Homeಮುಖಪುಟಅಣ್ಣಾಮಲೈರನ್ನ ಹಿಡಿತದಲ್ಲಿ ಇಟ್ಟುಕೊಳ್ಳಿ: ಕೇಂದ್ರದ ಬಿಜೆಪಿ ನಾಯಕರಿಗೆ ಮೈತ್ರಿ ಪಕ್ಷ ಎಐಎಡಿಎಂಕೆ ಎಚ್ಚರಿಕೆ

ಅಣ್ಣಾಮಲೈರನ್ನ ಹಿಡಿತದಲ್ಲಿ ಇಟ್ಟುಕೊಳ್ಳಿ: ಕೇಂದ್ರದ ಬಿಜೆಪಿ ನಾಯಕರಿಗೆ ಮೈತ್ರಿ ಪಕ್ಷ ಎಐಎಡಿಎಂಕೆ ಎಚ್ಚರಿಕೆ

- Advertisement -
- Advertisement -

ಬಿಜೆಪಿ ತನ್ನ ರಾಜ್ಯ ಪಕ್ಷದ ಮುಖ್ಯಸ್ಥ ಕೆ ಅಣ್ಣಾಮಲೈ ಅವರನ್ನು ಹಿಡಿತದಲ್ಲಿ ಇಟ್ಟುಕೊಳ್ಳಬೇಕು  ಎಂದು  ಮಿತ್ರಪಕ್ಷ ಎಐಎಡಿಎಂಕೆ ಸೋಮವಾರ ಹೇಳಿದೆ. ಉನ್ನತ ನಾಯಕತ್ವದಲ್ಲಿ ಕೇಸರಿ ಪಕ್ಷದೊಂದಿಗಿನ ತನ್ನ ಸಂಬಂಧವನ್ನು ಮರುಪರಿಶೀಲಿಸಬೇಕು ಎಂದು ಎಐಎಡಿಎಂಕೆ ಹೇಳಿದೆ.

ಅಣ್ಣಾಮಲೈ ಅವರು ಮಾಜಿ ಮುಖ್ಯಮಂತ್ರಿ ಮತ್ತು ದಿವಂಗತ ಎಐಎಡಿಎಂಕೆ ವರಿಷ್ಠೆ ಜೆ ಜಯಲಲಿತಾ ಅವರನ್ನು ಪರೋಕ್ಷವಾಗಿ ಕೆಣಕಿದ ನಂತರ ಅವರ ಮೇಲೆ ಹಿರಿಯ ಎಐಎಡಿಎಂಕೆ ನಾಯಕ ಡಿ ಜಯಕುಮಾರ್ ಅವರು ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ.

ಪ್ರಮುಖ ಪತ್ರಿಕೆಯೊಂದಕ್ಕೆ ಅಣ್ಣಾಮಲೈ ಅವರು ನೀಡಿದ ಸಂದರ್ಶನದಲ್ಲಿ ”ಸಾರ್ವಜನಿಕ ಖಜಾನೆಯನ್ನು ಲಪಟಾಯಿಸಿದ ಯಾವುದೇ ಸರ್ಕಾರವನ್ನು ಪ್ರಶ್ನಿಸುತ್ತೇವೆ ಎಂದಿದ್ದಾರೆ. ತಮಿಳುನಾಡಿನ ಹಲವು ಸರ್ಕಾರಗಳ ಅವಧಿಯಲ್ಲಿ ಭ್ರಷ್ಟಚಾರ ನಡೆದಿವೆ. ಮಾಜಿ ಮುಖ್ಯಮಂತ್ರಿಗಳಿಗೆ ನ್ಯಾಯಾಲಯದಲ್ಲಿ ಶಿಕ್ಷೆಯಾಗಿದೆ. ಹಾಗಾಗಿಯೇ ತಮಿಳುನಾಡು ಅತ್ಯಂತ ಭ್ರಷ್ಟ ರಾಜ್ಯಗಳಲ್ಲೊಂದಾಗಿದೆ. 1991-96ರ ನಡುವಿನ ಅವಧಿಯು (ಜಯಲಲಿತಾ ಅವರು ಅಧಿಕಾರದ ಚುಕ್ಕಾಣಿ ಹಿಡಿದಿದ್ದಾಗ) ಭ್ರಷ್ಟಾಚಾರದಲ್ಲಿ ನಂಬರ್ ಒನ್ ಅವಧಿ ಎಂದು ಹೇಳುತ್ತೇನೆ” ಎಂದು ಅಣ್ಣಾಮಲೈ ಹೇಳಿದರು.

ಅಣ್ಣಾಮಲೈ ಅವರ ಹೇಳಿಕೆಯಿಂದ ಎಐಎಡಿಎಂಕೆ ಪದಾಧಿಕಾರಿಗಳು ಅವರ ವಿರುದ್ಧ ವಾಗ್ದಾಳಿ ನಡೆಸಿದರು. ಚೆನ್ನೈನಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಜಯಕುಮಾರ್, ”ತಮಿಳುನಾಡು ರಾಜಕೀಯದ ಇತಿಹಾಸ ಗೊತ್ತಿಲ್ಲದ ಅನನುಭವಿ ನಾಯಕ ಅಣ್ಣಾಮಲೈ” ಎಂದು ಕರೆದರು.

”ಡಿಎಂಕೆಯನ್ನು ಟೀಕಿಸುವ ಬದಲು… ಮೈತ್ರಿ ಪಾಲುದಾರರ ವಿರುದ್ಧ ಹೇಳಿಕೆಗಳನ್ನು ನೀಡುವುದು ಸ್ವೀಕಾರಾರ್ಹವಲ್ಲ. ಅವರ ಹೇಳಿಕೆಯನ್ನು ನಾವು ಬಲವಾಗಿ ಖಂಡಿಸುತ್ತೇವೆ. ಎಐಎಡಿಎಂಕೆ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಆಯ್ಕೆಯಾಗುವುದನ್ನು ನೋಡಲು ಬಯಸುತ್ತಾರೆ (2024 ರ ಲೋಕಸಭೆ ಚುನಾವಣೆಯಲ್ಲಿ). ಆದರೆ ಅಣ್ಣಾಮಲೈ ಅವರ ಹೇಳಿಕೆಯಿಂದ, ಎಐಎಡಿಎಂಕೆ ಮತ್ತು ಬಿಜೆಪಿ ಮೈತ್ರಿಯನ್ನು ಮುಂದುವರಿಸಲು ಬಯಸುವುದಿಲ್ಲ, ಮೋದಿ ಮತ್ತೆ ಪ್ರಧಾನಿಯಾಗುವುದನ್ನು ಬಯಸುವುದಿಲ್ಲ ಎಂದು ಸೂಚಿಸುತ್ತದೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ಸುಳ್ಳು ಆರೋಪಕ್ಕಾಗಿ ಅಣ್ಣಾಮಲೈ 500 ಕೋಟಿ ರೂ. ಮಾನನಷ್ಟ ಪರಿಹಾರ ನೀಡಬೇಕು: ಡಿಎಂಕೆ ನೋಟಿಸ್

”ಈಗ ಚುನಾವಣೆ ನಡೆದರೆ, ಎಐಎಡಿಎಂಕೆ ನೇತೃತ್ವದ ಮೈತ್ರಿಕೂಟವು 30 ಲೋಕಸಭಾ ಸ್ಥಾನಗಳನ್ನು ಗೆಲ್ಲುವ ಸಾಮರ್ಥ್ಯವನ್ನು ಹೊಂದಿದೆ ಎಂದು ಜಯಕುಮಾರ್ ಹೇಳಿದರು, ಮೈತ್ರಿಕೂಟವು ಪುದುಚೇರಿ ಸೇರಿದಂತೆ ಎಲ್ಲಾ 40 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯನ್ನು ಹೊಂದಿದೆ” ಎಂದು ಹೇಳಿದರು.

”ಕರ್ನಾಟಕ ವಿಧಾನಸಭೆ ಚುನಾವಣೆಗೆ ಅಣ್ಣಾಮಲೈ ಅವರನ್ನು ಚುನಾವಣಾ ಸಹ-ಪ್ರಭಾರಿಯಾಗಿ ನೇಮಕ ಮಾಡಲಾಗಿತ್ತು ಆದರೆ ಅಲ್ಲಿ ಬಿಜೆಪಿ ಬಹಳ ಹೀನಾಯವಾಗಿ ಸೋಲು ಕಂಡಿತು ಎಂದು ಅವರು ಹೇಳಿದರು. ಕರ್ನಾಟಕದ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಹೊರಿಸಲಾದ ಭ್ರಷ್ಟಾಚಾರದ ಆರೋಪಗಳ ಬಗ್ಗೆ ಮಾಜಿ ಪೊಲೀಸ್ ಅಧಿಕಾರಿ ಏಕೆ ಪ್ರತಿಕ್ರಿಯಿಸಲಿಲ್ಲ?” ಎಂದು ಜಯಕುಮಾರ್ ಕೇಳಿದರು.

”ನಿಧನನಾಗಿರುವ ನಮ್ಮ ನಾಯಕರ ವಿರುದ್ಧ ಹೇಳಿಕೆಗಳನ್ನು ನೀಡುತ್ತಿರುವುದು ಅತ್ಯಂತ ಖಂಡನೀಯ. 20 ವರ್ಷಗಳ ನಂತರ, (2021) ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನಾಲ್ಕು ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಯಿತು ಮತ್ತು ಅದಕ್ಕೆ ಎಐಎಡಿಎಂಕೆ ಕಾರಣ. ಅಣ್ಣಾಮಲೈ ಅದನ್ನು ನಿರಾಕರಿಸಬಹುದೇ? ಅವರು ಎಐಎಡಿಎಂಕೆ ನೇತೃತ್ವದ ಮೈತ್ರಿಕೂಟದ ಭಾಗವಾಗಿರುವುದರಿಂದ ಇಲ್ಲಿ ಬಿಜೆಪಿಗೆ ಗುರುತಿದೆ. ಅಮಿತ್ ಶಾ ಮತ್ತು (ಬಿಜೆಪಿ ಅಧ್ಯಕ್ಷ) ಜೆಪಿ ನಡ್ಡಾ ಅವರು ಅಣ್ಣಾಮಲೈ ಅವರಿಗೆ ಎಚ್ಚರಿಕೆ ನೀಡಬೇಕು, ಅವರನ್ನು ನಿಯಂತ್ರಿಸಬೇಕು” ಎಂದು ಎಚ್ಚರಿಕೆ ನೀಡಿದ್ದಾರೆ.

”ಎಐಎಡಿಎಂಕೆ ಮತ್ತು ಬಿಜೆಪಿ ನಡುವಿನ ಶೀತಲ ಸಮರ ಕಳೆದ ಹಲವು ತಿಂಗಳುಗಳಿಂದ ಚಾಲ್ತಿಯಲ್ಲಿದೆ, ಎರಡೂ ಪಕ್ಷಗಳ ನಾಯಕರು ಪರಸ್ಪರ ಟೀಕೆ ಮಾಡುತ್ತಿದ್ದಾರೆ. ಅಣ್ಣಾಮಲೈ ಅವರನ್ನು ಅಮ್ಮನಂಥ ಸರ್ವೋಚ್ಚ ನಾಯಕನಿಗೆ ಹೋಲಿಸಲು ಸಾಧ್ಯವಿಲ್ಲ” ಎಂದು ಜಯಕುಮಾರ್ ಹೇಳಿದರು.

ಇತ್ತೀಚಿನ ಜಟಾಪಟಿಯು ಎರಡು ಪಕ್ಷಗಳ ನಡುವಿನ ಸಂಬಂಧ ಮತ್ತು 2024 ರ ಚುನಾವಣೆಗೆ ಒಟ್ಟಿಗೆ ಸೇರುತ್ತದೆಯೇ ಎಂಬ ಅನುಮಾನವನ್ನು ಮತ್ತೊಮ್ಮೆ ಹುಟ್ಟುಹಾಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...