Homeಕರ್ನಾಟಕಹಾಸ್ಟೆಲ್‌ ಹಾಸಿಗೆ, ದಿಂಬಿನಲ್ಲಿ ಅಕ್ರಮ; ತನಿಖೆ ನಡೆಸುವಂತೆ ಬೆಂಗಳೂರು ವಿವಿ ಕುಲಪತಿಗೆ ವಿದ್ಯಾರ್ಥಿಗಳ ಪತ್ರ

ಹಾಸ್ಟೆಲ್‌ ಹಾಸಿಗೆ, ದಿಂಬಿನಲ್ಲಿ ಅಕ್ರಮ; ತನಿಖೆ ನಡೆಸುವಂತೆ ಬೆಂಗಳೂರು ವಿವಿ ಕುಲಪತಿಗೆ ವಿದ್ಯಾರ್ಥಿಗಳ ಪತ್ರ

- Advertisement -
- Advertisement -

ಬೆಂಗಳೂರು ವಿಶ್ವವಿದ್ಯಾಲಯದ ಅಧೀನದಲ್ಲಿರುವ 9 ವಸತಿ ನಿಲಯಗಳಿಗೆ 2021-2022ನೇ ಸಾಲಿನಲ್ಲಿ ಪೂರೈಕೆ ಮಾಡಲಾಗಿರುವ ಹಾಸಿಗೆ ಮತ್ತು ತಲೆದಿಂಬುಗಳ ಖರೀದಿಯಲ್ಲಿ ಅಕ್ರಮ ನಡೆದಿದ್ದು, ಅದರ ಕುರಿತು ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಎಲ್ಲಾ ವಸತಿ ನಿಯಲದ ವಿದ್ಯಾರ್ಥಿಗಳು (ಪಿಜಿ, ಪಿಎಚ್‌ಡಿ) ವಿವಿಯ ಕುಲಪತಿಯವರಿಗೆ ಪತ್ರ ಬರೆದಿದ್ದಾರೆ.

“ಬೆಂಗಳೂರು ವಿಶ್ವವಿದ್ಯಾಲಯದ ಅಧೀನದಲ್ಲಿರುವ 9 ವಸತಿ ನಿಯಲಗಳಲ್ಲಿ ವಾಸವಿರುವ ಎಲ್ಲಾ ವಿದ್ಯಾರ್ಥಿಗಳಿಗೆ 2021-22ನೇ ಸಾಲಿನಲ್ಲಿ ಹಾಸಿಗೆ ಮತ್ತು ತಲೆದಿಂಬುಗಳನ್ನು ಪೂರೈಸಲು ಟೆಂಡರ್ ಕರೆಯಲಾಗಿತ್ತು. ಇದರಂತೆ 2022 ಫೆಬ್ರವರಿ 3 ರಂದು ನಡೆದ ತಾಂತ್ರಿಕ ಬಿಡ್‌ನಲ್ಲಿ ಎಲ್‌.ಆನಂದ್‌ ರೆಡ್ಡಿ (ಎಸ್‌.ವಿ.ಎಲ್‌. ಟ್ರೇಡಿಂಡ್‌ ಕಾರ್ಪೋರೇಷನ್‌, ಎಚ್‌ಬಿಆರ್‌ ಲೇಔಟ್‌, ಬೆಂಗಳೂರು) ಆಯ್ಕೆಯಾಗಿದ್ದರು. ಇವರಿಂದ ಹಾಸಿಗೆ ಮತ್ತು ತಲೆದಿಂಬುಗಳನ್ನು ಖರೀದಿಸಲಾಗಿದೆ. ಆದರೆ ಅವುಗಳು ಕಳಪೆ ಗುಣಮಟ್ಟದಿಂದ ಕೂಡಿವೆ” ಎಂದು ವಿದ್ಯಾರ್ಥಿಗಳು ದೂರಿದ್ದಾರೆ.

ಒಟ್ಟು 9 ವಿದ್ಯಾರ್ಥಿ ನಿಲಯಗಳಿಗೆ 1,848 ಹಾಸಿಗೆ, 2,273 ತಲೆದಿಂಬುಗಳನ್ನು ಖರೀದಿಸಲಾಗಿದೆ. ಇದರ ಒಟ್ಟು ಹಣದ ಮೊತ್ತ 1,23,80,650 ರೂಪಾಯಿ ಆಗಿದೆ. ಪ್ರತಿ ಹಾಸಿಗೆಗೆ 5,900 ರೂ. ಮತ್ತು ಪ್ರತಿ ತಲೆದಿಂಬಿಗೆ 650 ರೂ.ಗಳನ್ನು ನಿಗದಿಪಡಿಸಲಾಗಿದೆ. ಆದರೆ ಪ್ರಸ್ತುತ ವಿದ್ಯಾರ್ಥಿಗಳಿಗೆ ಪೂರೈಸಲಾಗಿರುವ ಹಾಸಿಗೆ ಮತ್ತು ತಲೆದಿಂಬುಗಳು ಅತ್ಯಂತ ಕಳಪೆ ಗುಣಮಟ್ಟದ್ದಾಗಿವೆ. ಪೂರೈಕೆ ಮಾಡಲಾಗಿರುವ ಹಾಸಿಗೆಯ ಮೇಲೆ ಆ ಕಂಪನಿಯ ಯಾವುದೇ ಲೇಬಲ್ ಅಥವಾ ಯಾವುದೇ ಹೆಸರಿನ ಬ್ರಾಂಡ್ ನೇಮ್ ಇರುವುದಿಲ್ಲ. ಇದು ವಿದ್ಯಾರ್ಥಿಗಳಿಗೆ ಅನುಮಾನವನ್ನು ಸೃಷ್ಟಿಸಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಈಗ ಪೂರೈಕೆ ಮಾಡಲಾಗಿರುವ ಹಾಸಿಗೆ ಮತ್ತು ತಲೆದಿಂಬುಗಳ ಬೆಲೆ ಮಾರುಕಟ್ಟೆಯಲ್ಲಿ 5900 ರೂ.ಗಿಂತಲೂ ಅತ್ಯಂತ ಕಡಿಮೆ ಬೆಲೆಯನ್ನು ಹೊಂದಿವೆ ಎಂದು ತಿಳಿದು ಬರುತ್ತಿದೆ. ಹಲವು ಅಂಗಡಿ ಮಾಲೀಕರ ಜೊತೆಗೆ ವಿಚಾರಿಸಲಾಗಿದೆ, ಅಂತರ್ಜಾಲದಲ್ಲಿ ಕ್ರಾಸ್‌ ಚೆಕ್ ಕೂಡ ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ಪೂರೈಕೆ ಮಾಡಲಾಗಿರುವ ಹಾಸಿಗೆ ಮತ್ತು ತಲೆದಿಂಬುಗಳು ಕಳಪೆ ಮಟ್ಟದಿಂದ ಕೂಡಿದ್ದು ಇದರ ಖರೀದಿಯಲ್ಲಿ ಅಕ್ರಮ ನಡೆದಿರುವುದು ಕಂಡು ಬಂದಿದೆ. ಪ್ರಸ್ತುತ ವಿದ್ಯಾರ್ಥಿಗಳಿಗೆ ನೀಡಿರುವಂತಹ ತಲೆದಿಂಬು ಮತ್ತು ಹಾಸಿಗೆಗಳು ಹರಿದು ಹೋಗಿವೆ, ಬಳಸಲು ಯೋಗ್ಯಸ್ಥಿತಿಯಲ್ಲಿ ಇರುವುದಿಲ್ಲ. ಈ ಹಾಸಿಗೆ ಮತ್ತು ತಲೆದಿಂಬುಗಳನ್ನು ಬಳಸಿ ಅನೇಕ ಆರೋಗ್ಯದ ಸಮಸ್ಯೆಗಳು ಕೂಡ ಉದ್ಭವಿಸುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

“ಈ ಖರೀದಿಯ ಪ್ರಕ್ರಿಯೆಯಲ್ಲಿ ಭಾಗಿಯಾಗಿ, ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಿ, ಅಕ್ರಮವೆಸಗಿರುವ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ವಿಭಾಗದ ಆಗಿನ ನಿರ್ದೇಶಕರು (ಸಿ.ಡಿ.ವೆಂಕಟೇಶ್‌ ಮತ್ತು ಇದಕ್ಕೆ ಸಂಬಂಧಿಸಿದ ವಿಶ್ವವಿದ್ಯಾಲಯದಲ್ಲಿನ ಅಧಿಕಾರಿ ವರ್ಗದವರು), ಹಾಸಿಗೆ ಮತ್ತು ತಲೆದಿಂಬುಗಳ ಪರಿಶೀಲನೆ ವರದಿಯನ್ನು ನೀಡಿದ ಡಾ.ಹನುಮಂತನಾಯ್ಕ ಹೆಚ್.ಎಸ್., ವೇಣುಗೋಪಾಲ್ ಎಂ, ನೇಮ್ ಬ್ರಾಂಡ್ ನೀಡದೆ ಹಾಸಿಗೆ ಮತ್ತು ತಲೆದಿಂಬುಗಳನ್ನು ಪೂರೈಕೆ ಮಾಡಿದಂತಹ ಕಂಪನಿ ಈ ವಂಚನೆಯಲ್ಲಿ ಭಾಗಿಯಾಗಿದ್ದಾರೆ. ಇವರ ವಿರುದ್ಧ ಕಾನೂನಾತ್ಮಕ ಕ್ರಮ ತೆಗೆದುಕೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

ಬೆಂಗಳೂರು ವಿವಿ ವಿದ್ಯಾರ್ಥಿಗಳ ಮನವಿ ಪತ್ರ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...