Homeಕರ್ನಾಟಕಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ವಿಚಾರಕ್ಕೆ ಸ್ಪಷ್ಟಣೆ ನೀಡಿದ ಹೆಚ್‌ಡಿಕೆ

ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ವಿಚಾರಕ್ಕೆ ಸ್ಪಷ್ಟಣೆ ನೀಡಿದ ಹೆಚ್‌ಡಿಕೆ

- Advertisement -
- Advertisement -

2024ರ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಯೊಂದಿಗೆ ಚುನಾವಣೆ ಎದುರಿಸುತ್ತವೆ ಎನ್ನುವ ಮಾತುಗಳು ರಾಜ್ಯದಲ್ಲಿ ಸದ್ದು ಮಾಡಿತ್ತು. ಈ ಮಾತಿಗೆ ಪ್ರತಿಕ್ರಿಯೇ ನೀಡಿದ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಮುಖಂಡ ಹೆಚ್.ಡಿ.ಕುಮಾರಸ್ವಾಮಿ ಅವರು ಇದು ಗಾಳಿಸುದ್ದಿ ಎಂದು ಹೇಳುವ ಮೂಲಕ ಮೈತ್ರಿಯನ್ನು ಅಲ್ಲಗಳೆದಿದ್ದಾರೆ.

ಚನ್ನಪಟ್ಟಣದಲ್ಲಿ ಸೋಮವಾರ ಕೆಡಿಪಿ ಸಭೆಯಲ್ಲಿ ಭಾಗವಹಿಸುವ ಮುನ್ನ ಅವರು ಮಾಧ್ಯಮಗಳ ಜತೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜತೆ ಜೆಡಿಎಸ್ ಮೈತ್ರಿ ಚರ್ಚೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ”ಇದೆಲ್ಲಾ ಗಾಳಿ ಸುದ್ದಿ, ಆ ರೀತಿಯ ಯಾವುದೇ ಚರ್ಚೆ ಆಗಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

”ರಾಜಕಾರಣದಲ್ಲಿ ಊಹಾಪೋಹ ಮಾಮೂಲಿ, ಈ ವಿಚಾರವನ್ನು ನನ್ನ ಜೊತೆ ಯಾರೂ ಪ್ರಸ್ತಾಪ ಮಾಡಿಲ್ಲ. ಲೋಕಸಭಾ ಚುನಾವಣೆ ಬಗ್ಗೆ ನಾನು ಜಿಲ್ಲಾವಾರು ಸಭೆ ನಡೆಸಿ, ಗೆದ್ದ ಸೋತ ಅಭ್ಯರ್ಥಿಗಳ ಜತೆ ಮಾತನಾಡಿದ್ದೇನೆ. ಯಾವ ರೀತಿ ಚುನಾವಣೆ ಎದುರಿಸಬೇಕು ಎಂಬುದರ ಕುರಿತು ರೂಪುರೇಷೆ ಸಿದ್ಧ ಮಾಡುತ್ತಿದ್ದೇವೆ” ಎಂದು ಹೇಳಿದರು.

ಮಾಧ್ಯಮದವರು, ನೀವು ರಾಷ್ಟ್ರ ರಾಜಕಾರಣದ ಬಗ್ಗೆ ಒಲವು ವಿಚಾರ ಹೊಂದಿದ್ದೀರಾ? ಎಂಬ ಪ್ರಶ್ನೆಗೆ ಉತ್ತರಿಸಿದ ಕುಮಾರಸ್ವಾಮಿ, ”ನನಗೆ ರಾಷ್ಟ್ರ ರಾಜಕಾರಣದ ಮೇಲೆ ಒಲವಿಲ್ಲ. ಕಳೆದ ಬಾರಿಯೂ ನನಗೆ ಚುನಾವಣೆ ಎದುರಿಸುವ ಆಸಕ್ತಿ ಇರಲಿಲ್ಲ. ಆದರೆ ಕಾರ್ಯಕರ್ತರ ಒತ್ತಾಸೆಯಿಂದ ರಾಜಕಾರಣದಲ್ಲಿದ್ದೇನೆ.

ಇದೇ ವೇಳೆ ಡಿಕೆ ಸುರೇಶ್ ವಿರುದ್ಧ ಹರಿಹಾಯ್ದ ಅವರು, ”ನಂದುಬಿಡಿ, ಹಾಲಿ ಸಂಸದರ ಕಥೆಯೇ ಕೇಳಿ.. ಅವರನ್ನು ಭ್ರಷ್ಟಾಚಾರದ ಮಧ್ಯೆ ಚುನಾವಣೆ ಬೇಡ ಅಂತಿದ್ದಾರೆ. ಅಂತವರೇ ಚುನಾವಣೆ ಬೇಡ ಅಂತ ಹೇಳ್ತಿರುವಾಗ ನಮ್ದೆಲ್ಲ ಯಾವ ಲೆಕ್ಕ?”ಹೆಚ್‌ಡಿಕೆ ಟಾಂಗ್ ಕೊಟ್ಟರು.

ಗ್ಯಾರಂಟಿಗಳ ಬಗ್ಗೆ ಗೊಂದಲವಿದೆ:

ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾಂಟಿಗಳ ಜಾರಿಗೆ ಮುಂದಾಗಿದ್ದು, ಭಾನುವಾರ ಶಕ್ತಿ ಯೋಜನೆಗೆ ಚಾಲನೆ ನೀಡಲಾಯಿತು. ಈ ವಿಚಾರದ ಬಗ್ಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ”ಸರ್ಕಾರದ ಐದು ಗ್ಯಾರಂಟಿ ಯೋಜನೆ ಬಗ್ಗೆ ಚರ್ಚೆ ಮಾಡಲು ಇನ್ನೂ ಸಮಯ ಇದೆ. ಕೊಟ್ಟ ಮಾತನ್ನು ಉಳಿಸಿಕೊಳ್ತಿವಿ ಅಂತಿದ್ದಾರೆ. ಅದರೆ ಸೌಲಭ್ಯಗಳನ್ನು ಫಲಾನುಭವಿಗಳಿಗೆ ಹೇಗೆ ತಲುಪಿಸುತ್ತಾರೆ ಅನ್ನೋದು ಮುಖ್ಯ. ಈಗಾಗಲೇ ಬಾಡಿಗೆದಾರರಿಗೆ ಉಚಿತ ವಿದ್ಯುತ್ ಇಲ್ಲ ಅಂತಿದ್ದರು. ಆಮೇಲೆ ಕೊಡ್ತೀವಿ ಅಂದ್ರು, ಈಗ ಮನೆ ಮಾಲೀಕರು ಬಾಡಿಗೆದಾರರ ಜತೆ ಅಗ್ರಿಮೆಂಟ್ ಮಾಡಿಕೊಳ್ಳುತ್ತಿಲ್ಲ. ನಾನಾ ಸಮಸ್ಯೆಗಳು ಉದ್ಭವ ಆಗ್ತಿವೆ. ಘೋಷಣೆ ಮಾಡಿದಾಗ ನನಗೂ ಫ್ರೀ, ನಿನಗೂ ಫ್ರೀ ಅಂದರು. ಈಗ ಅದನ್ನೆಲ್ಲ ಯಾವರೀತಿ ನಿಬಾಯಿಸುತ್ತಾರೆ ನೋಡಬೇಕು” ಎಂದರು.

ಈ ವೇಳೆ ಹಿಂದಿನ ಬಿಜೆಪಿ ಸರಕಾರದ ವಿರುದ್ಧ ಪರ್ಸಂಟೇಜ್ ಆರೋಪ ಮಾಡಿದ್ದರ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು. ಇದೀಗ ನಿಮ್ಮದೇ ಸರ್ಕಾರ ಇದೆ, 40% ಆರೋಪದ ಬಗ್ಗೆ ತನಿಖೆ ನಡೆಸುವಂತೆ ಸವಾಲು ಹಾಕಿದರು.

ಕುಮಾರಸ್ವಾಮಿ ಅವರು ತಮ್ಮ ಆರೋಪಗಳ ಬಗ್ಗೆ ಲೋಕಾಯುಕ್ತರಿಗೆ ದೂರು ನೀಡಲಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿರುವ ಹೇಳಿಕೆಗೆ ತಿರುಗೇಟು ನೀಡಿದ ಕುಮಾರಸ್ವಾಮಿ, ”ಹಿಂದೆ ಇದೇ ಜನ ಬಿಜೆಪಿ ಸರಕಾರದ ವಿರುದ್ಧ 40% ಆರೋಪ ಮಾಡಿದ್ದರು. ಆ ಆರೋಪವನ್ನು ಅವರು ಸಾಬೀತು ಮಾಡಿದ್ದರಾ? ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರಾ? ಈಗ ನೋಡಿದರೆ ನನಗೆ ಪುಕ್ಕಟೆ ಸಲಹೆ ನೀಡುತ್ತಿದ್ದಾರೆ” ಎಂದು ಡಿಕೆಶಿ ವಿರುದ್ಧ ಕಿಡಿಕಾರಿದರು.

”ಈಗ ಕಾಂಗ್ರೆಸ್‌ನವರದ್ದೇ ಸರ್ಕಾರ ಇದೆ. 40% ವಿಚಾರವನ್ನು ತನಿಖೆ ಮಾಡಿಸಲಿ, ಸತ್ಯ ಜನರ ಮುಂದೆ ಇಡಲಿ. ಆರೋಪ ಮಾಡಿದವರ ಬಳಿ ಸಾಕ್ಷ್ಯ ಇರಲೇಬೇಕಲ್ಲವೇ? ಗುತ್ತಿಗೆದಾರರ ಸಂಘದವರು ದೂರು ಕೊಟ್ಟಿದ್ದರಲ್ಲ, ಅವರು ಸಾಕ್ಷಿ ಇಟ್ಟಿದ್ರಾ.? ಲೋಕಾಯುಕ್ತಕ್ಕೆ ದೂರು ನೀಡಲು ಅಡ್ಡಿ ಮಾಡಿದ್ದವರು ಯಾರು?” ಎಂದು ಅವರು ಪ್ರಶ್ನಿಸಿದರು.

”ಕಳೆದ ಮೇ 8ರಂದು ಮಹಾನಗರ ಪಾಲಿಕೆಯಲ್ಲಿ 675 ಕೋಟಿ LOC ಹಣವನ್ನ ಯಾಕೆ ರಿಲೀಸ್ ಮಾಡಿಲ್ಲ? ಅದನ್ನು ಯಾಕೆ ಇಟ್ಟುಕೊಂಡಿದ್ದೀರಿ? ಅದರ ಬಗ್ಗೆ ನೀವು ಮೊದಲು ಜನತೆಗೆ ಹೇಳಿ” ಎಂದು ಕುಮಾರಸ್ವಾಮಿ ಅವರು ಒತ್ತಾಯ ಮಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...