Homeಕರ್ನಾಟಕವಿದ್ಯುತ್ ದರ ಏರಿಸಿದ ಬಿಜೆಪಿ ಸರ್ಕಾರ ಆತ್ಮವಂಚಕತನದ ಮಾತಾಡುತ್ತಿದೆ: ಕಾಂಗ್ರೆಸ್ ಆಕ್ರೋಶ

ವಿದ್ಯುತ್ ದರ ಏರಿಸಿದ ಬಿಜೆಪಿ ಸರ್ಕಾರ ಆತ್ಮವಂಚಕತನದ ಮಾತಾಡುತ್ತಿದೆ: ಕಾಂಗ್ರೆಸ್ ಆಕ್ರೋಶ

ಚುನಾವಣೆ ಮುಗಿದ ಎರಡು ದಿನ ನಂತರ ಮೇ 12ರಂದು ದರ ಏರಿಕೆಗೆ ಒಪ್ಪಿಗೆ ನೀಡಲಾಗಿತ್ತು. ಹಾಗಾಗಿ ಬಿಜೆಪಿ ಸರ್ಕಾರ ಇದ್ದಾಗಲೇ ಈ ಆದೇಶ ಹೊರಡಿಸಿರುವುದು ಸ್ಪಷ್ಟವಾಗಿದೆ.

- Advertisement -
- Advertisement -

ವಿದ್ಯುತ್ ದರ ಏರಿಸಿ, ಚುನಾವಣೆಯ ನಂತರ ಜಾರಿಗೆ ಬರುವಂತೆ ತಂತ್ರ ರೂಪಿಸಿದ ಬಿಜೆಪಿ ಪಕ್ಷವು
ಈಗ ವಿದ್ಯುತ್ ದರ ಏರಿಕೆಯ ಬಗ್ಗೆ ಆತ್ಮವಂಚಕತನದ ಮಾತಾಡುತ್ತಿದೆ.. ಬಿಜೆಪಿಗೆ ಆತ್ಮ ಇದ್ದರೆ ಆತ್ಮಸಾಕ್ಷಿಯಿಂದ ಬೆಲೆ ಏರಿಸಿದ್ದನ್ನು ಒಪ್ಪಿಕೊಂಡು ಜನರ ಕ್ಷಮೆ ಕೇಳಲಿ ಎಂದು ಕಾಂಗ್ರೆಸ್ ಪಕ್ಷ ಆಗ್ರಹಿಸಿದೆ.

ಬಿಜೆಪಿ ಪಕ್ಷ ಮೇ 12 ರಂದು ವಿದ್ಯುತ್ ದರ ಏರಿಸಿ ಈಗ ನಮ್ಮ ಸರ್ಕಾರದ ಮೇಲೆ ಗೂಬೆ ಕೂರಿಸುತ್ತಿದೆ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

“ಮುಂಬಾಗಿಲಿನಲ್ಲಿ ನಿಂತು ಎಲ್ಲರಿಗೂ ಉಚಿತ ವಿದ್ಯುತ್ ಅಂತ ಹೇಳಿ, ಹಿಂಬಾಗಿಲಿನಿಂದ ವಿದ್ಯುತ್ ಬೆಲೆಗಳನ್ನು ಗಗನಕ್ಕೆ ಏರಿಸಿರುವ #ATMSarkara ತಂತ್ರ ಬಯಲಾಗಿದೆ. ಸಿದ್ದರಾಮಯ್ಯನವರೇ, ಇದೀಗ ತಮ್ಮದೇ ಪಕ್ಷದ ಮತ್ತೋರ್ವ ಶಾಸಕ ತನ್ವೀರ್ ಸೇಠ್‌ರವರು ನಿಮಗೆ ಪತ್ರಬರೆದು ನೀವು ಮಾಡುತ್ತಿರುವುದು ತಪ್ಪು ಎಂದು ಹೇಳಿದರೂ, ಅದನ್ನು ಲೆಕ್ಕಿಸದಿರುವಷ್ಟು ಭಂಡರಾಗಿದ್ದೀರ? ತಮ್ಮ ಭಂಡತನದಿಂದ ರಾಜ್ಯಕ್ಕೆ ಕೆಡಕಾಗುತ್ತಿದೆ ನೆನಪಿರಲಿ” ಎಂದು ಇಂದು ಬೆಳಿಗ್ಗೆ ಬಿಜೆಪಿ ಟ್ವೀಟ್ ಮಾಡಿದೆ.

ವಿದ್ಯುತ್ ದರ ಏರಿಕೆಗೆ ಯಾರು ಕಾರಣ?

ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು (ಕೆಇಆರ್‌ಸಿ) ಏಪ್ರಿಲ್ 1ರಿಂದ ಪೂರ್ವಾನ್ವಯವಾಗುವಂತೆ ವಿದ್ಯುತ್ ದರ ಹೆಚ್ಚಿಸಿ ಮೇ 12ರಂದು ಆದೇಶ ಹೊರಡಿಸಿದೆ. ಅದರಂತೆ ಜೂನ್ ತಿಂಗಳಿನಿಂದ ಗ್ರಾಹಕರಿಗೆ ಎರಡು ಸ್ತರಗಳಲ್ಲಿ (ಸ್ಪ್ಯಾಬ್‌ಗಳಲ್ಲಿ) ವಿದ್ಯುತ್‌ ಯೂನಿಟ್ ದರ ನಿಗದಿಪಡಿಸಿದೆ. ಗ್ರಾಹಕರು ಬಳಸಿದ 100 ಯೂನಿಟ್‌ವರೆಗಿನ ವಿದ್ಯುತ್‌ಗೆ ಪ್ರತಿ ಯೂನಿಟ್‌ಗೆ ‍4.15 ಪೈಸೆ ವಿಧಿಸಲಾಗುತ್ತಿದೆ. 100 ಯೂನಿಟ್ ಮೀರಿದರೆ, ಬಳಸಿದ ಅಷ್ಟೂ ಯೂನಿಟ್‌ ವಿದ್ಯುತ್‌ಗೆ 7ರೂನಂತೆ ದರ ವಿಧಿಸಲಾಗುತ್ತಿದೆ. ಹೀಗಾಗಿ, ಜುಲೈ ತಿಂಗಳಲ್ಲಿ 100 ಯೂನಿಟ್‌ಗಿಂತ ಹೆಚ್ಚು ವಿದ್ಯುತ್‌ ಬಳಕೆ ಮಾಡಿದ ಗ್ರಾಹಕರಿಗೆ ಪ್ರತಿ ಯೂನಿಟ್‌ಗೆ 7ರೂ ದರ ಲೆಕ್ಕ ಹಾಕಿ ಬಿಲ್ ನೀಡಲಾಗಿದೆ. ಹಾಗಾಗಿ ಹಲವರ ವಿದ್ಯುತ್ ಬಿಲ್ ಡಬಲ್ ಆಗಿದೆ.

ವಿದ್ಯುತ್‌ ದರ ಏರಿಕೆ ಪ್ರಸ್ತಾವನೆಯನ್ನು ಎಸ್ಕಾಂಗಳು ಕೆಇಆರ್‌ಸಿ ಮುಂದೆ ಇಟ್ಟಿದ್ದರೂ ಚುನಾವಣೆ ನಡೆಯುತ್ತಿದ್ದ ಹೊತ್ತಿನಲ್ಲಿ ಅನುಮೋದನೆ ನೀಡಿರಲಿಲ್ಲ. ಚುನಾವಣೆ ಮುಗಿದ ಎರಡು ದಿನ ನಂತರ ಮೇ 12ರಂದು ದರ ಏರಿಕೆಗೆ ಒಪ್ಪಿಗೆ ನೀಡಲಾಗಿತ್ತು. ಹಾಗಾಗಿ ಬಿಜೆಪಿ ಸರ್ಕಾರ ಇದ್ದಾಗಲೇ ಈ ಆದೇಶ ಹೊರಡಿಸಿರುವುದು ಸ್ಪಷ್ಟವಾಗಿದೆ.

ಬೊಮ್ಮಾಯಿ ಸರ್ಕಾರದ ವಿದ್ಯುತ್ ದರ ಏರಿಕೆ ಆದೇಶ ವಾಪಸ್ ಪಡೆಯಲು ಆಗ್ರಹ

ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸಿಎಂ ಆಗಿದ್ದ ಬಸವರಾಜ ಬೊಮ್ಮಾಯಿಯವರ ವಿದ್ಯುತ್ ಬೆಲೆ ಏರಿಕೆ ಆದೇಶ ವಾಪಸ್ ಪಡೆಯಿರಿ ಎಂದು ಮೈಸೂರಿನ ಶಾಸಕ ತನ್ವೀರ್ ಸೇಠ್‌ರವರು ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದಾರೆ.

ವಿದ್ಯುತ್ ಬೆಲೆ ಏರಿಕೆ ನಿರ್ಧಾರವನ್ನು ಹಿಂದಿನ ಬಿಜೆಪಿ ಸರ್ಕಾರ ತೆಗೆದುಕೊಂಡಿದೆ. ಆದರೆ ಜನರು ಈಗಿನ ಕಾಂಗ್ರೆಸ್ ಸರ್ಕಾರ ಬೆಲೆ ಏರಿಸಿದೆ ಎಂದು ತಪ್ಪು ಇಳಿಸಿದ್ದಾರೆ. ಇದರಿಂದ ಪಕ್ಷದ ಗೌರವ ಹಾಳಾಗುತ್ತಿದೆ. ಹಾಗಾಗಿ ವಿದ್ಯುತ್ ಬೆಲೆ ಏರಿಕೆ ಆದೇಶವನ್ನು ವಾಪಸ್ ಪಡೆಯಿರಿ ಎಂದು ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಬೊಮ್ಮಾಯಿ ಸರ್ಕಾರದ ವಿದ್ಯುತ್ ಬೆಲೆ ಏರಿಕೆ ಆದೇಶ ವಾಪಸ್ ಪಡೆಯಿರಿ: ಸಿಎಂಗೆ ಶಾಸಕ ತನ್ವೀರ್ ಸೇಠ್ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...