Homeಕರ್ನಾಟಕಹಾಸ್ಟೆಲ್‌ ಹಾಸಿಗೆ, ದಿಂಬಿನಲ್ಲಿ ಅಕ್ರಮ; ತನಿಖೆ ನಡೆಸುವಂತೆ ಬೆಂಗಳೂರು ವಿವಿ ಕುಲಪತಿಗೆ ವಿದ್ಯಾರ್ಥಿಗಳ ಪತ್ರ

ಹಾಸ್ಟೆಲ್‌ ಹಾಸಿಗೆ, ದಿಂಬಿನಲ್ಲಿ ಅಕ್ರಮ; ತನಿಖೆ ನಡೆಸುವಂತೆ ಬೆಂಗಳೂರು ವಿವಿ ಕುಲಪತಿಗೆ ವಿದ್ಯಾರ್ಥಿಗಳ ಪತ್ರ

- Advertisement -
- Advertisement -

ಬೆಂಗಳೂರು ವಿಶ್ವವಿದ್ಯಾಲಯದ ಅಧೀನದಲ್ಲಿರುವ 9 ವಸತಿ ನಿಲಯಗಳಿಗೆ 2021-2022ನೇ ಸಾಲಿನಲ್ಲಿ ಪೂರೈಕೆ ಮಾಡಲಾಗಿರುವ ಹಾಸಿಗೆ ಮತ್ತು ತಲೆದಿಂಬುಗಳ ಖರೀದಿಯಲ್ಲಿ ಅಕ್ರಮ ನಡೆದಿದ್ದು, ಅದರ ಕುರಿತು ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಎಲ್ಲಾ ವಸತಿ ನಿಯಲದ ವಿದ್ಯಾರ್ಥಿಗಳು (ಪಿಜಿ, ಪಿಎಚ್‌ಡಿ) ವಿವಿಯ ಕುಲಪತಿಯವರಿಗೆ ಪತ್ರ ಬರೆದಿದ್ದಾರೆ.

“ಬೆಂಗಳೂರು ವಿಶ್ವವಿದ್ಯಾಲಯದ ಅಧೀನದಲ್ಲಿರುವ 9 ವಸತಿ ನಿಯಲಗಳಲ್ಲಿ ವಾಸವಿರುವ ಎಲ್ಲಾ ವಿದ್ಯಾರ್ಥಿಗಳಿಗೆ 2021-22ನೇ ಸಾಲಿನಲ್ಲಿ ಹಾಸಿಗೆ ಮತ್ತು ತಲೆದಿಂಬುಗಳನ್ನು ಪೂರೈಸಲು ಟೆಂಡರ್ ಕರೆಯಲಾಗಿತ್ತು. ಇದರಂತೆ 2022 ಫೆಬ್ರವರಿ 3 ರಂದು ನಡೆದ ತಾಂತ್ರಿಕ ಬಿಡ್‌ನಲ್ಲಿ ಎಲ್‌.ಆನಂದ್‌ ರೆಡ್ಡಿ (ಎಸ್‌.ವಿ.ಎಲ್‌. ಟ್ರೇಡಿಂಡ್‌ ಕಾರ್ಪೋರೇಷನ್‌, ಎಚ್‌ಬಿಆರ್‌ ಲೇಔಟ್‌, ಬೆಂಗಳೂರು) ಆಯ್ಕೆಯಾಗಿದ್ದರು. ಇವರಿಂದ ಹಾಸಿಗೆ ಮತ್ತು ತಲೆದಿಂಬುಗಳನ್ನು ಖರೀದಿಸಲಾಗಿದೆ. ಆದರೆ ಅವುಗಳು ಕಳಪೆ ಗುಣಮಟ್ಟದಿಂದ ಕೂಡಿವೆ” ಎಂದು ವಿದ್ಯಾರ್ಥಿಗಳು ದೂರಿದ್ದಾರೆ.

ಒಟ್ಟು 9 ವಿದ್ಯಾರ್ಥಿ ನಿಲಯಗಳಿಗೆ 1,848 ಹಾಸಿಗೆ, 2,273 ತಲೆದಿಂಬುಗಳನ್ನು ಖರೀದಿಸಲಾಗಿದೆ. ಇದರ ಒಟ್ಟು ಹಣದ ಮೊತ್ತ 1,23,80,650 ರೂಪಾಯಿ ಆಗಿದೆ. ಪ್ರತಿ ಹಾಸಿಗೆಗೆ 5,900 ರೂ. ಮತ್ತು ಪ್ರತಿ ತಲೆದಿಂಬಿಗೆ 650 ರೂ.ಗಳನ್ನು ನಿಗದಿಪಡಿಸಲಾಗಿದೆ. ಆದರೆ ಪ್ರಸ್ತುತ ವಿದ್ಯಾರ್ಥಿಗಳಿಗೆ ಪೂರೈಸಲಾಗಿರುವ ಹಾಸಿಗೆ ಮತ್ತು ತಲೆದಿಂಬುಗಳು ಅತ್ಯಂತ ಕಳಪೆ ಗುಣಮಟ್ಟದ್ದಾಗಿವೆ. ಪೂರೈಕೆ ಮಾಡಲಾಗಿರುವ ಹಾಸಿಗೆಯ ಮೇಲೆ ಆ ಕಂಪನಿಯ ಯಾವುದೇ ಲೇಬಲ್ ಅಥವಾ ಯಾವುದೇ ಹೆಸರಿನ ಬ್ರಾಂಡ್ ನೇಮ್ ಇರುವುದಿಲ್ಲ. ಇದು ವಿದ್ಯಾರ್ಥಿಗಳಿಗೆ ಅನುಮಾನವನ್ನು ಸೃಷ್ಟಿಸಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಈಗ ಪೂರೈಕೆ ಮಾಡಲಾಗಿರುವ ಹಾಸಿಗೆ ಮತ್ತು ತಲೆದಿಂಬುಗಳ ಬೆಲೆ ಮಾರುಕಟ್ಟೆಯಲ್ಲಿ 5900 ರೂ.ಗಿಂತಲೂ ಅತ್ಯಂತ ಕಡಿಮೆ ಬೆಲೆಯನ್ನು ಹೊಂದಿವೆ ಎಂದು ತಿಳಿದು ಬರುತ್ತಿದೆ. ಹಲವು ಅಂಗಡಿ ಮಾಲೀಕರ ಜೊತೆಗೆ ವಿಚಾರಿಸಲಾಗಿದೆ, ಅಂತರ್ಜಾಲದಲ್ಲಿ ಕ್ರಾಸ್‌ ಚೆಕ್ ಕೂಡ ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ಪೂರೈಕೆ ಮಾಡಲಾಗಿರುವ ಹಾಸಿಗೆ ಮತ್ತು ತಲೆದಿಂಬುಗಳು ಕಳಪೆ ಮಟ್ಟದಿಂದ ಕೂಡಿದ್ದು ಇದರ ಖರೀದಿಯಲ್ಲಿ ಅಕ್ರಮ ನಡೆದಿರುವುದು ಕಂಡು ಬಂದಿದೆ. ಪ್ರಸ್ತುತ ವಿದ್ಯಾರ್ಥಿಗಳಿಗೆ ನೀಡಿರುವಂತಹ ತಲೆದಿಂಬು ಮತ್ತು ಹಾಸಿಗೆಗಳು ಹರಿದು ಹೋಗಿವೆ, ಬಳಸಲು ಯೋಗ್ಯಸ್ಥಿತಿಯಲ್ಲಿ ಇರುವುದಿಲ್ಲ. ಈ ಹಾಸಿಗೆ ಮತ್ತು ತಲೆದಿಂಬುಗಳನ್ನು ಬಳಸಿ ಅನೇಕ ಆರೋಗ್ಯದ ಸಮಸ್ಯೆಗಳು ಕೂಡ ಉದ್ಭವಿಸುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

“ಈ ಖರೀದಿಯ ಪ್ರಕ್ರಿಯೆಯಲ್ಲಿ ಭಾಗಿಯಾಗಿ, ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಿ, ಅಕ್ರಮವೆಸಗಿರುವ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ವಿಭಾಗದ ಆಗಿನ ನಿರ್ದೇಶಕರು (ಸಿ.ಡಿ.ವೆಂಕಟೇಶ್‌ ಮತ್ತು ಇದಕ್ಕೆ ಸಂಬಂಧಿಸಿದ ವಿಶ್ವವಿದ್ಯಾಲಯದಲ್ಲಿನ ಅಧಿಕಾರಿ ವರ್ಗದವರು), ಹಾಸಿಗೆ ಮತ್ತು ತಲೆದಿಂಬುಗಳ ಪರಿಶೀಲನೆ ವರದಿಯನ್ನು ನೀಡಿದ ಡಾ.ಹನುಮಂತನಾಯ್ಕ ಹೆಚ್.ಎಸ್., ವೇಣುಗೋಪಾಲ್ ಎಂ, ನೇಮ್ ಬ್ರಾಂಡ್ ನೀಡದೆ ಹಾಸಿಗೆ ಮತ್ತು ತಲೆದಿಂಬುಗಳನ್ನು ಪೂರೈಕೆ ಮಾಡಿದಂತಹ ಕಂಪನಿ ಈ ವಂಚನೆಯಲ್ಲಿ ಭಾಗಿಯಾಗಿದ್ದಾರೆ. ಇವರ ವಿರುದ್ಧ ಕಾನೂನಾತ್ಮಕ ಕ್ರಮ ತೆಗೆದುಕೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

ಬೆಂಗಳೂರು ವಿವಿ ವಿದ್ಯಾರ್ಥಿಗಳ ಮನವಿ ಪತ್ರ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...