Homeಮುಖಪುಟ‘ಫಡ್ನಾವೀಸ್‌ಗಿಂತ ಶಿಂಧೆ ಜನಪ್ರಿಯ’: ಶಿವಸೇನೆ- ಬಿಜೆಪಿ ನಡುವೆ ಬಿಕ್ಕಟ್ಟು ಸೃಷ್ಟಿಸಿದ ಜಾಹೀರಾತು!

‘ಫಡ್ನಾವೀಸ್‌ಗಿಂತ ಶಿಂಧೆ ಜನಪ್ರಿಯ’: ಶಿವಸೇನೆ- ಬಿಜೆಪಿ ನಡುವೆ ಬಿಕ್ಕಟ್ಟು ಸೃಷ್ಟಿಸಿದ ಜಾಹೀರಾತು!

ಶಿಂಧೆ ಬಣದ ಶಿವಸೇನೆ ನೀಡಿರುವ ಜಾಹೀರಾತಿನಲ್ಲಿ ಬಾಳಾಸಾಹೇಬ್ ಠಾಕ್ರೆ ಚಿತ್ರವನ್ನು ಕೈಬಿಡಲಾಗಿದೆ

- Advertisement -
- Advertisement -

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮಂಗಳವಾರ ಹಲವು ಪತ್ರಿಕೆಗಳಲ್ಲಿ ನೀಡಿರುವ ಜಾಹೀರಾತು ಶಿವಸೇನೆ ಮತ್ತು ಬಿಜೆಪಿ ನಡುವಿನ ಮೈತ್ರಿಯಲ್ಲಿ ಬಿಕ್ಕಟ್ಟು ಸೃಷ್ಟಿಯಾಗಲು ಕಾರಣವಾಗಿದೆ.

‘ಮೋದಿ ಫಾರ್ ಇಂಡಿಯಾ, ಶಿಂಧೆ ಫಾರ್ ಮಹಾರಾಷ್ಟ್ರ’ ಎಂಬ ಶೀರ್ಷಿಕೆಯ ಪೂರ್ಣ ಪುಟದ ಜಾಹೀರಾತನ್ನು ನೀಡಲಾಗಿದ್ದು, ಸಮೀಕ್ಷೆಯೊಂದನ್ನು ಇದರಲ್ಲಿ ಉಲ್ಲೇಖಿಸಲಾಗಿದೆ. ಉನ್ನತ ಹುದ್ದೆಯಲ್ಲಿ ಫಡ್ನಾವೀಸ್‌ಗಿಂತ ಏಕನಾಥ್‌ ಶಿಂಧೆಯವರು ಇರಬೇಕೆಂದು ಹೆಚ್ಚಿನ ಜನರು ಇಚ್ಛಿಸುತ್ತಾರೆಂದು ಜಾಹೀರಾತು ಪ್ರತಿಪಾದಿಸಿದೆ.

ಸೇನೆಯ ಬಿಲ್ಲು-ಬಾಣದ ಚಿಹ್ನೆ, ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಏಕನಾಥ್‌ ಶಿಂಧೆ ಅವರ ಚಿತ್ರಗಳನ್ನು ಜಾಹೀರಾತು ಹೊಂದಿದೆ. ಶಿವಸೇನಾ ಸಂಸ್ಥಾಪಕ ದಿವಂಗತ ಬಾಳಾಸಾಹೇಬ್ ಠಾಕ್ರೆ ಅವರ ಯಾವುದೇ ಫೋಟೋವನ್ನು ಜಾಹೀರಾತಿನಲ್ಲಿ ಬಳಸಲಾಗಿಲ್ಲ.

ಉದ್ದವ್ ಠಾಕ್ರೆ ಬಣದ ಶಿವಸೇನೆ ನಾಯಕ ಸಂಜಯ್ ರಾವತ್ ಪ್ರತಿಕ್ರಿಯಿಸಿ, “ಇದು ಮೋದಿ-ಶಾ ಅವರ ಶಿವಸೇನೆ” ಎಂದು ಟೀಕಿಸಿದ್ದಾರೆ. ಬಾಳಾ ಸಾಹೇಬ್ ಠಾಕ್ರೆಯವರ ಫೋಟೋ ಬಳಸದಿರುವುದು ಚರ್ಚೆಗೆ ಆಸ್ಪದ ನೀಡಿದೆ.

“ಮಹಾರಾಷ್ಟ್ರದಲ್ಲಿ ಶೇ. 26. 1 ಜನರು ಏಕನಾಥ್ ಶಿಂಧೆ ಅವರನ್ನು, ಶೇ. 23. 2 ರಷ್ಟು ಜನರು ದೇವೇಂದ್ರ ಫಡ್ನಾವೀಸ್ ಅವರನ್ನು ಮುಂದಿನ ಮುಖ್ಯಮಂತ್ರಿಯಾಗಿ ನೋಡಲು ಬಯಸುತ್ತಾರೆ” ಎಂದು ಜಾಹೀರಾತು ಹೇಳಿದೆ. ಝೀ ಟಿವಿ- ಮ್ಯಾಟ್ರಿಜ್‌ ನಡೆಸಿದೆ ಎನ್ನಲಾದ ಸಮೀಕ್ಷೆಯ ಅಂಕಿ-ಅಂಶಗಳನ್ನು ಜಾಹೀರಾತು ಆಧಾರಿಸಿದೆ.

“ಚುನಾವಣಾ ಪೂರ್ವ ಸಮೀಕ್ಷೆಗಳ ಪ್ರಕಾರ, ಮಹಾರಾಷ್ಟ್ರದ ಶೇಕಡಾ 30.2 ರಷ್ಟು ಜನತೆ ಭಾರತೀಯ ಜನತಾ ಪಕ್ಷವನ್ನು ಬಯಸುತ್ತಾರೆ, ಶೇ. 16.2 ರಷ್ಟು ನಾಗರಿಕರು ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯನ್ನು ಬಯಸುತ್ತಾರೆ. ಮಹಾರಾಷ್ಟ್ರದಲ್ಲಿನ ಶೇ. 46.4ರಷ್ಟು ಜನರ ಪ್ರತಿಕ್ರಿಯೆ ಇದಾಗಿದೆ. ರಾಜ್ಯದ ಅಭಿವೃದ್ಧಿಗಾಗಿ ಬಿಜೆಪಿ ಮತ್ತು ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮೈತ್ರಿಯನ್ನು ನಂಬಿರಿ” ಎಂದು ಜಾಹೀರಾತಿನಲ್ಲಿ ತಿಳಿಸಲಾಗಿದೆ.

ಈ ಜಾಹೀರಾತಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಂಜಯ್ ರಾವುತ್, “ಇದು ಮೊದಲು ಬಾಳಾಸಾಹೇಬ್ ಅವರ ಶಿವಸೇನೆಯಾಗಿತ್ತು. ಆದರೆ ಇದು ಮೋದಿ-ಶಾ ಅವರ ಶಿವಸೇನೆ ಎಂಬುದನ್ನು ಜಾಹೀರಾತು ಸ್ಪಷ್ಟಪಡಿಸಿದೆ. ದಿವಂಗತ ಬಾಳಾಸಾಹೇಬ್ ಠಾಕ್ರೆಯವರ ಫೋಟೋ ಜಾಹೀರಾತಿನಲ್ಲಿ ಎಲ್ಲಿದೆ?” ಎಂದು ಪ್ರಶ್ನಿಸಿದ್ದಾರೆ.

ಆದರೆ ರಾಜ್ಯ ಬಿಜೆಪಿ ಅಧ್ಯಕ್ಷ ಚಂದ್ರಶೇಖರ ಬಾವನಕುಳೆ ಅವರು ಜಾಹೀರಾತಿಗೆ ಕಡಿಮೆ ಪ್ರಾಶಸ್ತ್ಯ ನೀಡಲು ಪ್ರಯತ್ನಿಸಿದ್ದಾರೆಂದು ವರದಿಯಾಗಿದೆ.

“ಮತದಾರರಿಗೆ ಯಾವ ಪಕ್ಷ ಅಥವಾ ನಾಯಕ ಹೆಚ್ಚು ಸ್ವೀಕಾರಾರ್ಹ ಎಂಬುದನ್ನು ಯಾವಾಗಲೂ ಚುನಾವಣಾ ಫಲಿತಾಂಶ ನಿರ್ಧರಿಸುತ್ತದೆ. ಶಿಂಧೆ ಕ್ಯಾಬಿನೆಟ್ ಸಚಿವರಾಗಿ ಹಿಂದೆ ಜನಪ್ರಿಯರಾಗಿದ್ದರು ಮತ್ತು ಈಗ ಮುಖ್ಯಮಂತ್ರಿಯಾಗಿ ಸ್ವೀಕೃತವಾಗಿದ್ದಾರೆ. ರಾಜ್ಯದ ಜನರು ಫಡ್ನಾವೀಸ್‌, ಶಿಂಧೆ, ಮೋದಿ ಅವರಿಂದ ಸಾಕಷ್ಟು ನಿರೀಕ್ಷೆಗಳನ್ನು ಹೊಂದಿದ್ದಾರೆ” ಎಂದು ಬಾವನಕುಳೆ ತಿಳಿಸಿದ್ದಾರೆ.

“ರಾಜ್ಯ ಮಟ್ಟದ ನಾಯಕರಾಗಲು ಮಹಾರಾಷ್ಟ್ರದ ಜನತೆ ಫಡ್ನಾವೀಸ್ ಅವರಿಗೆ ಎರಡು ಬಾರಿ ಆದ್ಯತೆ ನೀಡಿದ್ದಾರೆ. ಯಾರು ದೊಡ್ಡವರು ಅಥವಾ ಚಿಕ್ಕವರು ಎಂಬುದರ ಬಗ್ಗೆ ಶಿವಸೇನೆ ಮತ್ತು ಬಿಜೆಪಿ ನಡುವೆ ಯಾವುದೇ  ಹೋಲಿಕೆ ಇಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಕಾಂಗ್ರೆಸ್‌ನ ಮಹಾರಾಷ್ಟ್ರ ಘಟಕದ ಮುಖ್ಯ ವಕ್ತಾರ ಅತುಲ್ ಲೋಂಧೆ ಪ್ರತಿಕ್ರಿಯಿಸಿ, “ಇದು ನಕಲಿ ಸಮೀಕ್ಷೆಯಾಗಿದ್ದು, ಶಿಂಧೆ ಅವರು ತಮ್ಮನ್ನು ತಾವು ಪ್ರಚಾರ ಮಾಡಿಕೊಳ್ಳಲು ಇದನ್ನು ಬಳಸಿಕೊಂಡಿದ್ದಾರೆ” ಎಂದು ಟೀಕಿಸಿದ್ದಾರೆ.

ಇದನ್ನೂ ಓದಿರಿ: ಜಯಲಲಿತಾರವರ ಬಗ್ಗೆ ಅವಹೇಳನಕಾರಿ ಹೇಳಿಕೆ: ಅಣ್ಣಾಮಲೈ ವಿರುದ್ಧ ನಿರ್ಣಯ ಮಂಡಿಸಿದ AIADMK

“ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮಹಾ ವಿಕಾಸ್ ಅಘಾಡಿ 42ಕ್ಕೂ ಹೆಚ್ಚು ಲೋಕಸಭಾ ಸ್ಥಾನಗಳನ್ನು ಮಹಾರಾಷ್ಟ್ರದಲ್ಲಿ ಗೆಲ್ಲಲಿದೆ. ಹಾಗೆಯೇ ರಾಜ್ಯ ವಿಧಾನಸಭೆಯಲ್ಲಿ 200 ಸ್ಥಾನಗಳನ್ನು ಗೆಲ್ಲುವುದು ಖಚಿತ. ‘ಒಂದಾನೊಂದು ಕಾಲದಲ್ಲಿ ಶಿಂಧೆ’ ಎಂಬ ಹೊಸ ಕಥೆಯನ್ನು ಶಿಂಧೆಯವರೇ ಬರೆಯಲಿದ್ದಾರೆ” ಎಂದು ವ್ಯಂಗ್ಯವಾಡಿದ್ದಾರೆ.

ಮಹಾರಾಷ್ಟ್ರವು 48 ಲೋಕಸಭಾ ಸ್ಥಾನಗಳನ್ನು ಮತ್ತು 288 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದೆ.

ಮಹಾ ವಿಕಾಸ್ ಅಘಾಡಿ (ಎಂವಿಎ)ಯಲ್ಲಿ ಉದ್ಧವ್ ಬಣದ ಶಿವಸೇನೆ (ಯುಬಿಟಿ), ಕಾಂಗ್ರೆಸ್ ಮತ್ತು ಎನ್‌ಸಿಪಿ ಪಕ್ಷಗಳಿದ್ದು, ಸಮನ್ವಯ ಸಾಧಿಸಿ ಚುನಾವಣೆ ಎದುರಿಸುವುದಾಗಿ ಪ್ರತಿಪಾದಿಸಿವೆ.

ಶಿಂಧೆ ನೇತೃತ್ವದ ಶಿವಸೇನೆಯ ಮುಖ್ಯ ಸಚೇತಕ ಭರತ್ ಗೋಗವಾಲೆ ಪ್ರತಿಕ್ರಿಯಿಸಿ, “ಅನುಕೂಲಕರ ಸಮೀಕ್ಷೆಗಾಗಿ ನಾವು ಯಾರನ್ನೂ ನೇಮಿಸಿಲ್ಲ. ಶಿಂಧೆಯವರನ್ನು ಜನರು ಸ್ವೀಕರಿಸಿದ್ದಾರೆ. ಅವರು ರಾಜ್ಯದ ಎಲ್ಲಾ ಭಾಗಗಳಿಗೆ ಭೇಟಿ ನೀಡುತ್ತಿದ್ದಾರೆ. ನಮಗಾಗಿ ಸಮೀಕ್ಷೆ ನಡೆಸಿರೆಂದು ನಾವು ಯಾವುದೇ ಮಾಧ್ಯಮ ಸಂಸ್ಥೆಯಲ್ಲಿ ಕೇಳಿಕೊಂಡಿಲ್ಲ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...