Homeಕರ್ನಾಟಕಬೆಂಗಳೂರು ಮೈಸೂರು ಹೆದ್ದಾರಿ ಟೋಲ್ ದರ ಮತ್ತೆ ಹೆಚ್ಚಳ

ಬೆಂಗಳೂರು ಮೈಸೂರು ಹೆದ್ದಾರಿ ಟೋಲ್ ದರ ಮತ್ತೆ ಹೆಚ್ಚಳ

- Advertisement -
- Advertisement -

ಇತ್ತೀಚೆಗಷ್ಟೇ ಉದ್ಘಾಟನೆಗೊಂಡ ಬೆಂಗಳೂರು ಮೈಸೂರು ಹೆದ್ದಾರಿ ಟೋಲ್ ದರವನ್ನು ಶೇ.22% ರಷ್ಟು ಹೆಚ್ಚಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆದೇಶ ಹೊರಡಿಸಿದೆ.

ಕಾರ್, ವ್ಯಾನ್‌, ಜೀಪ್‌ಗಳ ಏಕಮುಖ ಸಂಚಾರ ಟೋಲ್ ದರವನ್ನು ₹135 ರಿಂದ ₹165ಕ್ಕೆ ಏರಿಸಲಾಗಿದೆ. ಆ ಮೂಲಕ ಏಕಾಏಕಿ 30 ರೂ ಹೆಚ್ಚಿಸಲಾಗಿದೆ. ದ್ವಿಮುಖ ಸಂಚಾರ ದರವು ₹205ರಿಂದ ₹250ಕ್ಕೆ ಏರಿಕೆಗೊಂಡಿದೆ (45 ರೂ ಹೆಚ್ಚಳವಾಗಿದೆ). ಲಘು ವಾಹನಗಳು, ಮಿನಿ ಬಸ್‌ಗಳ ಏಕಮುಖ ಟೋಲ್‌ ₹220ರಿಂದ ₹270ಕ್ಕೆ (50ರೂ ಹೆಚ್ಚಳ) ಹಾಗೂ ದ್ವಿಮುಖ ಸಂಚಾರಕ್ಕೆ ₹405 (₹75 ಹೆಚ್ಚಳ) ನಿಗದಿ ಮಾಡಲಾಗಿದೆ.

ಟ್ರಕ್‌, ಬಸ್, ಎರಡು ಆಕ್ಸೆಲ್‌ ವಾಹನಗಳ ಏಕಮುಖ ಟೋಲ್‌ ಬರೋಬ್ಬರಿ ₹565ಕ್ಕೆ ಏರಿಕೆ ಆಗಿದೆ (₹105 ಹೆಚ್ಚಳ). ದ್ವಿಮುಖ ಸಂಚಾರಕ್ಕೆ ₹850 ನಿಗದಿಪಡಿಸಲಾಗಿದೆ (₹ 160 ಹೆಚ್ಚಳವಾಗಿದೆ).

ಅದೇ ರೀತಿಯಾಗಿ 3 ಆಕ್ಸೆಲ್ ವಾಣಿಜ್ಯ ವಾಹನಗಳ ಏಕಮುಖ ಸಂಚಾರ ದರವು ₹615 (₹115 ಏರಿಕೆ) ಆಗಿದ್ದು,  ದ್ವಿಮುಖ ಸಂಚಾರ ದರ ₹925 ಕ್ಕೆ (₹225 ಹೆಚ್ಚಳ) ಏರಿದೆ. ಭಾರಿ ವಾಹನಗಳ ಏಕಮುಖ ಟೋಲ್‌ 720 ರೂಗಳಿಂದ ₹885 (₹165 ಹೆಚ್ಚಳ), ದ್ವಿಮುಖ ಸಂಚಾರಕ್ಕೆ ₹1,330 (₹250 ಹೆಚ್ಚಳ) ನಿಗದಿ ಮಾಡಲಾಗಿದೆ.  7 ಅಥವಾ ಅದಕ್ಕಿಂತ ಹೆಚ್ಚಿನ ಆಕ್ಸೆಲ್‌ ವಾಹನಗಳ ದರವು ₹1,080 (₹200 ಹೆಚ್ಚಳ) ಹಾಗೂ ದ್ವಿಮುಖ ಸಂಚಾರಕ್ಕೆ ₹1,620 (₹305 ಏರಿಕೆ) ನಿಗದಿ ಮಾಡಲಾಗಿದೆ.

ಏಪ್ರಿಲ್ 1 ರಂದು ಈ ದರ ಹೆಚ್ಚಳಕ್ಕೆ ಹೆದ್ದಾರಿ ಪ್ರಾಧಿಕಾರ ಮುಂದಾಗಿತ್ತು. ಆದರೆ ಚುನಾವಣೆ ಮತ್ತು ಜನಾಕ್ರೋಶಕ್ಕೆ ಮಣಿದು ಆದೇಶ ಹಿಂಪಡೆದಿತ್ತು. ಈಗ ಜೂನ್ 1 ರಿಂದಲೇ ಈ ದರ ಹೆಚ್ಚಳ ಮಾಡಲಾಗಿದೆ. ಆದರೆ ಫಾಸ್ಟ್‌ ಟ್ಯಾಗ್‌ ಬಳಸುವುದರಿಂದ ಸವಾರರ ಗಮನಕ್ಕೆ ಬಂದಿರಲಿಲ್ಲ ಎನ್ನಲಾಗಿದೆ.

ಟೋಲ್ ದರ ಹೆಚ್ಚಳ – ಸಂಸದ ಪ್ರತಾಪ್ ಸಿಂಹ ಸಮರ್ಥನೆ

ಬೆಂಗಳೂರು-ಮೈಸೂರು ಹೆದ್ದಾರಿ ಟೋಲ್ ದರ ಹೆಚ್ಚಳವನ್ನು ಸಂಸದ ಪ್ರತಾಪ್ ಸಿಂಹ ಸಮರ್ಥಿಕೊಂಡಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ಇಡೀ ದೇಶದಲ್ಲಿ ಆರ್ಥಿಕ ವರ್ಷ ಶುರುವಾದಾಗ ಟೋಲ್ ಹೆಚ್ಚಳ ಮಾಡುವುದು ಸಹಜ. ಈ ಹೈವೆಗೆ ಏಪ್ರಿಲ್ ನಲ್ಲಿ ಟೋಲ್ ಹೆಚ್ಚಳ ಆಗಬೇಕಿತ್ತು. ನಾವು ಇನ್ನೂ ಕಾಮಗಾರಿ ನಡೆಯುತ್ತಿದೆ ಎಂದು ಹೇಳಿ ಟೋಲ್ ದರ ಹೆಚ್ಚಳ ಕೈಬಿಡುವಂತೆ ಮನವಿ ಮಾಡಿದ್ದೆವು. ಹಾಗಾಗಿ ಆಗ ಟೋಲ್ ದರ ಹೆಚ್ಚಳ ಆಗಿರಲಿಲ್ಲ. ಈಗ 22% ಏರಿಕೆ ಆಗಿದೆ” ಎಂದಿದ್ದಾರೆ.

ಇದನ್ನೂ ಓದಿ: ದಶಪಥವಲ್ಲ, ಇದು ಆರು ಪಥ: ಎಲ್ಲರೂ ಸರ್ವೀಸ್ ರಸ್ತೆಯಲ್ಲೇ ಹೋದರೆ ಟೋಲ್ ಕಟ್ಟುವವರು ಯಾರು?: ಯೋಜನಾ ನಿರ್ದೇಶಕರ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...