗಳು ವ್ಯಕ್ತವಾದವು. ಅದ್ಯಾವುದಕ್ಕೂ ತಲೆಕೆಡಿಸಿಕೊಳ್ಳದೆ ಇಂದು ಶಕ್ತಿ ಯೋಜನೆಯನ್ನು ಜಾರಿಗೆ ಕೊಟ್ಟೆವು. ನಮ್ಮ ಯೋಜನೆ ಜಾರಿಗೊಂಡ ನಂತರ ತಾಯಿಯೊಬ್ಬರು ಧಾರವಾಡ ಬಸ್ ನಿಲ್ದಾಣದಲ್ಲಿ ಬಸ್ಸಿಗೆ ನಮಸ್ಕರಿಸಿ ಅತ್ಯಂತ ಸಂತೋಷದಿಂದ ಉಚಿತ ಪ್ರಯಾಣ ಬೆಳೆಸಿದರು” ಎಂದು ಚಿತ್ರವನ್ನು ಹಂಚಿಕೊಂಡಿದ್ದಾರೆ.

”ನಾವು ಎಷ್ಟು ಅನುದಾನ ಖರ್ಚು ಮಾಡುತ್ತೇವೆ ಎನ್ನುವುದಕ್ಕಿಂತ ಯಾರಿಗಾಗಿ ಆ ಹಣ ವಿನಿಯೋಗಿಸುತ್ತಿದ್ದೇವೆ ಎಂಬುದು ಮುಖ್ಯ. ಈ ಕ್ಷಣ ಇನ್ನೂ ನೂರು ವಿಧದಲ್ಲಿ ಟೀಕೆಗಳು ಎದುರಾದರೂ ಅದ್ಯಾವುದಕ್ಕೂ ಕುಗ್ಗದಂತೆ ನನ್ನನ್ನು ಗುರಿಯೆಡೆಗೆ ಮತ್ತಷ್ಟು ದೃಢವಾಗಿಸಿದೆ” ಎಂದು ಹೇಳಿದ್ದಾರೆ.

”ಯೋಜನೆ ಜಾರಿಗೆ ಕೊಟ್ಟ ನನಗೆ ಸಂತೃಪ್ತಿ ನೀಡಿದ ಜೊತೆಗೆ ಬಹುಕಾಲ ನೆನಪಿನಲ್ಲಿ ಉಳಿಯುವ ಚಿತ್ರವಿದು” ಎಂದು ಸಿದ್ದರಾಮಯ್ಯ ಟ್ವಿಟ್ ಮಾಡಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಮಹಿಳೆಯ ಫೋಟೋ ಭಾರೀ ವೈರಲ್

ಮಹಿಳೆಯ ಚಿತ್ರವನ್ನು ಹಂಚಿಕೊಂಡಿರುವ ಲೇಖಕ ಅರಣ್ ಜೋಳದಕೂಡ್ಲಿಗಿ ಅವರು, ”ಸ್ತ್ರೀಶಕ್ತಿಗೆ ಅಜ್ಜಿಯ ಗೌರವಾರ್ಪಣೆ.. ಹೃದಯ ಸ್ಪರ್ಶಿಸಿದ ಚಿತ್ರ, ಶಕ್ತಿ ಯೋಜನೆ ಯಾರಿಗೆ ಎಷ್ಟು ಉಪಯೋಗ ಆಗುತ್ತೋ ಗೊತ್ತಿಲ್ಲ. ಆದ್ರೆ ಉತ್ತರ ಕರ್ನಾಟಕದ ಕೆಲ ಹಳ್ಳಿ ಜನ್ರಿಗಂತೂ ತುಂಬಾ ಅನುಕೂಲವಾಗಿದೆ. ಹೇಳಿಕೊಳ್ಳದಂತಹ ಸಂಭ್ರಮವಿದೆ. ವಯಸ್ಸು 60 ದಾಟಿದ್ರೂ, ಹೊಲದಲ್ಲಿ 44 ಡಿಗ್ರಿ‌ ಸೆಲ್ಸಿಯಸ್ ಬಿಸಿಲಿನಲ್ಲಿ ದೇಹ ದಂಡಿಸಿ ಕೆಲಸ ಮಾಡಿದ್ರೆ 1 ದಿನಕ್ಕೆ 200 ಕೂಲಿ ಕೊಡ್ತಾರೆ. ಅದರಲ್ಲಿ ಆಸ್ಪತ್ರೆಗೆ ಹೋಗ್ಬೇಕು, ಮಗಳು- ಸಂಬಂಧಿಕರ ಊರಿಗೆ ಹೋಗ್ಬೇಕು ಅಂತ ಬಸ್ ಹತ್ತಿದ್ರೆ ಅಲ್ಲೇ ದುಡ್ಡು ಖಾಲಿಯಾಗೋದು. ಆದ್ರೆ ಇನ್ಮುಂದೆ ದುಡ್ಡು ಉಳಿತು. ಕೊಡೋ ಕೂಲಿಯಲ್ಲಿ ಮೂರೊತ್ತು ನೆಮ್ಮದಿಯಾಗಿ ಊಟ ಮಾಡಬಹುದು ಅನ್ನೋ ಭಾವುಕತೆ, ಖುಷಿ ಈ ಫೋಟೋದಲ್ಲಿ ಕಾಣಿಸ್ತಿದೆ. ಈ ಅಜ್ಜಿಯನ್ನ ನೋಡಿದಾಗ ಅದು ಸತ್ಯ ಅನ್ನಿಸ್ತಾ ಇದೆ” ಎಂದು ಬರೆದಿದ್ದಾರೆ.

ಬಾಲರಾಜ ತಾಳಕೇರಿ ಎನ್ನುವವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಫೋಟೋ ಶೇರ್ ಮಾಡಿದ್ದು, “ಶಕ್ತಿ” ಯೋಜನೆ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಬಡ .ಮಧ್ಯಮ ವರ್ಗದ ಹೆಣ್ಣು ಮಕ್ಕಳಿಗೆ ವರದಾನ ವಾಯಿತು. ಇವತ್ತು ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸಿದ ರಾಜ್ಯ ಸರ್ಕಾರ ಅಜ್ಜಿಯೊಬ್ಬಳ ಬಸ್ ಗೆ ನಮಸ್ಕರಿಸಿ ಬಸ್ ಹತ್ತಿ ಪ್ರಯಾಣಿಸುವ ದೃಶ್ಯ ಕಂಡುಬಂದಿತ್ತು. ಸೋ ಬಡ ,ಮದ್ಯಮ ವರ್ಗದ ಹೆಣ್ಣು ಮಕ್ಕಳಿಗೆ ತಮ್ಮ ಕೆಲಸ ಸ್ಥಳಗಳಿಗೆ. ಕಂಪನಿಗಳಿಗೆ, ಗಾಮೆ೯ಂಟ್ಸ್ ಗಳಿಗೆ,ಹೋಗಲು ತುಂಬಾ ಪ್ರಯೋಜನಕಾರಿಯಾಗಿದೆ. ದುಡಿದ ಸಂಬಳದಲ್ಲಿ ಸ್ವಲ್ಪ ಹಣ ಉಳಿತಾಯ ಮಾಡಿದಂತೆ ಆಯಿತು… ನಿಜವಾದ ಬಡ, ಮದ್ಯಮ ವರ್ಗದ ಮಹಿಳೆಯರಿಗೆ ನೆರವಾಗುವುದಂತು ಕಟು ಸತ್ಯ… ಸ್ತ್ರೀ ಸಬಲೀಕರಣ. ಸ್ವಾವಲಂಬನೆ” ಎಂದು ಬರೆದಿದ್ದಾರೆ.

ಪ್ರಕಾಶ್ ಎನ್ನುವವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಮಹಿಳೆಯ ಫೋಟೋ ಶೇರ್ ಮಾಡಿದ್ದು, ಹೃದಯ ಸ್ಪರ್ಶಿಸಿದ ಚಿತ್ರ ಎಂದಿದ್ದಾರೆ. ”ಶಕ್ತಿ ಯೋಜನೆ ಯಾರಿಗೆ ಎಷ್ಟು ಉಪಯೋಗ ಆಗುತ್ತೋ ಗೊತ್ತಿಲ್ಲ. ಆದ್ರೆ ಉತ್ತರ ಕರ್ನಾಟಕದ ಕೆಲ ಹಳ್ಳಿ ಜನ್ರಿಗಂತೂ ತುಂಬಾ ಅನುಕೂಲವಾಗಿದೆ. ಹೇಳಿಕೊಳ್ಳದಂತಹ ಸಂಭ್ರಮವಿದೆ.
ವಯಸ್ಸು 60 ದಾಟಿದ್ರೂ, ಹೊಲದಲ್ಲಿ 44 ಡಿಗ್ರಿ‌ ಸೆಲ್ಸಿಯಸ್ ಬಿಸಿಲಿನಲ್ಲಿ ದೇಹ ದಂಡಿಸಿ ಕೆಲಸ ಮಾಡಿದ್ರೆ 1 ದಿನಕ್ಕೆ 200 ಕೂಲಿ ಕೊಡ್ತಾರೆ. ಅದರಲ್ಲಿ ಆಸ್ಪತ್ರೆಗೆ ಹೋಗ್ಬೇಕು, ಮಗಳು- ಸಂಬಂಧಿಕರ ಊರಿಗೆ ಹೋಗ್ಬೇಕು ಅಂತ ಬಸ್ ಹತ್ತಿದ್ರೆ ಅಲ್ಲೇ ದುಡ್ಡು ಖಾಲಿಯಾಗೋದು. ಆದ್ರೆ ಇನ್ಮುಂದೆ ದುಡ್ಡು ಉಳಿತು. ಕೊಡೋ ಕೂಲಿಯಲ್ಲಿ ಮೂರೋತ್ತು ನೆಮ್ಮದಿಯಾಗಿ ಊಟ ಮಾಡಬಹುದು ಅನ್ನೋ ಭಾವುಕತೆ, ಖುಷಿ ಈ ಫೋಟೋದಲ್ಲಿ ಕಾಣಿಸ್ತಿದೆ. ಈ ಅಜ್ಜಿಯನ್ನ ನೋಡಿದಾಗ ನನ್ನ ಅವ್ವ ( ತಾಯಿ ) ನನೆಪಾದ್ಳು. ಗೊತ್ತಿಲ್ದೇ ಕಣ್ಣಲ್ಲಿ ನೀರು ಜಿನುಗಿತು)” ಎಂದು ಬರೆದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...