Homeಮುಖಪುಟಬೊಮ್ಮಾಯಿ ಸರ್ಕಾರದ ವಿದ್ಯುತ್ ಬೆಲೆ ಏರಿಕೆ ಆದೇಶ ವಾಪಸ್ ಪಡೆಯಿರಿ: ಸಿಎಂಗೆ ಶಾಸಕ ತನ್ವೀರ್ ಸೇಠ್...

ಬೊಮ್ಮಾಯಿ ಸರ್ಕಾರದ ವಿದ್ಯುತ್ ಬೆಲೆ ಏರಿಕೆ ಆದೇಶ ವಾಪಸ್ ಪಡೆಯಿರಿ: ಸಿಎಂಗೆ ಶಾಸಕ ತನ್ವೀರ್ ಸೇಠ್ ಪತ್ರ

- Advertisement -
- Advertisement -

ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸಿಎಂ ಆಗಿದ್ದ ಬಸವರಾಜ ಬೊಮ್ಮಾಯಿಯವರ ವಿದ್ಯುತ್ ಬೆಲೆ ಏರಿಕೆ ಆದೇಶ ವಾಪಸ್ ಪಡೆಯಿರಿ ಎಂದು ಮೈಸೂರಿನ ಶಾಸಕ ತನ್ವೀರ್ ಸೇಠ್‌ರವರು ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದಾರೆ.

ವಿದ್ಯುತ್ ಬೆಲೆ ಏರಿಕೆ ನಿರ್ಧಾರವನ್ನು ಹಿಂದಿನ ಬಿಜೆಪಿ ಸರ್ಕಾರ ತೆಗೆದುಕೊಂಡಿದೆ. ಆದರೆ ಜನರು ಈಗಿನ ಕಾಂಗ್ರೆಸ್ ಸರ್ಕಾರ ಬೆಲೆ ಏರಿಸಿದೆ ಎಂದು ತಪ್ಪು ಇಳಿಸಿದ್ದಾರೆ. ಇದರಿಂದ ಪಕ್ಷದ ಗೌರವ ಹಾಳಾಗುತ್ತಿದೆ. ಹಾಗಾಗಿ ವಿದ್ಯುತ್ ಬೆಲೆ ಏರಿಕೆ ಆದೇಶವನ್ನು ವಾಪಸ್ ಪಡೆಯಿರಿ ಎಂದು ಅವರು ಒತ್ತಾಯಿಸಿದ್ದಾರೆ.

2003 ರ ವಿಧಾನಸಭೆ ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷದಿಂದ ಕೆಲವು ಜನಪರ ಘೋಷಣೆಗಳನ್ನು ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಲಾಗಿತ್ತು. ಜನಪರ ಘೋಷಣೆಗೆ ಮಾರಕವಾಗಿ ಸ್ಪಂದಿಸಿ ಮತದಾರರು ಕಾಂಗ್ರೆಸ್ ಪಕ್ಷವನ್ನು ಪಚಂಡ ಬಹುಮದೊಂದಿಗೆ ಗೆಲ್ಲಿಸಿದ್ದಾರೆ. ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ 5 ಗ್ಯಾರಂಟಿಗಳನ್ನು ಸರ್ಕಾರ ರಚನೆಯಾದ ದಿನವೇ ಅನುಷ್ಠಾನಗೊಳಿಸಲು ಸೂಕ್ತ ಆದೇಶವನ್ನು ಹೊರಡಿಸಲಾಗಿದೆ. ಗ್ಯಾರೆಂಟಿಗಳಲ್ಲಿ ಒಂದಾದ ಪ್ರತಿ ಮನೆಗೆ 200 ಯೂನಿಟ್‌ ವಿದ್ಯುತ್‌ನ್ನು ಉಚಿತವಾಗಿ ನೀಡುವುದು. ಆದರೆ ಈ ಘೋಷಣೆಗೆ ವ್ಯತಿರಿಕ್ತವೆಂಬಂತೆ ಕರ್ನಾಟಕ ವಿದ್ಯಾತ್ ನಿಯಂತ್ರಣ ಮಂಡಳಿಯಿಂದ ರಾಜ್ಯದ ಎಲ್ಲಾ ವಿದ್ಯುತ್‌ ನಿಗಮಗಳಲ್ಲಿ ಏಪ್ರಿಲ್ 2023 ರಿಂದ ಪೂರ್ವಾನ್ವಯವಾಗುವಂತೆ ವಿದ್ಯುತ್‌ ದರವನ್ನು ಹೆಣ್ಣಿಸಲಾಗಿದೆ. ಇದು ಈಗಾಗಲೇ ಹಿಂದಿನ ಸರ್ಕಾರದಲ್ಲಿ ಹೆಚ್ಚಾಗಿದ್ದ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಚೇತರಿಸಿಕೊಳ್ಳದ ಜನಸಾಮಾನ್ಯರ ಗಾಯದ ಮೇಲೆ ಬರೆ ಏಳೆದಂತಾಗಿದೆ. ಪ್ರಸ್ತುತ ಸರ್ಕಾರ ಘೋಷಿಸಿರುವ 200 ಯೂನಿಟ್‌ ಉಚಿತ ಸೌಲಭ್ಯವನ್ನು ಜನ ಸಾಮಾನ್ಯರಿಗೆ ನೀಡಿ ಕಿತ್ತುಕೊಂಡಂತಾಗಿದೆ. ವಿದ್ಯುತ್ ಬೆಲೆ ಏರಿಸಲು ನಿಗಮಗಳು 30.11.2022 ರಲ್ಲಿ ಮಂಡಳಿಗಳಿಗೆ ಪ್ರಸ್ತಾವನೆಯನ್ನು ನಿಲ್ಲಿಸಿದ್ದು, ಬೆಲೆ ಏರಿಸಿ ಆದೇಶವನ್ನು ಮೇ 2023 ಅಲ್ಲಿ ಏಪ್ರಿಲ್‌ 2003 ಅಂದ ಪೂರ್ವಾನ್ವಯವಾಗುವಂತೆ ನೀಡಲಾಗಿದೆ. ಆದರೆ ಜನ ಸಾಮಾನ್ಯರು ಬೆಲೆಯನ್ನು ಪ್ರಸ್ತುತ ಸರ್ಕಾರ ಹೆಚ್ಚಿಸಿರುವುದಾಗಿ ತಿಳಿದುಕೊಂಡಿದ್ದಾರೆ. ಇದರಿಂದಾಗಿ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗುತ್ತಿದೆ. ಸಾರ್ವಜನಿಕ ಹಿತದೃಷ್ಟಿಯಿಂದ ವಿದ್ಯುತ್ ಬೆಲೆ ಏರಿಕೆ ಆದೇಶವನ್ನು ಮರು ಪರಿಶೀಲಿಸಿ ಜನಸಾಮಾನ್ಯರಿಗೆ ಹೊರೆಯಾಗದ ರೀತಿಯಲ್ಲಿ ಜಾರಿಗೊಳಿಸಲು ತಮ್ಮಲ್ಲಿ ಕೋರಿಕೊಳ್ಳುತ್ತೇನೆ ಎಂದು ತನ್ವೀರ್ ಸೇಠ್ ಪತ್ರದಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ವಿಚಾರಕ್ಕೆ ಸ್ಪಷ್ಟಣೆ ನೀಡಿದ ಹೆಚ್‌ಡಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...