Homeಮುಖಪುಟ‘ಫಡ್ನಾವೀಸ್‌ಗಿಂತ ಶಿಂಧೆ ಜನಪ್ರಿಯ’: ಶಿವಸೇನೆ- ಬಿಜೆಪಿ ನಡುವೆ ಬಿಕ್ಕಟ್ಟು ಸೃಷ್ಟಿಸಿದ ಜಾಹೀರಾತು!

‘ಫಡ್ನಾವೀಸ್‌ಗಿಂತ ಶಿಂಧೆ ಜನಪ್ರಿಯ’: ಶಿವಸೇನೆ- ಬಿಜೆಪಿ ನಡುವೆ ಬಿಕ್ಕಟ್ಟು ಸೃಷ್ಟಿಸಿದ ಜಾಹೀರಾತು!

ಶಿಂಧೆ ಬಣದ ಶಿವಸೇನೆ ನೀಡಿರುವ ಜಾಹೀರಾತಿನಲ್ಲಿ ಬಾಳಾಸಾಹೇಬ್ ಠಾಕ್ರೆ ಚಿತ್ರವನ್ನು ಕೈಬಿಡಲಾಗಿದೆ

- Advertisement -
- Advertisement -

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮಂಗಳವಾರ ಹಲವು ಪತ್ರಿಕೆಗಳಲ್ಲಿ ನೀಡಿರುವ ಜಾಹೀರಾತು ಶಿವಸೇನೆ ಮತ್ತು ಬಿಜೆಪಿ ನಡುವಿನ ಮೈತ್ರಿಯಲ್ಲಿ ಬಿಕ್ಕಟ್ಟು ಸೃಷ್ಟಿಯಾಗಲು ಕಾರಣವಾಗಿದೆ.

‘ಮೋದಿ ಫಾರ್ ಇಂಡಿಯಾ, ಶಿಂಧೆ ಫಾರ್ ಮಹಾರಾಷ್ಟ್ರ’ ಎಂಬ ಶೀರ್ಷಿಕೆಯ ಪೂರ್ಣ ಪುಟದ ಜಾಹೀರಾತನ್ನು ನೀಡಲಾಗಿದ್ದು, ಸಮೀಕ್ಷೆಯೊಂದನ್ನು ಇದರಲ್ಲಿ ಉಲ್ಲೇಖಿಸಲಾಗಿದೆ. ಉನ್ನತ ಹುದ್ದೆಯಲ್ಲಿ ಫಡ್ನಾವೀಸ್‌ಗಿಂತ ಏಕನಾಥ್‌ ಶಿಂಧೆಯವರು ಇರಬೇಕೆಂದು ಹೆಚ್ಚಿನ ಜನರು ಇಚ್ಛಿಸುತ್ತಾರೆಂದು ಜಾಹೀರಾತು ಪ್ರತಿಪಾದಿಸಿದೆ.

ಸೇನೆಯ ಬಿಲ್ಲು-ಬಾಣದ ಚಿಹ್ನೆ, ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಏಕನಾಥ್‌ ಶಿಂಧೆ ಅವರ ಚಿತ್ರಗಳನ್ನು ಜಾಹೀರಾತು ಹೊಂದಿದೆ. ಶಿವಸೇನಾ ಸಂಸ್ಥಾಪಕ ದಿವಂಗತ ಬಾಳಾಸಾಹೇಬ್ ಠಾಕ್ರೆ ಅವರ ಯಾವುದೇ ಫೋಟೋವನ್ನು ಜಾಹೀರಾತಿನಲ್ಲಿ ಬಳಸಲಾಗಿಲ್ಲ.

ಉದ್ದವ್ ಠಾಕ್ರೆ ಬಣದ ಶಿವಸೇನೆ ನಾಯಕ ಸಂಜಯ್ ರಾವತ್ ಪ್ರತಿಕ್ರಿಯಿಸಿ, “ಇದು ಮೋದಿ-ಶಾ ಅವರ ಶಿವಸೇನೆ” ಎಂದು ಟೀಕಿಸಿದ್ದಾರೆ. ಬಾಳಾ ಸಾಹೇಬ್ ಠಾಕ್ರೆಯವರ ಫೋಟೋ ಬಳಸದಿರುವುದು ಚರ್ಚೆಗೆ ಆಸ್ಪದ ನೀಡಿದೆ.

“ಮಹಾರಾಷ್ಟ್ರದಲ್ಲಿ ಶೇ. 26. 1 ಜನರು ಏಕನಾಥ್ ಶಿಂಧೆ ಅವರನ್ನು, ಶೇ. 23. 2 ರಷ್ಟು ಜನರು ದೇವೇಂದ್ರ ಫಡ್ನಾವೀಸ್ ಅವರನ್ನು ಮುಂದಿನ ಮುಖ್ಯಮಂತ್ರಿಯಾಗಿ ನೋಡಲು ಬಯಸುತ್ತಾರೆ” ಎಂದು ಜಾಹೀರಾತು ಹೇಳಿದೆ. ಝೀ ಟಿವಿ- ಮ್ಯಾಟ್ರಿಜ್‌ ನಡೆಸಿದೆ ಎನ್ನಲಾದ ಸಮೀಕ್ಷೆಯ ಅಂಕಿ-ಅಂಶಗಳನ್ನು ಜಾಹೀರಾತು ಆಧಾರಿಸಿದೆ.

“ಚುನಾವಣಾ ಪೂರ್ವ ಸಮೀಕ್ಷೆಗಳ ಪ್ರಕಾರ, ಮಹಾರಾಷ್ಟ್ರದ ಶೇಕಡಾ 30.2 ರಷ್ಟು ಜನತೆ ಭಾರತೀಯ ಜನತಾ ಪಕ್ಷವನ್ನು ಬಯಸುತ್ತಾರೆ, ಶೇ. 16.2 ರಷ್ಟು ನಾಗರಿಕರು ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯನ್ನು ಬಯಸುತ್ತಾರೆ. ಮಹಾರಾಷ್ಟ್ರದಲ್ಲಿನ ಶೇ. 46.4ರಷ್ಟು ಜನರ ಪ್ರತಿಕ್ರಿಯೆ ಇದಾಗಿದೆ. ರಾಜ್ಯದ ಅಭಿವೃದ್ಧಿಗಾಗಿ ಬಿಜೆಪಿ ಮತ್ತು ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮೈತ್ರಿಯನ್ನು ನಂಬಿರಿ” ಎಂದು ಜಾಹೀರಾತಿನಲ್ಲಿ ತಿಳಿಸಲಾಗಿದೆ.

ಈ ಜಾಹೀರಾತಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಂಜಯ್ ರಾವುತ್, “ಇದು ಮೊದಲು ಬಾಳಾಸಾಹೇಬ್ ಅವರ ಶಿವಸೇನೆಯಾಗಿತ್ತು. ಆದರೆ ಇದು ಮೋದಿ-ಶಾ ಅವರ ಶಿವಸೇನೆ ಎಂಬುದನ್ನು ಜಾಹೀರಾತು ಸ್ಪಷ್ಟಪಡಿಸಿದೆ. ದಿವಂಗತ ಬಾಳಾಸಾಹೇಬ್ ಠಾಕ್ರೆಯವರ ಫೋಟೋ ಜಾಹೀರಾತಿನಲ್ಲಿ ಎಲ್ಲಿದೆ?” ಎಂದು ಪ್ರಶ್ನಿಸಿದ್ದಾರೆ.

ಆದರೆ ರಾಜ್ಯ ಬಿಜೆಪಿ ಅಧ್ಯಕ್ಷ ಚಂದ್ರಶೇಖರ ಬಾವನಕುಳೆ ಅವರು ಜಾಹೀರಾತಿಗೆ ಕಡಿಮೆ ಪ್ರಾಶಸ್ತ್ಯ ನೀಡಲು ಪ್ರಯತ್ನಿಸಿದ್ದಾರೆಂದು ವರದಿಯಾಗಿದೆ.

“ಮತದಾರರಿಗೆ ಯಾವ ಪಕ್ಷ ಅಥವಾ ನಾಯಕ ಹೆಚ್ಚು ಸ್ವೀಕಾರಾರ್ಹ ಎಂಬುದನ್ನು ಯಾವಾಗಲೂ ಚುನಾವಣಾ ಫಲಿತಾಂಶ ನಿರ್ಧರಿಸುತ್ತದೆ. ಶಿಂಧೆ ಕ್ಯಾಬಿನೆಟ್ ಸಚಿವರಾಗಿ ಹಿಂದೆ ಜನಪ್ರಿಯರಾಗಿದ್ದರು ಮತ್ತು ಈಗ ಮುಖ್ಯಮಂತ್ರಿಯಾಗಿ ಸ್ವೀಕೃತವಾಗಿದ್ದಾರೆ. ರಾಜ್ಯದ ಜನರು ಫಡ್ನಾವೀಸ್‌, ಶಿಂಧೆ, ಮೋದಿ ಅವರಿಂದ ಸಾಕಷ್ಟು ನಿರೀಕ್ಷೆಗಳನ್ನು ಹೊಂದಿದ್ದಾರೆ” ಎಂದು ಬಾವನಕುಳೆ ತಿಳಿಸಿದ್ದಾರೆ.

“ರಾಜ್ಯ ಮಟ್ಟದ ನಾಯಕರಾಗಲು ಮಹಾರಾಷ್ಟ್ರದ ಜನತೆ ಫಡ್ನಾವೀಸ್ ಅವರಿಗೆ ಎರಡು ಬಾರಿ ಆದ್ಯತೆ ನೀಡಿದ್ದಾರೆ. ಯಾರು ದೊಡ್ಡವರು ಅಥವಾ ಚಿಕ್ಕವರು ಎಂಬುದರ ಬಗ್ಗೆ ಶಿವಸೇನೆ ಮತ್ತು ಬಿಜೆಪಿ ನಡುವೆ ಯಾವುದೇ  ಹೋಲಿಕೆ ಇಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಕಾಂಗ್ರೆಸ್‌ನ ಮಹಾರಾಷ್ಟ್ರ ಘಟಕದ ಮುಖ್ಯ ವಕ್ತಾರ ಅತುಲ್ ಲೋಂಧೆ ಪ್ರತಿಕ್ರಿಯಿಸಿ, “ಇದು ನಕಲಿ ಸಮೀಕ್ಷೆಯಾಗಿದ್ದು, ಶಿಂಧೆ ಅವರು ತಮ್ಮನ್ನು ತಾವು ಪ್ರಚಾರ ಮಾಡಿಕೊಳ್ಳಲು ಇದನ್ನು ಬಳಸಿಕೊಂಡಿದ್ದಾರೆ” ಎಂದು ಟೀಕಿಸಿದ್ದಾರೆ.

ಇದನ್ನೂ ಓದಿರಿ: ಜಯಲಲಿತಾರವರ ಬಗ್ಗೆ ಅವಹೇಳನಕಾರಿ ಹೇಳಿಕೆ: ಅಣ್ಣಾಮಲೈ ವಿರುದ್ಧ ನಿರ್ಣಯ ಮಂಡಿಸಿದ AIADMK

“ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮಹಾ ವಿಕಾಸ್ ಅಘಾಡಿ 42ಕ್ಕೂ ಹೆಚ್ಚು ಲೋಕಸಭಾ ಸ್ಥಾನಗಳನ್ನು ಮಹಾರಾಷ್ಟ್ರದಲ್ಲಿ ಗೆಲ್ಲಲಿದೆ. ಹಾಗೆಯೇ ರಾಜ್ಯ ವಿಧಾನಸಭೆಯಲ್ಲಿ 200 ಸ್ಥಾನಗಳನ್ನು ಗೆಲ್ಲುವುದು ಖಚಿತ. ‘ಒಂದಾನೊಂದು ಕಾಲದಲ್ಲಿ ಶಿಂಧೆ’ ಎಂಬ ಹೊಸ ಕಥೆಯನ್ನು ಶಿಂಧೆಯವರೇ ಬರೆಯಲಿದ್ದಾರೆ” ಎಂದು ವ್ಯಂಗ್ಯವಾಡಿದ್ದಾರೆ.

ಮಹಾರಾಷ್ಟ್ರವು 48 ಲೋಕಸಭಾ ಸ್ಥಾನಗಳನ್ನು ಮತ್ತು 288 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದೆ.

ಮಹಾ ವಿಕಾಸ್ ಅಘಾಡಿ (ಎಂವಿಎ)ಯಲ್ಲಿ ಉದ್ಧವ್ ಬಣದ ಶಿವಸೇನೆ (ಯುಬಿಟಿ), ಕಾಂಗ್ರೆಸ್ ಮತ್ತು ಎನ್‌ಸಿಪಿ ಪಕ್ಷಗಳಿದ್ದು, ಸಮನ್ವಯ ಸಾಧಿಸಿ ಚುನಾವಣೆ ಎದುರಿಸುವುದಾಗಿ ಪ್ರತಿಪಾದಿಸಿವೆ.

ಶಿಂಧೆ ನೇತೃತ್ವದ ಶಿವಸೇನೆಯ ಮುಖ್ಯ ಸಚೇತಕ ಭರತ್ ಗೋಗವಾಲೆ ಪ್ರತಿಕ್ರಿಯಿಸಿ, “ಅನುಕೂಲಕರ ಸಮೀಕ್ಷೆಗಾಗಿ ನಾವು ಯಾರನ್ನೂ ನೇಮಿಸಿಲ್ಲ. ಶಿಂಧೆಯವರನ್ನು ಜನರು ಸ್ವೀಕರಿಸಿದ್ದಾರೆ. ಅವರು ರಾಜ್ಯದ ಎಲ್ಲಾ ಭಾಗಗಳಿಗೆ ಭೇಟಿ ನೀಡುತ್ತಿದ್ದಾರೆ. ನಮಗಾಗಿ ಸಮೀಕ್ಷೆ ನಡೆಸಿರೆಂದು ನಾವು ಯಾವುದೇ ಮಾಧ್ಯಮ ಸಂಸ್ಥೆಯಲ್ಲಿ ಕೇಳಿಕೊಂಡಿಲ್ಲ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...