Homeಮುಖಪುಟಜಯಲಲಿತಾರವರ ಬಗ್ಗೆ ಅವಹೇಳನಕಾರಿ ಹೇಳಿಕೆ: ಅಣ್ಣಾಮಲೈ ವಿರುದ್ಧ ನಿರ್ಣಯ ಮಂಡಿಸಿದ AIADMK

ಜಯಲಲಿತಾರವರ ಬಗ್ಗೆ ಅವಹೇಳನಕಾರಿ ಹೇಳಿಕೆ: ಅಣ್ಣಾಮಲೈ ವಿರುದ್ಧ ನಿರ್ಣಯ ಮಂಡಿಸಿದ AIADMK

- Advertisement -
- Advertisement -

AIADMKಯ ಹಿರಿಯ ನಾಯಕಿಯಾಗಿದ್ದ ದಿವಂಗತ ಜೆ ಜಯಲಲಿತಾರವರ ಬಗ್ಗೆ ತಮಿಳುನಾಡಿನ ಬಿಜೆಪಿ ರಾಜ್ಯಘಟಕದ ಅಧ್ಯಕ್ಷ ಅಣ್ಣಾಮಲೈ ಅವಹೇಳನಕಾರಿಯಾಗಿ ಮಾತನಾಡಿರುವುದರ ವಿರುದ್ಧ AIADMK ಪಕ್ಷ ನಿರ್ಣಯ ಮಂಡಿಸಿದೆ.

ಅಣ್ಣಾಮಲೈ ಅವರು ಜಯಲಲಿತಾ ಅವರನ್ನು “ಉದ್ದೇಶಪೂರ್ವಕವಾಗಿ” ನಿಂದಿಸಿದ್ದಾರೆ. ಇದು ಎಐಎಡಿಎಂಕೆ ಕಾರ್ಯಕರ್ತರು ಮತ್ತು ಸಾರ್ವಜನಿಕರ ಭಾವನೆಗಳಿಗೆ ತೀವ್ರ ನೋವುಂಟು ಮಾಡಿದೆ ಎಂದು ನಿರ್ಣಯ ಮಂಡಿಸಿದ ನಂತರ AIADMK ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ ತಿಳಿಸಿದ್ದಾರೆ.

ಅಮ್ಮ (ಜಯಲಲಿತಾ) 16 ವರ್ಷಗಳ ಕಾಲ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದರು ಮತ್ತು ಜನರ ಕಲ್ಯಾಣಕ್ಕಾಗಿ ಅನೇಕ ಯೋಜನೆಗಳನ್ನು ತಂದರು. ಅವರು ಜಾರಿಗೊಳಿಸಿದ ಯೋಜನೆಗಳು ಇಂದಿಗೂ ಇತರ ರಾಜ್ಯಗಳಿಗೆ ಸ್ಫೂರ್ತಿಯಾಗಿವೆ. ಆದರೆ ಯಾವುದೇ ರಾಜಕೀಯ ಅನುಭವ ಅಥವಾ ಪ್ರಬುದ್ಧತೆ ಇಲ್ಲದ ಬಿಜೆಪಿ ನಾಯಕ ಅಣ್ಣಾಮಲೈ ಅವರು ಉದ್ದೇಶಪೂರ್ವಕವಾಗಿ ಜಯಲಲಿತಾ ವಿರುದ್ಧ ಮಾತನಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿಯ ಎಲ್ ಕೆ ಅಡ್ವಾಣಿ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರು “ಅಮ್ಮ” (ಜಯಲಲಿತಾ)ನ ಬಗ್ಗೆ ಅಪಾರ ಗೌರವ ಹೊಂದಿದ್ದರು. ಪ್ರಧಾನಿ ನರೇಂದ್ರ ಮೋದಿಯವರು ಸಹ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿದ್ದರು. 1998 ರಲ್ಲಿ ಬಿಜೆಪಿಯು ಕೇಂದ್ರದಲ್ಲಿ ಅಧಿಕಾರ ಹಿಡಿಯಲು ಎಐಎಡಿಎಂಕೆ ಪಕ್ಷದ ಬೆಂಬಲವೇ ಕಾರಣ. ಎಐಎಡಿಎಂಕೆ ಬೆಂಬಲದಿಂದಾಗಿ ಬಿಜೆಪಿ ಈಗ ರಾಜ್ಯ ವಿಧಾನಸಭೆಯಲ್ಲಿ ನಾಲ್ಕು ಶಾಸಕರನ್ನು ಹೊಂದಿದೆ ಎಂದು ಪಳನಿಸ್ವಾಮಿ ಹೇಳಿದ್ದಾರೆ.

ಪ್ರಮುಖ ಇಂಗ್ಲಿಷ್ ಪತ್ರಿಕೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅಣ್ಣಾಮಲೈ, ”ಸಾರ್ವಜನಿಕ ಖಜಾನೆಯನ್ನು ಲಪಟಾಯಿಸಿದ ಯಾವುದೇ ಸರ್ಕಾರವನ್ನು ಪ್ರಶ್ನಿಸುತ್ತೇವೆ. ತಮಿಳುನಾಡಿನ ಹಲವು ಸರ್ಕಾರಗಳ ಅವಧಿಯಲ್ಲಿ ಭ್ರಷ್ಟಚಾರ ನಡೆದಿವೆ. ಮಾಜಿ ಮುಖ್ಯಮಂತ್ರಿಗಳಿಗೆ ನ್ಯಾಯಾಲಯದಲ್ಲಿ ಶಿಕ್ಷೆಯಾಗಿದೆ. ಹಾಗಾಗಿಯೇ ತಮಿಳುನಾಡು ಅತ್ಯಂತ ಭ್ರಷ್ಟ ರಾಜ್ಯಗಳಲ್ಲೊಂದಾಗಿದೆ. 1991-96ರ ನಡುವಿನ ಅವಧಿಯು (ಜಯಲಲಿತಾ ಅವರು ಅಧಿಕಾರದ ಚುಕ್ಕಾಣಿ ಹಿಡಿದಿದ್ದಾಗ) ಭ್ರಷ್ಟಾಚಾರದಲ್ಲಿ ನಂಬರ್ ಒನ್ ಅವಧಿ ಎಂದು ಹೇಳುತ್ತೇನೆ” ಎಂದಿದ್ದರು.

ಇದನ್ನೂ ಓದಿ: ಅಣ್ಣಾಮಲೈರನ್ನ ಹಿಡಿತದಲ್ಲಿ ಇಟ್ಟುಕೊಳ್ಳಿ: ಕೇಂದ್ರದ ಬಿಜೆಪಿ ನಾಯಕರಿಗೆ ಮೈತ್ರಿ ಪಕ್ಷ ಎಐಎಡಿಎಂಕೆ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...