Homeಮುಖಪುಟಇ.ಡಿ. ವಶಕ್ಕೆ ತಮಿಳುನಾಡು ಸಚಿವ ಬಾಲಾಜಿ; ದುರುದ್ದೇಶಪೂರಿತ ಎಂದ ಡಿಎಂಕೆ, ಕಾಂಗ್ರೆಸ್

ಇ.ಡಿ. ವಶಕ್ಕೆ ತಮಿಳುನಾಡು ಸಚಿವ ಬಾಲಾಜಿ; ದುರುದ್ದೇಶಪೂರಿತ ಎಂದ ಡಿಎಂಕೆ, ಕಾಂಗ್ರೆಸ್

- Advertisement -
- Advertisement -

ತಮಿಳುನಾಡು ವಿದ್ಯುಚ್ಛಕ್ತಿ ಸಚಿವ ವಿ.ಸೆಂಥಿಲ್ ಬಾಲಾಜಿ ಅವರ ಮನೆ ಮತ್ತು ಚೇಂಬರ್‌ಗಳಲ್ಲಿ ಮಂಗಳವಾರ ಶೋಧ ಕಾರ್ಯ ಆರಂಭಿಸಿದ ನಂತರ ಜಾರಿ ನಿರ್ದೇಶನಾಲಯ (ಇ.ಡಿ.) ಬುಧವಾರ (ಜೂನ್ 14) ಮುಂಜಾನೆ ಬಾಲಾಜಿ ಅವರನ್ನು ಕಸ್ಟಡಿಗೆ ತೆಗೆದುಕೊಂಡಿದೆ.

18 ಗಂಟೆಗಳ ವಿಚಾರಣೆ ನಡೆದಿದೆ. ಚೆನ್ನೈ ಮತ್ತು ಕರೂರ್‌ನಾದ್ಯಂತ ಹತ್ತಾರು ಸ್ಥಳಗಳಲ್ಲಿ ಸಚಿವರು ಮತ್ತು ಅವರ ಕುಟುಂಬಕ್ಕೆ ಸಂಬಂಧಿಸಿದ ಆಸ್ತಿಗೆ ಸಂಬಂಧಿಸಿದಂತೆ ರೈಡ್ ಮಾಡಲಾಗಿದೆ.

ಎಐಎಡಿಎಂಕೆ ಸರ್ಕಾರದಲ್ಲಿ ಬಾಲಾಜಿ ಅವರು ಸಾರಿಗೆ ಸಚಿವರಾಗಿದ್ದರು. 2011 ಮತ್ತು 2016ರ ನಡುವೆ ರಾಜ್ಯದ ಸಾರಿಗೆ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ.

ಬಾಲಾಜಿ ಅವರೀಗ ಡಿಎಂಕೆ ಸದಸ್ಯರಾಗಿದ್ದಾರೆ. 2021ರಲ್ಲಿ ರಾಜ್ಯ ವಿಧಾನಸಭಾ ಚುನಾವಣೆಯ ಮುನ್ನಾದಿನದಂದು ಚೆನ್ನೈ ಪೊಲೀಸರು ಬಾಲಾಜಿ ಮತ್ತು ಇತರ 46 ಮಂದಿ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ್ದರು.

ಮದ್ರಾಸ್ ಹೈಕೋರ್ಟ್ 2022ರಲ್ಲಿ ನೀಡಿದ್ದ ಆದೇಶವನ್ನು ಕಳೆದ ಮೇ ತಿಂಗಳಿನಲ್ಲಿ ರದ್ದುಗೊಳಿಸಿದ್ದ ಸುಪ್ರೀಂಕೋರ್ಟ್, ಈ ಪ್ರಕರಣದ ತನಿಖೆ ನಡೆಸಲು ಜಾರಿ ನಿರ್ದೇಶನಾಲಯಕ್ಕೆ ಅನುಮತಿ ನೀಡಿತ್ತು. ಇದಾದ ಬೆನ್ನಲ್ಲೇ, ಆದಾಯ ತೆರಿಗೆ ಇಲಾಖೆಯು ಬಾಲಾಜಿ ಅವರ ಮನೆ, ಅವರ ಕೆಲವು ಬೆಂಬಲಿಗರ ಮನೆ ಮತ್ತು ಕಚೇರಿಗಳ ಮೇಲೆ ಎಂಟು ದಿನಗಳ ಕಾಲ ದಾಳಿ ನಡೆಸಿತ್ತು.

ಬಂಧನದ ನಂತರದಲ್ಲಿ ಬಾಲಾಜಿ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಆಸ್ಪತ್ರೆಗೆ ಕರೆದೊಯ್ಯಲಾಯಿತು. ಬಾಲಾಜಿಯವರನ್ನು ಆಂಬ್ಯುಲೆನ್ಸ್‌ನಲ್ಲಿ ಕರೆತರಲಾಯಿತು. ಚೆನ್ನೈನ ಒಮಂದೂರಾರ್ ಸರ್ಕಾರಿ ಆಸ್ಪತ್ರೆಯ ಹೊರಗೆ ನಾಟಕೀಯ ದೃಶ್ಯಗಳು ಕಂಡುಬಂದವು. ಅವರು ಕುಸಿದುಬಿದ್ದರು ಎಂದು ವರದಿಯಾಗಿದೆ, ಬಾಲಾಜಿ ಬೆಂಬಲಿಗರು ಒಗ್ಗಟ್ಟು ಪ್ರದರ್ಶಿಸಲು ಜಮಾಯಿಸಿದ್ದರು.

ಡಿಎಂಕೆ ನಾಯಕರು ಬಾಲಾಜಿ ಬೆಂಬಲಕ್ಕೆ ನಿಂತಿದ್ದಾರೆ. ವಿರೋಧ ಪಕ್ಷದ ನಾಯಕರನ್ನು ಗುರಿಯಾಗಿಸಿಕೊಳ್ಳಲಾಗಿದೆ ಎಂದು ಟೀಕಿಸಿದ್ದಾರೆ.

ಡಿಎಂಕೆಯ ಸಂಘಟನಾ ಕಾರ್ಯದರ್ಶಿ ಆರ್.ಎಸ್.ಭಾರತಿ ಪ್ರತಿಕ್ರಿಯಿಸಿ, “ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಚೆನ್ನೈ ಪ್ರವಾಸ ಮುಗಿಸಿದ ನಂತರ ಈ ಬೆಳವಣಿಗೆಯಾಗಿದೆ. ಇದು ಅಮಿತ್ ಶಾ ಭೇಟಿಯ ನಂತರ ನಡೆಯುತ್ತಿದೆ. ಇದರಲ್ಲಿ ದುರುದ್ದೇಶವಿದೆ” ಎಂದಿದ್ದಾರೆ.

ಬಿಜೆಪಿಯೊಂದಿಗಿನ ಮೈತ್ರಿಯನ್ನು ಕೊನೆಗೊಳಿಸಲು ಎಐಎಡಿಎಂಕೆಯು ಯೋಚಿಸುತ್ತಿದೆ. ಈ ಕಾರಣ ಬಿಜೆಪಿ ಕೂಡ ಹಲವು ತಿರುವುಗಳನ್ನು ಸೃಷ್ಟಿಸಲು ಬಯಸಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಡಿಎಂಕೆ ಸಂಸದ, ವಕೀಲ ಎನ್.ಆರ್.ಎಳಂಗೋ ಪ್ರತಿಕ್ರಿಯಿಸಿ, “ಬಾಲಾಜಿಯವರನ್ನು ಐಸಿಯುಗೆ ಸ್ಥಳಾಂತರಿಸಲಾಗಿದೆ. ಅವರ ಬಂಧನವನ್ನು ಇಡಿ ಅಧಿಕೃತವಾಗಿ ದೃಢಪಡಿಸಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

“ಇಡಿ ಅವರನ್ನು ಬಂಧಿಸಿದೆಯೇ ಎಂಬ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ. ಯಾವುದೇ ಬಂಧನ ಮಾರ್ಗಸೂಚಿಗಳನ್ನು ಅನುಸರಿಸಿಲ್ಲ” ಎಂದು ಪ್ರತಿಕ್ರಿಯಿಸಿದ್ದಾರೆ.

“ನಾನು ಅವರನ್ನು (ಶ್ರೀ ಬಾಲಾಜಿ) ಐಸಿಯುಗೆ ಸ್ಥಳಾಂತರಿಸಿದಾಗ ನೋಡಿದೆ. ಅವರ ಆರೋಗ್ಯ ಸ್ಥಿತಿಯನ್ನು ವೈದ್ಯರು ಚೆಕ್‌ ಮಾಡುತ್ತಿದ್ದಾರೆ. ಹಲ್ಲೆ ನಡೆದಿದೆ ಎಂದು ವ್ಯಕ್ತಿಯೊಬ್ಬರು ತಿಳಿಸಿದಾಗ ವೈದ್ಯರು ಎಲ್ಲಾ ಗಾಯಗಳನ್ನು ಗಮನಿಸಬೇಕು. ವರದಿಯನ್ನು ನೋಡಿದ ನಂತರ ಅದು ತಿಳಿಯುತ್ತದೆ. ಅವರನ್ನು ಬಂಧಿಸಲಾಗಿದೆ ಎಂದು ಅಧಿಕೃತವಾಗಿ ನಮಗೆ (ಇಡಿಯಿಂದ) ತಿಳಿಸಲಾಗಿಲ್ಲ” ಎಂದಿದ್ದಾರೆ.

ಇದನ್ನೂ ಓದಿರಿ: ಕುಸ್ತಿ ಫೆಡರೇಶನ್‌ ಚುನಾವಣೆಯಲ್ಲಿ ಲೈಂಗಿಕ ಕಿರುಕುಳದ ಆರೋಪಿ ಬ್ರಿಜ್‌ಭೂಷಣ್ ಸಂಬಂಧಿಗಳು ಸ್ಪರ್ಧೆ ಮಾಡದಿರಲು ನಿರ್ಧಾರ: ವರದಿ

ತಮಿಳುನಾಡು ಕಾನೂನು ಸಚಿವ ಎಸ್.ರೇಗುಪತಿ ಕೂಡ ಪ್ರತಿಕ್ರಿಯಿಸಿ, “ಬಂಧನದ ಕಾರ್ಯವಿಧಾನಗಳನ್ನು ಅನುಸರಿಸಿಲ್ಲ” ಎಂದು ತಿಳಿಸಿದ್ದಾರೆ.

ಆಸ್ಪತ್ರೆಗೆ ತೆರಳಿದ ಡಿಎಂಕೆ ನಾಯಕರಲ್ಲಿ ಅವರು ಒಬ್ಬರಾಗಿದ್ದರು, ಆದರೆ ಬಾಲಾಜಿ ಅವರನ್ನು ಭೇಟಿ ಮಾಡಲು ಅವಕಾಶ ನೀಡಲಿಲ್ಲ ಎನ್ನಲಾಗಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇಡಿ ಕ್ರಮವನ್ನು ಖಂಡಿಸಿದ್ದಾರೆ. “ಇದು ಕಿರುಕುಳ ಮತ್ತು ಬೆದರಿಕೆ ನೀಡುವ ಮೋದಿ ಸರ್ಕಾರದ ಲಜ್ಜೆಗೆಟ್ಟ ಪ್ರಯತ್ನಗಳು. ರಾಜಕೀಯ ವಿರೋಧಿಗಳ ವಿರುದ್ಧ ತನಿಖಾ ಸಂಸ್ಥೆಗಳ ಇಂತಹ ದುರುಪಯೋಗ ಮೋದಿ ಸರ್ಕಾರದ ವಿಶಿಷ್ಟ ಲಕ್ಷಣವಾಗಿದೆ” ಎಂದು ಟೀಕಿಸಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಪ್ರತಿಕ್ರಿಯಿಸಿ, “ಪ್ರತಿಪಕ್ಷಗಳನ್ನು ಮೌನಗೊಳಿಸಲು ಮತ್ತು ಫೆಡರಲಿಸಂನ ಮೇಲೆ ದಾಳಿ ಮಾಡಲು ಬಿಜೆಪಿ ನಡೆಸಿರುವ ಮತ್ತೊಂದು ಪ್ರಯತ್ನ ಇದಾಗಿದೆ” ಎಂದು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...