Homeಕರ್ನಾಟಕಬಸ್‌ಗೆ ನಮಸ್ಕರಿಸಿ ಸರ್ಕಾರಕ್ಕೆ ಧನ್ಯವಾದ ಹೇಳಿದ ಮಹಿಳೆಯ ಫೋಟೊ ವೈರಲ್; 'ಬಹುಕಾಲ ನೆನಪಿನಲ್ಲಿ ಉಳಿಯುವ ಚಿತ್ರ'...

ಬಸ್‌ಗೆ ನಮಸ್ಕರಿಸಿ ಸರ್ಕಾರಕ್ಕೆ ಧನ್ಯವಾದ ಹೇಳಿದ ಮಹಿಳೆಯ ಫೋಟೊ ವೈರಲ್; ‘ಬಹುಕಾಲ ನೆನಪಿನಲ್ಲಿ ಉಳಿಯುವ ಚಿತ್ರ’ ಎಂದ ಸಿಎಂ ಸಿದ್ದು

- Advertisement -
- Advertisement -

ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಪಕ್ಷ ಘೋಷಿಸಿದ್ದ ಐದು ‘ಗ್ಯಾರಂಟಿ’ಗಳಲ್ಲಿ ಒಂದಾದ, ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೇವೆ ಒದಗಿಸುವ ‘ಶಕ್ತಿ’ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಚಾಲನೆ ನೀಡಿದ್ದಾರೆ. ರಾಜ್ಯಾದ್ಯಂತ ಈ ಯೋಜನೆಗೆ ಚಾಲನೆ ದೊರೆತಿದ್ದು, ಎಲ್ಲ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡುತ್ತಿದ್ದಾರೆ.

ಈ ಯೋಜನೆಯಿಂದ ರಾಜ್ಯದ ಬಹುತೇಕ ಎಲ್ಲಾ ಮಹಿಳೆಯರು ಸಂತಸ ವ್ಯಕ್ತಪಡಿಸಿದ್ದಾರೆ. ಇನ್ನೂ ಕೆಲ ಬಡ ಹೆಣ್ಣುಮಕ್ಕಳು ಸರ್ಕಾರಕ್ಕೆ ಧನ್ಯವಾದ ಸಲ್ಲಿಸಿದ್ದಾರೆ. ಅದೇ ರೀತಿ ಧಾರವಾಡದ ಹೊಸ ಬಸ್ ನಿಲ್ದಾಣದಲ್ಲಿ, ಶಕ್ತಿ ಯೋಜನೆಗೆ ಚಾಲನೆ ಕೊಟ್ಟಬಳಿಕ ಬಸ್ ಏರಲು ಮುಂದಾದ ಮಹಿಳೆಯೊಬ್ಬರು ಬಸ್‌ಗೆ ನಮಸ್ಕರಿಸಿದ್ದಾರೆ. ಈ ಚಿತ್ರ ಸೋಷಿಯಲ್ ಮಿಡಿಯಾದಲ್ಲಿ ಭಾರೀ ವೈರಲ್ ಆಗಿದೆ.

ಪ್ರಜಾವಾಣಿ ಪತ್ರಿಕೆಯ ಛಾಯಾಗ್ರಾಹಕ ಬಿ.ಎಂ.ಕೇದಾರನಾಥ ಅವರು ತೆಗೆದ ಈ ಮಹಿಳೆಯ ಚಿತ್ರವನ್ನು ಸಿಎಂ ಸಿದ್ದರಾಮಯ್ಯ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು, ”ನಾವು ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಘೋಷಿಸಿದಾಗ ಶ್ರಮಪಡದೆ ಸಮಾಜದ ಎಲ್ಲಾ ವಿಧದ ಸೌಲಭ್ಯಗಳನ್ನು ಕೂತಲ್ಲಿಯೇ ಅನುಭವಿಸುತ್ತಿರುವ ಜನರಿಂದ ತರತರನಾದ ಟೀಕೆಗಳು, ಕುಹಕ, ವ್ಯಂಗ್ಯಗಳು ವ್ಯಕ್ತವಾದವು. ಅದ್ಯಾವುದಕ್ಕೂ ತಲೆಕೆಡಿಸಿಕೊಳ್ಳದೆ ಇಂದು ಶಕ್ತಿ ಯೋಜನೆಯನ್ನು ಜಾರಿಗೆ ಕೊಟ್ಟೆವು. ನಮ್ಮ ಯೋಜನೆ ಜಾರಿಗೊಂಡ ನಂತರ ತಾಯಿಯೊಬ್ಬರು ಧಾರವಾಡ ಬಸ್ ನಿಲ್ದಾಣದಲ್ಲಿ ಬಸ್ಸಿಗೆ ನಮಸ್ಕರಿಸಿ ಅತ್ಯಂತ ಸಂತೋಷದಿಂದ ಉಚಿತ ಪ್ರಯಾಣ ಬೆಳೆಸಿದರು” ಎಂದು ಚಿತ್ರವನ್ನು ಹಂಚಿಕೊಂಡಿದ್ದಾರೆ.

”ನಾವು ಎಷ್ಟು ಅನುದಾನ ಖರ್ಚು ಮಾಡುತ್ತೇವೆ ಎನ್ನುವುದಕ್ಕಿಂತ ಯಾರಿಗಾಗಿ ಆ ಹಣ ವಿನಿಯೋಗಿಸುತ್ತಿದ್ದೇವೆ ಎಂಬುದು ಮುಖ್ಯ. ಈ ಕ್ಷಣ ಇನ್ನೂ ನೂರು ವಿಧದಲ್ಲಿ ಟೀಕೆಗಳು ಎದುರಾದರೂ ಅದ್ಯಾವುದಕ್ಕೂ ಕುಗ್ಗದಂತೆ ನನ್ನನ್ನು ಗುರಿಯೆಡೆಗೆ ಮತ್ತಷ್ಟು ದೃಢವಾಗಿಸಿದೆ” ಎಂದು ಹೇಳಿದ್ದಾರೆ.

”ಯೋಜನೆ ಜಾರಿಗೆ ಕೊಟ್ಟ ನನಗೆ ಸಂತೃಪ್ತಿ ನೀಡಿದ ಜೊತೆಗೆ ಬಹುಕಾಲ ನೆನಪಿನಲ್ಲಿ ಉಳಿಯುವ ಚಿತ್ರವಿದು” ಎಂದು ಸಿದ್ದರಾಮಯ್ಯ ಟ್ವಿಟ್ ಮಾಡಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಮಹಿಳೆಯ ಫೋಟೋ ಭಾರೀ ವೈರಲ್

ಮಹಿಳೆಯ ಚಿತ್ರವನ್ನು ಹಂಚಿಕೊಂಡಿರುವ ಲೇಖಕ ಅರಣ್ ಜೋಳದಕೂಡ್ಲಿಗಿ ಅವರು, ”ಸ್ತ್ರೀಶಕ್ತಿಗೆ ಅಜ್ಜಿಯ ಗೌರವಾರ್ಪಣೆ.. ಹೃದಯ ಸ್ಪರ್ಶಿಸಿದ ಚಿತ್ರ, ಶಕ್ತಿ ಯೋಜನೆ ಯಾರಿಗೆ ಎಷ್ಟು ಉಪಯೋಗ ಆಗುತ್ತೋ ಗೊತ್ತಿಲ್ಲ. ಆದ್ರೆ ಉತ್ತರ ಕರ್ನಾಟಕದ ಕೆಲ ಹಳ್ಳಿ ಜನ್ರಿಗಂತೂ ತುಂಬಾ ಅನುಕೂಲವಾಗಿದೆ. ಹೇಳಿಕೊಳ್ಳದಂತಹ ಸಂಭ್ರಮವಿದೆ. ವಯಸ್ಸು 60 ದಾಟಿದ್ರೂ, ಹೊಲದಲ್ಲಿ 44 ಡಿಗ್ರಿ‌ ಸೆಲ್ಸಿಯಸ್ ಬಿಸಿಲಿನಲ್ಲಿ ದೇಹ ದಂಡಿಸಿ ಕೆಲಸ ಮಾಡಿದ್ರೆ 1 ದಿನಕ್ಕೆ 200 ಕೂಲಿ ಕೊಡ್ತಾರೆ. ಅದರಲ್ಲಿ ಆಸ್ಪತ್ರೆಗೆ ಹೋಗ್ಬೇಕು, ಮಗಳು- ಸಂಬಂಧಿಕರ ಊರಿಗೆ ಹೋಗ್ಬೇಕು ಅಂತ ಬಸ್ ಹತ್ತಿದ್ರೆ ಅಲ್ಲೇ ದುಡ್ಡು ಖಾಲಿಯಾಗೋದು. ಆದ್ರೆ ಇನ್ಮುಂದೆ ದುಡ್ಡು ಉಳಿತು. ಕೊಡೋ ಕೂಲಿಯಲ್ಲಿ ಮೂರೊತ್ತು ನೆಮ್ಮದಿಯಾಗಿ ಊಟ ಮಾಡಬಹುದು ಅನ್ನೋ ಭಾವುಕತೆ, ಖುಷಿ ಈ ಫೋಟೋದಲ್ಲಿ ಕಾಣಿಸ್ತಿದೆ. ಈ ಅಜ್ಜಿಯನ್ನ ನೋಡಿದಾಗ ಅದು ಸತ್ಯ ಅನ್ನಿಸ್ತಾ ಇದೆ” ಎಂದು ಬರೆದಿದ್ದಾರೆ.

ಬಾಲರಾಜ ತಾಳಕೇರಿ ಎನ್ನುವವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಫೋಟೋ ಶೇರ್ ಮಾಡಿದ್ದು, “ಶಕ್ತಿ” ಯೋಜನೆ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಬಡ .ಮಧ್ಯಮ ವರ್ಗದ ಹೆಣ್ಣು ಮಕ್ಕಳಿಗೆ ವರದಾನ ವಾಯಿತು. ಇವತ್ತು ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸಿದ ರಾಜ್ಯ ಸರ್ಕಾರ ಅಜ್ಜಿಯೊಬ್ಬಳ ಬಸ್ ಗೆ ನಮಸ್ಕರಿಸಿ ಬಸ್ ಹತ್ತಿ ಪ್ರಯಾಣಿಸುವ ದೃಶ್ಯ ಕಂಡುಬಂದಿತ್ತು. ಸೋ ಬಡ ,ಮದ್ಯಮ ವರ್ಗದ ಹೆಣ್ಣು ಮಕ್ಕಳಿಗೆ ತಮ್ಮ ಕೆಲಸ ಸ್ಥಳಗಳಿಗೆ. ಕಂಪನಿಗಳಿಗೆ, ಗಾಮೆ೯ಂಟ್ಸ್ ಗಳಿಗೆ,ಹೋಗಲು ತುಂಬಾ ಪ್ರಯೋಜನಕಾರಿಯಾಗಿದೆ. ದುಡಿದ ಸಂಬಳದಲ್ಲಿ ಸ್ವಲ್ಪ ಹಣ ಉಳಿತಾಯ ಮಾಡಿದಂತೆ ಆಯಿತು… ನಿಜವಾದ ಬಡ, ಮದ್ಯಮ ವರ್ಗದ ಮಹಿಳೆಯರಿಗೆ ನೆರವಾಗುವುದಂತು ಕಟು ಸತ್ಯ… ಸ್ತ್ರೀ ಸಬಲೀಕರಣ. ಸ್ವಾವಲಂಬನೆ” ಎಂದು ಬರೆದಿದ್ದಾರೆ.

ಪ್ರಕಾಶ್ ಎನ್ನುವವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಮಹಿಳೆಯ ಫೋಟೋ ಶೇರ್ ಮಾಡಿದ್ದು, ಹೃದಯ ಸ್ಪರ್ಶಿಸಿದ ಚಿತ್ರ ಎಂದಿದ್ದಾರೆ. ”ಶಕ್ತಿ ಯೋಜನೆ ಯಾರಿಗೆ ಎಷ್ಟು ಉಪಯೋಗ ಆಗುತ್ತೋ ಗೊತ್ತಿಲ್ಲ. ಆದ್ರೆ ಉತ್ತರ ಕರ್ನಾಟಕದ ಕೆಲ ಹಳ್ಳಿ ಜನ್ರಿಗಂತೂ ತುಂಬಾ ಅನುಕೂಲವಾಗಿದೆ. ಹೇಳಿಕೊಳ್ಳದಂತಹ ಸಂಭ್ರಮವಿದೆ.
ವಯಸ್ಸು 60 ದಾಟಿದ್ರೂ, ಹೊಲದಲ್ಲಿ 44 ಡಿಗ್ರಿ‌ ಸೆಲ್ಸಿಯಸ್ ಬಿಸಿಲಿನಲ್ಲಿ ದೇಹ ದಂಡಿಸಿ ಕೆಲಸ ಮಾಡಿದ್ರೆ 1 ದಿನಕ್ಕೆ 200 ಕೂಲಿ ಕೊಡ್ತಾರೆ. ಅದರಲ್ಲಿ ಆಸ್ಪತ್ರೆಗೆ ಹೋಗ್ಬೇಕು, ಮಗಳು- ಸಂಬಂಧಿಕರ ಊರಿಗೆ ಹೋಗ್ಬೇಕು ಅಂತ ಬಸ್ ಹತ್ತಿದ್ರೆ ಅಲ್ಲೇ ದುಡ್ಡು ಖಾಲಿಯಾಗೋದು. ಆದ್ರೆ ಇನ್ಮುಂದೆ ದುಡ್ಡು ಉಳಿತು. ಕೊಡೋ ಕೂಲಿಯಲ್ಲಿ ಮೂರೋತ್ತು ನೆಮ್ಮದಿಯಾಗಿ ಊಟ ಮಾಡಬಹುದು ಅನ್ನೋ ಭಾವುಕತೆ, ಖುಷಿ ಈ ಫೋಟೋದಲ್ಲಿ ಕಾಣಿಸ್ತಿದೆ. ಈ ಅಜ್ಜಿಯನ್ನ ನೋಡಿದಾಗ ನನ್ನ ಅವ್ವ ( ತಾಯಿ ) ನನೆಪಾದ್ಳು. ಗೊತ್ತಿಲ್ದೇ ಕಣ್ಣಲ್ಲಿ ನೀರು ಜಿನುಗಿತು)” ಎಂದು ಬರೆದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

PTCL ಕಾಯ್ದೆ ಅನುಷ್ಠಾನ ವೈಫಲ್ಯ: ನ್ಯಾಯಾಂಗ ಹಾಗೂ ಸರ್ಕಾರದ ಧೋರಣೆ ಖಂಡಿಸಿ ಜ್ಯೂರಿ ವರದಿ ಬಿಡುಗಡೆ

ದಲಿತ ಸಮುದಾಯಗಳಿಗೆ ಮಂಜೂರಾದ ಭೂಮಿ ಅನ್ಯಯವಾಗುವುದನ್ನು ತಡೆಯುವಲ್ಲಿ ಹಾಗೂ ಪಿಟಿಸಿಎಲ್ (PTCL) ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಲ್ಲಿ ನ್ಯಾಯಾಂಗ ಮತ್ತು ಸರ್ಕಾರ ಸಂಪೂರ್ಣವಾಗಿ ವಿಫಲವಾಗಿವೆ ಎಂದು ಜ್ಯೂರಿ ವರದಿಯು ತೀವ್ರವಾಗಿ ಅತೃಪ್ತಿ ವ್ಯಕ್ತಪಡಿಸಿದೆ. ಪಿಟಿಸಿಎಲ್...

SIR ಪ್ರಕ್ರಿಯೆಗೆ 6 ತಿಂಗಳ ಕಾಲಾವಕಾಶ ನೀಡಿ: ಸೆಪ್ಟೆಂಬರ್ 1 ರಂದು ‘ಎಲೆಕ್ಷನ್ ಕಮಿಷನ್ ಚಲೋ’ ಗೆ ಒಕ್ಕೂಟ ಕರೆ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿನ ಅವೈಜ್ಞಾನಿಕ ಧೋರಣೆ ಹಾಗೂ ಗೊಂದಲಮಯ ಕ್ರಮಗಳನ್ನು ತೀವ್ರವಾಗಿ ಖಂಡಿಸಿರುವ 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ', ಮತದಾರರ ಹಕ್ಕುಗಳನ್ನು...

ನೇಪಾಳದಲ್ಲಿ ದಿಢೀರ್ ಪ್ರವಾಹ : 105 ಭಾರತೀಯರು ಸೇರಿದಂತೆ 384 ಮಂದಿ ನಾಪತ್ತೆ

ನೇಪಾಳ ಪ್ರವಾಸೋದ್ಯಮ ಮಂಡಳಿಯ ಮಾಹಿತಿ ಪ್ರಕಾರ, ಬುಧವಾರ (ಆ.26) ಬೆಳಿಗ್ಗೆ ನೇಪಾಳದ ರಸುವಾ ಜಿಲ್ಲೆಯ ಭೋಟೆ ಕೋಶಿ ನದಿಯಲ್ಲಿ ಸಂಭವಿಸಿದ ಹಠಾತ್ ಪ್ರವಾಹದ ನಂತರ 105 ಭಾರತೀಯ ಪ್ರಜೆಗಳು ಸೇರಿದಂತೆ ಕನಿಷ್ಠ 384...

ರಾಜ್ಯದಲ್ಲಿ 102 ತಾಲೂಕುಗಳಲ್ಲಿ ಬರ: ಡಿಸಿಎಂ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೋರಿದ್ದು, 102 ತಾಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದೆ. ಕೇಂದ್ರ ಸರ್ಕಾರದ ಮಾನದಂಡಗಳನ್ವಯ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಧಿಕೃತವಾಗಿ ಬರ ಘೋಷಿಸಲಾಗುವುದು ಹಾಗೂ ಪ್ರತಿ ವಾರವೂ...

ಪ. ಬಂಗಾಳ SIR : ನ್ಯಾಯಮಂಡಳಿಗಳಿಂದ ಇದುವರೆಗೆ ಕೇವಲ 2.17% ಮೇಲ್ಮನವಿಗಳ ಇತ್ಯರ್ಥ; ಇನ್ನು 37 ಲಕ್ಷಕ್ಕೂ ಹೆಚ್ಚು ಬಾಕಿ!

ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಭಗವಾಂಗೋಲಾದ ನಿವಾಸಿಯಾದ ಮೊಹಮ್ಮದ್ ದುವಾಲ್ ಅಲಿ ಅವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾಗ, ಕರ್ತವ್ಯದ ಅವಧಿಯಲ್ಲಿ ಗುಂಡೇಟಿಗೆ ಒಳಗಾಗಿದ್ದರು. ಪ್ರಾಣಾಪಾಯದಿಂದ ಬದುಕುಳಿದ ಅವರು ನಂತರ ಭಾರತೀಯ ರೈಲ್ವೆಯಲ್ಲಿ ಕೆಲಸ...

ಬಂಡಾಯ ಸಂಸದರಿಗೆ ಸಂಕಷ್ಟ: 7 ದಿನಗಳಲ್ಲಿ ಉತ್ತರಿಸಲು ಲೋಕಸಭೆ ಸಚಿವಾಲಯ ತಾಕೀತು

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ 20 ಬಂಡಾಯ ಸಂಸದರಿಗೆ ಲೋಕಸಭಾ ಸಚಿವಾಲಯವು ನೋಟಿಸ್ ಜಾರಿ ಮಾಡಿದ್ದು, ಏಳು ದಿನಗಳ ಒಳಗಾಗಿ ಸೂಕ್ತ ಉತ್ತರ ನೀಡುವಂತೆ ಸೂಚಿಸಿದೆ. ಪಕ್ಷಾಂತರ ಕಾಯ್ದೆಯಡಿ ಸಂಸದರ ಅನರ್ಹತೆ ಪ್ರಕ್ರಿಯೆಗಳನ್ನು...

ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ನ್ಯೂಯಾರ್ಕ್ ಮೇಯರ್ ವಿರೋಧ: ಸಂಘದ ‘ಹೊರಗಿಡುವ ದೃಷ್ಟಿಕೋನ’ ಖಂಡಿಸಿದ ಮಮ್ದಾನಿ

ಅಮೆರಿಕದ ನ್ಯೂಯಾರ್ಕ್ ನಗರದ ಅತ್ಯಂತ ಪ್ರಸಿದ್ಧ ಹಾಗೂ ಐತಿಹಾಸಿಕ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿರುವ ಬೃಹತ್ ಭಾರತೀಯ ಮೂಲದವರ ಸಮಾವೇಶವು...

ಕರ್ನಾಟಕದಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಕರ್ನಾಟಕದಲ್ಲಿ ಇನ್ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಇಂಡಿಯಾ ಟುಡೇ ರೌಂಡ್‌ಟೇಬಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ...

ಬೀದಿ ಬದಿ ವ್ಯಾಪಾರಿಗಳ ತೆರವು ಅಕ್ರಮ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ

ಮಂಗಳೂರಿನ ಟೌನ್ ಹಾಲ್ ಸಮೀಪ ನಡೆಯುವ ಸಂಡೇ ಬಜಾರ್‌ನಲ್ಲಿ ಪಾದಚಾರಿ ಮಾರ್ಗದ ಬಳಿ ಇದ್ದ ಬೀದಿ ವ್ಯಾಪಾರಿಗಳನ್ನು ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಏಕಾಏಕಿ ತೆರವುಗೊಳಿಸಲು ಮುಂದಾಗಿದ್ದರು. ಇದನ್ನು ದಕ್ಷಿಣ ಕನ್ನಡ ಜಿಲ್ಲಾ...

ತೆಲಂಗಾಂಣ | ಹೈದರಾಬಾದ್‌-ವಿಜಯವಾಡ ಹೆದ್ದಾರಿಯಲ್ಲಿ ಭೀಕರ ಅಪಘಾತ: 6 ಮಂದಿ ಸಾವು; ಹಲವರಿಗೆ ಗಾಯ

ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯಲ್ಲಿ ಬುಧವಾರ (ಆ.26) ಮುಂಜಾನೆ ಖಾಸಗಿ ಎಲೆಕ್ಟ್ರಿಕ್ ಬಸ್‌ವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 12 ಜನರು ಗಾಯಗೊಂಡಿದ್ದಾರೆ...