Homeಮುಖಪುಟಮಣಿಪುರ ಹಿಂಸಾಚಾರದಲ್ಲಿ 253 ಚರ್ಚ್‌ಗಳಿಗೆ ಬೆಂಕಿ; ಜ್ಞಾಪಕ ಪತ್ರ ಸಲ್ಲಿಕೆ

ಮಣಿಪುರ ಹಿಂಸಾಚಾರದಲ್ಲಿ 253 ಚರ್ಚ್‌ಗಳಿಗೆ ಬೆಂಕಿ; ಜ್ಞಾಪಕ ಪತ್ರ ಸಲ್ಲಿಕೆ

- Advertisement -
- Advertisement -

ಮಣಿಪುರದಲ್ಲಿ ಭುಗಿಲೆದ್ದಿರುವ ಕುಕಿ ಮತ್ತು ಮೈತೇಯಿ ಸಮುದಾಯಗಳ ನಡುವಿನ ಕಲಹದಲ್ಲಿ, “253 ಚರ್ಚ್‌ಗಳನ್ನು ಸುಟ್ಟು ಹಾಕಲಾಗಿದೆ” ಎಂದು ಚುರಾಚಂದ್‌ಪುರ ಜಿಲ್ಲೆಯ ಬುಡಕಟ್ಟುಗಳ ಒಕ್ಕೂಟವಾದ ‘ಸ್ಥಳೀಯ ಬುಡಕಟ್ಟು ನಾಯಕರ ವೇದಿಕೆ’ (ಐಟಿಎಲ್‌ಎಫ್‌) ಆರೋಪಿಸಿದೆ.

ಇಂಫಾಲ್‌ನಿಂದ ಸುಮಾರು 60 ಕಿಮೀ ದೂರದಲ್ಲಿರುವ ಚುರಾಚಂದ್‌ಪುರಕ್ಕೆ ಸೋಮವಾರ ಭೇಟಿ ನೀಡಿದ್ದ ರಾಜ್ಯಪಾಲ ಅನುಸೂಯಾ ಉಯಿಕೆ ಅವರಿಗೆ ಸಲ್ಲಿಸಿದ ಜ್ಞಾಪಕ ಪತ್ರದಲ್ಲಿ ಐಟಿಎಲ್‌ಎಫ್ ಈ ಆರೋಪಗಳನ್ನು ಮಾಡಿದೆ.

ಪರಿಶಿಷ್ಟ ಪಂಗಡದ ಸ್ಥಾನಮಾನ ನೀಡಬೇಕೆಂದು ಬಹುಸಂಖ್ಯಾತ ಮೈತೇಯಿಗಳು ಇಟ್ಟಿರುವ ಬೇಡಿಕೆಯನ್ನು ವಿರೋಧಿಸಿ 10 ಗುಡ್ಡಗಾಡು ಜಿಲ್ಲೆಗಳಲ್ಲಿ ಐಕಮತ ರ್‍ಯಾಲಿ ನಡೆದಿತ್ತು. ಆನಂತರ ಮೇ 3ರಂದು ಪ್ರಾರಂಭವಾದ ಹಿಂಸಾಚಾರದಲ್ಲಿ ಅತಿ ಹೆಚ್ಚು ಹಿಂಸಾಚಾರವನ್ನು ಕಂಡ ಜಿಲ್ಲೆಗಳ ಪೈಕಿ ಚುರಚಂದ್‌ಪುರವೂ ಒಂದಾಗಿದೆ.

ಹಿಂದೂ ಮೈತೇಯಿ ಮತ್ತು ಕ್ರಿಶ್ಚಿಯನ್ ಕುಕಿಗಳ ನಡುವೆ ನಡೆದ ಘರ್ಷಣೆಯಲ್ಲಿ 100ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ, 50,698 ಮಂದಿಯನ್ನು ಸ್ಥಳಾಂತರ ಮಾಡಲಾಗಿದೆ.

ಸೋಮವಾರ ಚುರಚಂದಪುರ ಗ್ರಾಮದ ಮೇಲೆ ನಡೆದ ದಾಳಿಯಲ್ಲಿ ಕೂಡ ಒಬ್ಬರು ಸಾವನ್ನಪ್ಪಿದ್ದಾರೆ ಎಂದು ಐಟಿಎಲ್ಎಫ್ ಮಾಹಿತಿ ನೀಡಿದೆ.

“ಮೈತೇಯಿ ಮತ್ತು ಮಣಿಪುರದ ಕೋಮುವಾದಿ ಸರ್ಕಾರದ ಜನಾಂಗೀಯ ಶುದ್ಧೀಕರಣ ಅಭಿಯಾನದ ಪರಿಣಾಮವಾಗಿ ಕುಕಿ-ಜೋ ಜನರು ಸಂಕಷ್ಟಕ್ಕೀಡಾಗಿದ್ದಾರೆ. ನಮ್ಮ ಇತಿಹಾಸದ ಕಂಡ ಅತ್ಯಂತ ಸವಾಲಿನ ದಿನಗಳನ್ನು ಕುಕಿಗಳು ಸಹಿಸಿಕೊಳ್ಳುತ್ತಿದ್ದಾರೆ” ಎಂದು ರಾಜ್ಯಪಾಲರಿಗೆ ಸಲ್ಲಿಸಿರುವ ಮೂರು ಪುಟಗಳ ಜ್ಞಾಪಕ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

“ಮೇ 3 ರಿಂದ ನಮ್ಮ ಜನರ ವಿರುದ್ಧ ಸರ್ಕಾರಿ ಪ್ರಾಯೋಜಿತ ಹತ್ಯಾಕಾಂಡ ನಡೆಯುತ್ತಿದೆ. ನಾವು 100 ಕ್ಕೂ ಹೆಚ್ಚು ಅಮೂಲ್ಯ ಜೀವಗಳನ್ನು ಕಳೆದುಕೊಂಡಿದ್ದೇವೆ. ಸತ್ತವರ ಸಂಖ್ಯೆ ಸ್ಪಷ್ಟವಾಗಿಲ್ಲ. ಇದಲ್ಲದೆ 160 ಹಳ್ಳಿಗಳಲ್ಲಿ ಸುಮಾರು 4,500 ಮನೆಗಳು ಸುಟ್ಟುಹೋಗಿವೆ, ಇದರಿಂದಾಗಿ ಸುಮಾರು 36,000 ಜನರು ನಿರಾಶ್ರಿತರಾಗಿದ್ದಾರೆ” ಎಂದು ಆತಂಕ ವ್ಯಕ್ತಪಡಿಸಿದೆ.

ಐಟಿಎಲ್‌ಎಫ್‌ ಅಧ್ಯಕ್ಷ ಪಗಿನ್ ಹಾಕಿಪ್, ಕಾರ್ಯದರ್ಶಿ ಮುವಾನ್ ಟಾಂಬಿಂಗ್ ನೀಡಿದ ಜ್ಞಾಪಕ ಪತ್ರದಲ್ಲಿ, “253 ಚರ್ಚ್‌ಗಳನ್ನು ಸುಟ್ಟುಹಾಕಲಾಯಿತು. ನಮ್ಮ ಸಾವಿರಾರು ಜನರು ದೇಶದ ವಿವಿಧ ಸ್ಥಳಗಳಿಗೆ ಸ್ಥಳಾಂತರಗೊಳ್ಳುತ್ತಿದ್ದಾರೆ” ಎಂದು ನೋವು ತೋಡಿಕೊಳ್ಳಲಾಗಿದೆ.

ಫೆಬ್ರವರಿಯಲ್ಲಿ ಅಧಿಕಾರ ವಹಿಸಿಕೊಂಡ ನಂತರ ರಾಜ್ಯಪಾಲರು ಚರ್ಚಂದಪುರಕ್ಕೆ ನೀಡಿದ ಮೊದಲ ಭೇಟಿ ಇದಾಗಿದೆ ಎಂದು ಐಟಿಎಲ್‌ಎಫ್ ನಾಯಕರೊಬ್ಬರು ತಿಳಿಸಿದ್ದಾರೆ.

ಸತ್ತವರ ಪಟ್ಟಿ, ಹಿಂಸಾಚಾರ ಭುಗಿಲೆದ್ದ ಬಳಿಕ ನಾಶವಾದ ಚರ್ಚ್‌ಗಳು, ಆಡಳಿತಾತ್ಮಕ ಕಟ್ಟಡಗಳು, ಸುಟ್ಟುಹೋದ ಹಳ್ಳಿಗಳ ವಿವರಗಳನ್ನು ಜ್ಞಾಪಕ ಪತ್ರದೊಂದಿಗೆ ಐಟಿಎಲ್‌ಎಫ್‌ ಲಗತ್ತಿಸಿದೆ.

ನಿರಾಶ್ರಿತ ಶಿಬಿರಗಳ ವಿವರದೊಂದಿಗೆ, ಅರಾಂಬೈ ಟೆಂಗೋಲ್‌ ಸಂಘಟನೆ ಜೊತೆಯಲ್ಲಿ ರಾಜ್ಯ ನಾಯಕರು ಪಾಲ್ಗೊಂಡಿರುವುದನ್ನು ದೃಢೀಕರಿಸುವ ಫೋಟೋಗಳನ್ನೂ ಐಟಿಎಲ್‌ಎಫ್‌ ಒದಗಿಸಿದೆ.

ಅರಾಂಬೈ ತೆಂಗೋಲ್ ಎಂಬುದು ಮೇತೇಯಿ ಸಂಘಟನೆಯಾಗಿದ್ದು, ಕುಕಿಗಳು ಹಿಂಸಾಚಾರದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿದೆ. ಈ ಸಂಘಟನೆಯನ್ನು ವಿಸರ್ಜನೆ ಮಾಡಲಾಗಿದೆ ಎಂದು ಕಳೆದ ವಾರ ಮಾಧ್ಯಮವೊಂದು ವರದಿ ಮಾಡಿತ್ತು.

ಇದನ್ನೂ ಓದಿರಿ: ಅಣ್ಣಾಮಲೈರನ್ನ ಹಿಡಿತದಲ್ಲಿ ಇಟ್ಟುಕೊಳ್ಳಿ: ಕೇಂದ್ರದ ಬಿಜೆಪಿ ನಾಯಕರಿಗೆ ಮೈತ್ರಿ ಪಕ್ಷ ಎಐಎಡಿಎಂಕೆ ಎಚ್ಚರಿಕೆ

ಹಾನಿಗೊಳಗಾದ ಚರ್ಚ್ ಆಸ್ತಿಗಳ ಬಗ್ಗೆ ಕೇಳಿದಾಗ, ಐಟಿಎಲ್‌ಎಫ್‌ನ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಗಿಂಜಾ ವುಲ್ಜಾಂಗ್ ಪ್ರತಿಕ್ರಿಯಿಸಿ, “ಮುಖ್ಯವಾಗಿ ಇಂಫಾಲ್ ಕಣಿವೆ, ಗುಡ್ಡಗಾಡು ಪ್ರದೇಶಗಳಲ್ಲಿ ಚರ್ಚ್‌ಗಳ ಜೊತೆಗೆ 93 ಚರ್ಚ್ ಆಡಳಿತ ಕಟ್ಟಡಗಳು ಮತ್ತು ಕ್ವಾರ್ಟರ್‌ಗಳನ್ನು ಸುಟ್ಟುಹಾಕಲಾಗಿದೆ” ಎಂದು ತಿಳಿಸಿದ್ದಾರೆ.

ಇಂಫಾಲ್ ಕಣಿವೆಯ ಆರು ಜಿಲ್ಲೆಗಳಲ್ಲಿ ಮೈತೇಯಿ ಪ್ರಾಬಲ್ಯವಿದೆ. 10 ಗುಡ್ಡಗಾಡು ಜಿಲ್ಲೆಗಳಲ್ಲಿ ಬುಡಕಟ್ಟು ಜನರನ್ನು ಹೆಚ್ಚಿದ್ದಾರೆ. ನಾಗಾಗಳು ಮತ್ತು ಕುಕಿಗಳು ಗುಡ್ಡಗಾಡು ಜಿಲ್ಲೆಗಳಲ್ಲಿ ಪ್ರಾಬಲ್ಯ ಹೊಂದಿದ್ದಾರೆ.

ಯುನೈಟೆಡ್ ಕ್ರಿಶ್ಚಿಯನ್ ಫೋರಮ್ ಆಫ್ ನಾರ್ತ್ ಈಸ್ಟ್ ಇಂಡಿಯಾದ ಸದಸ್ಯ ಅಲೆನ್ ಬ್ರೂಕ್ಸ್ ಅವರು ‘ದಿ ಟೆಲಿಗ್ರಾಫ್‌’ಗೆ ಪ್ರತಿಕ್ರಿಯಿಸಿ, “ಹಿಂಸಾಚಾರವು ಬಹಳ ದೊಡ್ಡ ಮಟ್ಟದಲ್ಲಿದೆ ಮತ್ತು ಅತ್ಯಂತ ದುರಂತಮಯವಾಗಿದೆ. ಹಿಂಸಾಚಾರ ಅಂಕಿ-ಅಂಶಗಳು ನಿಜವೆಂದು ನಾವು ನಂಬುತ್ತೇವೆ. ಏಕೆಂದರೆ ಇವುಗಳನ್ನು ಇಲ್ಲಿನ ಸ್ಥಳೀಯ ಸಂಸ್ಥೆಗಳು ರುಜುವಾತುಪಡಿಸಿವೆ. ಆದರೆ ಪ್ರಶ್ನೆ ಇರುವುದು ಒಂದು ಚರ್ಚ್ ಅನ್ನು ಸುಡುವುದು ಅಥವಾ 1,000 ಚರ್ಚ್‌ಗಳನ್ನು ಸುಡುವುದರ ಬಗ್ಗೆ ಅಲ್ಲ. ಜನರ ಸುರಕ್ಷತೆ ಮತ್ತು ದೇಶದ ಜಾತ್ಯತೀತತೆ ಅಪಾಯದಲ್ಲಿದೆ” ಎಂದು ವಿಷಾದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...