Homeಮುಖಪುಟಶಾಸಕ ಜನಾರ್ದನ ರೆಡ್ಡಿ, ಅವರ ಪತ್ನಿ ಒಡೆತನದ 82 ಆಸ್ತಿಗಳ ಜಪ್ತಿಗೆ ಕೋರ್ಟ್ ಆದೇಶ

ಶಾಸಕ ಜನಾರ್ದನ ರೆಡ್ಡಿ, ಅವರ ಪತ್ನಿ ಒಡೆತನದ 82 ಆಸ್ತಿಗಳ ಜಪ್ತಿಗೆ ಕೋರ್ಟ್ ಆದೇಶ

- Advertisement -
- Advertisement -

2012ರ ಎಎಂಸಿ ಅಕ್ರಮ ಕಬ್ಬಿಣದ ಅದಿರು ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಮತ್ತು ಅವರ ಪತ್ನಿ ಲಕ್ಷ್ಮಿ ಅರುಣಾ ಅವರ 82 ಆಸ್ತಿಗಳನ್ನು ಜಪ್ತಿ ಮಾಡಲು ವಿಶೇಷ ನ್ಯಾಯಾಲಯವು ಅನುಮತಿ ನೀಡಿದೆ.

ಶಾಸಕರ ಈ ಹಿಂದಿನ ಕ್ರಿಮಿನಲ್ ಪ್ರಕರಣಗಳ ವಿಚಾರಣೆ ನಡೆಸುತ್ತಿದ್ದ ಸಿಬಿಐ ವಿಶೇಷ ನ್ಯಾಯಾಲಯವು ಅಂದಾಜು 65.05 ಕೋಟಿ ಬೆಲೆ ಬಾಳುವ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಜನಪ್ರತಿನಿಧಿಗಳ ನ್ಯಾಯಲಯದ ನ್ಯಾಯಮೂರ್ತಿ ಜಯಂತ್​ ಕುಮಾರ್ ಆದೇಶ ಹೊರಡಿಸಿದ್ದಾರೆ.

ಜನಾರ್ದನ ರೆಡ್ಡಿ ಹೆಸರಲ್ಲಿರುವ 6 ಹಾಗೂ ಲಕ್ಷ್ಮಿ ಅರುಣಾ ಹೆಸರಿನಲ್ಲಿದ್ದ 117 ಆಸ್ತಿಗಳನ್ನು ಜಪ್ತಿ ಮಾಡುವಂತೆ ಸಿಬಿಐ ಕೋರಿತ್ತು. ಪ್ರಸ್ತುತ ಪ್ರಕರಣದಲ್ಲಿ ಆರೋಪಿಸಲಾದ ಅಪರಾಧಗಳು ಪ್ರಾರಂಭವಾಗುವ ಮೊದಲು ಇತರ ಆಸ್ತಿಗಳನ್ನು ಖರೀದಿಸಿದ್ದರಿಂದ ನ್ಯಾಯಾಲಯವು ರೆಡ್ಡಿಯವರು 2009 ಜನವರಿ ನಂತರ ಖರೀದಿ ಮಾಡಿದ 5 ಆಸ್ತಿ ಮತ್ತು ಅರುಣಾರವರ 77 ಆಸ್ತಿಗಳನ್ನು ಜಪ್ತಿ ಮಾಡಲು ಅನುಮತಿಸಿತು.

ಕೇಸ್‌ ಸಂಖ್ಯೆ​ 135/2013ರ ಅಂತಿಮ ಆದೇಶ ಆಗುವವರೆಗೂ ಆಸ್ತಿ ಮುಟ್ಟುಗೋಲು ಹಾಕುವಂತೆ ಆದೇಶ ಹೊರಡಿಸಿದೆ. ಸೈಟ್, ಕಟ್ಟಡ, ಖಾಲಿ ಜಮೀನು ಸೇರಿದಂತೆ ನೂರಕ್ಕೂ ಅಧಿಕ ಆಸ್ತಿಗಳು ಬಗ್ಗೆ ಸರಿಯಾದ ದಾಖಲೆ ನೀಡಲು ಕೋರ್ಟ್​ ಕೋರಿದೆ.

2023ರ ಜನವರಿ 12 ರಂದು ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ಕರ್ನಾಟಕ ಗೃಹ ಇಲಾಖೆ ಅನುಮತಿ ನೀಡಿ ಆದೇಶ ಹೊರಡಿಸಿತ್ತು. ಹಾಗಾಗಿ ಈಗಾಗಲೇ ಸಿಬಿಐ ಅಧಿಕಾರಿಗಳು ಪ್ರಕರಣದ ತನಿಖೆ ವೇಳೆ ಆಸ್ತಿಗಳನ್ನ ಗುರುತಿಸಿಕೊಂಡಿದ್ದರು.

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಆರೋಪಿಯಾಗಿರುವ ಜನಾರ್ದನ ರೆಡ್ಡಿ ಬಳ್ಳಾರಿ ಜಿಲ್ಲೆ ಪ್ರವೇಶಿಸದಂತೆ ತಡೆಯಲಾಗಿದೆ. ಹಾಗಾಗಿ ಅವರು ಗಂಗಾವತಿ ಕ್ಷೇತ್ರದಿಂದ ಕೆಆರ್‌ಪಿಪಿ ಪಕ್ಷದಿಂದ ಕಣಕ್ಕಿಳಿದು ಜಯ ಕಂಡಿದ್ದರು. ಆದರೆ ಬಳ್ಳಾರಿ ಕ್ಷೇತ್ರಕ್ಕೆ ತಮ್ಮ ಪತ್ನಿ ಲಕ್ಷ್ಮಿ ಅರುಣಾರನ್ನು ಕಣಕ್ಕಿಳಿಸಿದರೂ ಅವರು ಸೋಲು ಅನುಭವಿಸಿದರು.

ಇದನ್ನೂ ಓದಿ; ತಿಂಗಳಾದರೂ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡದ ಬಿಜೆಪಿ!: ರಾಜ್ಯಾಧ್ಯಕ್ಷ ಸ್ಥಾನವೂ ಕಗ್ಗಂಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...