Homeಮುಖಪುಟಈ ದೇಶದ ಪ್ರಧಾನಿಗೆ ಯಾಕೆ ಇಷ್ಟೊಂದು ಹೇಡಿತನ?: ಟ್ವಿಟರ್‌ನ ಮಾಜಿ ಸಿಇಒ ಹೇಳಿಕೆ ಹಿನ್ನೆಲೆ ಕಾಂಗ್ರೆಸ್...

ಈ ದೇಶದ ಪ್ರಧಾನಿಗೆ ಯಾಕೆ ಇಷ್ಟೊಂದು ಹೇಡಿತನ?: ಟ್ವಿಟರ್‌ನ ಮಾಜಿ ಸಿಇಒ ಹೇಳಿಕೆ ಹಿನ್ನೆಲೆ ಕಾಂಗ್ರೆಸ್ ಪ್ರಶ್ನೆ

- Advertisement -
- Advertisement -

ರೈತರ ಪ್ರತಿಭಟನೆಯ ಸಂದರ್ಭದಲ್ಲಿ ಭಾರತ ಸರ್ಕಾರ ನಮ್ಮ ಮೇಲೆ ಒತ್ತಡ ಹೇರಿತ್ತು. ಅಷ್ಟೇ ಅಲ್ಲದೇ ಅವರು ಹೇಳಿದಂತೆ ನಡೆಯದಿದ್ದರೆ, ದೇಶದಲ್ಲಿ ಟ್ವಿಟರ್ ಬ್ಯಾನ್ ಮಾಡಲಾಗುವುದು, ಉದ್ಯೋಗಿಗಳ ಮೇಲೆ ದಾಳಿ ನಡೆಸಲಾಗುವುದು ಎಂದು ಬೆದರಿಕೆ ಹಾಕಿತ್ತು ಎಂದು ಟ್ವಿಟರ್‌ನ ಮಾಜಿ ಸಿಇಒ ಜಾಕ್ ಡೋರ್ಸಿ ಅವರು ಸಂರ್ದಶನದಲ್ಲಿ ಹೇಳಿದ್ದಾರೆ. ವಿರೋಧ ಪಕ್ಷಗಳು ಜಾಕ್ ಡೋರ್ಸಿ ಅವರನ್ನು ಬೆಂಬಲಿಸಿ, ಈ ಘಟನೆಯು ಭಾರತದಲ್ಲಿ ಪ್ರಜಾಪ್ರಭುತ್ವಕ್ಕೆ ಹೇಗೆ ಅಪಾಯದಲ್ಲಿದೆ ಎಂಬುದನ್ನು ತೋರಿಸುತ್ತದೆ ಎಂದು ಹೇಳಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರೀನೇಟ್ ಅವರು, ”ಟ್ವಿಟರ್‌ನ ಸಂಸ್ಥಾಪಕ ಮತ್ತು ಮಾಜಿ ಸಿಇಒ ಜಾಕ್ ಡೋರ್ಸೆ ಅವರು ಮೋದಿ ಸರ್ಕಾರ ನನಗೆ ಬೆದರಿಕೆ ಹಾಕಿದ್ದಾರೆ ಎಂದು ಬಹಿರಂಗಪಡಿಸಿದ್ದಾರೆ. ರೈತ ಚಳವಳಿಯ ಬಗ್ಗೆ ಟ್ವೀಟ್‌ಗಳನ್ನು ತೋರಿಸಿದರೆ ಟ್ವಿಟರ್‌ನ ಕಚೇರಿ ಮತ್ತು ಉದ್ಯೋಗಿಗಳ ಮನೆಗಳ ಮೇಲೆ ದಾಳಿ ಮಾಡಲಾಗುವುದು. ಭಾರತದಲ್ಲಿ ಟ್ವಿಟರ್ ಬ್ಯಾನ್ ಮಾಡುತ್ತೇವೆ ಎಂದಿದ್ದಾರೆ. ದೇಶದ ರೈತರು ತಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸುತ್ತಿದ್ದಾಗ ಪ್ರಧಾನಿ ಮೋದಿ, ಅವರ ಧ್ವನಿಯನ್ನು ಹತ್ತಿಕ್ಕುತ್ತಿದ್ದರು” ಎಂದು ವಾಗ್ಧಾಳಿ ನಡೆಸಿದರು.

”ಈ ದೇಶದ ಪ್ರಧಾನಿಗೆ ಯಾಕೆ ಇಷ್ಟೊಂದು ಹೇಡಿತನ?” ಎಂದು ಸುಪ್ರಿಯಾ ಪ್ರಶ್ನೆ ಮಾಡಿದ್ದಾರೆ.

”ಆಗಸ್ಟ್ 2021ರಲ್ಲಿ ರಾಹುಲ್ ಗಾಂಧಿ ಅವರ ಟ್ವಿಟರ್ ಹ್ಯಾಂಡಲ್ ಅನ್ನು ನಿರ್ಬಂಧಿಸಲಾಯಿತು. ಇದರಿಂದ ಮುಂದಿನ 6 ತಿಂಗಳವರೆಗೆ ಅವರ ಅನುಯಾಯಿಗಳ ಬೆಳವಣಿಗೆ ಬಹುತೇಕ ನಿಂತುಹೋಗಿತ್ತು. ಫೆಬ್ರವರಿ 2022-
ವಾಲ್ ಸ್ಟ್ರೀಟ್ ಜರ್ನಲ್ ರಾಹುಲ್ ಗಾಂಧಿ ಅವರ ಟ್ವಿಟರ್ ಹ್ಯಾಂಡಲ್ ಅನ್ನು ನಿರ್ಬಂಧಿಸಲಾಗಿದೆ ಎಂಬ ಸುದ್ದಿಯನ್ನು ಪ್ರಸಾರ ಮಾಡಲು ಹೊರಟಾಗ, ತಕ್ಷಣವೇ ನಿಷೇಧವನ್ನು ತೆಗೆದುಹಾಕಲಾಯಿತು. ಆಗ ಅನುಯಾಯಿಗಳ ಸಂಖ್ಯೆಯು ಹೆಚ್ಚಾಗಲು ಪ್ರಾರಂಭಿಸಿತು. ಹಾಗಿರುವಾಗ ಪ್ರತಿಪಕ್ಷಗಳ ಪ್ರಬಲ ಧ್ವನಿಯನ್ನು ಹತ್ತಿಕ್ಕಲು ಟ್ವಿಟರ್ ಮೋದಿ ಸರ್ಕಾರದ ಆದೇಶದ ಪಾಲಿಸಿದೆ ಎಂದು ಏಕೆ ಹೇಳಬಾರದು?” ಎಂದು ಸುಪ್ರಿಯಾ ಶ್ರೀನೇಟ್ ಪ್ರಶ್ನೆ ಮಾಡಿದ್ದಾರೆ.

ಸೋಮವಾರ, ಟ್ವಿಟರ್‌ನ ಮಾಜಿ ಸಿಇಒ ಜಾಕ್ ಡೋರ್ಸಿ ಅವರು ಯುಟ್ಯೂಬ್ ಸುದ್ದಿ ಕಾರ್ಯಕ್ರಮ ಬ್ರೇಕಿಂಗ್ ಪಾಯಿಂಟ್‌ಗಳಿಗೆ ನೀಡಿದ ಸಂದರ್ಶನದಲ್ಲಿ, ”ಟ್ವಿಟರ್ ಖಾತೆಗಳನ್ನು ನಿರ್ಬಂಧಿಸುವ ಆದೇಶಗಳನ್ನು ಅನುಸರಿಸದಿದ್ದಲ್ಲಿ ಭಾರತ, ನೈಜೀರಿಯಾ ಮತ್ತು ಟರ್ಕಿಯಲ್ಲಿ ಟ್ವಿಟರ್‌ನ್ನೇ ಬ್ಯಾನ್ ಮಾಡುವ ಬೆದರಿಕೆ ಹಾಕಲಾಗಿದೆ. ಭಾರತವು ಪತ್ರಕರ್ತರು ಮತ್ತು ಪ್ರತಿಭಟನಾಕಾರರ ಸಾಮಾಜಿಕ ಮಾಧ್ಯಮ ವೇದಿಕೆಯ ಬಳಕೆಯನ್ನು ತಡೆಯಲು ಬಯಸುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಟ್ವಿಟರ್‌ ಬ್ಯಾನ್, ಉದ್ಯೋಗಿಗಳ ಮನೆಗಳ ಮೇಲೆ ದಾಳಿ’ ಮಾಡುವುದಾಗಿ ಭಾರತ ಸರ್ಕಾರ ಬೆದರಿಕೆ ಹಾಕಿತ್ತು- ಇದು ಪ್ರಜಾಪ್ರಭುತ್ವ ರಾಷ್ಟ್ರ: ಮಾಜಿ CEO ಡಾರ್ಸೆ

”ಉದಾಹರಣೆಗೆ, ಭಾರದಲ್ಲಿ ರೈತರ ಪ್ರತಿಭಟನೆ ನಡೆಯುವ ಸಂದರ್ಭದಲ್ಲಿ ಸರ್ಕಾರವನ್ನು ಟೀಕಿಸುವ ನಿರ್ದಿಷ್ಟ ಪತ್ರಕರ್ತರ ಖಾತೆ, ವಿರೋಧಿಗಳ ಖಾತೆಗಳನ್ನು ನಿರ್ಬಂಧಿಸಬೇಕು ಎಂದು ಬಾರತ ಸರ್ಕಾರ ಅನೇಕ ಬಾರಿ ಮನವಿ ಮಾಡಿತು” ಎಂದು  ಹೇಳಿದರು.

”ನಾವು ಹೇಳಿದ್ದನ್ನು ನೀವು ಅನುಸರಿಸದೇ ಹೋದಲ್ಲಿ, ಭಾರತದಲ್ಲಿ ಟ್ವಿಟರ್ ಅನ್ನು ಬ್ಯಾನ್ ಮಾಡುತ್ತೇವೆ. ನಿಮ್ಮ ಉದ್ಯೋಗಿಗಳ ಮನೆಗಳ ಮೇಲೆ ನಾವು ದಾಳಿ ಮಾಡುತ್ತೇವೆ. ನಾವು ನಿಮ್ಮ ಕಚೇರಿಗಳನ್ನು ಮುಚ್ಚುತ್ತೇವೆ ಎಂದು ಭಾರತ ಸರ್ಕಾರ ಎಚ್ಚರಿಕೆ ನೀಡಿದ್ದರು. ಇದು ಭಾರತ, ಪ್ರಜಾಪ್ರಭುತ್ವ ದೇಶ” ಎಂದು ಜಾಕ್ ಡೋರ್ಸಿ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...