Homeಮುಖಪುಟಈ ದೇಶದ ಪ್ರಧಾನಿಗೆ ಯಾಕೆ ಇಷ್ಟೊಂದು ಹೇಡಿತನ?: ಟ್ವಿಟರ್‌ನ ಮಾಜಿ ಸಿಇಒ ಹೇಳಿಕೆ ಹಿನ್ನೆಲೆ ಕಾಂಗ್ರೆಸ್...

ಈ ದೇಶದ ಪ್ರಧಾನಿಗೆ ಯಾಕೆ ಇಷ್ಟೊಂದು ಹೇಡಿತನ?: ಟ್ವಿಟರ್‌ನ ಮಾಜಿ ಸಿಇಒ ಹೇಳಿಕೆ ಹಿನ್ನೆಲೆ ಕಾಂಗ್ರೆಸ್ ಪ್ರಶ್ನೆ

- Advertisement -
- Advertisement -

ರೈತರ ಪ್ರತಿಭಟನೆಯ ಸಂದರ್ಭದಲ್ಲಿ ಭಾರತ ಸರ್ಕಾರ ನಮ್ಮ ಮೇಲೆ ಒತ್ತಡ ಹೇರಿತ್ತು. ಅಷ್ಟೇ ಅಲ್ಲದೇ ಅವರು ಹೇಳಿದಂತೆ ನಡೆಯದಿದ್ದರೆ, ದೇಶದಲ್ಲಿ ಟ್ವಿಟರ್ ಬ್ಯಾನ್ ಮಾಡಲಾಗುವುದು, ಉದ್ಯೋಗಿಗಳ ಮೇಲೆ ದಾಳಿ ನಡೆಸಲಾಗುವುದು ಎಂದು ಬೆದರಿಕೆ ಹಾಕಿತ್ತು ಎಂದು ಟ್ವಿಟರ್‌ನ ಮಾಜಿ ಸಿಇಒ ಜಾಕ್ ಡೋರ್ಸಿ ಅವರು ಸಂರ್ದಶನದಲ್ಲಿ ಹೇಳಿದ್ದಾರೆ. ವಿರೋಧ ಪಕ್ಷಗಳು ಜಾಕ್ ಡೋರ್ಸಿ ಅವರನ್ನು ಬೆಂಬಲಿಸಿ, ಈ ಘಟನೆಯು ಭಾರತದಲ್ಲಿ ಪ್ರಜಾಪ್ರಭುತ್ವಕ್ಕೆ ಹೇಗೆ ಅಪಾಯದಲ್ಲಿದೆ ಎಂಬುದನ್ನು ತೋರಿಸುತ್ತದೆ ಎಂದು ಹೇಳಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರೀನೇಟ್ ಅವರು, ”ಟ್ವಿಟರ್‌ನ ಸಂಸ್ಥಾಪಕ ಮತ್ತು ಮಾಜಿ ಸಿಇಒ ಜಾಕ್ ಡೋರ್ಸೆ ಅವರು ಮೋದಿ ಸರ್ಕಾರ ನನಗೆ ಬೆದರಿಕೆ ಹಾಕಿದ್ದಾರೆ ಎಂದು ಬಹಿರಂಗಪಡಿಸಿದ್ದಾರೆ. ರೈತ ಚಳವಳಿಯ ಬಗ್ಗೆ ಟ್ವೀಟ್‌ಗಳನ್ನು ತೋರಿಸಿದರೆ ಟ್ವಿಟರ್‌ನ ಕಚೇರಿ ಮತ್ತು ಉದ್ಯೋಗಿಗಳ ಮನೆಗಳ ಮೇಲೆ ದಾಳಿ ಮಾಡಲಾಗುವುದು. ಭಾರತದಲ್ಲಿ ಟ್ವಿಟರ್ ಬ್ಯಾನ್ ಮಾಡುತ್ತೇವೆ ಎಂದಿದ್ದಾರೆ. ದೇಶದ ರೈತರು ತಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸುತ್ತಿದ್ದಾಗ ಪ್ರಧಾನಿ ಮೋದಿ, ಅವರ ಧ್ವನಿಯನ್ನು ಹತ್ತಿಕ್ಕುತ್ತಿದ್ದರು” ಎಂದು ವಾಗ್ಧಾಳಿ ನಡೆಸಿದರು.

”ಈ ದೇಶದ ಪ್ರಧಾನಿಗೆ ಯಾಕೆ ಇಷ್ಟೊಂದು ಹೇಡಿತನ?” ಎಂದು ಸುಪ್ರಿಯಾ ಪ್ರಶ್ನೆ ಮಾಡಿದ್ದಾರೆ.

”ಆಗಸ್ಟ್ 2021ರಲ್ಲಿ ರಾಹುಲ್ ಗಾಂಧಿ ಅವರ ಟ್ವಿಟರ್ ಹ್ಯಾಂಡಲ್ ಅನ್ನು ನಿರ್ಬಂಧಿಸಲಾಯಿತು. ಇದರಿಂದ ಮುಂದಿನ 6 ತಿಂಗಳವರೆಗೆ ಅವರ ಅನುಯಾಯಿಗಳ ಬೆಳವಣಿಗೆ ಬಹುತೇಕ ನಿಂತುಹೋಗಿತ್ತು. ಫೆಬ್ರವರಿ 2022-
ವಾಲ್ ಸ್ಟ್ರೀಟ್ ಜರ್ನಲ್ ರಾಹುಲ್ ಗಾಂಧಿ ಅವರ ಟ್ವಿಟರ್ ಹ್ಯಾಂಡಲ್ ಅನ್ನು ನಿರ್ಬಂಧಿಸಲಾಗಿದೆ ಎಂಬ ಸುದ್ದಿಯನ್ನು ಪ್ರಸಾರ ಮಾಡಲು ಹೊರಟಾಗ, ತಕ್ಷಣವೇ ನಿಷೇಧವನ್ನು ತೆಗೆದುಹಾಕಲಾಯಿತು. ಆಗ ಅನುಯಾಯಿಗಳ ಸಂಖ್ಯೆಯು ಹೆಚ್ಚಾಗಲು ಪ್ರಾರಂಭಿಸಿತು. ಹಾಗಿರುವಾಗ ಪ್ರತಿಪಕ್ಷಗಳ ಪ್ರಬಲ ಧ್ವನಿಯನ್ನು ಹತ್ತಿಕ್ಕಲು ಟ್ವಿಟರ್ ಮೋದಿ ಸರ್ಕಾರದ ಆದೇಶದ ಪಾಲಿಸಿದೆ ಎಂದು ಏಕೆ ಹೇಳಬಾರದು?” ಎಂದು ಸುಪ್ರಿಯಾ ಶ್ರೀನೇಟ್ ಪ್ರಶ್ನೆ ಮಾಡಿದ್ದಾರೆ.

ಸೋಮವಾರ, ಟ್ವಿಟರ್‌ನ ಮಾಜಿ ಸಿಇಒ ಜಾಕ್ ಡೋರ್ಸಿ ಅವರು ಯುಟ್ಯೂಬ್ ಸುದ್ದಿ ಕಾರ್ಯಕ್ರಮ ಬ್ರೇಕಿಂಗ್ ಪಾಯಿಂಟ್‌ಗಳಿಗೆ ನೀಡಿದ ಸಂದರ್ಶನದಲ್ಲಿ, ”ಟ್ವಿಟರ್ ಖಾತೆಗಳನ್ನು ನಿರ್ಬಂಧಿಸುವ ಆದೇಶಗಳನ್ನು ಅನುಸರಿಸದಿದ್ದಲ್ಲಿ ಭಾರತ, ನೈಜೀರಿಯಾ ಮತ್ತು ಟರ್ಕಿಯಲ್ಲಿ ಟ್ವಿಟರ್‌ನ್ನೇ ಬ್ಯಾನ್ ಮಾಡುವ ಬೆದರಿಕೆ ಹಾಕಲಾಗಿದೆ. ಭಾರತವು ಪತ್ರಕರ್ತರು ಮತ್ತು ಪ್ರತಿಭಟನಾಕಾರರ ಸಾಮಾಜಿಕ ಮಾಧ್ಯಮ ವೇದಿಕೆಯ ಬಳಕೆಯನ್ನು ತಡೆಯಲು ಬಯಸುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಟ್ವಿಟರ್‌ ಬ್ಯಾನ್, ಉದ್ಯೋಗಿಗಳ ಮನೆಗಳ ಮೇಲೆ ದಾಳಿ’ ಮಾಡುವುದಾಗಿ ಭಾರತ ಸರ್ಕಾರ ಬೆದರಿಕೆ ಹಾಕಿತ್ತು- ಇದು ಪ್ರಜಾಪ್ರಭುತ್ವ ರಾಷ್ಟ್ರ: ಮಾಜಿ CEO ಡಾರ್ಸೆ

”ಉದಾಹರಣೆಗೆ, ಭಾರದಲ್ಲಿ ರೈತರ ಪ್ರತಿಭಟನೆ ನಡೆಯುವ ಸಂದರ್ಭದಲ್ಲಿ ಸರ್ಕಾರವನ್ನು ಟೀಕಿಸುವ ನಿರ್ದಿಷ್ಟ ಪತ್ರಕರ್ತರ ಖಾತೆ, ವಿರೋಧಿಗಳ ಖಾತೆಗಳನ್ನು ನಿರ್ಬಂಧಿಸಬೇಕು ಎಂದು ಬಾರತ ಸರ್ಕಾರ ಅನೇಕ ಬಾರಿ ಮನವಿ ಮಾಡಿತು” ಎಂದು  ಹೇಳಿದರು.

”ನಾವು ಹೇಳಿದ್ದನ್ನು ನೀವು ಅನುಸರಿಸದೇ ಹೋದಲ್ಲಿ, ಭಾರತದಲ್ಲಿ ಟ್ವಿಟರ್ ಅನ್ನು ಬ್ಯಾನ್ ಮಾಡುತ್ತೇವೆ. ನಿಮ್ಮ ಉದ್ಯೋಗಿಗಳ ಮನೆಗಳ ಮೇಲೆ ನಾವು ದಾಳಿ ಮಾಡುತ್ತೇವೆ. ನಾವು ನಿಮ್ಮ ಕಚೇರಿಗಳನ್ನು ಮುಚ್ಚುತ್ತೇವೆ ಎಂದು ಭಾರತ ಸರ್ಕಾರ ಎಚ್ಚರಿಕೆ ನೀಡಿದ್ದರು. ಇದು ಭಾರತ, ಪ್ರಜಾಪ್ರಭುತ್ವ ದೇಶ” ಎಂದು ಜಾಕ್ ಡೋರ್ಸಿ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...